AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬೆಂಗಳೂರಿನಲ್ಲೊಂದು ಅಮಾನವೀಯ ಘಟನೆ; ನಡುರಾತ್ರಿ ಸ್ಕೂಟಿಯಲ್ಲಿ ಕುಳಿತು ನಾಯಿಯನ್ನು ಎಳೆದೊಯ್ದ ವ್ಯಕ್ತಿ

ಈ ಸಮಾಜದಲ್ಲಿ ನಡೆಯುವ ಕೆಲವೊಂದು ಅಮಾನವೀಯ ಘಟನೆಗಳು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗುತ್ತಿರುತ್ತವೆ. ಇದೀಗ ಇಲ್ಲೊಂದು ಇಂತಹ ಘಟನೆ ನಡೆದಿದ್ದು, ವ್ಯಕ್ತಿಯೊಬ್ಬ ನಡುರಾತ್ರಿ ಸ್ಕೂಟಿಯಲ್ಲಿ ಹೋಗುತ್ತಾ ತನ್ನ ಸಾಕು ನಾಯಿಯನ್ನು ಕೂಡಾ ಎಳೆದುಕೊಂಡು ಹೋಗಿದ್ದಾನೆ. ಈ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಭಾರೀ ಆಕ್ರೋದ ವ್ಯಕ್ತವಾಗುತ್ತಿದೆ.

Viral: ಬೆಂಗಳೂರಿನಲ್ಲೊಂದು ಅಮಾನವೀಯ ಘಟನೆ; ನಡುರಾತ್ರಿ ಸ್ಕೂಟಿಯಲ್ಲಿ ಕುಳಿತು ನಾಯಿಯನ್ನು ಎಳೆದೊಯ್ದ ವ್ಯಕ್ತಿ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Jan 02, 2025 | 1:51 PM

Share

ಇಡೀ ಮನುಕುಲವೇ ತಲೆ ತಗ್ಗಿಸುವಂತಹ ಕೆಲವೊಂದು ಅಮಾನವೀಯ ಘಟನೆಗಳು ಈ ಸಮಾಜದಲ್ಲಿ ನಡೆಯುತ್ತಲೇ ಇವೆ. ಇದೀಗ ಅಂತಹದ್ದೇ ಘಟನೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬ ತನ್ನ ಮನೆಯ ಸಾಕು ನಾಯಿಯನ್ನೇ ಹೆದ್ದಾರಿಯಲ್ಲಿ ಎಳೆದುಕೊಂಡು ಹೋಗಿದ್ದಾನೆ. ಹೌದು ಆ ವ್ಯಕ್ತಿ ನಡುರಾತ್ರಿ ಸ್ಕೂಟಿಯಲ್ಲಿ ಹೋಗುತ್ತಾ ತನ್ನ ಸಾಕು ನಾಯಿಯ ಕುತ್ತಿಗೆ ಬೆಲ್ಟ್‌ ಕಟ್ಟಿ ಅದನ್ನು ಎಳೆದೊಯ್ದಿದ್ದಾನೆ. ಈ ದೃಶ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಭಾರೀ ಆಕ್ರೋದ ವ್ಯಕ್ತವಾಗುತ್ತಿದೆ.

ಈ ಆಘಾತಕಾರಿ ಬೆಂಗಳೂರಿನಲ್ಲಿ ನಡೆದಿದ್ದು, ಡಿಸೆಂಬರ್‌ 30 ರ ರಾತ್ರಿ ಹೆಣ್ಣೂರು ರೈಲ್ವೆ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ರೋಡಲ್ಲಿ ಸ್ಕೂಟಿಯಲ್ಲಿ ಹೋಗುತ್ತಾ ತನ್ನ ನಾಯಿಯನ್ನು ಎಳೆದುಕೊಂಡು ಹೋಗಿದ್ದಾನೆ. ಹೌದು ನಾಯಿಯ ಕುತ್ತಿಗೆಗೆ ಬೆಲ್ಟ್‌ ಕಟ್ಟಿ, ವೇಗವಾಗಿ ಸ್ಕೂಟಿ ಚಲಾಯಿಸುತ್ತಾ ನಾಯಿಯನ್ನು ಎಳೆದೊಯ್ದಿದ್ದಾನೆ. ಈ ದೃಶ್ಯವನ್ನು ಯಾರೋ ವಿಡಿಯೋ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಹೆಚ್‌.ಬಿ.ಆರ್‌ ಲೇಔಟ್‌ ನಿವಾಸಿ ಬಾಲಾಜಿ ಎಂಬಾತ ಈ ಕೃತ್ಯವನ್ನು ಎಸಗಿರುವುದಾಗಿ ತಿಳಿದು ಬಂದಿದ್ದು, ವ್ಯಾಯಾಯಮದ ಭಾಗವಾಗಿ ನಾನು ನಾಯಿಯನ್ನು ಓಡಿಸುತ್ತಾ ಹೋದೆ ಎಂದು ಹೇಳಿಕೊಂಡಿದ್ದಾನೆ.

“ಸಾಮಾನ್ಯವಾಗಿ ನಾನು ಆಟೋ ರಿಕ್ಷಾದಲ್ಲಿ ಕುಳಿತು ನಾಯಿಯನ್ನು ಹೀಗೆ ಓಡಿಸುತ್ತಾ ಹೋಗುತ್ತಿದ್ದೆ, ಆದ್ರೆ ಈ ಬಾರಿ ನಾನು ಸ್ಕೂಟಿಯಲ್ಲಿ ನಾಯಿಯನ್ನು ಓಡಿಸುತ್ತಾ ಹೋದೆ. ಇದು ಉದ್ದೇಶಪೂರ್ವಕವಾಗಿ ಮಾಡಿದ್ದಲ್ಲ. ನಾಯಿಗೆ ವ್ಯಾಯಾಮ ಮಾಡಿಸುವ ಸಲುವಾಗಿ ಹೀಗೆ ಮಾಡಿದ್ದು” ಎಂದು ಹೇಳಿದ್ದಾನೆ.

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

karnatakaportf ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ಸ್ಕೂಟರ್‌ ಸವಾರ ಸಾಕು ನಾಯಿಯನ್ನು ಹೆದ್ದಾರಿಯಲ್ಲಿ ಓಡಿಸಿಕೊಂಡು ಹೋಗುತ್ತಿರುವ ದೃಶ್ಯವನ್ನು ಕಾಣಬಹುದು. ಇದಕ್ಕೆ ಪ್ರತಿಕ್ರಿಯಿಸಿದ ಬೆಂಗಳೂರು ಪೊಲೀಸ್‌ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಪೊಲೀಸ್‌ ಅಧಿಕಾರಿಗಳಿಗೆ ತಿಳಿಸಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕರೆಂಟ್‌ ತೆಗೆದ್ರೆ ಜಾಗ್ರತೆ; ಲೈನ್‌ಮ್ಯಾನ್‌ ಹಿಂದೆಯೇ ದೊಣ್ಣೆ ಹಿಡಿದು ವಿದ್ಯುತ್ ಕಂಬವನ್ನೇರಿ ಅವಾಜ್ ಹಾಕಿದ ಮಹಿಳೆ

ಡಿಸೆಂಬರ್‌ 31 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 2.5 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼವಿಡಿಯೋ ಮಾಡುವ ಬದಲು ಹೋಗಿ ನಾಯಿಗೆ ಸಹಾಯ ಮಾಡಬಹುದಿತ್ತಲ್ಲವೇʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼನಿಜಕ್ಕೂ ಈ ದೃಶ್ಯ ಭಯಾನಕವಾಗಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ