AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುದ್ಧ ಭೂಮಿಯಾಗಿದೆ ಬೆಂಗಳೂರಿನ ಈ ರಸ್ತೆ, ಮಂತ್ರಿ ಮಹನೀಯರೇ ಇಲ್ಲಿ ನೋಡಿ ಒಮ್ಮೆ

ಬೆಂಗಳೂರಿನಲ್ಲಿ ವಾಹನ ಓಡಿಸುವವರು ಟ್ರಾಫಿಕ್ ಜಾಮ್ ನಿಂದ ಹೈರಾಣಾದರೆ, ಮತ್ತೊಂದೆಡೆ ರಸ್ತೆಗಳ ತುಂಬೆಲ್ಲಾ ಗುಂಡಿಗಳೇ ರಾಶಿ ತುಂಬಿದ್ದು ಯಾವಾಗಪ್ಪ ಇದಕ್ಕೆ ಮುಕ್ತಿ ಸಿಗುವುದು ಎಂದು ಗೊಣಾಗುವವರೇ ಹೆಚ್ಚು. ಹೌದು, ಬೆಂಗಳೂರಿನ ಮುತ್ತನಲ್ಲೂರ್ ಕ್ರಾಸ್ ಹಾಗೂ ಸರ್ಜಾಪುರ ರಸ್ತೆಗಳು ಯುದ್ಧ ಭೂಮಿಯಂತಾಗಿದ್ದು, ಈ ರಸ್ತೆಯ ಸ್ಥಿತಿ ಹೇಗಿದೆ ಎನ್ನುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ಬಳಕೆದಾರರು ಖಾರವಾಗಿಯೇ ಕಾಮೆಂಟ್ ಮಾಡಿದ್ದಾರೆ.

ಯುದ್ಧ ಭೂಮಿಯಾಗಿದೆ ಬೆಂಗಳೂರಿನ ಈ ರಸ್ತೆ, ಮಂತ್ರಿ ಮಹನೀಯರೇ ಇಲ್ಲಿ ನೋಡಿ ಒಮ್ಮೆ
ವೈರಲ್​​ ವಿಡಿಯೋ
ಸಾಯಿನಂದಾ
| Edited By: |

Updated on: May 19, 2025 | 3:27 PM

Share

ಬೆಂಗಳೂರು, ಮೇ 19: ಬೆಂಗಳೂರಿ (bengaluru) ನ ವಾಹನ ಓಡಿಸುವವರು ಜೀವವನ್ನು ಕೈಯಲ್ಲೇ ಹಿಡಿದು ಓಡಾಡಬೇಕು. ಇಲ್ಲಿನ ರಸ್ತೆಗಳನ್ನು ನೋಡಿದರೆ ಅಯ್ಯೋ ಇದೇನಾ ಬ್ರ್ಯಾಂಡ್ ಬೆಂಗಳೂರು ಎಂದೆನಿಸುತ್ತದೆ. ಟ್ರಾಫಿಕ್ ಜಾಮ್ ಒಂದೆಡೆಯಾದರೆ, ಬೆಂಗಳೂರಿನ ರಸ್ತೆಗಳು ಇದೀಗ ಯಮಸ್ವರೂಪಿ ರಸ್ತೆಗಳಾಗಿ ಮಾರ್ಪಟ್ಟಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಕೆಲವು ರಸ್ತೆಗಳಲ್ಲಿ ಗುಂಡಿಗಳು, ಹೊಂಡಗಳೇ ತುಂಬಿ ಹೋಗಿದ್ದು ವಾಹನ ಸವಾರರು ಜೀವವನ್ನು ಕೈಯಲ್ಲಿ ಹಿಡಿದು ಪ್ರಯಾಣಿಸಬೇಕಾದ ಪರಿಸ್ಥಿತಿಯಿದೆ. ಬೆಂಗಳೂರಿನ ಮುತ್ತನಲ್ಲೂರ್ ಕ್ರಾಸ್ (muthanallur cross) ಹಾಗೂ ಸರ್ಜಾಪುರ ರಸ್ತೆ (sarjapura road) ಗಳು ಕೂಡ ಅಲ್ಲಲ್ಲಿ ಗುಂಡಿಗಳು, ಹೊಂಡಗಳೇ ತುಂಬಿ ಹೋಗಿದ್ದು ಡಾಂಬರು ಕಾಣದೇ ವರ್ಷಗಳೇ ಆಗಿದೆ. ಬೆಂಗಳೂರಿನ ರಸ್ತೆಯ ವಾಸ್ತವ ಸ್ಥಿತಿಯನ್ನು ಹೇಳುವ ವಿಡಿಯೋವೊಂದು ವೈರಲ್ ಆಗಿದ್ದು ನೆಟ್ಟಿಗರು, ಸರ್ಕಾರ, ಶಾಸಕರು, ಸಂಸದರನ್ನು ತರಾಟೆಗೆ ತೆಗೆದು ಕೊಂಡಿದ್ದಾರೆ.

@eastbengaluru ಹೆಸರಿನ ಖಾತೆಯಲ್ಲಿ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಬೆಂಗಳೂರಿನ ಮುತ್ತನಲ್ಲೂರ್ ಕ್ರಾಸ್ ಹಾಗೂ ಸರ್ಜಾಪುರ ರಸ್ತೆಗಳು ಯುದ್ಧ ಭೂಮಿಗಳಾಂತಾಗಿದೆ. ಕರ್ನಾಟಕದ ಮುಖ್ಯಮಂತ್ರಿಗಳೇ, ಹಾಗೂ ಡಿಕೆ ಶಿವಕುಮಾರ್ ಅವರೇ ನಿಮ್ಮ ಅರ್ಧ ಅಧಿಕಾರದ ಅವಧಿ ಮುಗಿದಿದೆ. ಆದರೆ ಈ ಭಾಗದಲ್ಲಿ ರಸ್ತೆಗಳಿಗೆ ಒಂದು ಹನಿ ಡಾಂಬರು ಕೂಡ ಬಿದ್ದಿಲ್ಲ ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋದಲ್ಲಿ ಬೆಂಗಳೂರಿನ ಈ ರಸ್ತೆಗಳಲ್ಲಿ ಗುಂಡಿ ಹಾಗೂ ಹೊಂಡಗಳಿಂದ ತುಂಬಿಹೋಗಿರುವುದನ್ನು ನೋಡಬಹುದು. ರಸ್ತೆ ಕಾಮಗಾರಿಗೆ ಕೈ ಹಾಕದೇ ವರ್ಷಗಳೇ ಆಗಿರುವುದು ಸ್ಪಷ್ಟವಾಗಿ ತಿಳಿಯುತ್ತಿದೆ.

ಇದನ್ನೂ ಓದಿ : ಮದುವೆಯಾಗಿ ಗಂಡನ ಮನೆಗೆ ಕಾಲಿಟ್ಟ ಮರುದಿನವೇ ಚಿನ್ನಾಭರಣ, ಹಣ ದೋಚಿ ಪರಾರಿಯಾದ ನವವಿವಾಹಿತೆ

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಮೇ 18 ರಂದು ಶೇರ್ ಮಾಡಲಾದ ಈ ವಿಡಿಯೋವು ಈವರೆಗೆ ಹದಿನೈದು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಬಳಕೆದಾರರೊಬ್ಬರು, ‘ಬೆಂಗಳೂರಿನ ಬಹುತೇಕ ರಸ್ತೆಗಳು ಈ ರೀತಿಯೇ ಇದೆ. ಅಲ್ಲಲ್ಲಿ ಹೊಂಡಗಳು, ವಾಹನ ಸವಾರರ ಗೋಳು ಹೇಳಲಾಗದು. ಇದಕ್ಕೆ ಅಂತ್ಯವೇ ಇಲ್ಲ’ ಎಂದಿದ್ದಾರೆ. ಇನ್ನೊಬ್ಬರು, ‘ಈ ಪ್ರದೇಶದ ಸಂಸದ, ಶಾಸಕರು, ವಿಧಾನ ಪರಿಷತ್ ಸದಸ್ಯ ಯಾರು? ಅವರಿಗೆ ಈ ವಿಡಿಯೋ ಟ್ಯಾಗ್ ಮಾಡಿ’ ಎಂದಿದ್ದಾರೆ. ಮತ್ತೊಬ್ಬರು, ‘ಬೆಂಗಳೂರಿನ ಸಂಚಾರ ಜೀವಕ್ಕೆ ಸಂಚಕಾರ! ಸರ್ಕಾರ ಇದಕ್ಕೆ ಯಾವಾಗ ಪರಿಹಾರ?’ ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ