Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ನೀವು ಸುರಕ್ಷಿತವಾಗಿದ್ದೀರಿ ಅಲ್ವಾ; ಬೆಂಗಳೂರು ಟ್ರಾಫಿಕ್‌ನಲ್ಲಿ ಸಿಲುಕಿದ ವ್ಯಕ್ತಿಗೆ ಸುರಕ್ಷತಾ ಸಂದೇಶ ಕಳುಹಿಸಿದ ರ್‍ಯಾಪಿಡೋ

ಸೋಷಿಯಲ್‌ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ಬಳಕೆದಾರರು ತಮ್ಮ ಜೀವನದಲ್ಲಿ ನಡೆಯುವ ಕೆಲವೊಂದು ಇಂಟರೆಸ್ಟಿಂಗ್‌ ವಿಚಾರಗಳ ಬಗ್ಗೆ ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ರು ವ್ಯಕ್ತಿ ರ್‍ಯಾಪಿಡೋ ತನ್ನ ಸುರಕ್ಷತೆಯ ಬಗ್ಗೆ ವಿಚಾರಿಸಲು ಸಂದೇಶ ಕಳುಹಿಸಿದ ಘಟನೆಯ ಬಗ್ಗೆ ಶೇರ್‌ ಮಾಡಿಕೊಂಡಿದ್ದಾರೆ. ಹೌದು ತಾನು ಬೆಂಗ್ಳೂರು ಟ್ರಾಫಿಕ್‌ನಲ್ಲಿ ಸಿಲುಕಿದ್ದ ಸಂದರ್ಭದಲ್ಲಿ ನೀವು ಸೇಫ್‌ ಆಗಿದ್ದೀರಿ ಅಲ್ವಾ ಎಂದು ರ್‍ಯಾಪಿಡೋ ಸಂದೇಶ ಕಳುಹಿಸಿದ್ದು, ರ್‍ಯಾಪಿಡೋದ ಈ ಸುರಕ್ಷತಾ ಕ್ರಮವನ್ನು ಕಂಡು ಅವರು ಆಶ್ಚರ್ಯಚಕಿತರಾಗಿದ್ದಾರೆ.

Viral: ನೀವು ಸುರಕ್ಷಿತವಾಗಿದ್ದೀರಿ ಅಲ್ವಾ; ಬೆಂಗಳೂರು ಟ್ರಾಫಿಕ್‌ನಲ್ಲಿ ಸಿಲುಕಿದ ವ್ಯಕ್ತಿಗೆ ಸುರಕ್ಷತಾ ಸಂದೇಶ ಕಳುಹಿಸಿದ ರ್‍ಯಾಪಿಡೋ
ವೈರಲ್ ಪೋಸ್ಟ್​​
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 31, 2025 | 3:32 PM

ಬೆಂಗಳೂರು, ಮುಂಬೈ, ದೆಹಲಿಯಂತಹ ದೊಡ್ಡ ದೊಡ್ಡ ನಗರಗಳಲ್ಲಿ ಆನ್‌ಲೈನ್ ಟ್ಯಾಕ್ಸಿ ಸೇವೆಗಳಾದ ಉಬರ್, ಓಲಾ ಮತ್ತು ರ್‍ಯಾಪಿಡೋ ಜನರ ಜೀವನವನ್ನು ಸುಲಭಗೊಳಿಸಿವೆ. ಪ್ರಯಾಣಕ್ಕೆ ಅನುಕೂಲಕರವೆಂದು ಈ ನಗರಗಳಲ್ಲಿ ಜನರು ಹೆಚ್ಚಾಗಿ ಕ್ಯಾಬ್ ಸೇವೆಗಳನ್ನೇ ಆಯ್ಕೆ ಮಾಡುತ್ತಾರೆ. ಆದ್ರೆ ಎಲ್ಲ ಸಂದರ್ಭಗಳಲ್ಲಿ ಕ್ಯಾಬ್‌ ಸುರಕ್ಷಿತವೇ ಎಂದು ಹಲವರಲ್ಲಿ ಒಂದು ಗೊಂದಲವಿರುತ್ತದೆ. ಆದರೆ ಕ್ಯಾಬ್‌ ಸೇವೆಗಳು ನಿಜಕ್ಕೂ ಸುರಕ್ಷಿತವಾಗಿದೆ ಎಂಬುದನ್ನು ಇಲ್ಲೊಬ್ರು ವ್ಯಕ್ತಿ ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. ಹೌದು ಬೆಂಗ್ಳೂರು ಟ್ರಾಫಿಕ್‌ನಲ್ಲಿ ಸಿಲುಕಿದ್ದ ಸಂದರ್ಭದಲ್ಲಿ ನೀವು ಸೇಫ್‌ ಆಗಿದ್ದೀರಿ ಅಲ್ವಾ ಎಂದು ರ್‍ಯಾಪಿಡೋ ಸಂದೇಶ ಕಳುಹಿಸಿದ್ದು, ರ್‍ಯಾಪಿಡೋದ ಈ ಸುರಕ್ಷತಾ ಕ್ರಮವನ್ನು ಕಂಡು ಅವರು ಆಶ್ಚರ್ಯಚಕಿತರಾಗಿದ್ದಾರೆ.

ಬೆಂಗ್ಳೂರು ಟ್ರಾಫಿಕ್‌ ಬಗ್ಗೆ ಗೊತ್ತೇ ಇದೆ ಅಲ್ವಾ. ಇಲ್ಲೊಬ್ರು ವ್ಯಕ್ತಿ ಕೂಡಾ ರ್‍ಯಾಪಿಡೋ ಆಟೋದಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ಮಾರತಹಳ್ಳಿಯಲ್ಲಿರುವ ಬ್ರಿಡ್ಜ್‌ ಮೇಲೆ ಸಿಕ್ಕಿಹಾಕಿಕೊಂಡಿದ್ದರು. ದೀರ್ಘಕಾಲದವರೆಗೆ ಆಟೋ ಚಲಿಸದೆ ಟ್ರಾಫಿಕ್‌ನಲ್ಲಿ ನಿಂತಿದ್ದ ಕಾರಣ, ಸುರಕ್ಷತೆಯ ದೃಷ್ಟಿಯಿಂದ ರ್‍ಯಾಪಿಡೋ “ನೀವು ಪ್ರಯಾಣಿಸುತ್ತಿರುವ ವಾಹನ ಹಲವು ಹೊತ್ತಿನಿಂದ ಮೂವ್‌ ಆಗುತ್ತಿಲ್ಲ ಎಂಬುದು ನಮಗೆ ತಿಳಿದು ಬಂದಿದೆ, ನೀವು ಸೇಫ್‌ ಆಗಿದ್ದೀರಿ ತಾನೇ” ಎಂದು ಆ ವ್ಯಕ್ತಿಗೆ ಸುರಕ್ಷತಾ ಸಂದೇಶವನ್ನು ಕಳುಹಿಸಿದೆ. ಇದನ್ನು ನೋಡಿ ಅವರು ಫುಲ್‌ ಶಾಕ್‌ ಆಗಿದ್ದಾರೆ. ಗ್ರಾಹಕರ ಮೇಲೆ ರ್‍ಯಾಪಿಡೋ ಇಟ್ಟಿರುವ ಕಾಳಜಿಗೆ ಅವರು ಫುಲ್‌ ಖುಷಿಯಾಗಿದ್ದಾರೆ. ದೀರ್ಘ ಸಮಯದವರಗೆ ಆಟೋ ಚಲಿಸದೆ ಇದ್ದ ಕಾರಣ ಏನೋ ಸಮಸ್ಯೆ ಆಗಿರಬಹುದೆಂದು ಪ್ರಯಾಣಿಕನ ಸುರಕ್ಷತೆಯ ದೃಷ್ಟಿಯಿಂದ ರ್‍ಯಾಪಿಡೋ ನೀವು ಸೇಫ್‌ ಆಗಿದ್ದೀರಿ ಅಲ್ವಾ ಎಂಬ ಸಂದೇಶವನ್ನು ಕಳುಹಿಸಿದೆ.

ವೈರಲ್​ ಪೋಸ್ಟ್​​ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್‌ ಒಂದನ್ನು unfunni ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಆಗುತ್ತಿರುವ ಫೋಟೋದಲ್ಲಿ “ನೀವು ಪ್ರಯಾಣಿಸುತ್ತಿರುವ ವಾಹನ ಹಲವು ಹೊತ್ತಿನಿಂದ ಮೂವ್‌ ಆಗುತ್ತಿಲ್ಲ ಎಂಬುದು ನಮಗೆ ತಿಳಿದು ಬಂದಿದೆ, ನೀವು ಸೇಫ್‌ ಆಗಿದ್ದೀರಿ ತಾನೇ” ಎಂದು ರ್‍ಯಾಪಿಡೋ ಸುರಕ್ಷತಾ ಸಂದೇಶವನ್ನು ಕಳುಹಿಸಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಉಚಿತ ತಿಂಡಿ, ನೀರಿನಿಂದ ವೈ-ಫೈವರೆಗೆ ಯಾವ ವಿಮಾನಕ್ಕಿಂತಲೂ ಕಮ್ಮಿಯಿಲ್ಲ ಪ್ರಯಾಣಿಕರಿಗೆ ಈ ಕ್ಯಾಬ್‌ನಲ್ಲಿರುವ ಸೌಲಭ್ಯ

ಜನವರಿ 28 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 2.4 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼ ರ್‍ಯಾಪಿಡೋದ ಈ ನಡೆ ಮೆಚ್ಚುವಂತಹದ್ದುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼನನಗೆ ಉಬರ್‌ ಕೂಡಾ ಇದೇ ರೀತಿಯ ಸಂದೇಶ ಕಳುಹಿಸಿದೆʼ ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್