AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: 42 ವರ್ಷಗಳ ಹಿಂದಿನ ಬೆಂಗಳೂರು ಮ್ಯಾಪ್ ವೈರಲ್, ಇದ್ರಲ್ಲಿ ಹೆಚ್‌ಎಸ್‌ಆರ್ ಲೇಔಟ್, ಇಂದಿರಾನಗರ ಇಲ್ವೇ ಇಲ್ಲ ನೋಡಿ

ಲೆಕ್ಕವಿಲ್ಲದಷ್ಟು ಜನರಿಗೆ ಬದುಕು ಕಟ್ಟಿಕೊಟ್ಟ ಈ ಬೆಂಗಳೂರು ಸಂಪೂರ್ಣವಾಗಿ ಬದಲಾಗಿದೆ. ಅಲ್ಲಲ್ಲಿ ದೊಡ್ಡ ದೊಡ್ಡ ಕಟ್ಟಡಗಳು, ಲೇಔಟ್‌ಗಳೇ ತುಂಬಿ ಹೋಗಿವೆ. ಆದರೆ ಇದೀಗ 1983 ರಲ್ಲಿ ಬೆಂಗಳೂರು ಹೇಗಿತ್ತು ಗೊತ್ತಾ?. ಬೆಂಗಳೂರಿನ ನಿವಾಸಿಯೊಬ್ಬರು ಹಂಚಿಕೊಂಡ 42 ವರ್ಷಗಳ ಹಳೆಯ ಅಪರೂಪದ ಮ್ಯಾಪ್ ಸೋಶಿಯಲ್ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

Viral: 42 ವರ್ಷಗಳ ಹಿಂದಿನ ಬೆಂಗಳೂರು ಮ್ಯಾಪ್ ವೈರಲ್, ಇದ್ರಲ್ಲಿ ಹೆಚ್‌ಎಸ್‌ಆರ್ ಲೇಔಟ್, ಇಂದಿರಾನಗರ ಇಲ್ವೇ ಇಲ್ಲ ನೋಡಿ
1983 ರ ಬೆಂಗಳೂರು ಮ್ಯಾಪ್Image Credit source: Twitter
ಸಾಯಿನಂದಾ
|

Updated on: Sep 01, 2025 | 10:32 AM

Share

ಬೆಂಗಳೂರು, ಸೆಪ್ಟೆಂಬರ್ 01: ಮಾಯಾನಗರಿ ಬೆಂಗಳೂರು (Bengaluru) ಹೆಸರು ಹೇಳಿದ ಕೂಡಲೇ ಎಲ್ಲರ ಕಿವಿ ನೆಟ್ಟಗೆ ಆಗುತ್ತದೆ. ಬೆಂಗಳೂರು ನಗರವೇ ಹಾಗೆ, ಯಾರೇ ಇಲ್ಲಿಗೆ ಬಂದರೂ ಅವರನ್ನು ತನ್ನವರಂತೆ ಅಪ್ಪಿ ಕೊಂಡಿದೆ. ಅಭಿವೃದ್ಧಿ ಹೊಂದುತ್ತಾ ದೂರದ ಊರಿನಿಂದ ಬರುವ ಅದೆಷ್ಟೋ ಜನರಿಗೆ ಕೆಲಸ ನೀಡಿದೆ, ಬದುಕಿಗೆ ಆಸರೆಯಾಗಿದೆ. ವರ್ಷಗಳು ಉರುಳಿದ್ದಂತೆ ಈ ಮಾಯಾನಗರಿ ಸಾಕಷ್ಟು ಬದಲಾಗಿದೆ. ಬೆಂಗಳೂರಿನ ಮಹಿಳೆಯೊಬ್ಬರು 1983 ರ ಅಂದರೆ 42 ವರ್ಷಗಳಷ್ಟು ಹಳೆಯ ಬೆಂಗಳೂರಿನ ಮ್ಯಾಪ್ (Bengaluru map) ಹಂಚಿಕೊಂಡಿದ್ದಾರೆ. ಆದರೆ ಈ ಮ್ಯಾಪ್‌ನಲ್ಲಿ ಹೆಚ್‌ಎಸ್‌ಆರ್ ಲೇಔಟ್ ಹಾಗೂ ಇಂದಿರಾನಗರ ಇರಲೇ ಇಲ್ಲವಂತೆ. ಬೆಂಗಳೂರು ನಗರದ ಕೇಂದ್ರವಾಗಿದ್ದು ಜಯನಗರ ಎಂದಿದ್ದಾರೆ.

42 ವರ್ಷಗಳ ಹಿಂದಿನ ಬೆಂಗಳೂರು ಮ್ಯಾಪ್

ಇದನ್ನೂ ಓದಿ
Image
ಬೆಂಗಳೂರಿನ ಸ್ಕೂಟಿ ಸವಾರನ ಬೆನ್ನ ಮೇಲೆ ಡಿಜಿಟಲ್ ಸೈನ್ ಬೋರ್ಡ್‌ ಬ್ಯಾಗ್‌
Image
ಈ ನಗರಕ್ಕೆ ನಾನು ಹೊರಗಿನವ, ಅಸಲಿ ಕಾರಣ ಬಿಚ್ಚಿಟ್ಟ ಬೆಂಗಳೂರಿಗ
Image
ಪ್ರೊಫೆಶನಲ್ ಆಗಿ ಸಂದೇಶ ಕಳುಹಿಸಿ ರಜೆ ಕೇಳಿದ ಬೆಂಗಳೂರಿನ ಮನೆಕೆಲಸದಾಕೆ
Image
ವಿದ್ಯಾರ್ಥಿ ಭವನದ ಊಟ ಸವಿದು ಪ್ರಾಮಾಣಿಕ ರೇಟಿಂಗ್ಸ್‌ ನೀಡಿದ ವ್ಲಾಗರ್

@dravishajatoch ಹೆಸರಿನ ಎಕ್ಸ್ ಖಾತೆಯಲ್ಲಿ ಶೇರ್ ಮಾಡಲಾದ ಈ ಪೋಸ್ಟ್‌ನಲ್ಲಿ ಬೆಂಗಳೂರಿನ ಮಹಿಳೆಯೊಬ್ಬರು ಹೀಗೆ ಬರೆದುಕೊಂಡಿದ್ದಾರೆ. ನಾವು 1983 ರ ಬೆಂಗಳೂರಿನ ಮ್ಯಾಪ್‌ನ್ನು ಸಂಗ್ರಾಹಕರಿಂದ ಖರೀದಿಸಿದ್ದೇವೆ. ಆ ಸಮಯದಲ್ಲಿ ಹೆಚ್‌ಎಸ್‌ಆರ್ ಹಾಗೂ ಇಂದಿರಾನಗರವು ಅಸ್ತಿತ್ವದಲ್ಲಿ ಇರಲಿಲ್ಲ. ಜಯನಗರವು ನಗರದ ಕೇಂದ್ರವಾಗಿದ್ದು, ಈ ನಕ್ಷೆಯಲ್ಲಿ ನಮ್ಮ ನೆಚ್ಚಿನ ಸ್ಥಳಗಳನ್ನು ಹುಡುಕುವತ್ತ ಸಾಗೋಣ. ಹಾಗೂ ಅವು ಅಂದು ಅಸ್ತಿತ್ವದಲ್ಲಿದ್ದವೇ ಎಂದು ನೋಡೋಣ ಎಂದಿದ್ದಾರೆ. ಈ ಪೋಸ್ಟ್‌ನಲ್ಲಿ 1983 ರ ಬೆಂಗಳೂರಿನ ಮ್ಯಾಪ್‌ನ್ನು ನೀವು ನೋಡಬಹುದು.

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

ಈ ಪೋಸ್ಟ್ ಹಂಚಿಕೊಂಡ ಬೆಂಗಳೂರಿನ ಮಹಿಳೆಯೇ ಕಾಮೆಂಟ್ ಮಾಡಿದ್ದು, ಈ ಮ್ಯಾಪ್ ದಕ್ಷಿಣ ಬೆಂಗಳೂರಿಗೆ ಮಾತ್ರ ಸೀಮಿತವಾಗಿಲ್ಲ. ಇದು ಇಡೀ ನಗರವನ್ನು ಒಳಗೊಂಡಿದೆ ಎಂದಿದ್ದಾರೆ. ಎಂಜಿ ರೋಡ್, ಶಿವಾಜಿನಗರ, ಹಲಸೂರು ಕೆರೆ ಸೇರಿದಂತೆ ಪ್ರಸಿದ್ಧ ಸ್ಥಳಗಳನ್ನು ಇಲ್ಲಿ ಗುರುತಿಸಲಾಗಿದೆ. ವೈಟ್ ಫೀಲ್ಡ್, ಹೆಬ್ಬಾಳ, ಯಲಹಂಕ, ತುಮಕೂರು ರಸ್ತೆ ಹಾಗೂ ಬಳ್ಳಾರಿ ವಿಸ್ತರಿಸಿದೆ ಎಂದು ಹೇಳಿದ್ದಾರೆ. 1983 ರ ವೇಳೆ ದಕ್ಷಿಣ ಬೆಂಗಳೂರು ಹೆಚ್ಚು ಅಭಿವೃದ್ಧಿ ಹೊಂದಿದ್ದಂತೆ ಕಂಡು ಬಂದಿತು. ಜಯನಗರ, ಬನಶಂಕರಿ, ಹಾಗೂ ಜೆಪಿ ನಗರದಂತಹ ಯೋಜಿತ ವಿನ್ಯಾಸಗಳು ಇದ್ದವು. ಆದರೆ ಉತ್ತರದ ಭಾಗಗಳು ಮಾತ್ರ ಅರೆ ಗ್ರಾಮೀಣವಾಗಿದ್ದವು ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:Video: ಇದು ಟೆಕ್ನಾಲಜಿ ಎಫೆಕ್ಟ್; ಬೆಂಗಳೂರಿನ ಸ್ಕೂಟಿ ಸವಾರನ ಬೆನ್ನ ಮೇಲೆ ಡಿಜಿಟಲ್ ಸೈನ್ ಬೋರ್ಡ್‌ನ ಆಕರ್ಷಕ ಬ್ಯಾಗ್

ಆಗಸ್ಟ್ 30 ರಂದು ಶೇರ್ ಮಾಡಲಾದ ಈ ಪೋಸ್ಟ್ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಬಳಕೆದಾರರೊಬ್ಬರು,ಇಂದಿಗೂ ನಾನು ನನ್ನ 84 ವರ್ಷದ ನೆರೆಹೊರೆಯವರಿಗೆ ಕೋರಮಂಗಲದಲ್ಲಿ ಯಾರನ್ನಾದರೂ ಭೇಟಿ ಮಾಡುತ್ತಿದ್ದೇನೆ ಎಂದು ಹೇಳಿದರೆ, ಅವರು ಕೋರಮಂಗಲಕ್ಕೆ ಯಾರು ಹೋಗುತ್ತಾರೆ ಎನ್ನುವ ಮುಖಭಾವದಿಂದ ನನ್ನನ್ನು ನೋಡುತ್ತಾರೆ ಎಂದಿದ್ದಾರೆ. ಮತ್ತೊಬ್ಬರು ಮನೆ ಖರೀದಿಸುವಾಗ ಉಲ್ಲೇಖಿಸಬೇಕಾದ ನಕ್ಷೆ ಇದು. ಅಲ್ಲಿ ಸರೋವರವಿದ್ದರೆ, ಆ ಜಾಗವನ್ನು ಖರೀದಿಸಬೇಡಿ ಎಂದು ಕಾಮೆಂಟ್ ಮಾಡಿದ್ದಾರೆ. ಈ ನಕ್ಷೆ ತುಂಬಾ ಚೆನ್ನಾಗಿದೆ. ಸಾಧ್ಯವಾದರೆ ದಯವಿಟ್ಟು ಇದರ ಹೈ ರೆಸಲ್ಯೂಷನ್ ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಬಹುದೇ ಎಂದು ಇನ್ನೊಬ್ಬ ಬಳಕೆದಾರರು ಕೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ