AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಪರ ಭಾಷಿಕರಿಗೆ ಕನ್ನಡ ಕಲಿಸಲು ಬೆಂಗಳೂರು ಆಟೋ ಚಾಲಕನ ವಿನೂತನ ಪ್ರಯತ್ನ

ಹೊರರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಉದ್ಯೋಗಕ್ಕೆಂದು ಬರುವ ಅದೆಷ್ಟೋ ಜನರು ಕನ್ನಡದ ಬಗ್ಗೆ ಅಸಡ್ಡೆಯನ್ನು ತೋರುತ್ತಾರೆ. ಕನ್ನಡವನ್ನು ಮಾತನಾಡಲು ಹಿಂಜರಿಯುತ್ತಾರೆ. ಇಂತಹ ಪರ ಭಾಷಿಗರಿಗೆ ಕನ್ನಡವನ್ನು ಕಲಿಸಲು ಇಲ್ಲೊಬ್ಬ ಆಟೋ ಚಾಲಕ ವಿನೂತನ ಪ್ರಯತ್ನವೊಂದಕ್ಕೆ ಕೈ ಹಾಕಿದ್ದು, ಈ ಕುರಿತ ಪೋಸ್ಟ್‌ ಒಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

Viral Post: ಪರ ಭಾಷಿಕರಿಗೆ ಕನ್ನಡ ಕಲಿಸಲು ಬೆಂಗಳೂರು ಆಟೋ ಚಾಲಕನ ವಿನೂತನ ಪ್ರಯತ್ನ
ವೈರಲ್​​ ಪೋಸ್ಟ್​
ಮಾಲಾಶ್ರೀ ಅಂಚನ್​
| Edited By: |

Updated on:Oct 21, 2024 | 5:29 PM

Share

ಸಿಲಿಕಾನ್‌ ಸಿಟಿಯಲ್ಲಿ ಕನ್ನಡ ಮಾತಾಡೋರು ಸಿಗೋದೇ ಕಡಿಮೆಯಾಗಿಬಿಟ್ಟಿದೆ. ಕನ್ನಡ ನೆಲದಲ್ಲಿ ಬದುಕುತ್ತಿದ್ರೂ ಕನ್ನಡ ಭಾಷೆ ಮಾತನಾಡಲು ಹಿಂದೇಟು ಹಾಕ್ತಾರೆ. ಅದರಲ್ಲೂ ಹೊರ ರಾಜ್ಯಗಳಿಂದ ಬೆಂಗಳೂರಿಗೆ ಉದ್ಯೋಗಕ್ಕೆಂದು ಬರುವ ಅದೆಷ್ಟೋ ಜನರು ನಮ್ಮ ರಾಜ್ಯ ಭಾಷೆ ಕನ್ನಡದ ಬಗ್ಗೆ ಅಸಡ್ಡೆಯನ್ನು ತೋರುತ್ತಾರೆ. ಹಾಗೂ ಕನ್ನಡವನ್ನು ಮಾತನಾಡಲು ಕೂಡಾ ಹಿಂದೇಟು ಹಾಕ್ತಾರೆ. ಈ ಪರ ಭಾಷಿಗರಿಗೆ ಸ್ವಲ್ಪವಾದರೂ ಕನ್ನಡ ಭಾಷೆಯಲ್ಲಿ ಕಲಿಸಲು ಇಲ್ಲೊಬ್ಬ ಆಟೋ ಚಾಲಕ ವಿನೂತನ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಈ ಕುರಿತ ಪೋಸ್ಟ್‌ ಒಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಬೆಂಗಳೂರಿನ ಆಟೋ ಚಾಲಕರೊಬ್ಬರು ಈ ವಿನೂತನ ಪ್ರಯತ್ನಕ್ಕೆ ಕೈ ಹಾಕಿದ್ದು, ʼಲರ್ನ್ ಕನ್ನಡ ವಿತ್‌ ಆಟೋ ಕನ್ನಡಿಗʼ ಎಂಬ ವಿಶಿಷ್ಟ ಕಾನ್ಸೆಪ್ಟ್‌ ಮೂಲಕ ಪರ ಭಾಷಿಗರಿಗೆ ಕೆಲವೊಂದು ಬೇಸಿಕ್‌ ಕನ್ನಡ ಪದಗಳನ್ನು ಕಲಿಸುವಂತಹ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಹೌದು ಆಟೋದಲ್ಲಿ ಮಾತನಾಡುವಂತಹ ಕೆಲವೊಂದು ಬೇಸಿಕ್‌ ಪದಗಳನ್ನು ಇಂಗ್ಲೀಷ್‌ ಹಾಗೂ ಕನ್ನಡ ಎರಡೂ ಭಾಷೆಯಲ್ಲಿ ಪ್ರಿಂಟ್‌ ಮಾಡಿಸಿ ತಮ್ಮ ಆಟೋದಲ್ಲಿ ಅಂಟಿಸಿದ್ದಾರೆ. ಈ ಮೂಲಕ ಅನ್ಯ ಭಾಷಿಗರು ಆಟೋ ಚಾಲಕರ ಜೊತೆ ಸುಲಭವಾಗಿ ಕನ್ನಡದಲ್ಲಿಯೇ ವ್ಯವಹರಿಸಬಹುದಾಗಿದೆ.

ವೈರಲ್​​​​ ಪೋಸ್ಟ್​​​ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್‌ ಒಂದನ್ನು vatsalyatandon ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಫೋಟೋದಲ್ಲಿ ಪರಭಾಷಿಗರಿಗೆ ಕನ್ನಡ ಕಲಿಸುವ ಸಲುವಾಗಿ ಲರ್ನ್‌ ಕನ್ನಡ ವಿತ್‌ ಆಟೋ ಕನ್ನಡಿಗ ಎಂದು ಆಟೋವೊಂದರಲ್ಲಿ ಸಣ್ಣ ಬೋರ್ಡ್‌ ಒಂದನ್ನು ಹಾಕಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ನೋ ರೊಮ್ಯಾನ್ಸ್‌! ಇದು ಕ್ಯಾಬ್ ಕಣ್ರೀ ಓಯೋ ರೂಮ್‌ ಅಲ್ಲ… ವೈರಲ್‌ ಆಯ್ತು ಕ್ಯಾಬ್‌ನಲ್ಲಿ ಹಾಕಿದ ಸೂಚನಾ ಫಲಕ

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ಪೋಸ್ಟ್‌ 8 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದಂತೂ ತುಂಬಾನೇ ಒಳ್ಳೆಯ ಐಡಿಯಾʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಆಟೋ ಚಾಲಕನ ಈ ಪ್ರಯತ್ನಕ್ಕೆ ಮೆಚ್ಚುಗೆ ಕೊಡಲೇ ಬೇಕುʼ ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:23 pm, Mon, 21 October 24

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ