Viral Post: ಪರ ಭಾಷಿಕರಿಗೆ ಕನ್ನಡ ಕಲಿಸಲು ಬೆಂಗಳೂರು ಆಟೋ ಚಾಲಕನ ವಿನೂತನ ಪ್ರಯತ್ನ

ಹೊರರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಉದ್ಯೋಗಕ್ಕೆಂದು ಬರುವ ಅದೆಷ್ಟೋ ಜನರು ಕನ್ನಡದ ಬಗ್ಗೆ ಅಸಡ್ಡೆಯನ್ನು ತೋರುತ್ತಾರೆ. ಕನ್ನಡವನ್ನು ಮಾತನಾಡಲು ಹಿಂಜರಿಯುತ್ತಾರೆ. ಇಂತಹ ಪರ ಭಾಷಿಗರಿಗೆ ಕನ್ನಡವನ್ನು ಕಲಿಸಲು ಇಲ್ಲೊಬ್ಬ ಆಟೋ ಚಾಲಕ ವಿನೂತನ ಪ್ರಯತ್ನವೊಂದಕ್ಕೆ ಕೈ ಹಾಕಿದ್ದು, ಈ ಕುರಿತ ಪೋಸ್ಟ್‌ ಒಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

Viral Post: ಪರ ಭಾಷಿಕರಿಗೆ ಕನ್ನಡ ಕಲಿಸಲು ಬೆಂಗಳೂರು ಆಟೋ ಚಾಲಕನ ವಿನೂತನ ಪ್ರಯತ್ನ
ವೈರಲ್​​ ಪೋಸ್ಟ್​
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 21, 2024 | 5:29 PM

ಸಿಲಿಕಾನ್‌ ಸಿಟಿಯಲ್ಲಿ ಕನ್ನಡ ಮಾತಾಡೋರು ಸಿಗೋದೇ ಕಡಿಮೆಯಾಗಿಬಿಟ್ಟಿದೆ. ಕನ್ನಡ ನೆಲದಲ್ಲಿ ಬದುಕುತ್ತಿದ್ರೂ ಕನ್ನಡ ಭಾಷೆ ಮಾತನಾಡಲು ಹಿಂದೇಟು ಹಾಕ್ತಾರೆ. ಅದರಲ್ಲೂ ಹೊರ ರಾಜ್ಯಗಳಿಂದ ಬೆಂಗಳೂರಿಗೆ ಉದ್ಯೋಗಕ್ಕೆಂದು ಬರುವ ಅದೆಷ್ಟೋ ಜನರು ನಮ್ಮ ರಾಜ್ಯ ಭಾಷೆ ಕನ್ನಡದ ಬಗ್ಗೆ ಅಸಡ್ಡೆಯನ್ನು ತೋರುತ್ತಾರೆ. ಹಾಗೂ ಕನ್ನಡವನ್ನು ಮಾತನಾಡಲು ಕೂಡಾ ಹಿಂದೇಟು ಹಾಕ್ತಾರೆ. ಈ ಪರ ಭಾಷಿಗರಿಗೆ ಸ್ವಲ್ಪವಾದರೂ ಕನ್ನಡ ಭಾಷೆಯಲ್ಲಿ ಕಲಿಸಲು ಇಲ್ಲೊಬ್ಬ ಆಟೋ ಚಾಲಕ ವಿನೂತನ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಈ ಕುರಿತ ಪೋಸ್ಟ್‌ ಒಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಬೆಂಗಳೂರಿನ ಆಟೋ ಚಾಲಕರೊಬ್ಬರು ಈ ವಿನೂತನ ಪ್ರಯತ್ನಕ್ಕೆ ಕೈ ಹಾಕಿದ್ದು, ʼಲರ್ನ್ ಕನ್ನಡ ವಿತ್‌ ಆಟೋ ಕನ್ನಡಿಗʼ ಎಂಬ ವಿಶಿಷ್ಟ ಕಾನ್ಸೆಪ್ಟ್‌ ಮೂಲಕ ಪರ ಭಾಷಿಗರಿಗೆ ಕೆಲವೊಂದು ಬೇಸಿಕ್‌ ಕನ್ನಡ ಪದಗಳನ್ನು ಕಲಿಸುವಂತಹ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಹೌದು ಆಟೋದಲ್ಲಿ ಮಾತನಾಡುವಂತಹ ಕೆಲವೊಂದು ಬೇಸಿಕ್‌ ಪದಗಳನ್ನು ಇಂಗ್ಲೀಷ್‌ ಹಾಗೂ ಕನ್ನಡ ಎರಡೂ ಭಾಷೆಯಲ್ಲಿ ಪ್ರಿಂಟ್‌ ಮಾಡಿಸಿ ತಮ್ಮ ಆಟೋದಲ್ಲಿ ಅಂಟಿಸಿದ್ದಾರೆ. ಈ ಮೂಲಕ ಅನ್ಯ ಭಾಷಿಗರು ಆಟೋ ಚಾಲಕರ ಜೊತೆ ಸುಲಭವಾಗಿ ಕನ್ನಡದಲ್ಲಿಯೇ ವ್ಯವಹರಿಸಬಹುದಾಗಿದೆ.

ವೈರಲ್​​​​ ಪೋಸ್ಟ್​​​ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್‌ ಒಂದನ್ನು vatsalyatandon ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಫೋಟೋದಲ್ಲಿ ಪರಭಾಷಿಗರಿಗೆ ಕನ್ನಡ ಕಲಿಸುವ ಸಲುವಾಗಿ ಲರ್ನ್‌ ಕನ್ನಡ ವಿತ್‌ ಆಟೋ ಕನ್ನಡಿಗ ಎಂದು ಆಟೋವೊಂದರಲ್ಲಿ ಸಣ್ಣ ಬೋರ್ಡ್‌ ಒಂದನ್ನು ಹಾಕಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ನೋ ರೊಮ್ಯಾನ್ಸ್‌! ಇದು ಕ್ಯಾಬ್ ಕಣ್ರೀ ಓಯೋ ರೂಮ್‌ ಅಲ್ಲ… ವೈರಲ್‌ ಆಯ್ತು ಕ್ಯಾಬ್‌ನಲ್ಲಿ ಹಾಕಿದ ಸೂಚನಾ ಫಲಕ

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ಪೋಸ್ಟ್‌ 8 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದಂತೂ ತುಂಬಾನೇ ಒಳ್ಳೆಯ ಐಡಿಯಾʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಆಟೋ ಚಾಲಕನ ಈ ಪ್ರಯತ್ನಕ್ಕೆ ಮೆಚ್ಚುಗೆ ಕೊಡಲೇ ಬೇಕುʼ ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:23 pm, Mon, 21 October 24

ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ