AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಇದು ನ್ಯಾಯವೇ?, ಇದು ಸಮಾನತೆಯೇ? ಮಹಿಳೆಯರಿಗಿರುವ ಉಚಿತ ಬಸ್‌ ಸೇವೆಯನ್ನು ಪ್ರಶ್ನಿಸಿ ಪೋಸ್ಟ್‌ ಹಂಚಿಕೊಂಡ ಬೆಂಗಳೂರಿನ ವ್ಯಕ್ತಿ

ಕರ್ನಾಟಕ ರಾಜ್ಯ ಸರ್ಕಾರ ಹೊಸ ವರ್ಷದ ಆರಂಭದಲ್ಲಿಯೇ ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರವನ್ನು ಏರಿಸಿದೆ. ಒಂದೆಡೆ ಮಹಿಳೆಯರು ಫ್ರೀಯಾಗಿ ಬಸ್ಸಿನಲ್ಲಿ ಓಡಾತಿದ್ರೆ, ಇನ್ನೊಂದೆಡೆ ಪುರುಷ ಪ್ರಯಾಣಿಕರಿಗೆ ಟಿಕೆಟ್‌ ದರ ಹೆಚ್ಚಳ ಮಾಡಲಾಡಗಿದೆ. ಈ ಬಗ್ಗೆ ಭಾರೀ ಆಕ್ರೋಶ ಕೂಡಾ ವ್ಯಕ್ತವಾಗುತ್ತಿದೆ. ಇನ್ನೂ ಮಹಿಳೆಯರಿಗಿರುವ ಉಚಿತ ಬಸ್‌ ಸೇವೆಯನ್ನು ಪ್ರಶ್ನಿಸಿ ಬೆಂಗಳೂರಿನ ವ್ಯಕ್ತಿಯೊಬ್ಬರು ಪೋಸ್ಟ್‌ ಒಂದನ್ನು ಶೇರ್‌ ಮಾಡಿದ್ದಾರೆ. ಈ ಪೋಸ್ಟ್‌ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral: ಇದು ನ್ಯಾಯವೇ?, ಇದು ಸಮಾನತೆಯೇ? ಮಹಿಳೆಯರಿಗಿರುವ ಉಚಿತ ಬಸ್‌ ಸೇವೆಯನ್ನು ಪ್ರಶ್ನಿಸಿ ಪೋಸ್ಟ್‌ ಹಂಚಿಕೊಂಡ ಬೆಂಗಳೂರಿನ ವ್ಯಕ್ತಿ
Bengaluru Man Shares 6 Thoughts Questioning Free Bus Rides For Women
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ|

Updated on: Jan 10, 2025 | 2:33 PM

Share

ಕರ್ನಾಟಕ ರಾಜ್ಯ ಸರ್ಕಾರ ಹೊಸ ವರ್ಷದ ಆರಂಭದಲ್ಲಿಯೇ ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರವನ್ನು ಏರಿಸಿದೆ. ನಮ್ಮ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಸೇವೆ ಕೊಡಲಾಗುತ್ತಿದೆ. ಆದರೆ ಇದೀಗ ಪುರುಷ ಪ್ರಯಾಣಿಕರಿಗೆ ಸರ್ಕಾರಿ ಬಸ್ಸುಗಳಲ್ಲಿ ಟಿಕೆಟ್‌ ದರ ಏಕಾಏಕಿ ಹೆಚ್ಚಳ ಮಾಡಿದ್ದು, ಇದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಇನ್ನೂ ಈ ಬಗ್ಗೆ ಬೆಂಗಳೂರಿನ ವ್ಯಕ್ತಿಯೊಬ್ಬರು ನೀವು ಹೀಗೆ ಮಹಿಳೆಯರಿಗೆ ಫ್ರೀ ಬಸ್‌ ಸೇವೆ ಕೊಡೋ ಬದ್ಲು ಅದೇ ಹಣವನ್ನು ಉತ್ತಮ ರೈತರಿಗೆ, ರಸ್ತೆ ಗುಂಡಿಗಳನ್ನು ಸರಿ ಮಾಡುವಂತಹ ಉತ್ತಮ ಕೆಲಸಕ್ಕೆ ಉಪಯೋಗಿಸಬಹುದಲ್ಲವೇ ಎಂದು ಪ್ರಶ್ನಿಸಿದ್ದಾರೆ. ಈ ಪೋಸ್ಟ್‌ ಇದೀಗ ಭಾರೀ ವೈರಲ್‌ ಆಗುತ್ತಿದೆ.

ಬೆಂಗಳೂರು ಮೂಲದ ಕಿರಣ್‌ ಕುಮಾರ್‌ (KiranKS) ಎಂಬವರು ಮಹಿಳೆಯರಿಗಿರುವ ಉಚಿತ ಬಸ್‌ ಪ್ರಯಾಣವನ್ನು ಪ್ರಶ್ನಿಸಿ, ತಮ್ಮ ಆರು ಆಲೋಚನೆಗಳ ಬಗ್ಗೆ ಸೋಷಿಯಲ್‌ ಮೀಡಿಯಾ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

“ಬೆಂಗಳೂರಿನಿಂದ ಮೈಸೂರಿಗೆ ಹೋಗಲು ಆರಾಮದಾಯಕವಾಗಿರುವ ಕೆಎಸ್‌ಆರ್‌ಟಿಸಿ ಬಸ್‌ ಹತ್ತಿದೆ. ಅಲ್ಲಿ ಟಿಕೆಟ್‌ ದರ 210 ಇತ್ತು. ಇದನ್ನು ನೋಡಿದಾಗ ನನಗೆ ಕೆಲವೊಂದು ಆಲೋಚನೆಗಳು ಬಂದವು;

  1. ಬಸ್ಸಿನ 50 ಪ್ರಯಾಣಿಕರಲ್ಲಿ ಸುಮಾರು 30 ಮಂದಿ ಮಹಿಳಾ ಪ್ರಯಾಣಿಕರು. ಅವರು ಆಧಾರ್‌ ತೋರಿಸಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಇದು ನ್ಯಾಯವೇ? ಇದು ಸಮಾನತೆಯೇ?
  2. ಅದರಲ್ಲಿರುವ 20 ಪುರುಷರು ಸಂಪೂರ್ಣ ಟಿಕೆಟ್‌ ಹಣ ಪಾವತಿಸಿ ಪ್ರಯಾಣ ಮಾಡ್ಬೇಕು. ಅದು ನ್ಯಾಯವೇ?
  3. ಒಬ್ಬ ವಯಸ್ಸಾದ ವ್ಯಕ್ತಿ ದರ ಪಾವತಿಸಲು ಹಣವನ್ನು ಹುಡುಕಲು ಹೆಣಗಾಡುತ್ತಿದ್ದರೆ, ಆತನ ಪಕ್ಕದಲ್ಲಿಯೇ ಕುಳಿತ ಹುಡುಗಿಯೊಬ್ಬಳು ವಿಡಿಯೋ ಕರೆಯಲ್ಲಿ ಮಾತನಾಡುತ್ತಾ ಆರಾಮವಾಗಿ ಪ್ರಯಾಣಿಸುತ್ತಿದ್ದಳು. ಅದು ನ್ಯಾಯವೇ?
  4. ರಾಜ್ಯವು ಅಷ್ಟೂ ಹೆಚ್ಚುವರಿ ಆದಾಯವನ್ನು ಹೊಂದಿದ್ದರೆ, ಈ 20 ಪುರುಷರಿಗೂ ಏಕೆ ಉಚಿತ ಪ್ರಯಾಣದ ಸೌಲಭ್ಯ ನೀಡಬಾರದು?
  5. ಪ್ರಪಂಚದಾದ್ಯಂತ ಸಹಾಯಧನ ಮತ್ತು ಸೌಲಭ್ಯಗಳನ್ನು ಬಡ ಜನರಿಗೆ ನೀಡಲಾಗುತ್ತದೆ. ಆದ್ರೆ ಇಲ್ಲಿ ಕೇವಲ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡಿದ್ದಾರೆ. ಇದು ಸಮರ್ಥನೀಯವೇ?
  6. ಇದೇ ಹಣವನ್ನು ಬಿಟ್ಟಿ ಭಾಗ್ಯಗಳಿಗೆ ಬಳಸುವ ಬದಲು ಕಸ ತೆರವು ಗೊಳಿಸಲು, ರಸ್ತೆ ಗುಂಡಿಗಳನ್ನು ಸರಿ ಪಡಿಸಲು, ರೈತರಿಗೆ ನೀರಿನ ಸೌಲಭ್ಯ ಕೊಡಲು ಬಳಸಬಹುದಿತ್ತಲ್ಲವೇ?
  7. ಇನ್ನೂ ಅನೇಕ ಆಲೋಚನೆಗಳಿವೆ. ಆದರೆ ನಾವು ಉಚಿತಗಳಿಗಾಗಿ ಮತ ಹಾಕಿದ್ದೇವೆ” ಎಂಬ ಸುದೀರ್ಘ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ಮತ್ತಷ್ಟು ಓದಿ:ಮನುಷ್ಯರನ್ನು ನೀರಿಗಿಳಿಯುವಂತೆ ಮಾಡಲು ಸಾವಿನ ನಾಟಕವಾಡುವ ಖತರ್ನಾಕ್‌ ಮೊಸಳೆಗಳು; ವಿಡಿಯೋ ವೈರಲ್‌

ಜನವರಿ 8 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.2 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಸರ್‌ ಮುಂದಿನ ಬಾರಿ ಜಾಗರೂಕತೆಯಿಂದ ಆಲೋಚಿಸಿ ಮತ ಚಲಾಯಿಸಿʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼನಿಮ್ಮ ಮಾತು ಅಕ್ಷರಶಃ ನಿಜ ಸರ್‌ʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಹೌದು ಸರ್‌ ಉಚಿತ ಸೌಲಭ್ಯಗಳಿಗಿಂತ ಸಮಾನತೆ ಮುಖ್ಯʼ ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್