AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬೆಂಗಳೂರಿನಲ್ಲೊಂದು ಅಮಾನವೀಯ ಘಟನೆ; ನಡುರಾತ್ರಿ ಸ್ಕೂಟಿಯಲ್ಲಿ ಕುಳಿತು ನಾಯಿಯನ್ನು ಎಳೆದೊಯ್ದ ವ್ಯಕ್ತಿ

ಈ ಸಮಾಜದಲ್ಲಿ ನಡೆಯುವ ಕೆಲವೊಂದು ಅಮಾನವೀಯ ಘಟನೆಗಳು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗುತ್ತಿರುತ್ತವೆ. ಇದೀಗ ಇಲ್ಲೊಂದು ಇಂತಹ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ನಡುರಾತ್ರಿ ಸ್ಕೂಟಿಯಲ್ಲಿ ಹೋಗುತ್ತಾ ತನ್ನ ಸಾಕು ನಾಯಿಯನ್ನು ಕೂಡಾ ಎಳೆದುಕೊಂಡು ಹೋಗಿದ್ದಾನೆ. ಈ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಭಾರೀ ಆಕ್ರೋದ ವ್ಯಕ್ತವಾಗುತ್ತಿದೆ.

Viral: ಬೆಂಗಳೂರಿನಲ್ಲೊಂದು ಅಮಾನವೀಯ ಘಟನೆ; ನಡುರಾತ್ರಿ ಸ್ಕೂಟಿಯಲ್ಲಿ ಕುಳಿತು ನಾಯಿಯನ್ನು ಎಳೆದೊಯ್ದ ವ್ಯಕ್ತಿ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Jan 02, 2025 | 1:51 PM

Share

ಇಡೀ ಮನುಕುಲವೇ ತಲೆ ತಗ್ಗಿಸುವಂತಹ ಕೆಲವೊಂದು ಅಮಾನವೀಯ ಘಟನೆಗಳು ಈ ಸಮಾಜದಲ್ಲಿ ನಡೆಯುತ್ತಲೇ ಇವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ಮನೆಯ ಸಾಕು ನಾಯಿಯನ್ನೇ ಹೆದ್ದಾರಿಯಲ್ಲಿ ಎಳೆದುಕೊಂಡು ಹೋಗಿದ್ದಾನೆ. ಹೌದು ಆ ವ್ಯಕ್ತಿ ನಡುರಾತ್ರಿ ಸ್ಕೂಟಿಯಲ್ಲಿ ಹೋಗುತ್ತಾ ತನ್ನ ಸಾಕು ನಾಯಿಯ ಕುತ್ತಿಗೆ ಬೆಲ್ಟ್‌ ಕಟ್ಟಿ ಅದನ್ನು ಎಳೆದೊಯ್ದಿದ್ದಾನೆ. ಈ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಭಾರೀ ಆಕ್ರೋದ ವ್ಯಕ್ತವಾಗುತ್ತಿದೆ.

ಈ ಆಘಾತಕಾರಿ ಬೆಂಗಳೂರಿನಲ್ಲಿ ನಡೆದಿದ್ದು, ಡಿಸೆಂಬರ್‌ 30 ರ ರಾತ್ರಿ ಹೆಣ್ಣೂರು ರೈಲ್ವೆ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ರೋಡಲ್ಲಿ ಸ್ಕೂಟಿಯಲ್ಲಿ ಹೋಗುತ್ತಾ ತನ್ನ ನಾಯಿಯನ್ನು ಎಳೆದುಕೊಂಡು ಹೋಗಿದ್ದಾನೆ. ಹೌದು ನಾಯಿಯ ಕುತ್ತಿಗೆಗೆ ಬೆಲ್ಟ್‌ ಕಟ್ಟಿ, ವೇಗವಾಗಿ ಸ್ಕೂಟಿ ಚಲಾಯಿಸುತ್ತಾ ನಾಯಿಯನ್ನು ಎಳೆದೊಯ್ದಿದ್ದಾನೆ. ಈ ದೃಶ್ಯವನ್ನು ಯಾರೋ ವಿಡಿಯೋ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಹೆಚ್‌.ಬಿ.ಆರ್‌ ಲೇಔಟ್‌ ನಿವಾಸಿ ಬಾಲಾಜಿ ಎಂಬಾತ ಈ ಕೃತ್ಯವನ್ನು ಎಸಗಿರುವುದಾಗಿ ತಿಳಿದು ಬಂದಿದ್ದು, ವ್ಯಾಯಾಯಮದ ಭಾಗವಾಗಿ ನಾನು ನಾಯಿಯನ್ನು ಓಡಿಸುತ್ತಾ ಹೋದೆ ಎಂದು ಹೇಳಿಕೊಂಡಿದ್ದಾನೆ.

“ಸಾಮಾನ್ಯವಾಗಿ ನಾನು ಆಟೋ ರಿಕ್ಷಾದಲ್ಲಿ ಕುಳಿತು ನಾಯಿಯನ್ನು ಹೀಗೆ ಓಡಿಸುತ್ತಾ ಹೋಗುತ್ತಿದ್ದೆ, ಆದ್ರೆ ಈ ಬಾರಿ ನಾನು ಸ್ಕೂಟಿಯಲ್ಲಿ ನಾಯಿಯನ್ನು ಓಡಿಸುತ್ತಾ ಹೋದೆ. ಇದು ಉದ್ದೇಶಪೂರ್ವಕವಾಗಿ ಮಾಡಿದ್ದಲ್ಲ. ನಾಯಿಗೆ ವ್ಯಾಯಾಮ ಮಾಡಿಸುವ ಸಲುವಾಗಿ ಹೀಗೆ ಮಾಡಿದ್ದು” ಎಂದು ಹೇಳಿದ್ದಾನೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

karnatakaportf ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಸ್ಕೂಟರ್‌ ಸವಾರ ಸಾಕು ನಾಯಿಯನ್ನು ಹೆದ್ದಾರಿಯಲ್ಲಿ ಓಡಿಸಿಕೊಂಡು ಹೋಗುತ್ತಿರುವ ದೃಶ್ಯವನ್ನು ಕಾಣಬಹುದು. ಇದಕ್ಕೆ ಪ್ರತಿಕ್ರಿಯಿಸಿದ ಬೆಂಗಳೂರು ಪೊಲೀಸ್‌ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಪೊಲೀಸ್‌ ಅಧಿಕಾರಿಗಳಿಗೆ ತಿಳಿಸಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರೆಂಟ್‌ ತೆಗೆದ್ರೆ ಜಾಗ್ರತೆ; ಲೈನ್‌ಮ್ಯಾನ್‌ ಹಿಂದೆಯೇ ದೊಣ್ಣೆ ಹಿಡಿದು ವಿದ್ಯುತ್ ಕಂಬವನ್ನೇರಿ ಅವಾಜ್ ಹಾಕಿದ ಮಹಿಳೆ

ಡಿಸೆಂಬರ್‌ 31 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 2.5 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼವಿಡಿಯೋ ಮಾಡುವ ಬದಲು ಹೋಗಿ ನಾಯಿಗೆ ಸಹಾಯ ಮಾಡಬಹುದಿತ್ತಲ್ಲವೇʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼನಿಜಕ್ಕೂ ಈ ದೃಶ್ಯ ಭಯಾನಕವಾಗಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ