Video: ತೆರಿಗೆ ಹಣ ವಾಪಾಸ್ ಕೊಡಿ, ನಾವೇ ಬೆಂಗಳೂರು ಅಭಿವೃದ್ಧಿ ಪಡಿಸುತ್ತೇವೆ ಎಂದ ಬೆಂಗಳೂರಿನ ನಾಗರಿಕರು

ಬೆಂಗಳೂರು ಭಾಷಾ ವಿವಾದ ಸೇರಿದಂತೆ ಇನ್ನಿತ್ತರ ವಿಚಾರಗಳಿಂದಲೇ ಹೆಚ್ಚೆಚ್ಚು ಸುದ್ದಿಯಾಗುತ್ತಿದೆ. ಆದರೆ ಇದೀಗ ಸುದ್ದಿಯಾಗಿರುವುದು ಮೂಲಸೌಕರ್ಯದ ಕಾರಣಕ್ಕೆ. ಹೌದು, ಬೆಂಗಳೂರಿನಲ್ಲಿ ಮೂಲಸೌಕರ್ಯ ವ್ಯವಸ್ಥೆಯೇ ಹಾಳಾಗಿದೆ. ಸರ್ಕಾರವು ಇದನ್ನು ಸರಿಪಡಿಸಿಕೊಡಿ, ಇಲ್ಲವಾದ್ರೆ ತೆರಿಗೆ ಹಣ ವಾಪಸ್ಸು ಕೊಡಿ ಎಂದು ನಾಗರಿಕರು ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದ್ದು, ಈ ಕುರಿತಾದ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

Video: ತೆರಿಗೆ ಹಣ ವಾಪಾಸ್ ಕೊಡಿ, ನಾವೇ ಬೆಂಗಳೂರು ಅಭಿವೃದ್ಧಿ ಪಡಿಸುತ್ತೇವೆ ಎಂದ ಬೆಂಗಳೂರಿನ ನಾಗರಿಕರು
ವೈರಲ್‌ ವಿಡಿಯೋ
Image Credit source: Instagram

Updated on: Aug 08, 2025 | 11:53 AM

ಬೆಂಗಳೂರು, ಆಗಸ್ಟ್ 08: ಬೆಂಗಳೂರು ಎಂದ ಕೂಡಲೇ ನೆನಪಾಗೋದೆ ನೂರಾರು ಜನರ ಬದುಕಿಗೆ ಆಸರೆಯಾಗಿರುವ ಸುಂದರ ನಗರ ಹಾಗೂ ಅಭಿವೃದ್ಧಿಯತ್ತ ಸಾಗುತ್ತಿರುವ ಮಾಯನಗರಿ. ಆದರೆ ಮಳೆಗಾಲ ಶುರುವಾಗುತ್ತಿದ್ದಂತೆ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ರಸ್ತೆ ತುಂಬೆಲ್ಲಾ ಗುಂಡಿಗಳದ್ದೇ ರಾಶಿ. ಸರಿಯಾದ ಮೂಲಸೌಕರ್ಯ (Infrastructure) ಇಲ್ಲದಿರುವುದು ಸ್ಪಷ್ಟವಾಗಿ ಕಾಣುತ್ತದೆ. ಇದೀಗ ಬೆಂಗಳೂರಿನ ವರ್ತೂರು ಬಳಿಯ ಬಾಳಗೆರೆಯ (Balagere near Varthur of Bengaluru) ನಾಗರಿಕರು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ ಭಾಷೆಯ ಬಿತ್ತಿಪತ್ರಗಳನ್ನು ಹಿಡಿದು ಬೆಂಗಳೂರಿನ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಿದ್ದು, ತೆರಿಗೆ ಹಣವನ್ನು ನಮಗೆ ವಾಪಸ್ ಕೊಡಿ ನಾವೇ ಬೆಂಗಳೂರು ಅಭಿವೃದ್ಧಿ ಪಡಿಸುತ್ತೇವೆ ಎಂದು ಹೇಳಿದ್ದಾರೆ. ಪ್ರತಿಭಟನೆಯ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ವೈರಲ್ ವಿಡಿಯೋದಲ್ಲಿ ಸಂಚಾರ ದಟ್ಟನೆ, ಗುಂಡಿ ಬಿದ್ದ ರಸ್ತೆಗಳು ಹಾಗೂ ಅಭಿವೃದ್ಧಿ ಯೋಜನೆಗಳಲ್ಲಿ ದೀರ್ಘ ಕಾಲದ ವಿಳಂಬದಿಂದಾಗಿ ನಗರದಲ್ಲಿ ನಿವಾಸಿಗಳಿಗೆ ತೊಂದರೆಯಾಗುತ್ತಿದೆ ಎಂದು ಬಿತ್ತಿಪತ್ರ ಹಿಡಿದು ನಾಗರಿಕರು ವಿವಿಧೆಡೆ ಪ್ರತಿಭಟಿಸಿರುವುದನ್ನು ನೋಡಬಹುದು. ರೀಫಂಡ್ ಟ್ಯಾಕ್ಸ್, ನಾವೇ ಬೆಂಗಳೂರನ್ನು ಅಭಿವೃದ್ಧಿ ಪಡಿಸ್ತೇವೆ ಎಂದು ಹೇಳಿದ್ದಾರೆ. ನಾವು ತೆರಿಗೆ ಕಟ್ಟುತ್ತೇನೆ, ನಾವು ಎಲ್ಲಾ ಭಾಷೆಗಳನ್ನು ಮಾತನಾಡುತ್ತೇನೆ. ಇಷ್ಟೆಲ್ಲಾ ಮಾಡಿಯೂ ನಮಗೆ ಸಿಕ್ಕಿರೋದು ಗುಂಡಿಬಿದ್ದ ರಸ್ತೆಗಳು, ಪ್ರವಾಹದ ರಸ್ತೆಗಳು ಮಾತ್ರ. ಸರ್ಕಾರ ಹಾಗೂ ಬಿಬಿಎಂಪಿ ಮೂಲಸೌಕರ್ಯ ಅಭಿವೃದ್ದಿಪಡಿಸಲು ನಿಮ್ಮಿಂದ ಸಾಧ್ಯವಾಗಲಿಲ್ಲ ಅಂದ್ರೆ ನಮ್ಮ ತೆರಿಗೆ ಹಣವನ್ನು ನಮಗೆ ವಾಪಸ್ ಕೊಡಿ, ನಾವೇ ನಮ್ಮ ಸಿಟಿಯನ್ನು ನಾವೇ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿರುವುದನ್ನು ನೀವಿಲ್ಲಿ ನೋಡಬಹುದು.

 ಪೋಸ್ಟ್ ಇಲ್ಲಿದೆ ನೋಡಿ

ಇದನ್ನೂ ಓದಿ
ಬೆಂಗಳೂರಿನ ಸೀರೆ ಮಳಿಗೆಯಲ್ಲಿ ಗಮನ ಸೆಳೆದ ಚಾಟ್ ಜಿಪಿಟಿ ಪ್ರೇರಿತ ಜಾಹೀರಾತು
ಆಟೋ ಓಡಿಸಿಕೊಂಡು ಈ ಚಾಲಕ ಮಾಡಿದ ಕೆಲಸಕ್ಕೆ ಭಾರೀ ಮೆಚ್ಚುಗೆ
ಭಾರತೀಯನನ್ನು ಮದುವೆಯಾಗಿದ್ದು ಇದೇ ಕಾರಣಕ್ಕೆ ಎಂದ ರಷ್ಯಾದ ಮಹಿಳೆ
ಬೆಂಗಳೂರು ಟ್ರಿಪ್ ಮುಗಿಸಿ ಹೋಗುವಾಗ ಭಾವುಕಳಾದ ವಿದೇಶಿ ಮಹಿಳೆ

ಇದನ್ನೂ ಓದಿ:Viral: ಇದು ಪರ್ಫೆಕ್ಟ್ ಮಾರ್ಕೆಟಿಂಗ್‌ ತಂತ್ರ; ಬೆಂಗಳೂರಿನ ಸೀರೆ ಮಳಿಗೆಯಲ್ಲಿ ಗಮನ ಸೆಳೆದ ಚಾಟ್ ಜಿಪಿಟಿ ಪ್ರೇರಿತ ಜಾಹೀರಾತು

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಳಕೆದಾರರು ಸರ್ಕಾರಕ್ಕೆ ಈ ರೀತಿ ಬಿಸಿ ಮುಟ್ಟಿಸಬೇಕು ಎಂದು ಹೇಳಿದ್ದಾರೆ. ಒಬ್ಬ ಬಳಕೆದಾರರು, ನಾಗರಿಕರ ಕಷ್ಟಗಳು ಹಾಗೂ ಸಮಸ್ಯೆಗಳು ಸರ್ಕಾರಕ್ಕೆ ತಿಳಿಯುವುದಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ಈ ರೀತಿ ಪ್ರತಿಭಟನೆ ದೇಶದಾದಂತ್ಯ ಮಾಡಬೇಕು, ಯಾವುದೇ ಕಾರಣಕ್ಕೂ ತೆರಿಗೆ ಪಾವತಿಸಬಾರದು ಎಂದು ಕಾಮೆಂಟ್ ಮಾಡಿ ಹೇಳಿದ್ದಾರೆ.

ಇನ್ನಷ್ಟು ವೈರಲ್‌ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್‌ ಮಾಡಿ

Published On - 11:49 am, Fri, 8 August 25