AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬೆಂಗಳೂರು; ಎಸ್​ಎಸ್​ಎಲ್​ಸಿ ಮುಗಿಸಿ 38 ವರ್ಷಗಳ ನಂತರ ಪಿಯುಸಿ ಪರೀಕ್ಷೆ ಬರೆಯಲಿರುವ ಆಟೋ ಚಾಲಕ

Inspirational : ವ್ಯವಸ್ಥೆ ಸರಿ ಇಲ್ಲ, ಸರ್ಕಾರ ಸರಿ ಇಲ್ಲ ಎಂದು ದೂರುವ ಮೊದಲು ತಮ್ಮನ್ನು ತಾವು ನೋಡಿಕೊಳ್ಳುವುದನ್ನು ಕಲಿಯಬೇಕು. ತಮ್ಮೊಳಗಿನ ಕೊರತೆಯನ್ನು ನೀಗಿಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕು. ಬೆಂಗಳೂರಿನ ಆಟೋ ಚಾಲಕ ಭಾಸ್ಕರ್ 3 ಮತ್ತು 6ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳ ತಂದೆ. 38 ವರ್ಷಗಳ ನಂತರ ಅವರೀಗ ಮತ್ತೆ ವಿದ್ಯಾರ್ಥಿ!

Viral: ಬೆಂಗಳೂರು; ಎಸ್​ಎಸ್​ಎಲ್​ಸಿ ಮುಗಿಸಿ 38 ವರ್ಷಗಳ ನಂತರ ಪಿಯುಸಿ ಪರೀಕ್ಷೆ ಬರೆಯಲಿರುವ ಆಟೋ ಚಾಲಕ
ಬೆಂಗಳೂರಿನ ಆಟೋ ಚಾಲಕ ಭಾಸ್ಕರ್
ಶ್ರೀದೇವಿ ಕಳಸದ
|

Updated on:Aug 29, 2023 | 12:01 PM

Share

Bengaluru: ಎಸ್​ಎಸ್ಎಲ್​ಸಿ ಮುಗಿಸಿ 38 ವರ್ಷಗಳ ನಂತರ ಆಟೋ ಚಾಲಕರೊಬ್ಬರು (Auto Driver) ಪಿಯುಸಿಯ ಇಂಗ್ಲಿಷ್​ ಪರೀಕ್ಷೆ ಬರೆದಿದ್ದಾರೆ. ಈ ವಿಷಯವನ್ನು ನಿಧಿ ಅಗರ್ವಾಲ್​ ಎನ್ನುವವರು X ನಲ್ಲಿ ಬಹಿರಂಗಪಡಿಸಿದ್ದಾರೆ; ‘ಇಂದು ಆಟೋದಲ್ಲಿ ಹೋಗುತ್ತಿದ್ದಾಗ ಚಾಲಕ ಭಾಸ್ಕರ್ ಅವರೊಂದಿಗೆ ಮಾತಿಗಿಳಿದೆ. ಅವರು ಈವತ್ತಷ್ಟೇ ಪಿಯುಸಿ, ಇಂಗ್ಲಿಷ್​ ಪರೀಕ್ಷೆ ಬರೆದೆನೆಂದು ಹೇಳಿದರು. 1985ರಲ್ಲಿ ಶಾಲೆಯನ್ನು ಬಿಟ್ಟಿದ್ದ ಅವರು ಈ ವರ್ಷ ಪಿಯುಸಿ ಪರೀಕ್ಷೆ ಬರೆಯುವುದಾಗಿ ಹೇಳಿದ್ದಾರೆ’. ಇಬ್ಬರು ಮಕ್ಕಳ ತಂದೆಯಾಗಿರುವ ಭಾಸ್ಕರ್​ ಇದೀಗ ತಮ್ಮ ಶಿಕ್ಷಣವನ್ನು ಮುಂದುವರಿಸಲು ಮನಸ್ಸು ಮಾಡಿದ್ದಾರೆ. ಇವರ ಮಕ್ಕಳು 3 ಮತ್ತು 6ನೇ ತರಗತಿಯಲ್ಲಿ ಓದುತ್ತಿದ್ದಾರೆ.

ಇದನ್ನೂ ಓದಿ : Viral: ಗಣಿತ ಪರೀಕ್ಷೆಯಲ್ಲಿ ಸೊನ್ನೆ ಪಡೆದ ಮಗಳು; ಇಂಥ ಅಂಕ ಗಳಿಸಲು ತುಂಬಾ ಧೈರ್ಯ ಬೇಕು ಎಂದ ತಾಯಿ

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ಪೋಸ್ಟ್​ ಅನ್ನು ಆ. 26ರಂದು ಪೋಸ್ಟ್ ಮಾಡಲಾಗಿದೆ. 1,500ಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ. ಮಾಧ್ಯಮದವರು ಈ ಪೋಸ್ಟ್​ಗೆ ಪ್ರತಿಕ್ರಿಯಿಸಿ ಈ ಆಟೋಚಾಲಕರ ಬಗ್ಗೆ ಇನ್ನಷ್ಟು ಮಾಹಿತಿ ಬೇಕಿತ್ತು, ದಯವಿಟ್ಟು ಒದಗಿಸುವಿರಾ? ಎಂದು ನಿಧಿ ಅವರಿಗೆ ಕೇಳಿದ್ದಾರೆ.

ಓದಲು ಮನಸ್ಸಿದ್ದರೆ ವಯಸ್ಸು ಯಾವತ್ತೂ ಅಡ್ಡಿಯಲ್ಲ!

ಈ ಹಿಂದೆ, ಬೆಂಗಳೂರಿನ ಆಟೋ ಚಾಲಕರೊಬ್ಬರು ಆರು ಗಂಟೆಗಳ ಕಾಲ ಆಟೋ ಓಡಿಸಿದರೂ ರೂ. 40 ಕೂಲಿ ಪಡೆದೆ ಎಂದು ಹೇಳಿದ ವಿಡಿಯೋ ವೈರಲ್ ಆಗಿತ್ತು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಸಾರ್ವಜನಿಕರಿಗೆ ನೀಡಿದ ಉಚಿತ ಬಸ್​ ಯೋಜನೆಯ ಪರಿಣಾಮ ಆಟೋಚಾಲಕರನ್ನು ಬೀದಿಗೆ ತಳ್ಳುತ್ತಿದೆ ಎಂದು ಆ ಚಾಲಕರು ಹೇಳಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಆದರೆ ಕಾಲಕ್ಕೆ ತಕ್ಕಂತೆ ನಮ್ಮನ್ನು ನಾವು ಪರಿವರ್ತಿಸಿಕೊಳ್ಳಬೇಕು. ನಮ್ಮಲ್ಲಿರುವ ಕೊರತೆಗಳನ್ನು ನೀಗಿಸಿಕೊಳ್ಳಲು ಪೂರಕವಾದ ವಿಧಾನ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳಬೇಕು.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:59 am, Tue, 29 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ