AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಟ್ರಾಫಿಕ್ ಜಾಮ್ ನಡುವೆ ಸಮಯವನ್ನು ಸರಿಯಾಗಿ ಬಳಸಿಕೊಳ್ಳುತ್ತಿರುವ ಬೆಂಗಳೂರಿನ ಉದ್ಯಮಿ

ಇಂದಿನ ವೇಗದ ಹಾಗೂ ಸ್ಪರ್ಧಾತ್ಮಕ ಯುಗದಲ್ಲಿ ಸಮಯ ಎನ್ನುವುದು ಬಹಳ ಮುಖ್ಯ. ಹೀಗಾಗಿ ಬೆಂಗಳೂರು ಮೂಲದ ಉದ್ಯಮಿಯೊಬ್ಬರು ಪ್ರಯಾಣದ ನಡುವೆಯೂ ಒಂದೊಂದು ನಿಮಿಷವನ್ನು ಹೇಗೆ ಸದುಪಯೋಗ ಪಡಿಸಿಕೊಳ್ಳುತ್ತಾರೆ ಎನ್ನುವುದಕ್ಕೆ ಈ ಪೋಸ್ಟ್ ಸಾಕ್ಷಿಯಾಗಿದೆ. ಇವರು ಸಮಯವನ್ನು ಬಳಸಿಕೊಳ್ಳುವ ರೀತಿ ನೋಡಿದ್ರೆ ನಿಮಗೆ ಅಚ್ಚರಿಯಾಗೋದು ಪಕ್ಕಾ. ಸುಖಾಸುಮ್ಮನೆ ಸಮಯ ಹಾಳು ಮಾಡದೇ ಸೃಜನಶೀಲ ಮಾರ್ಗಗಳನ್ನು ಕಂಡುಕೊಂಡಿದ್ದಾರೆ. ಈ ಕುರಿತಾದ ಪೋಸ್ಟ್ ಇಲ್ಲಿದೆ ನೋಡಿ

Viral: ಟ್ರಾಫಿಕ್ ಜಾಮ್ ನಡುವೆ ಸಮಯವನ್ನು ಸರಿಯಾಗಿ ಬಳಸಿಕೊಳ್ಳುತ್ತಿರುವ ಬೆಂಗಳೂರಿನ ಉದ್ಯಮಿ
ಸಾಂದರ್ಭಿಕ ಚಿತ್ರImage Credit source: Getty Images
ಸಾಯಿನಂದಾ
|

Updated on: Jul 11, 2025 | 2:50 PM

Share

ಬೆಂಗಳೂರು (Bengaluru) ಎಂದರೆ ಮೊದಲು ನೆನಪಿಗೆ ಬರುವುದೇ ಟ್ರಾಫಿಕ್. ಅಪ್ಪಿತಪ್ಪಿಯೂ ಈ ಟ್ರಾಫಿಕ್ ನಲ್ಲಿ ಸಿಕ್ಕಿಹಾಕಿಕೊಂಡರೆ ಒಂದು ಗಂಟೆಗೂ ಹೆಚ್ಚು ಟ್ರಾಫಿಕ್ ನಲ್ಲೇ ಕಳೆಯಬೇಕು. ಹೀಗಾಗಿ ಬೆಂಗಳೂರು ಮೂಲದ ಉದ್ಯಮಿ ಅಮೃತ್ ಜೋಶಿ (Amrut Joshi) ಟೈಮ್ ವೇಸ್ಟ್ ಮಾಡದೇ ಈ ಟ್ರಾಫಿಕ್ ನಡುವೆಯೂ ಹೇಗೆ ಪ್ರತಿ ನಿಮಿಷವನ್ನು ಬಳಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ. ಅವರು ತಮ್ಮ ಪ್ರಯಾಣದುದ್ದಕ್ಕೂ ಸಮಯವನ್ನು ವ್ಯರ್ಥ ಮಾಡದೇ ಏನೆಲ್ಲಾ ಸೃಜನಶೀಲ ಮಾರ್ಗಗಳನ್ನು ಅಳವಡಿಸಿಕೊಂಡಿದ್ದಾರೆ ಎಂದು ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ನೋಡಿ ಬಳಕೆದಾರರು ಇದು ನಿಜಕ್ಕೂ ಒಳ್ಳೆಯ ಐಡಿಯಾ ಎಂದಿದ್ದಾರೆ.

ಬೆಂಗಳೂರು ಮೂಲದ ಉದ್ಯಮಿ ಹಾಗೂ ಸಂಸ್ಥಾಪಕ ಅಮೃತ್ ಜೋಶಿ ತಮ್ಮ ಲಿಂಕ್ಡ್ ಇನ್ ಖಾತೆಯಲ್ಲಿ ತಮ್ಮ ವೈಯುಕ್ತಿಕ ಟ್ರಾಫಿಕ್ ಚಾಟ್ ಶೀಟ್ ಶೇರ್ ಮಾಡಿಕೊಂಡಿದ್ದು ಈ ಸಮಯವನ್ನು ಹೇಗೆಲ್ಲಾ ಉಪಯೋಗಿಸಿಕೊಳ್ಳುತ್ತೇನೆ ಎನ್ನುವುದನ್ನು ಉಲ್ಲೇಖಿಸಿದ್ದಾರೆ. ಇದು ನನ್ನ ಹೆಬ್ಬಾಳ ಹಾಗೂ ವೈಟ್ ಫೀಲ್ಡ್ ನಡುವಿನ 80 ನಿಮಿಷಗಳ ಸುದೀರ್ಘ ಪ್ರಯಾಣ. ಈ ಸಮಯವನ್ನು ಉತ್ಪಾದಕವನ್ನಾಗಿ ಸರಳ ಹಾಗೂ ಪರಿಣಾಮಕಾರಿ ಮಾರ್ಗಗಳ ಪಟ್ಟಿ ಹೀಗಿವೆ. ಬೆಂಗಳೂರಿನ ಸಂಚಾರವನ್ನು ಸುಗಮಗೊಳಿಸುವುದು ಸವಾಲಿನ ಕೆಲಸವಾಗುತ್ತಿದೆ. ಹೀಗಾಗಿ ಈ ಸಮಯವನ್ನು ಸರಿಯಾಗಿ ಬಳಸಿ ಗಳಿಕೆಯನ್ನಾಗಿ ಪರಿವರ್ತಿಸಲು ನಾನು ಕೆಲವು ಮಾರ್ಗಗಳನ್ನು ಕಂಡುಕೊಂಡಿದ್ದೇನೆ ಎಂದಿದ್ದಾರೆ.

ಇದನ್ನೂ ಓದಿ : Viral: ರಾಜ್ಯ ಸರ್ಕಾರದಿಂದ ಜನರಿಗೆ ಶೀಘ್ರದಲ್ಲಿ ನಿಧಿ ಭಾಗ್ಯ, ಕುಕ್ಕೆ ಸುಬ್ರಹ್ಮಣ್ಯ ರಸ್ತೆಯಲ್ಲಿ ನಿಧಾನವಾಗಿ ಚಲಿಸಿ

ಇದನ್ನೂ ಓದಿ
Image
ನಡುರಸ್ತೆಯಲ್ಲೇ ತಂದೆ ಮಗನ ಹೊಡೆದಾಟ
Image
ಪತ್ನಿಯನ್ನು ಹೊಗಳಿದ್ದನ್ನು ನೋಡಿ ಕೆಫೆ ಸಿಬ್ಬಂದಿ ಮೇಲೆ ಗರಂ ಆದ ಪತಿ
Image
7 ದಿನಕ್ಕಾಗುವಷ್ಟು ಅಡುಗೆಯನ್ನು ಒಂದೇ ದಿನ ಮಾಡಿದ ಮಹಿಳೆ
Image
ರೈಲ್ವೆ ಹಳಿ ಮೇಲೆ ಮರಿಗೆ ಜನ್ಮ ನೀಡಿದ ಆನೆ : ಎರಡು ಗಂಟೆ ಸ್ಥಗಿತಗೊಂಡ ರೈಲು

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

Viral Post

 

ಓದುವುದರಿಂದ ಹಿಡಿದು ಒಂದು ಸಣ್ಣ ನಿದ್ರೆಯವರೆಗೂ ಈ ಪ್ರಯಾಣದ ಸಮಯವನ್ನು ವೈಯುಕ್ತಿಕ ಬಿಡುವಿನ ಸಮಯವಾಗಿ ಹೇಗೆ ಪರಿವರ್ತಿಸಿಕೊಳ್ಳುತ್ತಾರೆ ಎನ್ನುವುದನ್ನು ನೀವಿಲ್ಲಿ ನೋಡಬಹುದು. ಟೆಕ್ ಕ್ರಚ್, ಕ್ರಿಯಿಂಫೋ ಹಾಗೂ ರಾಜಕೀಯ ಜೀವನಚರಿತ್ರೆಗಳಿಗೆ ಹೆಚ್ಚು ಆದ್ಯತೆ ನೀಡುವ ಮೂಲಕ ಅದನ್ನೇ ಹೆಚ್ಚು ಈ ಸಮಯದಲ್ಲಿ ಓದುತ್ತೇವೆ. ಸ್ನೇಹಿತರು, ಗ್ರಾಹಕರು ಹಾಗೂ ಸಹೋದ್ಯೋಗಿಗಳ ಜೊತೆಗೆ ಫೋನ್ ಕಾಲ್ ಹಾಗೂ ದೇಹದ ಶಕ್ತಿ ಕಡಿಮೆಯಾದಾಗ ಒಂದು ಸಣ್ಣ ನಿದ್ದೆ ಮಾಡುತ್ತೇನೆ ಎನ್ನುವ ಇವರು ಸಂಚಾರದ ವೇಳೆ ಸಮಯ ವ್ಯರ್ಥ ಮಾಡುವ ಅಗತ್ಯವಿಲ್ಲ ಎನ್ನುತ್ತಾ ಈ ಟ್ರಾಫಿಕ್ ನಡುವೆ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕೆಂದು ಸಲಹೆ ನೀಡಿದ್ದಾರೆ. ಇವರ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಬಳಕೆದಾರರು ಟೈಮ್ ಈ ರೀತಿ ಬಳಸಿಕೊಳ್ಳಬಹುದೆಂದು ನಮಗೆ ತಿಳಿದೇ ಇರಲಿಲ್ಲ, ಒಳ್ಳೆಯ ಸಲಹೆಗಳು ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ