AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹಣ್ಣಿನಂಗಡಿಯ ಬಿಲ್‌ ರಶೀದಿಯಲ್ಲಿ ದಾಳಿಂಬೆ ಬದಲು ಅನಾರ್‌ ಪದ ಬಳಕೆ; ಗರಂ ಆದ ಕನ್ನಡಿಗ

ಕನ್ನಡ ಭಾಷೆ ಮತ್ತು ಹಿಂದಿ ಭಾಷೆ ವಿಷಯ ಕುರಿತು ಸದಾ ಒಂದಲ್ಲಾ ಒಂದು ವಿವಾದ ಇದ್ದೇ ಇದೆ. ಕರ್ನಾಟಕದಲ್ಲಿ ಹಿಂದಿ ಹೇರಿಕೆಯ ವಿರುದ್ಧ ಕನ್ನಡಿಗರು ಅಸಮಾಧಾನವನ್ನು ಹೊರ ಹಾಕುತ್ತಲೇ ಇರುತ್ತಾರೆ. ಇದೀಗ ಹಣ್ಣಿನಂಗಡಿಯ ಬಿಲ್‌ ರಶೀದಿಯಲ್ಲಿ ದಾಳಿಂಬೆ ಬದಲು ಅನಾರ್‌ ಪದ ಬಳಕೆ ಮಾಡಿದ್ದಕ್ಕೆ ಕನ್ನಡಿಗ ಗರಂ ಆಗಿದ್ದು, ದಿನಕ್ಕೊಂದು ಪದ ಅಂತ ನಾವು ಅವರಿಗೆ ಕಲಿಸಬೇಕಿತ್ತು, ಆದ್ರೆ ಅವ್ರು ಇಲ್ಲಿ ಬಂದು ದಿನಕ್ಕೊಂದು ಪದ ತುರುಕ್ತಾ ಇದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Viral: ಹಣ್ಣಿನಂಗಡಿಯ ಬಿಲ್‌ ರಶೀದಿಯಲ್ಲಿ ದಾಳಿಂಬೆ ಬದಲು ಅನಾರ್‌ ಪದ ಬಳಕೆ; ಗರಂ ಆದ ಕನ್ನಡಿಗ
ವೈರಲ್​​ ಪೋಸ್ಟ್​​
ಮಾಲಾಶ್ರೀ ಅಂಚನ್​
| Edited By: |

Updated on:Feb 07, 2025 | 4:53 PM

Share

ವಿಶೇಷವಾಗಿ ನಮ್ಮ ಬೆಂಗಳೂರಿನಲ್ಲಿ ಕನ್ನಡ ಭಾಷೆ ಮತ್ತು ಹಿಂದಿ ಭಾಷೆ ವಿಷಯ ಕುರಿತು ಸದಾ ಒಂದಲ್ಲಾ ಒಂದು ವಿವಾದ, ಚರ್ಚೆ ನಡೆಯುತ್ತಲೇ ಇರುತ್ತವೆ. ಹೀಗೆ ಸೋಷಿಯಲ್‌ ಮೀಡಿಯಾದಲ್ಲೂ ಹಿಂದಿ, ಕನ್ನಡ ಭಾಷೆಯ ಪರ ವಿರೋಧದ ಚರ್ಚೆ, ಪೈಪೋಟಿಗಳು ನಡೆಯುತ್ತಲೇ ಇರುತ್ತವೆ. ಇದೀಗ ಇಲ್ಲೊಂದು ಅಂತಹದ್ದೇ ಪೋಸ್ಟ್‌ ಒಂದು ವೈರಲ್‌ ಆಗಿದ್ದು, ಬೆಂಗಳೂರಿನ ಹಣ್ಣಿನಂಗಡಿಯ ಬಿಲ್‌ ರಶೀದಿಯಲ್ಲಿ ದಾಳಿಂಬೆ ಬದಲು ಅನಾರ್‌ ಪದ ಬಳಕೆ ಮಾಡಿದ್ದಕ್ಕೆ ಕನ್ನಡಿಗರೊಬ್ಬರು ಆಕ್ರೋಶ ಹೊರ ಹಾಕಿದ್ದಾರೆ. ಹೌದು ದಿನಕ್ಕೊಂದು ಪದ ಅಂತ ನಾವು ಅವರಿಗೆ ಕಲಿಸಬೇಕಿತ್ತು, ಆದ್ರೆ ಅವ್ರು ಇಲ್ಲಿ ಬಂದು ದಿನಕ್ಕೊಂದು ಪದ ತುರುಕ್ತಾ ಇದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ತರಕಾರಿ ಮತ್ತು ಹಣ್ಣಿನಂಗಡಿಯ ಬಿಲ್‌ ರಶೀದಿಯಲ್ಲಿ ದಾಳಿಂಬೆ ಬದಲು ಹಿಂದಿ ಪದವಾದ ಅನಾರ್‌ ಪದವನ್ನು ಬಳಸಿದ್ದಕ್ಕೆ ಕನ್ನಡಿಗರೊಬ್ಬರು ಫುಲ್‌ ಗರಂ ಆಗಿದ್ದಾರೆ. ಕನ್ನಡಿಗ ದೇವರಾಜ್‌ ಎಂಬವರು ಸೋಷಿಯಲ್‌ ಮೀಡಿಯಾದಲ್ಲಿ ಈ ಬಗ್ಗೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದು, ಈ ಕುರಿತ ಪೋಸ್ಟ್‌ ಒಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

Sgowda79 ಹೆಸರಿನ ಎಕ್ಸ್‌ ಖಾತೆಯಲ್ಲಿ ಈ ಪೋಸ್ಟ್‌ ಶೇರ್‌ ಮಾಡಲಾಗಿದ್ದು, “ದಿನಕ್ಕೊಂದು ಪದ ಅಂತ ನಾವ್‌ ಅವರಿಗೆ ಕಲಿಸಬೇಕಿತ್ತು… ಅದ್ರೆ ಇಲ್ಲಿ ಅವರು ನಮಗೆ ದಿನಕ್ಕೊಂದು ತುರುಕ್ತಾ ಇದ್ದಾರೆ…” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ಹಣ್ಣಿನಂಗಡಿ ಬಿಲ್‌ ರಶೀದಿ ಫೋಟೋದಲ್ಲಿ ದಾಳಿಂಬೆ ಬದಲು ʼಅನಾರ್‌ʼ ಎಂದು ಹಿಂದಿ ಪದವನ್ನು ಬರೆದಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಶ್ವಾಸಕೋಶದ ಆರೋಗ್ಯ ವೃದ್ಧಿ ಮತ್ತು ಫಿಟ್‌ನೆಸ್‌ಗಾಗಿ ಪ್ರತಿನಿತ್ಯ ಶಂಖ ಊದುವ ಬಾಲಿವುಡ್‌ ನಟ; ವಿಡಿಯೋ ವೈರಲ್‌

ಫೆಬ್ರವರಿ 5 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 14 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇಲ್ಲಿರುವ ಎಷ್ಟೋ ಜ್ಯೂಸ್‌ ಅಂಗಡಿಯವರಿಗೆ ದಾಳಿಂಬೆ ಅಂದ್ರೆ ಏನು ಅಂತಾನೆ ಗೊತ್ತಿಲ್ಲ, ಪೊಮೊಗ್ರೇನೆಟ್‌, ಅನಾರ್‌ ಅಂದ್ರೆ ಥಟ್ಟನೆ ಅರ್ಥವಾಗುತ್ತೆ ಅವರಿಗೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರ ʼನನ್ಗೆ ಅನಾರ್‌ ಅಂದ್ರೆ ಏನು ಎಂದು ಈಗ್ಲೇ ಗೊತ್ತಾಗಿದ್ದು ಮಾರ್ರೆʼ ಎಂದು ಹೇಳಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:17 pm, Fri, 7 February 25

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಮುಳುಗಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಕೆನಡಾದಲ್ಲಿ ಭಾರತೀಯ ಯುವಕರ ಬಳಿ ಸಹಾಯ ಕೇಳಿದ ಯುವತಿ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ
ಟ್ರಕ್​ಗೆ ಡಿಕ್ಕಿಯಾಗಿ KSRTC ಬಸ್ ನುಜ್ಜುಗುಜ್ಜು: ತಪ್ಪಿದ ಭಾರೀ ಅನಾಹುತ