AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬೆಂಗಳೂರಿನಲ್ಲೊಂದು ಅಮಾನವೀಯ ಘಟನೆ; ನಡುರಾತ್ರಿ ಸ್ಕೂಟಿಯಲ್ಲಿ ಕುಳಿತು ನಾಯಿಯನ್ನು ಎಳೆದೊಯ್ದ ವ್ಯಕ್ತಿ

ಈ ಸಮಾಜದಲ್ಲಿ ನಡೆಯುವ ಕೆಲವೊಂದು ಅಮಾನವೀಯ ಘಟನೆಗಳು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗುತ್ತಿರುತ್ತವೆ. ಇದೀಗ ಇಲ್ಲೊಂದು ಇಂತಹ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ನಡುರಾತ್ರಿ ಸ್ಕೂಟಿಯಲ್ಲಿ ಹೋಗುತ್ತಾ ತನ್ನ ಸಾಕು ನಾಯಿಯನ್ನು ಕೂಡಾ ಎಳೆದುಕೊಂಡು ಹೋಗಿದ್ದಾನೆ. ಈ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಭಾರೀ ಆಕ್ರೋದ ವ್ಯಕ್ತವಾಗುತ್ತಿದೆ.

Viral: ಬೆಂಗಳೂರಿನಲ್ಲೊಂದು ಅಮಾನವೀಯ ಘಟನೆ; ನಡುರಾತ್ರಿ ಸ್ಕೂಟಿಯಲ್ಲಿ ಕುಳಿತು ನಾಯಿಯನ್ನು ಎಳೆದೊಯ್ದ ವ್ಯಕ್ತಿ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Jan 02, 2025 | 1:51 PM

Share

ಇಡೀ ಮನುಕುಲವೇ ತಲೆ ತಗ್ಗಿಸುವಂತಹ ಕೆಲವೊಂದು ಅಮಾನವೀಯ ಘಟನೆಗಳು ಈ ಸಮಾಜದಲ್ಲಿ ನಡೆಯುತ್ತಲೇ ಇವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ಮನೆಯ ಸಾಕು ನಾಯಿಯನ್ನೇ ಹೆದ್ದಾರಿಯಲ್ಲಿ ಎಳೆದುಕೊಂಡು ಹೋಗಿದ್ದಾನೆ. ಹೌದು ಆ ವ್ಯಕ್ತಿ ನಡುರಾತ್ರಿ ಸ್ಕೂಟಿಯಲ್ಲಿ ಹೋಗುತ್ತಾ ತನ್ನ ಸಾಕು ನಾಯಿಯ ಕುತ್ತಿಗೆ ಬೆಲ್ಟ್‌ ಕಟ್ಟಿ ಅದನ್ನು ಎಳೆದೊಯ್ದಿದ್ದಾನೆ. ಈ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಭಾರೀ ಆಕ್ರೋದ ವ್ಯಕ್ತವಾಗುತ್ತಿದೆ.

ಈ ಆಘಾತಕಾರಿ ಬೆಂಗಳೂರಿನಲ್ಲಿ ನಡೆದಿದ್ದು, ಡಿಸೆಂಬರ್‌ 30 ರ ರಾತ್ರಿ ಹೆಣ್ಣೂರು ರೈಲ್ವೆ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ರೋಡಲ್ಲಿ ಸ್ಕೂಟಿಯಲ್ಲಿ ಹೋಗುತ್ತಾ ತನ್ನ ನಾಯಿಯನ್ನು ಎಳೆದುಕೊಂಡು ಹೋಗಿದ್ದಾನೆ. ಹೌದು ನಾಯಿಯ ಕುತ್ತಿಗೆಗೆ ಬೆಲ್ಟ್‌ ಕಟ್ಟಿ, ವೇಗವಾಗಿ ಸ್ಕೂಟಿ ಚಲಾಯಿಸುತ್ತಾ ನಾಯಿಯನ್ನು ಎಳೆದೊಯ್ದಿದ್ದಾನೆ. ಈ ದೃಶ್ಯವನ್ನು ಯಾರೋ ವಿಡಿಯೋ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಹೆಚ್‌.ಬಿ.ಆರ್‌ ಲೇಔಟ್‌ ನಿವಾಸಿ ಬಾಲಾಜಿ ಎಂಬಾತ ಈ ಕೃತ್ಯವನ್ನು ಎಸಗಿರುವುದಾಗಿ ತಿಳಿದು ಬಂದಿದ್ದು, ವ್ಯಾಯಾಯಮದ ಭಾಗವಾಗಿ ನಾನು ನಾಯಿಯನ್ನು ಓಡಿಸುತ್ತಾ ಹೋದೆ ಎಂದು ಹೇಳಿಕೊಂಡಿದ್ದಾನೆ.

“ಸಾಮಾನ್ಯವಾಗಿ ನಾನು ಆಟೋ ರಿಕ್ಷಾದಲ್ಲಿ ಕುಳಿತು ನಾಯಿಯನ್ನು ಹೀಗೆ ಓಡಿಸುತ್ತಾ ಹೋಗುತ್ತಿದ್ದೆ, ಆದ್ರೆ ಈ ಬಾರಿ ನಾನು ಸ್ಕೂಟಿಯಲ್ಲಿ ನಾಯಿಯನ್ನು ಓಡಿಸುತ್ತಾ ಹೋದೆ. ಇದು ಉದ್ದೇಶಪೂರ್ವಕವಾಗಿ ಮಾಡಿದ್ದಲ್ಲ. ನಾಯಿಗೆ ವ್ಯಾಯಾಮ ಮಾಡಿಸುವ ಸಲುವಾಗಿ ಹೀಗೆ ಮಾಡಿದ್ದು” ಎಂದು ಹೇಳಿದ್ದಾನೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

karnatakaportf ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಸ್ಕೂಟರ್‌ ಸವಾರ ಸಾಕು ನಾಯಿಯನ್ನು ಹೆದ್ದಾರಿಯಲ್ಲಿ ಓಡಿಸಿಕೊಂಡು ಹೋಗುತ್ತಿರುವ ದೃಶ್ಯವನ್ನು ಕಾಣಬಹುದು. ಇದಕ್ಕೆ ಪ್ರತಿಕ್ರಿಯಿಸಿದ ಬೆಂಗಳೂರು ಪೊಲೀಸ್‌ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಪೊಲೀಸ್‌ ಅಧಿಕಾರಿಗಳಿಗೆ ತಿಳಿಸಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರೆಂಟ್‌ ತೆಗೆದ್ರೆ ಜಾಗ್ರತೆ; ಲೈನ್‌ಮ್ಯಾನ್‌ ಹಿಂದೆಯೇ ದೊಣ್ಣೆ ಹಿಡಿದು ವಿದ್ಯುತ್ ಕಂಬವನ್ನೇರಿ ಅವಾಜ್ ಹಾಕಿದ ಮಹಿಳೆ

ಡಿಸೆಂಬರ್‌ 31 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 2.5 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼವಿಡಿಯೋ ಮಾಡುವ ಬದಲು ಹೋಗಿ ನಾಯಿಗೆ ಸಹಾಯ ಮಾಡಬಹುದಿತ್ತಲ್ಲವೇʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼನಿಜಕ್ಕೂ ಈ ದೃಶ್ಯ ಭಯಾನಕವಾಗಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ