AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಜಿಪುರ ಫ್ಲೈಓವರ್ ಕಾಮಗಾರಿ ಪೂರ್ಣಗೊಳ್ಳಲು ಟ್ರಂಪ್ ಮಧ್ಯಸ್ಥಿಕೆ ವಹಿಸಿ ಎಂದು ಕೇಳಿಕೊಂಡ ಬೆಂಗಳೂರಿನ ನಿವಾಸಿ

ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳ ರಸ್ತೆ, ಫ್ಲೈ ಓವರ್ ಸೇರಿದಂತೆ ಇನ್ನಿತ್ತರ ಮೂಲ ಸೌಕರ್ಯಕ್ಕೆ ಸಂಬಂಧಿಸಿದ ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರು ಎಷ್ಟೇ ಮನವಿ ಮಾಡಿಕೊಂಡರೂ ಕೆಲಸಕಾರ್ಯಗಳು ವೇಗಗತಿಯಲ್ಲಿ ಸಾಗುವುದು ಕಡಿಮೆಯೇ. ಆದರೆ ಇದೀಗ, ಬಿಬಿಎಂಪಿಯ ಯೋಜನೆಗಳಲ್ಲಿ ಒಂದಾದ ಕೋರಮಂಗಲದಲ್ಲಿರುವ ಈಜಿಪುರ ಫ್ಲೈಓವರ್ ಮತ್ತು ನಮ್ಮ ಮೆಟ್ರೋ ಹಳದಿ ಮಾರ್ಗ ಕಾರ್ಯಾಚರಣೆ ನಡೆಸಲು ಕೈ ಜೋಡಿಸಿ, ಈ ಕಾಮಗಾರಿ ಬೇಗ ಆಗುವಂತೆ ಮಾಡಿಕೊಡಿ ಎಂದು ಟ್ರಂಪ್ ಗೆ ನಾಗರೀಕರೊಬ್ಬರು ಮನವಿ ಮಾಡಿದ್ದಾರೆ. ಈ ಪೋಸ್ಟ್ ವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಈಜಿಪುರ ಫ್ಲೈಓವರ್ ಕಾಮಗಾರಿ ಪೂರ್ಣಗೊಳ್ಳಲು ಟ್ರಂಪ್ ಮಧ್ಯಸ್ಥಿಕೆ ವಹಿಸಿ ಎಂದು ಕೇಳಿಕೊಂಡ ಬೆಂಗಳೂರಿನ ನಿವಾಸಿ
ಟ್ರಂಪ್ ಮತ್ತು ಫ್ಲೈಓವರ್Image Credit source: Google
ಸಾಯಿನಂದಾ
| Edited By: |

Updated on:May 12, 2025 | 2:14 PM

Share

ಬೆಂಗಳೂರು, ಮೇ 12 : ಇಂದು ನಾವು ಅಭಿವೃದ್ಧಿ (development) ಯತ್ತ ಸಾಗುತ್ತಿದ್ದೇವೆ. ಆದರೆ ಆಧುನಿಕತೆ ಒಗ್ಗಿಕೊಂಡಂತೆ ರಸ್ತೆ ವಿಸ್ತರಣೆ, ಹೊಸ ರಸ್ತೆ ನಿರ್ಮಾಣ, ಫ್ಲೈ ಓವರ್ ಬ್ರಿಡ್ಜ್ ನಿರ್ಮಾಣ ಸೇರಿದಂತೆ ಇನ್ನಿತ್ತರ ಕಾಮಗಾರಿಗಳು ನಡೆಯುತ್ತಿರುತ್ತದೆ. ಹೌದು, ಈ ಕಾಮಗಾರಿ ಕೆಲಸಗಳು ವಿಳಂಬಗತಿಯಲ್ಲಿ ನಡೆಯುವುದು ಇದೇ ಮೊದಲೇನಲ್ಲ. ಈಗಾಗಲೇ ಅದೆಷ್ಟೋ ಕಾಮಗಾರಿಗಳು ಅರ್ಧಕ್ಕೆ ನಿಂತು ಕೊನೆಗೆ ಜನಸಾಮಾನ್ಯರ ಅಗ್ರಹಕ್ಕೆ ಬೇಸೆತ್ತು ಕಾಮಗಾರಿ ಕೆಲಸಗಳನ್ನು ಪೂರ್ಣಗೊಳಿಸಿದ್ದು ಇದೆ. ಆದರೆ ಇದೀಗ, ಬೆಂಗಳೂರಿನ ಕೋರಮಂಗಲ (koramangal of bengaluru) ದಲ್ಲಿರುವ ಈಜಿಪುರ ಫ್ಲೈಓವರ್ (ejipura flyover) ನಮ್ಮ ಮೆಟ್ರೋ ಮಾರ್ಗ ಕಾರ್ಯಾಚರಣೆ ಆಗದೇ ವಿಳಂಬವಾಗುತ್ತಿದೆ. ಈ ಕಾಮಗಾರಿಯ ಕೆಲಸ ಆಗುವಂತೆ ಮಾಡಲು ನೀವು ಕೈ ಜೋಡಿಸಿ ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಬೆಂಗಳೂರಿನ ನಿವಾಸಿಯೊಬ್ಬರು ಹೇಳಿದ್ದಾರೆ.

@BengaluruRains_ ಹೆಸರಿನ ಖಾತೆಯಿಂದ ಪೋಸ್ಟ್ ಮಾಡಿದ್ದು, ನಾಗರಿಕರೊಬ್ಬರು, ಹಲೋ ಡೋನಾಲ್ಡ್ ಟ್ರಂಪ್, ಬಿಬಿಎಂಪಿಯ ನಾಗರಿಕ ಯೋಜನೆಗಳಲ್ಲಿ ಒಂದಾಗಿರುವ ಕೋರಮಂಗಲದಲ್ಲಿರುವ ಈಜಿಪುರ ಫ್ಲೈಓವರ್ ಕಾಮಗಾರಿಯೂ ನಿಧಾನಗತಿಯಲ್ಲಿ ಸಾಗುತ್ತಿದೆ. ಈ ಈಜಿಪುರ ಯೋಜನೆಗೆ ‘ಮೆಗಾ ಟ್ರಂಪ್ ಮೇಲ್ಸೇತುವೆ’ ಹಾಗೂ BM RCL ಜೊತೆ ನಿಮ್ಮ ಹೆಸರು ಇಡುತ್ತೇವೆ. ದಯವಿಟ್ಟು ಈ ಕಾಮಗಾರಿಯೂ ವೇಗವಾಗಿ ಆಗಲು ಮಧ್ಯಸ್ಥಿಕೆ ವಹಿಸಿ ಎಂದು ಮನವಿ ಮಾಡಿ ಎಂದು ಟ್ರಂಪ್ ಗೆ ಹೇಳಿರುವ ಪೋಸ್ಟ್ ವೊಂದು ವೈರಲ್ ಆಗಿದೆ.

ಇದನ್ನೂ ಓದಿ
Image
ಹೆಣ್ಣಿನ ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ
Image
ಈ ನಾಲ್ಕು ರಾಶಿಯವರಿಗೆ ಚಿನ್ನ ಧರಿಸುವುದು ಅತ್ಯಂತ ಶುಭ
Image
ಮೇ 8 ಮೋಹಿನಿ ಏಕಾದಶಿ; ಪೂಜಾ ವಿಧಾನ ಮತ್ತು ಮಹತ್ವ
Image
ಶಿವನ ವಿಶೇಷ ಅನುಗ್ರಹ ಪಡೆಯಲು ಈ ಸರಳ ಪರಿಹಾರವನ್ನು ಪ್ರಯತ್ನಿಸಿ

ಇದನ್ನೂ ಓದಿ : ಪ್ರಬಂಧದಲ್ಲಿ ತನ್ನ ತಾಯಿಯ ವಿಶ್ವ ರೂಪದ ಬಗ್ಗೆ ಉಲ್ಲೇಖಿಸಿದ ಮುದ್ದಿನ ಮಗ, ವಿಡಿಯೋ ವೈರಲ್

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

ಈ ಪೋಸ್ಟ್ ವೊಂದು ಎಂಭತ್ತೊಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಈ ಪೋಸ್ಟ್ ನೋಡಿ ಸೋಶಿಯಲ್ ಮೀಡಿಯಾ ಬಳಕೆದಾರರು ಬಿದ್ದು ಬಿದ್ದು ನಕ್ಕಿದ್ದಾರೆ. ಬಳಕೆದಾರರೊಬ್ಬರು,’ ಈ ಈಜಿಪುರ ಫ್ಲೈಓವರ್ ಕಾಮಗಾರಿಗೆ ಪೂರ್ಣಗೊಳ್ಳಲು ಟ್ರಂಪ್ ಮಧ್ಯಸ್ಥಿಕೆ ಅತ್ಯಗತ್ಯ ಎಂದು ತಮಾಷೆಯಾಗಿಯೇ ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ‘ಟ್ರಂಪ್ ಟವರ್ಸ್ ನಿರ್ಮಿಸಲು ನಾವು ಅವರಿಗೆ ಭೂಮಿ ನೀಡಿದರೆ ಮಾತ್ರ ಈ ಕಾಮಗಾರಿ ವೇಗಗತಿಯಲ್ಲಿ ಆಗುವಂತೆ ಮಾಡಬಹುದು ‘ ಎಂದಿದ್ದಾರೆ. ಮತ್ತೊಬ್ಬರು, ಈ ಐಡಿಯಾ ನಮಗೆ ಹೊಳೆಯದೆ ಇಲ್ಲ, ನಿಜಕ್ಕೂ ಒಳ್ಳೆಯ ಐಡಿಯಾ ಎಂದು ಕಾಮೆಂಟ್ ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:54 pm, Mon, 12 May 25

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು