AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅಂದು ದ್ವೇಷಿಸುತ್ತಿದ್ದ ಈ ನಗರ ಇಂದು ನಂಗೆ ತುಂಬಾ ಆಪ್ತ; ಬೆಂಗಳೂರನ್ನು ಮೆಚ್ಚಿಕೊಂಡ ಮಹಿಳೆ

ಬೆಂಗಳೂರು ಅಂದ್ರೇನೆ ದುಬಾರಿ ಜೀವನ ಶೈಲಿ, ಗುಜಿಗುಟ್ಟುವ ಜನಜಂಗುಳಿ, ಟ್ರಾಫಿಕ್ ಸಮಸ್ಯೆ ಹೀಗೆ ಒಂದೆರಡಲ್ಲ. ದೂರದ ಊರಿನಿಂದ ಬಂದವರಿಗೆ ಪ್ರಾರಂಭದ ದಿನಗಳಲ್ಲಿ ಈ ನಗರಕ್ಕೆ ಹೊಂದಿಕೊಳ್ಳುವುದು ಕಷ್ಟ. ಇದೀಗ ಮಹಿಳೆಯೊಬ್ಬರು ಬೆಂಗಳೂರಿನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೊದಲಿಗೆ ಬೆಂಗಳೂರು ಅಪರಿಚಿತವೆನಿಸಿತು, ಆದರೆ ನಿಧಾನವಾಗಿ ಈ ನಗರವನ್ನು ಬಿಟ್ಟು ಹೋಗುವುದನ್ನು ಊಹಿಸಲೂ ಸಾಧ್ಯವಾಗಲ್ಲ ಎಂದಿದ್ದಾರೆ. ಈ ಮಹಿಳೆ ಹಂಚಿಕೊಂಡ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಈ ಕುರಿತಾದ ಕಂಪ್ಲೀಟ್ ಸ್ಟೋರಿ ಇಲ್ಲಿದೆ.

Video: ಅಂದು ದ್ವೇಷಿಸುತ್ತಿದ್ದ ಈ ನಗರ ಇಂದು ನಂಗೆ ತುಂಬಾ ಆಪ್ತ; ಬೆಂಗಳೂರನ್ನು ಮೆಚ್ಚಿಕೊಂಡ ಮಹಿಳೆ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on: Jun 23, 2026 | 5:19 PM

Share

ಬೆಂಗಳೂರು, ಜೂನ್ 23: ಶಿಕ್ಷಣ ಉದ್ಯೋಗ ಹೀಗೆ ನಾನಾ ಕಾರಣಕ್ಕೆ ಬೆಂಗಳೂರು (Bengaluru), ಮುಂಬೈ ಹೀಗೆ ದೊಡ್ಡ ದೊಡ್ಡ ನಗರಗಳಿಗೆ ಹೋಗಬೇಕಾಗುತ್ತದೆ. ಹೊಸ ಜನರು, ಹೊಸ ಊರಿಗೆ ಹೊಂದಿಕೊಳ್ಳಲು ಸಮಯ ಬೇಕು. ಎಲ್ಲರಿಗೂ ಅದ್ಭುತವಾಗಿ ಕಾಣುವ ಬೆಂಗಳೂರು ಹೊಸಬರಿಗೆ ಅಪರಿಚಿತವೆನಿಸುತ್ತದೆ. ಹೀಗಾದಾಗ ಮನೆ ಪದೇ ಪದೇ ನೆನಪಾಗುತ್ತದೆ. ಮಹಿಳೆಯೊಬ್ಬರು ಕಾಲಕ್ರಮೇಣ ಈ ನಗರದ ಬಗ್ಗೆ ತಮಗಿದ್ದ ಭಾವನೆಗಳು ಹೇಗೆ ಬದಲಾದವು ಎಂಬ ಬಗ್ಗೆ ವಿಡಿಯೋ ಮಾಡಿದ್ದಾರೆ. ಮೊದಲು ಬೆಂಗಳೂರನ್ನು ದ್ವೇಷಿಸುತ್ತಿದ್ದೆ. ಆದರೆ ಈಗ ಈ ನಗರವನ್ನು ಬಿಟ್ಟು ಬೇರೆಲ್ಲಿಗೂ ಹೋಗುವುದನ್ನು ಊಹಿಸಲು ಅಸಾಧ್ಯ ಎಂದು ಹೇಳಿದ್ದಾರೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು ನೆಟ್ಟಿಗರು ಬೆಂಗಳೂರಿನ ಬಗ್ಗೆ ಈ ಮಹಿಳೆಯ ಅಭಿಪ್ರಾಯ ಕೇಳಿ ಖುಷಿಯಾಗಿದ್ದಾರೆ.

ರಿಯಾಹ್ (Riyah) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಬೆಂಗಳೂರು ಒಂದು ವೈಬ್ ಎಂಬ ಶೀರ್ಷಿಕೆ ನೀಡಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ನಾನು ಮೊದಲು ಇಲ್ಲಿಗೆ ಬಂದಾಗ ಬೆಂಗಳೂರನ್ನು ದ್ವೇಷಿಸುತ್ತಿದ್ದೆ. ಬೆಂಗಳೂರು ಅಂತರ್ಗತವಾಗಿ ಕೆಟ್ಟದ್ದಾಗಿರುವುದರಿಂದ ಅಲ್ಲ. ನನಗೆ ಇಲ್ಲಿ ಯಾರು ಸ್ನೇಹಿತರು ಇರಲಿಲ್ಲ, ಆತ್ಮೀಯತೆಯ ಭಾವನೆ ಇರಲಿಲ್ಲ. ನನಗೆ ಇಲ್ಲಿ ಏನೂ ಪರಿಚಿತವಾಗಿರಲಿಲ್ಲ. ಆದರೆ ಆ ನಗರವು ನನ್ನ ಮೇಲೆ ತುಂಬಾ ಪ್ರಭಾವ ಬೀರಿದೆ. ನಾನು ಬೇರೆ ಯಾವುದೇ ನಗರಕ್ಕೆ ಸ್ಥಳಾಂತರಗೊಳ್ಳುವ ಬಗ್ಗೆ ಯೋಚಿಸಿದಾಗ, ಅದು ಸರಿಯಲ್ಲ ಅನಿಸಿತು. ಈಗ ಈ ಊರು ಬಿಟ್ಟು ಹೋಗುವುದನ್ನು ಊಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by Riyah (@laraeaffair)

ತಮಾಷೆಯ ಭಾಗವೆಂದರೆ ನನಗೆ ಇನ್ನೂ ಇಲ್ಲಿ ಹೆಚ್ಚಿನ ಸ್ನೇಹಿತರು ಇಲ್ಲ, ಇದ್ದರೆ ಒಬ್ಬರು ಇಬ್ಬರಷ್ಟೇ. ಆದರೆ ನಾನು ಅವರನ್ನು ಭೇಟಿಯಾಗುವುದು ಅಪರೂಪ. ವಾಸ್ತವವಾಗಿ, ಈ ವೀಡಿಯೊವನ್ನು ಒಬ್ಬಂಟಿ ಡೇಟ್‌ನಲ್ಲಿ ಚಿತ್ರೀಕರಿಸಲಾಗಿದೆ. ಹೌದು, ನೀವು ವಾಸಿಸುವ ಪ್ರತಿಯೊಂದು ಮನೆ ಮತ್ತು ನಗರ ನಿಮ್ಮ ಮನಸ್ಸಿನ ಮೇಲೆ ಪ್ರಭಾವ ಬೀರುತ್ತದೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಮನೆಯ ಬಾಲ್ಕನಿಯಲ್ಲೇ ವೆಸ್ಟರ್ನ್ ಕಮೋಡ್, ವೈರಲ್ ಆಯ್ತು ದೃಶ್ಯ

ಈ ಪೋಸ್ಟ್ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ನೆಟ್ಟಿಗರು ಮಿಶ್ರ ಪ್ರತಿಕ್ರಿಯೆ ನೀಡಿದ್ದಾರೆ. ಒಬ್ಬ ಬಳಕೆದಾರ, ನನಗೂ ಹಾಗೆಯೇ ಅನಿಸುತ್ತಿದೆ. ಬೆಂಗಳೂರು ಮೊದಲಿಗೆ ಅಪರಿಚಿತವೆನಿಸಿತು, ಆದರೆ ಹೇಗೋ, ನಗರ ನಿಧಾನವಾಗಿ ನನ್ನ ಮೇಲೆ ಪ್ರಭಾವ ಬೀರಿದೆ ಎಂದಿದ್ದಾರೆ. ಇನ್ನೊಬ್ಬರು, ಈ ನಗರವೇ ಮೊದಲು ಅಪರಿಚಿತ, ಆ ಬಳಿಕ ಹುಟ್ಟೂರಿಗಿಂತಲೂ ಆಪ್ತ ಎಂದು ಹೇಳಿದ್ದಾರೆ. ಮತ್ತೊಬ್ಬರು, ಬೆಂಗಳೂರಿಗೆ ಬಂದಾಗ ಮೊದ ಮೊದಲು ಹಾಗೆಯೇ ಅನಿಸಿತು, ಆದರೆ ಈಗ ಈ ನಗರಕ್ಕೆ ಹೊಂದಿಕೊಂಡಿದ್ದೇನೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ