AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಸಾಮಾನ್ಯ ಆಟೋರಿಕ್ಷಾ ದರಕ್ಕೆ ಹೋಲಿಸಿದ್ರೆ ಆ್ಯಪ್ ಆಧಾರಿತ ಆಟೋ ಸೇವೆ ಬಲು ದುಬಾರಿ : ವಾಸ್ತವ ಸ್ಥಿತಿ ಬಿಚ್ಚಿಟ್ಟ ಬೆಂಗಳೂರಿನ ಮಹಿಳೆ

ಓಲಾ, ಉಬರ್ ಸೇರಿದಂತೆ ಆ್ಯಪ್ ಆಧಾರಿತ ಆಟೋರಿಕ್ಷಾಗಳ ಸೇವೆಯನ್ನು ಬಳಸುವ ಪ್ರಯಾಣಿಕರು ಬೆಂಗಳೂರಿನಲ್ಲಿ ಹೆಚ್ಚಿದ್ದಾರೆ. ಆದರೆ ಆ್ಯಪ್ ಆಧಾರಿತ ಆಟೋ ಸೇವೆಗಳ ಮೂಲಕ ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ತಿಳಿದೇ ಇಲ್ಲ. ಇದೀಗ ಬೆಂಗಳೂರಿನ ಪ್ರಯಾಣಿಕರೊಬ್ಬರು ಆಟೋರಿಕ್ಷಾ ಮೀಟರ್ ಮತ್ತು ಆನ್‌ಲೈನ್ ಬುಕಿಂಗ್ ಅಪ್ಲಿಕೇಶನ್‌ನಲ್ಲಿ ತೋರಿಸಿರುವ ದರಗಳಲ್ಲಿನ ವ್ಯತ್ಯಾಸವನ್ನು ಬಹಿರಂಗ ಪಡಿಸಿದ್ದಾರೆ. ಈ ಬಗೆಗೆ ಪೋಸ್ಟ್ ಮಾಡಿ ಆನ್‌ಲೈನ್ ಬುಕಿಂಗ್ ಅಪ್ಲಿಕೇಶನ್‌ನಲ್ಲಿ ಆಟೋ ಬುಕ್ ಮಾಡುವವರನ್ನು ಎಚ್ಚರಿಸಿದ್ದಾರೆ.

Viral : ಸಾಮಾನ್ಯ ಆಟೋರಿಕ್ಷಾ ದರಕ್ಕೆ ಹೋಲಿಸಿದ್ರೆ ಆ್ಯಪ್ ಆಧಾರಿತ ಆಟೋ ಸೇವೆ ಬಲು ದುಬಾರಿ : ವಾಸ್ತವ ಸ್ಥಿತಿ ಬಿಚ್ಚಿಟ್ಟ ಬೆಂಗಳೂರಿನ ಮಹಿಳೆ
ವೈರಲ್ ಪೋಸ್ಟ್Image Credit source: Twitter
ಸಾಯಿನಂದಾ
|

Updated on: Jul 08, 2025 | 6:02 PM

Share

ಬೆಂಗಳೂರು ಸೇರಿದಂತೆ ದೊಡ್ಡ ದೊಡ್ಡ ನಗರಗಳಲ್ಲಿ ಆಟೋ, ಟ್ಯಾಕ್ಸಿ ಬುಕ್ ಮಾಡಲು ಆ್ಯಪ್‌ಗಳನ್ನು (apps)  ಅವಲಂಬಿಸಿದವರೇ ಹೆಚ್ಚು. ಆದರೆ ಮಾಯಾನಗರಿ ಬೆಂಗಳೂರಿನಲ್ಲಿ (Bengaluru)  ಆ್ಯಪ್ ಮೂಲಕ ಆಟೋರಿಕ್ಷಾಗಳನ್ನು ಬುಕ್ ಮಾಡುವ ಪ್ರಯಾಣಿಕರಿಂದ ಆಟೋ ಚಾಲಕರು ಟಿಪ್ (tip) ಸೇರಿಸಿ ಹೆಚ್ಚುವರಿ ಹಣವನ್ನು ಚಾರ್ಜ್ ಮಾಡುತ್ತಿರುವ ಆರೋಪವು ಕೇಳಿ ಬರುತ್ತಲೇ ಇದೆ. ಆದರೆ ಇದೀಗ ಬೆಂಗಳೂರಿನ ಮಹಿಳೆಯೊಬ್ಬರು ಆಟೋರಿಕ್ಷಾ ಮೀಟರ್ ಮತ್ತು ಆನ್‌ಲೈನ್ ಬುಕಿಂಗ್ ಅಪ್ಲಿಕೇಶನ್‌ನಲ್ಲಿ ತೋರಿಸಿರುವ ದರಗಳಲ್ಲಿನ ಭಾರಿ ವ್ಯತ್ಯಾಸದ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಆಟೋರಿಕ್ಷಾ ಮೀಟರ್ 2.6 ಕಿ.ಮೀ.ಗೆ 39 ರೂ. ತೋರಿಸಿದರೆ, ಉಬರ್ ಅಪ್ಲಿಕೇಶನ್‌ನಲ್ಲಿ ಅದು 172 ರೂ. ಇದೆ ಎನ್ನುವ ಮೂಲಕ ಅಪ್ಲಿಕೇಶನ್ ಮೂಲಕ ಪ್ರಯಾಣಿಕರಿಂದ ದುಬಾರಿ ಹಣವನ್ನು ವಸೂಲಿ ಮಾಡಲಾಗುತ್ತಿದೆ ಎನ್ನುವ ವಾಸ್ತವ ಸ್ಥಿತಿಯನ್ನು ತೆರೆದಿಟ್ಟಿದ್ದಾರೆ. ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಬಳಕೆದಾರರು ಶಾಕ್ ಆಗಿದ್ದಾರೆ.

ಅದಿತಿ ಶ್ರೀವಾಸ್ತವ ಎನ್ನುವ ಮಹಿಳೆಯೂ ಎಕ್ಸ್ ಖಾತೆಯಲ್ಲಿ ಮಾಡಿದ ಪೋಸ್ಟ್‌ನಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯ ಆಟೋರಿಕ್ಷಾ ಸೇವಾ ದರ ಮತ್ತು ಆ್ಯಪ್ ಆಧಾರಿತ ದರದ ನಡುವಿನ ಅಗಾಧ ವ್ಯತ್ಯಾಸದ ಕುರಿತು ತಿಳಿಸಿದ್ದಾರೆ. ಮೀಟರ್‌ನ ಬೆಲೆಯ ಚಿತ್ರ ಮತ್ತು ಉಬರ್ ಅಪ್ಲಿಕೇಶನ್‌ನ ಸ್ಕ್ರೀನ್‌ಶಾಟ್‌ನ್ನು ಹಂಚಿಕೊಂಡು, ಮೀಟರ್‌ನ ಬೆಲೆ vs ಉಬರ್‌ನ ಬೆಲೆ. ನೀವು ಸ್ವಂತ ವಾಹನ ಹೊಂದಿಲ್ಲದಿದ್ದರೆ ನೀವು ತೊಂದರೆ ಅನುಭವಿಸುತ್ತೀರಿ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ. ಈ ಪೋಸ್ಟ್‌ನಲ್ಲಿ ಆಟೋ ಮೀಟರ್ ದರ 2.6 ಕಿಮೀ ಗೆ 39 ರೂ ತೋರಿಸಿದ್ದು, ಊಬರ್ ಅಪ್ಲಿಕೇಶನ್‌ನಲ್ಲಿ 2.6 ಕಿಮೀ ದೂರಕ್ಕೆ 172 ರೂ ತೋರಿಸಿದೆ. ಇದು ಸಾಮಾನ್ಯ ದರಕ್ಕಿಂತ ನಾಲ್ಕು ಪಟ್ಟು ಹೆಚ್ಚಿರುವುದು ನೀವು ಗಮನಿಸಬಹುದು.

ಇದನ್ನೂ ಓದಿ
Image
ಮಾಲೀಕ ಹಾಡು ಹಾಡುತ್ತಿದ್ದಂತೆ ಆನೆಗಳು ಕೊಟ್ಟ ರಿಯಾಕ್ಷನ್ ಹೇಗಿತ್ತು ನೋಡಿ
Image
ಪತಿಯ ಕೆಟ್ಟ ಅಭ್ಯಾಸಗಳನ್ನು ವಿಚ್ಛೇದನ ಪತ್ರದಲ್ಲಿ ಉಲ್ಲೇಖಿಸಿದ ಪತ್ನಿ
Image
ಭಾರತದಲ್ಲಿ ಇಷ್ಟೊಂದು ಕಸನಾ? ಎಂದಿಗೂ ನೋಡಿಲ್ಲ ಎಂದ ಫ್ರೆಂಚ್ ಮಹಿಳೆ
Image
ದಯವಿಟ್ಟು ಯುರೋಪ್‌ಗೆ ಯಾರು ಬರ್ಬೇಡಿ : ಭಾರತೀಯ ಪ್ರವಾಸಿಗ ಹೀಗೆಂದಿದ್ದೇಕೆ?

ಇದನ್ನೂ ಓದಿ : ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು; ಆಮೇಲೇನಾಯ್ತು?

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

ಜೂನ್ 6 ರಂದು ಶೇರ್ ಮಾಡಲಾದ ಈ ಪೋಸ್ಟ್ ಈವರೆಗೆ ಏಳು ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಬಳಕೆದಾರರು, ಇಂತಹ ಆ್ಯಪ್ ಆಧಾರಿತ ಅಪ್ಲಿಕೇಶನ್‌ಗಳು ಹೆಚ್ಚುವರಿ ದರವನ್ನು ವಸೂಲಿ ಮಾಡುತ್ತಿದೆ. ಆದರೆ ಅನಿವಾರ್ಯ ಕಾರಣಕ್ಕೆ ಎಷ್ಟು ದರವನ್ನು ತೋರಿಸುತ್ತದೆ ಅದನ್ನು ಕೊಟ್ಟು ಸುಮ್ಮನಾಗುತ್ತೇವೆ ಎಂದಿದ್ದಾರೆ. ಮತ್ತೊಬ್ಬರು, ಇತ್ತೀಚೆಗಿನ ದಿನಗಳಲ್ಲಿ ನಾನು ಆಟೋದಲ್ಲಿ ಹೋಗುತ್ತಿಲ್ಲ, ಏಕೆಂದರೆ ಆಟೋ ಬೆಲೆಗಳು ಎಸಿಯಿಲ್ಲದ ಕ್ಯಾಬ್ ಬೆಲೆಗಿಂತ ಹೆಚ್ಚಾಗಿದೆ. ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಓಲಾ ಊಬರ್ ಬಳಸುವುದನ್ನು ನಿಲ್ಲಿಸಿ, ಇದು ಜನರಿಂದ ಹೆಚ್ಚುವರಿ ಹಣ ಸುಲಿಗೆ ಮಾಡುತ್ತಿದೆ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್