AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬೆಂಗಳೂರಿನ ಮನೆಯ ಬಾಲ್ಕನಿಯಲ್ಲೇ ವೆಸ್ಟರ್ನ್ ಕಮೋಡ್, ವೈರಲ್ ಆಯ್ತು ದೃಶ್ಯ

ಬಹುತೇಕರು ತಮ್ಮ ಮನೆಯನ್ನು ಐಷಾರಾಮಿ ಸವಲತ್ತುಗಳನ್ನೊಳಗೊಂಡಂತೆ ವಿಭಿನ್ನವಾಗಿ ಕಟ್ಟಲು ಬಯಸುತ್ತಾರೆ. ಇದೀಗ ಬೆಂಗಳೂರಿನ ವಿಭಿನ್ನವಾದ ಈ ಮನೆಯೂ ಎಲ್ಲರ ಗಮನ ಸೆಳೆಯುತ್ತಿದೆ. ಹೌದು, ಬೆಂಗಳೂರಿನ ಮನೆಯ ಬಾಲ್ಕನಿಯಲ್ಲೇ ವೆಸ್ಟರ್ನ್ ಕಮೋಡ್ ಅಳವಡಿಸಲಾಗಿದ್ದು, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಅಚ್ಚರಿ ಪಟ್ಟುಕೊಂಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಬೆಂಗಳೂರಿನ ಮನೆಯ ಬಾಲ್ಕನಿಯಲ್ಲೇ ವೆಸ್ಟರ್ನ್ ಕಮೋಡ್, ವೈರಲ್ ಆಯ್ತು ದೃಶ್ಯ
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on: Jun 21, 2026 | 5:10 PM

Share

ಬೆಂಗಳೂರು, ಜೂನ್ 21: ಬೆಂಗಳೂರು (Bengaluru) ಏರುತ್ತಿರುವ ಬಾಡಿಗೆ ದರಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಆಗಾಗ್ಗೆ ಚರ್ಚೆಯಾಗುತ್ತದೆ. ಇದೀಗ ಬೆಂಗಳೂರು ಸುದ್ದಿಯಾಗಿರುವುದು ವೆಸ್ಟರ್ನ್ ಕಮೋಡ್‌ನಿಂದ. ಮನೆಯೊಂದರಲ್ಲಿ ಬಾಲ್ಕನಿಯಲ್ಲಿ ವೆಸ್ಟರ್ನ್ ಕಮೋಡ್ ಅಳವಡಿಸಿಕೊಳ್ಳಲಾಗಿದೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು ನೆಟ್ಟಿಗರ ಹುಬ್ಬೇರಿಸುವಂತೆ ಮಾಡಿದೆ.

ಶ್ರೀಸತ್ಯ (SriSathya) ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಮನೆಯ ಬಾಲ್ಕನಿಯಲ್ಲಿ ಅಳವಡಿಸಿಕೊಂಡಿರುವುದನ್ನು ಕಾಣಬಹುದು. ಬಾಲ್ಕನಿಗೆ ಕಬ್ಬಿಣದ ಜಾಲಿ ಅಳವಡಿಸಲಾಗಿದ್ದು, ಈ ಜಾಲಿ ಸಂಪೂರ್ಣ ಪಾರದರ್ಶಕವಾಗಿದೆ. ಈ ಕ್ಲಿಪಿಂಗ್ ನಲ್ಲಿ ಯುವತಿ ಟಾಯ್ಲೆಟ್ ಕಾರ್ಯನಿರ್ವಹಿಸುತ್ತಿದೆ ಎಂದು ಪರಿಶೀಲಿಸಿರುವುದಾಗಿ ಹೇಳಿದ್ದಾಳೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ವಿದೇಶಿ ಜೀವನಕ್ಕೆ ಗುಡ್ ಬೈ ಹೇಳಿ ಬೆಂಗಳೂರಿಗೆ ಬಂದ ಇಂಜಿನಿಯರ್, ಕಾರಣ ಇದೇ ನೋಡಿ

ಈ ವಿಡಿಯೋ ಹತ್ತೊಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಬೆಂಗಳೂರಿನಲ್ಲಿ ಬಾಡಿಗೆ ದರ ಹಾಗೂ ಜಾಗದ ಬೆಲೆ ದುಪ್ಪಟ್ಟು ಇದೆ. ಹೀಗಾಗಿ ಬಾಲ್ಕನಿಯನ್ನೇ ಬಾತ್ರೂಮ್ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಈ ರೀತಿ ಬಾತ್ ರೂಮ್ ಸೂಕ್ತವಲ್ಲ ಎಂದಿದ್ದಾರೆ. ಇನ್ನೊಬ್ಬರು, ಸ್ಥಳದ ಕೊರತೆಯಿಂದ ಈ ರೀತಿ ವ್ಯವಸ್ಥೆ ಮಾಡಿಕೊಂಡಿರಬಹುದೆಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ