AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬೆಂಗಳೂರು; ಎಸ್​ಎಸ್​ಎಲ್​ಸಿ ಮುಗಿಸಿ 38 ವರ್ಷಗಳ ನಂತರ ಪಿಯುಸಿ ಪರೀಕ್ಷೆ ಬರೆಯಲಿರುವ ಆಟೋ ಚಾಲಕ

Inspirational : ವ್ಯವಸ್ಥೆ ಸರಿ ಇಲ್ಲ, ಸರ್ಕಾರ ಸರಿ ಇಲ್ಲ ಎಂದು ದೂರುವ ಮೊದಲು ತಮ್ಮನ್ನು ತಾವು ನೋಡಿಕೊಳ್ಳುವುದನ್ನು ಕಲಿಯಬೇಕು. ತಮ್ಮೊಳಗಿನ ಕೊರತೆಯನ್ನು ನೀಗಿಸಿಕೊಳ್ಳುವ ಪ್ರಯತ್ನವನ್ನು ಮಾಡಬೇಕು. ಬೆಂಗಳೂರಿನ ಆಟೋ ಚಾಲಕ ಭಾಸ್ಕರ್ 3 ಮತ್ತು 6ನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳ ತಂದೆ. 38 ವರ್ಷಗಳ ನಂತರ ಅವರೀಗ ಮತ್ತೆ ವಿದ್ಯಾರ್ಥಿ!

Viral: ಬೆಂಗಳೂರು; ಎಸ್​ಎಸ್​ಎಲ್​ಸಿ ಮುಗಿಸಿ 38 ವರ್ಷಗಳ ನಂತರ ಪಿಯುಸಿ ಪರೀಕ್ಷೆ ಬರೆಯಲಿರುವ ಆಟೋ ಚಾಲಕ
ಬೆಂಗಳೂರಿನ ಆಟೋ ಚಾಲಕ ಭಾಸ್ಕರ್
ಶ್ರೀದೇವಿ ಕಳಸದ
|

Updated on:Aug 29, 2023 | 12:01 PM

Share

Bengaluru: ಎಸ್​ಎಸ್ಎಲ್​ಸಿ ಮುಗಿಸಿ 38 ವರ್ಷಗಳ ನಂತರ ಆಟೋ ಚಾಲಕರೊಬ್ಬರು (Auto Driver) ಪಿಯುಸಿಯ ಇಂಗ್ಲಿಷ್​ ಪರೀಕ್ಷೆ ಬರೆದಿದ್ದಾರೆ. ಈ ವಿಷಯವನ್ನು ನಿಧಿ ಅಗರ್ವಾಲ್​ ಎನ್ನುವವರು X ನಲ್ಲಿ ಬಹಿರಂಗಪಡಿಸಿದ್ದಾರೆ; ‘ಇಂದು ಆಟೋದಲ್ಲಿ ಹೋಗುತ್ತಿದ್ದಾಗ ಚಾಲಕ ಭಾಸ್ಕರ್ ಅವರೊಂದಿಗೆ ಮಾತಿಗಿಳಿದೆ. ಅವರು ಈವತ್ತಷ್ಟೇ ಪಿಯುಸಿ, ಇಂಗ್ಲಿಷ್​ ಪರೀಕ್ಷೆ ಬರೆದೆನೆಂದು ಹೇಳಿದರು. 1985ರಲ್ಲಿ ಶಾಲೆಯನ್ನು ಬಿಟ್ಟಿದ್ದ ಅವರು ಈ ವರ್ಷ ಪಿಯುಸಿ ಪರೀಕ್ಷೆ ಬರೆಯುವುದಾಗಿ ಹೇಳಿದ್ದಾರೆ’. ಇಬ್ಬರು ಮಕ್ಕಳ ತಂದೆಯಾಗಿರುವ ಭಾಸ್ಕರ್​ ಇದೀಗ ತಮ್ಮ ಶಿಕ್ಷಣವನ್ನು ಮುಂದುವರಿಸಲು ಮನಸ್ಸು ಮಾಡಿದ್ದಾರೆ. ಇವರ ಮಕ್ಕಳು 3 ಮತ್ತು 6ನೇ ತರಗತಿಯಲ್ಲಿ ಓದುತ್ತಿದ್ದಾರೆ.

ಇದನ್ನೂ ಓದಿ : Viral: ಗಣಿತ ಪರೀಕ್ಷೆಯಲ್ಲಿ ಸೊನ್ನೆ ಪಡೆದ ಮಗಳು; ಇಂಥ ಅಂಕ ಗಳಿಸಲು ತುಂಬಾ ಧೈರ್ಯ ಬೇಕು ಎಂದ ತಾಯಿ

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ಪೋಸ್ಟ್​ ಅನ್ನು ಆ. 26ರಂದು ಪೋಸ್ಟ್ ಮಾಡಲಾಗಿದೆ. 1,500ಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ. ಮಾಧ್ಯಮದವರು ಈ ಪೋಸ್ಟ್​ಗೆ ಪ್ರತಿಕ್ರಿಯಿಸಿ ಈ ಆಟೋಚಾಲಕರ ಬಗ್ಗೆ ಇನ್ನಷ್ಟು ಮಾಹಿತಿ ಬೇಕಿತ್ತು, ದಯವಿಟ್ಟು ಒದಗಿಸುವಿರಾ? ಎಂದು ನಿಧಿ ಅವರಿಗೆ ಕೇಳಿದ್ದಾರೆ.

ಓದಲು ಮನಸ್ಸಿದ್ದರೆ ವಯಸ್ಸು ಯಾವತ್ತೂ ಅಡ್ಡಿಯಲ್ಲ!

ಈ ಹಿಂದೆ, ಬೆಂಗಳೂರಿನ ಆಟೋ ಚಾಲಕರೊಬ್ಬರು ಆರು ಗಂಟೆಗಳ ಕಾಲ ಆಟೋ ಓಡಿಸಿದರೂ ರೂ. 40 ಕೂಲಿ ಪಡೆದೆ ಎಂದು ಹೇಳಿದ ವಿಡಿಯೋ ವೈರಲ್ ಆಗಿತ್ತು. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಸಾರ್ವಜನಿಕರಿಗೆ ನೀಡಿದ ಉಚಿತ ಬಸ್​ ಯೋಜನೆಯ ಪರಿಣಾಮ ಆಟೋಚಾಲಕರನ್ನು ಬೀದಿಗೆ ತಳ್ಳುತ್ತಿದೆ ಎಂದು ಆ ಚಾಲಕರು ಹೇಳಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ಆದರೆ ಕಾಲಕ್ಕೆ ತಕ್ಕಂತೆ ನಮ್ಮನ್ನು ನಾವು ಪರಿವರ್ತಿಸಿಕೊಳ್ಳಬೇಕು. ನಮ್ಮಲ್ಲಿರುವ ಕೊರತೆಗಳನ್ನು ನೀಗಿಸಿಕೊಳ್ಳಲು ಪೂರಕವಾದ ವಿಧಾನ ಮತ್ತು ನಿರ್ಧಾರಗಳನ್ನು ತೆಗೆದುಕೊಳ್ಳಬೇಕು.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:59 am, Tue, 29 August 23

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್