AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಸಾಮಾನ್ಯ ಆಟೋರಿಕ್ಷಾ ದರಕ್ಕೆ ಹೋಲಿಸಿದ್ರೆ ಆ್ಯಪ್ ಆಧಾರಿತ ಆಟೋ ಸೇವೆ ಬಲು ದುಬಾರಿ : ವಾಸ್ತವ ಸ್ಥಿತಿ ಬಿಚ್ಚಿಟ್ಟ ಬೆಂಗಳೂರಿನ ಮಹಿಳೆ

ಓಲಾ, ಉಬರ್ ಸೇರಿದಂತೆ ಆ್ಯಪ್ ಆಧಾರಿತ ಆಟೋರಿಕ್ಷಾಗಳ ಸೇವೆಯನ್ನು ಬಳಸುವ ಪ್ರಯಾಣಿಕರು ಬೆಂಗಳೂರಿನಲ್ಲಿ ಹೆಚ್ಚಿದ್ದಾರೆ. ಆದರೆ ಆ್ಯಪ್ ಆಧಾರಿತ ಆಟೋ ಸೇವೆಗಳ ಮೂಲಕ ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ತಿಳಿದೇ ಇಲ್ಲ. ಇದೀಗ ಬೆಂಗಳೂರಿನ ಪ್ರಯಾಣಿಕರೊಬ್ಬರು ಆಟೋರಿಕ್ಷಾ ಮೀಟರ್ ಮತ್ತು ಆನ್‌ಲೈನ್ ಬುಕಿಂಗ್ ಅಪ್ಲಿಕೇಶನ್‌ನಲ್ಲಿ ತೋರಿಸಿರುವ ದರಗಳಲ್ಲಿನ ವ್ಯತ್ಯಾಸವನ್ನು ಬಹಿರಂಗ ಪಡಿಸಿದ್ದಾರೆ. ಈ ಬಗೆಗೆ ಪೋಸ್ಟ್ ಮಾಡಿ ಆನ್‌ಲೈನ್ ಬುಕಿಂಗ್ ಅಪ್ಲಿಕೇಶನ್‌ನಲ್ಲಿ ಆಟೋ ಬುಕ್ ಮಾಡುವವರನ್ನು ಎಚ್ಚರಿಸಿದ್ದಾರೆ.

Viral : ಸಾಮಾನ್ಯ ಆಟೋರಿಕ್ಷಾ ದರಕ್ಕೆ ಹೋಲಿಸಿದ್ರೆ ಆ್ಯಪ್ ಆಧಾರಿತ ಆಟೋ ಸೇವೆ ಬಲು ದುಬಾರಿ : ವಾಸ್ತವ ಸ್ಥಿತಿ ಬಿಚ್ಚಿಟ್ಟ ಬೆಂಗಳೂರಿನ ಮಹಿಳೆ
ವೈರಲ್ ಪೋಸ್ಟ್Image Credit source: Twitter
ಸಾಯಿನಂದಾ
|

Updated on: Jul 08, 2025 | 6:02 PM

Share

ಬೆಂಗಳೂರು ಸೇರಿದಂತೆ ದೊಡ್ಡ ದೊಡ್ಡ ನಗರಗಳಲ್ಲಿ ಆಟೋ, ಟ್ಯಾಕ್ಸಿ ಬುಕ್ ಮಾಡಲು ಆ್ಯಪ್‌ಗಳನ್ನು (apps)  ಅವಲಂಬಿಸಿದವರೇ ಹೆಚ್ಚು. ಆದರೆ ಮಾಯಾನಗರಿ ಬೆಂಗಳೂರಿನಲ್ಲಿ (Bengaluru)  ಆ್ಯಪ್ ಮೂಲಕ ಆಟೋರಿಕ್ಷಾಗಳನ್ನು ಬುಕ್ ಮಾಡುವ ಪ್ರಯಾಣಿಕರಿಂದ ಆಟೋ ಚಾಲಕರು ಟಿಪ್ (tip) ಸೇರಿಸಿ ಹೆಚ್ಚುವರಿ ಹಣವನ್ನು ಚಾರ್ಜ್ ಮಾಡುತ್ತಿರುವ ಆರೋಪವು ಕೇಳಿ ಬರುತ್ತಲೇ ಇದೆ. ಆದರೆ ಇದೀಗ ಬೆಂಗಳೂರಿನ ಮಹಿಳೆಯೊಬ್ಬರು ಆಟೋರಿಕ್ಷಾ ಮೀಟರ್ ಮತ್ತು ಆನ್‌ಲೈನ್ ಬುಕಿಂಗ್ ಅಪ್ಲಿಕೇಶನ್‌ನಲ್ಲಿ ತೋರಿಸಿರುವ ದರಗಳಲ್ಲಿನ ಭಾರಿ ವ್ಯತ್ಯಾಸದ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಆಟೋರಿಕ್ಷಾ ಮೀಟರ್ 2.6 ಕಿ.ಮೀ.ಗೆ 39 ರೂ. ತೋರಿಸಿದರೆ, ಉಬರ್ ಅಪ್ಲಿಕೇಶನ್‌ನಲ್ಲಿ ಅದು 172 ರೂ. ಇದೆ ಎನ್ನುವ ಮೂಲಕ ಅಪ್ಲಿಕೇಶನ್ ಮೂಲಕ ಪ್ರಯಾಣಿಕರಿಂದ ದುಬಾರಿ ಹಣವನ್ನು ವಸೂಲಿ ಮಾಡಲಾಗುತ್ತಿದೆ ಎನ್ನುವ ವಾಸ್ತವ ಸ್ಥಿತಿಯನ್ನು ತೆರೆದಿಟ್ಟಿದ್ದಾರೆ. ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಬಳಕೆದಾರರು ಶಾಕ್ ಆಗಿದ್ದಾರೆ.

ಅದಿತಿ ಶ್ರೀವಾಸ್ತವ ಎನ್ನುವ ಮಹಿಳೆಯೂ ಎಕ್ಸ್ ಖಾತೆಯಲ್ಲಿ ಮಾಡಿದ ಪೋಸ್ಟ್‌ನಲ್ಲಿ ಬೆಂಗಳೂರು ನಗರದಲ್ಲಿ ಸಾಮಾನ್ಯ ಆಟೋರಿಕ್ಷಾ ಸೇವಾ ದರ ಮತ್ತು ಆ್ಯಪ್ ಆಧಾರಿತ ದರದ ನಡುವಿನ ಅಗಾಧ ವ್ಯತ್ಯಾಸದ ಕುರಿತು ತಿಳಿಸಿದ್ದಾರೆ. ಮೀಟರ್‌ನ ಬೆಲೆಯ ಚಿತ್ರ ಮತ್ತು ಉಬರ್ ಅಪ್ಲಿಕೇಶನ್‌ನ ಸ್ಕ್ರೀನ್‌ಶಾಟ್‌ನ್ನು ಹಂಚಿಕೊಂಡು, ಮೀಟರ್‌ನ ಬೆಲೆ vs ಉಬರ್‌ನ ಬೆಲೆ. ನೀವು ಸ್ವಂತ ವಾಹನ ಹೊಂದಿಲ್ಲದಿದ್ದರೆ ನೀವು ತೊಂದರೆ ಅನುಭವಿಸುತ್ತೀರಿ ಎಂದು ಶೀರ್ಷಿಕೆಯಲ್ಲಿ ಬರೆಯಲಾಗಿದೆ. ಈ ಪೋಸ್ಟ್‌ನಲ್ಲಿ ಆಟೋ ಮೀಟರ್ ದರ 2.6 ಕಿಮೀ ಗೆ 39 ರೂ ತೋರಿಸಿದ್ದು, ಊಬರ್ ಅಪ್ಲಿಕೇಶನ್‌ನಲ್ಲಿ 2.6 ಕಿಮೀ ದೂರಕ್ಕೆ 172 ರೂ ತೋರಿಸಿದೆ. ಇದು ಸಾಮಾನ್ಯ ದರಕ್ಕಿಂತ ನಾಲ್ಕು ಪಟ್ಟು ಹೆಚ್ಚಿರುವುದು ನೀವು ಗಮನಿಸಬಹುದು.

ಇದನ್ನೂ ಓದಿ
Image
ಮಾಲೀಕ ಹಾಡು ಹಾಡುತ್ತಿದ್ದಂತೆ ಆನೆಗಳು ಕೊಟ್ಟ ರಿಯಾಕ್ಷನ್ ಹೇಗಿತ್ತು ನೋಡಿ
Image
ಪತಿಯ ಕೆಟ್ಟ ಅಭ್ಯಾಸಗಳನ್ನು ವಿಚ್ಛೇದನ ಪತ್ರದಲ್ಲಿ ಉಲ್ಲೇಖಿಸಿದ ಪತ್ನಿ
Image
ಭಾರತದಲ್ಲಿ ಇಷ್ಟೊಂದು ಕಸನಾ? ಎಂದಿಗೂ ನೋಡಿಲ್ಲ ಎಂದ ಫ್ರೆಂಚ್ ಮಹಿಳೆ
Image
ದಯವಿಟ್ಟು ಯುರೋಪ್‌ಗೆ ಯಾರು ಬರ್ಬೇಡಿ : ಭಾರತೀಯ ಪ್ರವಾಸಿಗ ಹೀಗೆಂದಿದ್ದೇಕೆ?

ಇದನ್ನೂ ಓದಿ : ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು; ಆಮೇಲೇನಾಯ್ತು?

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

ಜೂನ್ 6 ರಂದು ಶೇರ್ ಮಾಡಲಾದ ಈ ಪೋಸ್ಟ್ ಈವರೆಗೆ ಏಳು ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಬಳಕೆದಾರರು, ಇಂತಹ ಆ್ಯಪ್ ಆಧಾರಿತ ಅಪ್ಲಿಕೇಶನ್‌ಗಳು ಹೆಚ್ಚುವರಿ ದರವನ್ನು ವಸೂಲಿ ಮಾಡುತ್ತಿದೆ. ಆದರೆ ಅನಿವಾರ್ಯ ಕಾರಣಕ್ಕೆ ಎಷ್ಟು ದರವನ್ನು ತೋರಿಸುತ್ತದೆ ಅದನ್ನು ಕೊಟ್ಟು ಸುಮ್ಮನಾಗುತ್ತೇವೆ ಎಂದಿದ್ದಾರೆ. ಮತ್ತೊಬ್ಬರು, ಇತ್ತೀಚೆಗಿನ ದಿನಗಳಲ್ಲಿ ನಾನು ಆಟೋದಲ್ಲಿ ಹೋಗುತ್ತಿಲ್ಲ, ಏಕೆಂದರೆ ಆಟೋ ಬೆಲೆಗಳು ಎಸಿಯಿಲ್ಲದ ಕ್ಯಾಬ್ ಬೆಲೆಗಿಂತ ಹೆಚ್ಚಾಗಿದೆ. ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಓಲಾ ಊಬರ್ ಬಳಸುವುದನ್ನು ನಿಲ್ಲಿಸಿ, ಇದು ಜನರಿಂದ ಹೆಚ್ಚುವರಿ ಹಣ ಸುಲಿಗೆ ಮಾಡುತ್ತಿದೆ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!