AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ತೆರಿಗೆ ಹಣ ವಾಪಾಸ್ ಕೊಡಿ, ನಾವೇ ಬೆಂಗಳೂರು ಅಭಿವೃದ್ಧಿ ಪಡಿಸುತ್ತೇವೆ ಎಂದ ಬೆಂಗಳೂರಿನ ನಾಗರಿಕರು

ಬೆಂಗಳೂರು ಭಾಷಾ ವಿವಾದ ಸೇರಿದಂತೆ ಇನ್ನಿತ್ತರ ವಿಚಾರಗಳಿಂದಲೇ ಹೆಚ್ಚೆಚ್ಚು ಸುದ್ದಿಯಾಗುತ್ತಿದೆ. ಆದರೆ ಇದೀಗ ಸುದ್ದಿಯಾಗಿರುವುದು ಮೂಲಸೌಕರ್ಯದ ಕಾರಣಕ್ಕೆ. ಹೌದು, ಬೆಂಗಳೂರಿನಲ್ಲಿ ಮೂಲಸೌಕರ್ಯ ವ್ಯವಸ್ಥೆಯೇ ಹಾಳಾಗಿದೆ. ಸರ್ಕಾರವು ಇದನ್ನು ಸರಿಪಡಿಸಿಕೊಡಿ, ಇಲ್ಲವಾದ್ರೆ ತೆರಿಗೆ ಹಣ ವಾಪಸ್ಸು ಕೊಡಿ ಎಂದು ನಾಗರಿಕರು ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದ್ದು, ಈ ಕುರಿತಾದ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

Video: ತೆರಿಗೆ ಹಣ ವಾಪಾಸ್ ಕೊಡಿ, ನಾವೇ ಬೆಂಗಳೂರು ಅಭಿವೃದ್ಧಿ ಪಡಿಸುತ್ತೇವೆ ಎಂದ ಬೆಂಗಳೂರಿನ ನಾಗರಿಕರು
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:Aug 08, 2025 | 11:53 AM

Share

ಬೆಂಗಳೂರು, ಆಗಸ್ಟ್ 08: ಬೆಂಗಳೂರು ಎಂದ ಕೂಡಲೇ ನೆನಪಾಗೋದೆ ನೂರಾರು ಜನರ ಬದುಕಿಗೆ ಆಸರೆಯಾಗಿರುವ ಸುಂದರ ನಗರ ಹಾಗೂ ಅಭಿವೃದ್ಧಿಯತ್ತ ಸಾಗುತ್ತಿರುವ ಮಾಯನಗರಿ. ಆದರೆ ಮಳೆಗಾಲ ಶುರುವಾಗುತ್ತಿದ್ದಂತೆ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ರಸ್ತೆ ತುಂಬೆಲ್ಲಾ ಗುಂಡಿಗಳದ್ದೇ ರಾಶಿ. ಸರಿಯಾದ ಮೂಲಸೌಕರ್ಯ (Infrastructure) ಇಲ್ಲದಿರುವುದು ಸ್ಪಷ್ಟವಾಗಿ ಕಾಣುತ್ತದೆ. ಇದೀಗ ಬೆಂಗಳೂರಿನ ವರ್ತೂರು ಬಳಿಯ ಬಾಳಗೆರೆಯ (Balagere near Varthur of Bengaluru) ನಾಗರಿಕರು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ ಭಾಷೆಯ ಬಿತ್ತಿಪತ್ರಗಳನ್ನು ಹಿಡಿದು ಬೆಂಗಳೂರಿನ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿದ್ದು, ತೆರಿಗೆ ಹಣವನ್ನು ನಮಗೆ ವಾಪಸ್ ಕೊಡಿ ನಾವೇ ಬೆಂಗಳೂರು ಅಭಿವೃದ್ಧಿ ಪಡಿಸುತ್ತೇವೆ ಎಂದು ಹೇಳಿದ್ದಾರೆ. ಪ್ರತಿಭಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ವೈರಲ್ ವಿಡಿಯೋದಲ್ಲಿ ಸಂಚಾರ ದಟ್ಟನೆ, ಗುಂಡಿ ಬಿದ್ದ ರಸ್ತೆಗಳು ಹಾಗೂ ಅಭಿವೃದ್ಧಿ ಯೋಜನೆಗಳಲ್ಲಿ ದೀರ್ಘ ಕಾಲದ ವಿಳಂಬದಿಂದಾಗಿ ನಗರದಲ್ಲಿ ನಿವಾಸಿಗಳಿಗೆ ತೊಂದರೆಯಾಗುತ್ತಿದೆ ಎಂದು ಬಿತ್ತಿಪತ್ರ ಹಿಡಿದು ನಾಗರಿಕರು ವಿವಿಧೆಡೆ ಪ್ರತಿಭಟಿಸಿರುವುದನ್ನು ನೋಡಬಹುದು. ರೀಫಂಡ್ ಟ್ಯಾಕ್ಸ್, ನಾವೇ ಬೆಂಗಳೂರನ್ನು ಅಭಿವೃದ್ಧಿ ಪಡಿಸ್ತೇವೆ ಎಂದು ಹೇಳಿದ್ದಾರೆ. ನಾವು ತೆರಿಗೆ ಕಟ್ಟುತ್ತೇನೆ, ನಾವು ಎಲ್ಲಾ ಭಾಷೆಗಳನ್ನು ಮಾತನಾಡುತ್ತೇನೆ. ಇಷ್ಟೆಲ್ಲಾ ಮಾಡಿಯೂ ನಮಗೆ ಸಿಕ್ಕಿರೋದು ಗುಂಡಿಬಿದ್ದ ರಸ್ತೆಗಳು, ಪ್ರವಾಹದ ರಸ್ತೆಗಳು ಮಾತ್ರ. ಸರ್ಕಾರ ಹಾಗೂ ಬಿಬಿಎಂಪಿ ಮೂಲಸೌಕರ್ಯ ಅಭಿವೃದ್ದಿಪಡಿಸಲು ನಿಮ್ಮಿಂದ ಸಾಧ್ಯವಾಗಲಿಲ್ಲ ಅಂದ್ರೆ ನಮ್ಮ ತೆರಿಗೆ ಹಣವನ್ನು ನಮಗೆ ವಾಪಸ್ ಕೊಡಿ, ನಾವೇ ನಮ್ಮ ಸಿಟಿಯನ್ನು ನಾವೇ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿರುವುದನ್ನು ನೀವಿಲ್ಲಿ ನೋಡಬಹುದು.

 ಪೋಸ್ಟ್ ಇಲ್ಲಿದೆ ನೋಡಿ

ಇದನ್ನೂ ಓದಿ
Image
ಬೆಂಗಳೂರಿನ ಸೀರೆ ಮಳಿಗೆಯಲ್ಲಿ ಗಮನ ಸೆಳೆದ ಚಾಟ್ ಜಿಪಿಟಿ ಪ್ರೇರಿತ ಜಾಹೀರಾತು
Image
ಆಟೋ ಓಡಿಸಿಕೊಂಡು ಈ ಚಾಲಕ ಮಾಡಿದ ಕೆಲಸಕ್ಕೆ ಭಾರೀ ಮೆಚ್ಚುಗೆ
Image
ಭಾರತೀಯನನ್ನು ಮದುವೆಯಾಗಿದ್ದು ಇದೇ ಕಾರಣಕ್ಕೆ ಎಂದ ರಷ್ಯಾದ ಮಹಿಳೆ
Image
ಬೆಂಗಳೂರು ಟ್ರಿಪ್ ಮುಗಿಸಿ ಹೋಗುವಾಗ ಭಾವುಕಳಾದ ವಿದೇಶಿ ಮಹಿಳೆ

Trending News

ಇದನ್ನೂ ಓದಿ:Viral: ಇದು ಪರ್ಫೆಕ್ಟ್ ಮಾರ್ಕೆಟಿಂಗ್‌ ತಂತ್ರ; ಬೆಂಗಳೂರಿನ ಸೀರೆ ಮಳಿಗೆಯಲ್ಲಿ ಗಮನ ಸೆಳೆದ ಚಾಟ್ ಜಿಪಿಟಿ ಪ್ರೇರಿತ ಜಾಹೀರಾತು

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಳಕೆದಾರರು ಸರ್ಕಾರಕ್ಕೆ ಈ ರೀತಿ ಬಿಸಿ ಮುಟ್ಟಿಸಬೇಕು ಎಂದು ಹೇಳಿದ್ದಾರೆ. ಒಬ್ಬ ಬಳಕೆದಾರರು, ನಾಗರಿಕರ ಕಷ್ಟಗಳು ಹಾಗೂ ಸಮಸ್ಯೆಗಳು ಸರ್ಕಾರಕ್ಕೆ ತಿಳಿಯುವುದಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ಈ ರೀತಿ ಪ್ರತಿಭಟನೆ ದೇಶದಾದಂತ್ಯ ಮಾಡಬೇಕು, ಯಾವುದೇ ಕಾರಣಕ್ಕೂ ತೆರಿಗೆ ಪಾವತಿಸಬಾರದು ಎಂದು ಕಾಮೆಂಟ್ ಮಾಡಿ ಹೇಳಿದ್ದಾರೆ.

ಇನ್ನಷ್ಟು ವೈರಲ್‌ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Published On - 11:49 am, Fri, 8 August 25

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?