AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಇದು ಡಿಜಿಟಲ್ ಇಂಡಿಯಾ ಕಣ್ರೀ; ಸ್ಮಾರ್ಟ್ ವಾಚ್ ಕ್ಯೂಆರ್ ಕೋಡ್ ಮೂಲಕ ಹಣ ಸ್ವೀಕರಿಸುತ್ತಾರೆ ಬೆಂಗಳೂರಿನ ಈ ಆಟೋ ಚಾಲಕ

ಇದು ಡಿಜಿಟಲ್ ಯುಗ. ಇಲ್ಲಿ ಎಲ್ಲಾ ವಹಿವಾಟುಗಳು ಹೆಚ್ಚಾಗಿ ಆನ್ಲೈನ್ ಮೂಲಕ ನಡೆಯುತ್ತಿವೆ. ಇದೀಗ ಡಿಜಿಟಲ್ ಭಾರತಕ್ಕೆ ಸಂಬಂಧಿಸಿದ ಫೋಟೋವೊಂದು ವೈರಲ್ ಆಗಿದ್ದು, ಆಟೋ ಡ್ರೈವರ್ ಒಬ್ಬರು ಚಿಲ್ಲರೆ ಸಮಸ್ಯೆಯನ್ನು ಹೋಗಲಾಡಿಸಲು ಸ್ಮಾರ್ಟ್ ವಾಚ್ ಸ್ಕ್ಯಾನರ್ ಮೂಲಕ ಗ್ರಾಹಕರಿಂದ ಹಣ ಸ್ವೀಕರಿಸಿದ್ದಾರೆ. ಈ ದೃಶ್ಯ ಕಂಡು ಇದು ಡಿಜಿಟಲ್ ಇಂಡಿಯಾ ಸ್ವಾಮಿ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.

Viral: ಇದು ಡಿಜಿಟಲ್ ಇಂಡಿಯಾ ಕಣ್ರೀ; ಸ್ಮಾರ್ಟ್ ವಾಚ್ ಕ್ಯೂಆರ್ ಕೋಡ್ ಮೂಲಕ ಹಣ ಸ್ವೀಕರಿಸುತ್ತಾರೆ ಬೆಂಗಳೂರಿನ ಈ ಆಟೋ ಚಾಲಕ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Sep 22, 2024 | 6:01 PM

ಈಗಂತೂ ಭಾರತದಲ್ಲಿಯೂ ಡಿಜಿಟಲೀಕರಣ ಪ್ರಗತಿ ಪಡೆದಿದೆ. ಪ್ರತಿ ವ್ಯಾಪಾರ ವಹಿವಾಟಿನಲ್ಲಿ ಈಗ ನಗದು ರಹಿತ ವಹಿವಾಟುಗಳೇ ಹೆಚ್ಚಾಗಿ ನಡೆಯುತ್ತಿದೆ. ಚಿಲ್ಲರೆ ಅಂಗಡಿಗಳಿಂದ ದೊಡ್ಡ ದೊಡ್ಡ ವ್ಯವಹಾರಗಳವರೆಗೂ ಈಗ ಕ್ಯೂಆರ್ (QR) ಕೋಡ್ ಗಳನ್ನು ಬಳಕೆ ಮಾಡಲಾಗುತ್ತಿದೆ. ಅಷ್ಟೇ ಯಾಕೆ ಭಿಕ್ಷುಕರು ಸಹ ಕ್ಯೂಆರ್ ಕೋಡ್ ಹಿಡಿದು ಭಿಕ್ಷೆ ಬೇಡಲು ಆರಂಭಿಸಿದ್ದಾರೆ. ಇದೀಗ ನಮ್ಮ ದೇಶ ಡಿಜಿಟಲೀಕರಣದಲ್ಲಿ ಸಾಧನೆ ಮಾಡುತ್ತಿದೆ ಎಂಬುದಕ್ಕೆ ನಿದರ್ಶನದಂತಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಆಟೋ ಡ್ರೈವರ್ ಒಬ್ಬರು ಚಿಲ್ಲರೆ ಸಮಸ್ಯೆ ಯಾರಿಗೆ ಬೇಕಪ್ಪಾ ಎನ್ನುತ್ತಾ ಸ್ಮಾರ್ಟ್ ವಾಚ್ ಸ್ಕ್ಯಾನರ್ ಮೂಲಕ ಗ್ರಾಹಕರಿಂದ ಆನ್ಲೈನ್ ಪೇಮೆಂಟ್ ಸ್ವೀಕರಿಸಿದ್ದಾರೆ. ಈ ದೃಶ್ಯ ನೋಡಿ ಇದು ಡಿಜಿಟಲ್ ಇಂಡಿಯಾ ಕಣ್ರೀ ಎಂದು ನೆಟ್ಟಿಗರು ಹೇಳಿದ್ದಾರೆ.

ವಿಶ್ವಜೀತ್ (Vishvajeet590) ಎಂಬವರು ಈ ಕುರಿತ ಪೋಸ್ಟ್ ಒಂದನ್ನು ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ಆಗುತ್ತಿರುವ ಫೋಟೋದಲ್ಲಿ ಬೆಂಗಳೂರಿನ ಆಟೋ ಡ್ರೈವರ್ ಒಬ್ಬರು ಸ್ಮಾರ್ಟ್ ವಾಚ್ ಕ್ಯೂಆರ್ ಕೋಡ್ ಮೂಲಕ ಗ್ರಾಹಕರಿಂದ ಹಣ ಸ್ವೀಕರಿಸುತ್ತಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಎಂಥಾ ಅವಸ್ಥೆ ಮಾರ್ರೆ; ತೆರೆದ ಬಾವಿಯ ಅಂಚಲ್ಲಿ ಕುಳಿತು ಮಗುವನ್ನು ಕೈಯಲ್ಲಿ ಹಿಡಿದು ರೀಲ್ಸ್‌ ಮಾಡಿದ ಮಹಿಳೆ

ಸೆಪ್ಟೆಂಬರ್ 20 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ 6 ಲಕ್ಷಕ್ಕೂ ಅಧಿಕ ವೀಕ್ಷಿಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಆಧುನಿಕ ಸಮಸ್ಯೆಗಳಿಗೆ ಆಧುನಿಕ ಪರಿಹಾರಗಳು’ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ‘ಇದು ನಮ್ಮ ನವ ಭಾರತ’ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ‘ಈಗ ಭಾರತ ಡಿಜಿಟಲ್ ಆಗಿರುವುದನ್ನು ನಾನು ಒಪ್ಪಿಕೊಳ್ಳುತ್ತೇನೆ’ ಎಂದು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ