AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಫುಡ್‌ ಡೆಲಿವರಿ ಕೊಡೋ ಅರ್ಜೆಂಟ್; ವೇಗವಾಗಿ ಬೈಕ್‌ ಓಡಿಸಿ ವೃದ್ಧ ದಂಪತಿಗೆ ಡಿಕ್ಕಿ ಹೊಡೆದ ಡೆಲಿವರಿ ಬಾಯ್

ಸಮಯಕ್ಕೆ ಸರಿಯಾಗಿ ಗ್ರಾಹಕರಿಗೆ ಅವರ ಪಾರ್ಸೆಲ್‌ ತಲುಪಿಸಬೇಕು ಎಂಬ ಉದ್ದೇಶದಿಂದ ಅತಿವೇಗವಾಗಿ ವಾಹನ ಚಲಾಯಿಸುತ್ತಾರೆ. ಅದೇ ರೀತಿ ಇಲ್ಲೊಬ್ಬ ಡೆಲಿವರಿ ಸ್ವಿಗ್ಗಿ ಡೆಲಿವರಿ ಬಾಯ್‌ ಫುಡ್‌ ಡೆಲಿವರಿ ಮಾಡೋ ಅರ್ಜೆಂಟ್‌ನಲ್ಲಿ ವೇಗವಾಗಿ ಗಾಡಿ ಓಡಿಸಿ ವೃದ್ಧ ದಂಪತಿಗೆ ಗುದ್ದಿದ್ದಾನೆ. ಪರಿಣಾಮ ಮಹಿಳೆಯ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತ ಪೋಸ್ಟ್‌ ಒಂದು ಇದೀಗ ವೈರಲ್‌ ಆಗುತ್ತಿದೆ.

Viral: ಫುಡ್‌ ಡೆಲಿವರಿ ಕೊಡೋ ಅರ್ಜೆಂಟ್; ವೇಗವಾಗಿ ಬೈಕ್‌ ಓಡಿಸಿ ವೃದ್ಧ ದಂಪತಿಗೆ ಡಿಕ್ಕಿ ಹೊಡೆದ ಡೆಲಿವರಿ ಬಾಯ್
ವೈರಲ್​​ ಫೋಟೋ
ಮಾಲಾಶ್ರೀ ಅಂಚನ್​
| Edited By: |

Updated on:Mar 26, 2025 | 3:34 PM

Share

ಬೆಂಗಳೂರು, ಮಾ. 26: ಅತಿ ವೇಗವಾಗಿ (Speed) ವಾಹನ (vehicle) ಚಲಾಯಿಸುವುದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುತ್ತದೆ. ಹೀಗಿದ್ದರೂ ಕೂಡಾ ಕೆಲವರು ಸಂಚಾರ ನಿಯಮಗಳನ್ನೆಲ್ಲಾ(traffic rules) ಉಲ್ಲಂಘಿಸಿ ವೇಗವಾಗಿ ಗಾಡಿ ಓಡಿಸ್ತಾರೆ. ಅದರಲ್ಲೂ ಡೆಲಿವರಿ ಏಜೆಂಟ್‌ಗಳು (delivery agent) ಗ್ರಾಹಕರಿಗೆ ಅವರ ಪಾರ್ಸೆಲ್‌ (parcel) ಸಮಯಕ್ಕೆ ಸರಿಯಾಗಿ ತಲುಪಿಸಬೇಕು ಎಂಬ ಉದ್ದೇಶದಿಂದ ಅತಿವೇಗವಾಗಿ ಗಾಡಿ ಓಡಿಸಿಕೊಂಡು ಹೋಗ್ತಾರೆ. ಅದೇ ರೀತಿ ಇಲ್ಲೊಬ್ಬ ಡೆಲಿವರಿ ಸ್ವಿಗ್ಗಿ ಡೆಲಿವರಿ ಬಾಯ್‌ (delivery boy) ಫುಡ್‌ ಡೆಲಿವರಿ ಮಾಡೋ ಅರ್ಜೆಂಟ್‌ನಲ್ಲಿ ವೇಗವಾಗಿ ಗಾಡಿ ಓಡಿಸಿ ವೃದ್ಧ ದಂಪತಿಗೆ ಗುದ್ದಿದ್ದಾನೆ. ಪರಿಣಾಮ ಮಹಿಳೆಯ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಟ್ಯಾಕ್ಸಿಗಳಂತೆ ಇವರ ಮಿತಿಗಳನ್ನು ಕೂಡಾ ನಿಯಂತ್ರಿಸಿ ಎಂದು ವ್ಯಕ್ತಿಯೊಬ್ಬರು ಸೋಷಿಯಲ್‌ ಮೀಡಿಯಾದಲ್ಲಿ ಕಿಡಿ ಕಾರಿದ್ದಾರೆ.

ಈ ಘಟನೆ ನಮ್ಮ ಬೆಂಗಳೂರಿನಲ್ಲಿ ನಡೆದಿದ್ದು, ಸ್ವಿಗ್ಗಿ ಡೆಲಿವರಿ ಬಾಯ್‌ ವೇಗದ ಚಾಲನೆಗೆ ವೃದ್ಧ ದಂಪತಿ ನೋವು ಅನುಭವಿಸಬೇಕಾದ ಪರಿಸ್ಥಿತಿ ಬಂದಿದೆ. ಹೌದು ರಸ್ತೆಯಲ್ಲಿ ಹೋಗ್ತಿದ್ದ ವೃದ್ಧ ದಂಪತಿಗೆ ಡೆಲಿವರಿ ಬಾಯ್‌ ಬೈಕ್‌ ಡಿಕ್ಕಿ ಹೊಡೆದಿದ್ದು, ಪರಿಣಾಮ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇದನ್ನೂ ಓದಿ
Image
ಹಿರಿ ಜೀವಗಳಿಗೆ  ಮರುಮದುವೆ ಮಾಡಿಸಿದ ಮೊಮ್ಮಕ್ಕಳು
Image
ರಾತ್ರಿಯ ರೊಮ್ಯಾ‌ನ್ಸ್ ವಿಡಿಯೋ ಶೇರ್‌ ಮಾಡಿದ ನವಜೋಡಿ
Image
ಕೋಪದಲ್ಲಿ ಗಂಡನ ನಾಲಿಗೆ ಕಚ್ಚಿ ತುಂಡರಿಸಿದ ಹೆಂಡತಿ
Image
ಯಾವ ಲಾಭದಾಯಕ ಉದ್ದಿಮೆಗೂ ಕಮ್ಮಿಯಿಲ್ಲ ಈ ಚೇಳು ಸಾಕಾಣಿಕೆ

ವೈರಲ್​​ ಪೋಸ್ಟ್ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್‌ ಒಂದನ್ನು ಶಿವಸುಬ್ರಮಣ್ಯಂ ಜಯರಾಮನ್‌ (Sivasubhramaniam Jayaraman) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಶೇರ್‌ ಮಾಡಿಕೊಂಡಿದ್ದು, “ಇಂದು ಮಧ್ಯಾಹ್ನ ನನ್ನ ಮನೆಯ ಬಳಿ ದೊಡ್ಡ ಸದ್ದು ಕೇಳಿಸಿತು. ಅದೇನೆಂದರೆ ಸ್ವಿಗ್ಗಿ ಡೆಲಿವರಿ ಬಾಯ್‌ ವಾಹನ ವೃದ್ಧ ದಂಪತಿಗೆ ಡಿಕ್ಕಿ ಹೊಡೆದಿದೆ. 60 ರ ಆಸುಪಾಸಿನ ಆ ಮಹಿಳೆ ನೋವಿನಿಂದ ಒದ್ದಾಡುತ್ತಿದ್ದರು, ನಾನು ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಿದೆ ಅದೃಷ್ಟವಶಾತ್‌ ಅವರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಡೆಲಿವರಿ ಏಜೆಂಟ್‌ಗಳು ಬೈಕ್‌ಗಳನ್ನು ಅತಿವೃಗವಾಗಿ ಚಲಾಯಿಸುತ್ತಾರೆ, ಇದೊಂದು ಗಂಭೀರ ಸುರಕ್ಷತಾ ಸಮಸ್ಯೆಯಾಗಿದ್ದು, ಸರ್ಕಾರವು ಟ್ಯಾಕ್ಸಿಗಳಂತೆ ಡೆಲಿವರಿ ವಾಹನಗಳ ವೇಗವನ್ನು ಗಂಟೆಗೆ 50 ಕಿಮೀ ಗೆ ಮಿತಿಗೊಳಿಸಬೇಕು” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ಅವರು ಹಂಚಿಕೊಂಡಿರುವ ಫೋಟೋದಲ್ಲಿ ವೃದ್ಧ ಮಹಿಳೆಯ ಕಾಲಿಗೆ ಪ್ಲಾಸ್ಟರ್‌ ಸುತ್ತಿರುವ ದೃಶ್ಯವನ್ನು ಕಾಣಬಹುದು. ಇದಕ್ಕೆ ಪ್ರತಿಕ್ರಿಯಿಸಿದ ಸ್ವಿಗ್ಗಿ ತಮ್ಮ ಡೆಲಿವರಿ ಏಜೆಂಟ್‌ನಿಂದ ವೃದ್ಧ ದಂಪತಿಗಾದ ತೊಂದರೆಗೆ ನಾವು ಕ್ಷಮೆ ಕೋರುತ್ತೇವೆ ಎಂದು ಹೇಳಿದೆ.

ಇದನ್ನೂ ಓದಿ: ಜಸ್ಟ್‌ ಪಾಸಾದ್ರೆ ಸಾಕು, ಇದಕ್ಕಿಂತ ಕಮ್ಮಿ ಅಂಕ ಬೇಡ; ದೈವಕ್ಕೆ ಚೀಟಿ ಮುಖಾಂತರ ಮನವಿಯಿಟ್ಟ ವಿದ್ಯಾರ್ಥಿ

ಮಾರ್ಚ್‌ 24 ರಂದು ಶೇರ್‌ ಮಾಡಲಾದ ಈ ಪೋಸ್ಟ್‌ 30 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಹೌದು ಡೆಲಿವರಿ ಏಜೆಂಟ್‌ಗಳು ಹೆಚ್ಚಾಗಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನ ಓಡಿಸ್ತಾರೆʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಈ ವೇಗದ ಚಾಲನೆ ಬಗ್ಗೆ ವಿತರಣಾ ಅಪ್ಲಿಕೇಷನ್‌ ಬ್ರ್ಯಾಂಡ್‌ಗಳು ಕಾಳಜಿ ವಹಿಸುದೇ ಇಲ್ಲʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:33 pm, Wed, 26 March 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ