AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಇದು ಡಿಜಿಟಲ್ ಇಂಡಿಯಾ ಕಣ್ರೀ; ಸ್ಮಾರ್ಟ್ ವಾಚ್ ಕ್ಯೂಆರ್ ಕೋಡ್ ಮೂಲಕ ಹಣ ಸ್ವೀಕರಿಸುತ್ತಾರೆ ಬೆಂಗಳೂರಿನ ಈ ಆಟೋ ಚಾಲಕ

ಇದು ಡಿಜಿಟಲ್ ಯುಗ. ಇಲ್ಲಿ ಎಲ್ಲಾ ವಹಿವಾಟುಗಳು ಹೆಚ್ಚಾಗಿ ಆನ್ಲೈನ್ ಮೂಲಕ ನಡೆಯುತ್ತಿವೆ. ಇದೀಗ ಡಿಜಿಟಲ್ ಭಾರತಕ್ಕೆ ಸಂಬಂಧಿಸಿದ ಫೋಟೋವೊಂದು ವೈರಲ್ ಆಗಿದ್ದು, ಆಟೋ ಡ್ರೈವರ್ ಒಬ್ಬರು ಚಿಲ್ಲರೆ ಸಮಸ್ಯೆಯನ್ನು ಹೋಗಲಾಡಿಸಲು ಸ್ಮಾರ್ಟ್ ವಾಚ್ ಸ್ಕ್ಯಾನರ್ ಮೂಲಕ ಗ್ರಾಹಕರಿಂದ ಹಣ ಸ್ವೀಕರಿಸಿದ್ದಾರೆ. ಈ ದೃಶ್ಯ ಕಂಡು ಇದು ಡಿಜಿಟಲ್ ಇಂಡಿಯಾ ಸ್ವಾಮಿ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.

Viral: ಇದು ಡಿಜಿಟಲ್ ಇಂಡಿಯಾ ಕಣ್ರೀ; ಸ್ಮಾರ್ಟ್ ವಾಚ್ ಕ್ಯೂಆರ್ ಕೋಡ್ ಮೂಲಕ ಹಣ ಸ್ವೀಕರಿಸುತ್ತಾರೆ ಬೆಂಗಳೂರಿನ ಈ ಆಟೋ ಚಾಲಕ
ಮಾಲಾಶ್ರೀ ಅಂಚನ್​
| Edited By: |

Updated on: Sep 22, 2024 | 6:01 PM

Share

ಈಗಂತೂ ಭಾರತದಲ್ಲಿಯೂ ಡಿಜಿಟಲೀಕರಣ ಪ್ರಗತಿ ಪಡೆದಿದೆ. ಪ್ರತಿ ವ್ಯಾಪಾರ ವಹಿವಾಟಿನಲ್ಲಿ ಈಗ ನಗದು ರಹಿತ ವಹಿವಾಟುಗಳೇ ಹೆಚ್ಚಾಗಿ ನಡೆಯುತ್ತಿದೆ. ಚಿಲ್ಲರೆ ಅಂಗಡಿಗಳಿಂದ ದೊಡ್ಡ ದೊಡ್ಡ ವ್ಯವಹಾರಗಳವರೆಗೂ ಈಗ ಕ್ಯೂಆರ್ (QR) ಕೋಡ್ ಗಳನ್ನು ಬಳಕೆ ಮಾಡಲಾಗುತ್ತಿದೆ. ಅಷ್ಟೇ ಯಾಕೆ ಭಿಕ್ಷುಕರು ಸಹ ಕ್ಯೂಆರ್ ಕೋಡ್ ಹಿಡಿದು ಭಿಕ್ಷೆ ಬೇಡಲು ಆರಂಭಿಸಿದ್ದಾರೆ. ಇದೀಗ ನಮ್ಮ ದೇಶ ಡಿಜಿಟಲೀಕರಣದಲ್ಲಿ ಸಾಧನೆ ಮಾಡುತ್ತಿದೆ ಎಂಬುದಕ್ಕೆ ನಿದರ್ಶನದಂತಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಆಟೋ ಡ್ರೈವರ್ ಒಬ್ಬರು ಚಿಲ್ಲರೆ ಸಮಸ್ಯೆ ಯಾರಿಗೆ ಬೇಕಪ್ಪಾ ಎನ್ನುತ್ತಾ ಸ್ಮಾರ್ಟ್ ವಾಚ್ ಸ್ಕ್ಯಾನರ್ ಮೂಲಕ ಗ್ರಾಹಕರಿಂದ ಆನ್ಲೈನ್ ಪೇಮೆಂಟ್ ಸ್ವೀಕರಿಸಿದ್ದಾರೆ. ಈ ದೃಶ್ಯ ನೋಡಿ ಇದು ಡಿಜಿಟಲ್ ಇಂಡಿಯಾ ಕಣ್ರೀ ಎಂದು ನೆಟ್ಟಿಗರು ಹೇಳಿದ್ದಾರೆ.

ವಿಶ್ವಜೀತ್ (Vishvajeet590) ಎಂಬವರು ಈ ಕುರಿತ ಪೋಸ್ಟ್ ಒಂದನ್ನು ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ಆಗುತ್ತಿರುವ ಫೋಟೋದಲ್ಲಿ ಬೆಂಗಳೂರಿನ ಆಟೋ ಡ್ರೈವರ್ ಒಬ್ಬರು ಸ್ಮಾರ್ಟ್ ವಾಚ್ ಕ್ಯೂಆರ್ ಕೋಡ್ ಮೂಲಕ ಗ್ರಾಹಕರಿಂದ ಹಣ ಸ್ವೀಕರಿಸುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಎಂಥಾ ಅವಸ್ಥೆ ಮಾರ್ರೆ; ತೆರೆದ ಬಾವಿಯ ಅಂಚಲ್ಲಿ ಕುಳಿತು ಮಗುವನ್ನು ಕೈಯಲ್ಲಿ ಹಿಡಿದು ರೀಲ್ಸ್‌ ಮಾಡಿದ ಮಹಿಳೆ

ಸೆಪ್ಟೆಂಬರ್ 20 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ 6 ಲಕ್ಷಕ್ಕೂ ಅಧಿಕ ವೀಕ್ಷಿಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಆಧುನಿಕ ಸಮಸ್ಯೆಗಳಿಗೆ ಆಧುನಿಕ ಪರಿಹಾರಗಳು’ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ‘ಇದು ನಮ್ಮ ನವ ಭಾರತ’ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ‘ಈಗ ಭಾರತ ಡಿಜಿಟಲ್ ಆಗಿರುವುದನ್ನು ನಾನು ಒಪ್ಪಿಕೊಳ್ಳುತ್ತೇನೆ’ ಎಂದು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ