AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಅಂದು ಕಾಲೇಜ್ ಫೀಸ್ ಕಟ್ಟಲು ದುಡ್ಡಿಗಾಗಿ ಪರದಾಟ, ಇಂದು ಕೋಟಿ ರೂ ಸಂಪಾದನೆ; ಇದು ಬೆಂಗಳೂರು ಸಾಫ್ಟ್‌ವೇರ್ ಇಂಜಿನಿಯರ್‌ನ ಕಥೆ

ಜೀವನದಲ್ಲಿ ಕಷ್ಟಗಳು ಸರ್ವೇ ಸಾಮಾನ್ಯ. ಆದರೆ ಅದನ್ನು ಮೆಟ್ಟಿ ನಿಲ್ಲಲೇ ಬೇಕು. ಕಷ್ಟದ ದಿನಗಳನ್ನು ಕಂಡ ಯುವಕನೊಬ್ಬ ಇಂದು ಕೋಟಿ ಸಂಪಾದನೆ ಮಾಡುತ್ತಿದ್ದಾನೆ. ಹೌದು, ಬೆಂಗಳೂರಿನ ಯುವಕನೊಬ್ಬ ಮೈಕ್ರೋಸಾಫ್ಟ್‌ನಲ್ಲಿ 1.9 ಕೋಟಿ ರೂ ಸಂಬಳ ಪಡೆಯುತ್ತಿದ್ದಾನೆ. ಆದರೆ ಕಾಲೇಜಿಗೆ ಹೋಗುತ್ತಿದ್ದಾಗ ಟೈಮ್ ಸರಿ ಇರಲಿಲ್ಲ. ಆರ್ಥಿಕವಾಗಿ ಬಹಳ ತೊಂದರೆಯಿತ್ತು . ಇಂದು ಯಶಸ್ಸು ಸಾಧಿಸಿದ್ದು, ತನ್ನ ತಂದೆ ತಾಯಿಯ ತ್ಯಾಗವನ್ನು ನೆನಪಿಸಿಕೊಂಡಿದ್ದಾನೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಅಂದು ಕಾಲೇಜ್ ಫೀಸ್ ಕಟ್ಟಲು ದುಡ್ಡಿಗಾಗಿ ಪರದಾಟ, ಇಂದು ಕೋಟಿ ರೂ ಸಂಪಾದನೆ; ಇದು ಬೆಂಗಳೂರು ಸಾಫ್ಟ್‌ವೇರ್ ಇಂಜಿನಿಯರ್‌ನ ಕಥೆ
ಮನು ಅಗರ್‌ವಾಲ್‌ Image Credit source: LinkedIn
ಸಾಯಿನಂದಾ
|

Updated on: Jul 07, 2026 | 11:33 AM

Share

ಬೆಂಗಳೂರು, ಜುಲೈ 07: ಬದುಕು ಒಂದೇ ರೀತಿ ಇರಲ್ಲ. ಏನು ಇಲ್ಲದೆ ಒಂದೊಂದು ರೂಪಾಯಿಗೂ ಕಷ್ಟ ಪಡ್ತಾ ಇದ್ದ ವ್ಯಕ್ತಿ ಯಾರು ಊಹೆ ಮಾಡದ ಮಟ್ಟಿಗೆ ಬೆಳೆಯಬಹುದು. ಹೀಗಾಗಿ ಯಶಸ್ಸು ಯಾರಪ್ಪ ಸ್ವತ್ತು ಅಲ್ಲ. ಇದಕ್ಕೆ ಉದಾಹರಣೆಯಂತಿದ್ದಾನೆ ಬೆಂಗಳೂರಿನ (Bengaluru) ಮೈಕ್ರೋಸಾಫ್ಟ್‌ನಲ್ಲಿ ಕೆಲಸ ಮಾಡುವ ಸಾಫ್ಟ್‌ವೇರ್ ಇಂಜಿನಿಯರ್ (software engineer) . ಒಂದು ಕಾಲದಲ್ಲಿ ಕಾಲೇಜ್ ಫೀಸ್ ಕಟ್ಟಲು ಅಮ್ಮ ತನ್ನ ಬಳೆಯಿದ್ದ ಮಾರಿದ್ದನಂತೆ. ಆದರೆ ಇದೀಗ ಕೋಟಿಗಟ್ಟಲೆ ದುಡಿದು ಅಮ್ಮನಿಗೆ ಯಾವುದೇ ಕೊರತೆ ಬಾರದಂತೆ ನೋಡಿಕೊಳ್ಳುತ್ತಿದ್ದಾನೆ. ತನ್ನ ಯಶಸ್ಸಿನ ಹಿಂದಿನ ಕಥೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದು, ನೆಟ್ಟಿಗರು ಈ ಯುವಕನ ಸಾಧನೆಯನ್ನು ಮೆಚ್ಚಿಕೊಂಡಿದ್ದಾರೆ.

ಮನು ಅಗರವಾಲ್ (Manu Agrawal) ತಮ್ಮ ಲಿಂಕ್ಡ್ ಇನ್ ಪೋಸ್ಟ್ ನಲ್ಲಿ ತನ್ನ ಜೀವನದ ಕಥೆ ಹಾಗೂ ತಂದೆ ತಾಯಿಯ ತ್ಯಾಗವನ್ನು ನೆನಪಿಸಿಕೊಂಡಿದ್ದಾನೆ. ಈ ಪೋಸ್ಟ್ ನಲ್ಲಿ ನಾನು ಇಂಜಿನಿಯರ್ ಓದುತ್ತಿದ್ದ ಸಂದರ್ಭದಲ್ಲಿ ಒಂದು ಸೆಮಿಸ್ಟರ್‌ನ ಫೀಸ್ 15,000 ರೂ ಕಟ್ಟಲು ನನ್ನ ಅಪ್ಪ ಅಮ್ಮನ ಒಡವೆಯನ್ನು ಮಾರಿದರು. ನನ್ನ ತಾಯಿ ಹಿಂದೆ ಮುಂದೆ ನೋಡದೆ ಚಿನ್ನದ ಬಳೆಗಳನ್ನು ನೀಡಿದ್ದನ್ನು ನಾನು ಕಣ್ಣಾರೆ ನೋಡಿದ್ದೇನೆ. ಅಮ್ಮ ಕಣ್ಣೀರು ಹಾಕಲಿಲ್ಲ. ಅವರು ನನ್ನನ್ನು ನೋಡಿ ಬಳೆ ನೀಡಿದ ದಿನ, ನಾನು ನಿದ್ದೆಯನ್ನು ಮಾಡಲೇ ಇಲ್ಲ ಎಂದು ಹೇಳಿದ್ದಾನೆ.

ಲಿಂಕ್ಡ್ ಇನ್ ಪೋಸ್ಟ್ ಇಲ್ಲಿದೆ

ಓದು ಮುಗಿಯುತ್ತಿದ್ದಂತೆ , ಅಮೆರಿಕದ ಮೈಕ್ರೋಸಾಫ್ಟ್‌ನ ಸಿಯಾಟಲ್ ಕಚೇರಿಯಲ್ಲಿ ಕೆಲಸ ಗಿಟ್ಟಿಸಿಕೊಂಡಿದೆ. ನನಗೆ ಈಗ ವಾರ್ಷಿಕ ಸಂಬಳ 1.9 ಕೋಟಿ ರೂ. ಕೆಲಸ ಸಿಕ್ಕೊಡನೆ ತಾಯಿಗೆ ಕರೆ ಮಾಡಿ, ನಿನಗೆ ಇಷ್ಟ ಬಂದಷ್ಟು ಒಡವೆಗಳನ್ನು ಖರೀದಿಸು ಎಂದು ಹೇಳಿದ್ದೆ. ನನ್ನ ಅಮ್ಮ ಮಾತ್ರ, ನನಗೆ  ನಾನು ಎಲ್ಲವನ್ನೂ ಮರಳಿ ಪಡೆದುಕೊಂಡೆ ಎಂದು ಬಿಟ್ಟರು. ಅದರ ಕೆಲವು ಸಾಲಗಳನ್ನು ತೀರಿಸಲು ಸಾಧ್ಯವಿಲ್ಲ ಎಂದು ತಂದೆ ತಾಯಿಯ ನಿಸ್ವಾರ್ಥ ಪ್ರೀತಿಯನ್ನು ವಿವರಿಸಿದ್ದಾನೆ.

ಇದನ್ನೂ ಓದಿ: ‘ಬೆಂಗಳೂರು ಭಾರತದ ಯುರೋಪ್ ಇದ್ದಂತೆ! ಸಿಲಿಕಾನ್ ಸಿಟಿಗೆ ಫಿದಾ ಆದ ಯುವತಿಯ ವಿಡಿಯೋ ವೈರಲ್

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ತಂದೆ ತಾಯಿಯ ಋಣ ತೀರಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಇನ್ನೊಬ್ಬರು, ಇಂತಹ ಮಗನನ್ನು ಪಡೆದ ನೀವೇ ಧನ್ಯರು ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಇದು ನಿಜಕ್ಕೂ ಸ್ಫೂರ್ತಿದಾಯಕ ಕಥೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸ್ಯಾಂಕಿ ಕೆರೆಗೆ ಹಾರಿ 20 ವರ್ಷದ ವಿದ್ಯಾರ್ಥಿನಿ ತೇಜು ಆತ್ಮಹತ್ಯೆ
ಸ್ಯಾಂಕಿ ಕೆರೆಗೆ ಹಾರಿ 20 ವರ್ಷದ ವಿದ್ಯಾರ್ಥಿನಿ ತೇಜು ಆತ್ಮಹತ್ಯೆ
ಪ್ರಕೃತಿಯ ಮಡಿಲಲ್ಲಿ ಅಕುಲ್ ಬಾಲಾಜಿ ಕನಸಿನ ಮನೆ; ಎಷ್ಟು ಸುಂದರವಾಗಿದೆ ನೋಡಿ
ಪ್ರಕೃತಿಯ ಮಡಿಲಲ್ಲಿ ಅಕುಲ್ ಬಾಲಾಜಿ ಕನಸಿನ ಮನೆ; ಎಷ್ಟು ಸುಂದರವಾಗಿದೆ ನೋಡಿ
ಚಾರ್ಮಾಡಿ ಘಾಟಿಯಲ್ಲಿ ರಣಮಳೆ, ದಟ್ಟ ಮಂಜು, ಫಾಲ್ಸ್​ಗಳ ಅಬ್ಬರ
ಚಾರ್ಮಾಡಿ ಘಾಟಿಯಲ್ಲಿ ರಣಮಳೆ, ದಟ್ಟ ಮಂಜು, ಫಾಲ್ಸ್​ಗಳ ಅಬ್ಬರ
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಅಧಿಕ ಲಾಭ
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಅಧಿಕ ಲಾಭ
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸುರಂಗದೊಳಗೆ ನುಗ್ಗಿದ ನೀರು; ರಸ್ತೆ ಬಂದ್
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸುರಂಗದೊಳಗೆ ನುಗ್ಗಿದ ನೀರು; ರಸ್ತೆ ಬಂದ್
ಇಂಡೋನೇಷ್ಯಾದಲ್ಲಿ ರಾಮಾಯಣದ ತೊಗಲು ಬೊಂಬೆಯಾಟ ನೋಡಿ ಅಚ್ಚರಿಗೊಂಡ ಮೋದಿ
ಇಂಡೋನೇಷ್ಯಾದಲ್ಲಿ ರಾಮಾಯಣದ ತೊಗಲು ಬೊಂಬೆಯಾಟ ನೋಡಿ ಅಚ್ಚರಿಗೊಂಡ ಮೋದಿ
ಗೋಲ್ಡನ್ ಮೆಗಾ ಸ್ಟಾರ್ ಆದ ಗಣೇಶ್; ‘ಪಿನಾಕ’ ವೇದಿಕೆಯಲ್ಲಿ ಸಾಧು ಕೋಕಿಲ ಮಾತು
ಗೋಲ್ಡನ್ ಮೆಗಾ ಸ್ಟಾರ್ ಆದ ಗಣೇಶ್; ‘ಪಿನಾಕ’ ವೇದಿಕೆಯಲ್ಲಿ ಸಾಧು ಕೋಕಿಲ ಮಾತು
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ
ಇಂಡೋನೇಷ್ಯಾದಲ್ಲಿ ಭಾರತೀಯ ಶಾಸ್ತ್ರೀಯ ನೃತ್ಯದ ಮೂಲಕ ಸ್ವಾಗತ;ಮೋದಿ ಮೆಚ್ಚುಗೆ
ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಖಡ್ಗ ಕೈಯಲ್ಲಿ ಹಿಡಿದು ‘ಪಿನಾಕ’ ಟೀಸರ್ ಬಿಡುಗಡೆ ಮಾಡಿದ ನಟ ಗಣೇಶ್
ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ
ಬೆಂಗಳೂರಲ್ಲಿ ರ್‍ಯಾಪಿಡೋ ಚಾಲಕನ ಎಡವಟ್ಟಿನಿಂದ ಆಸ್ಪತ್ರೆ ಸೇರಿದ ಯುವತಿ