AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಬೆಂಗಳೂರಿನಲ್ಲಿ ಗುಟ್ಕಾ ತಿಂದು ಯುವತಿಯ ಮೇಲೆ ಉಗಿದ ಆಟೋ ಚಾಲಕ; ನೆಟ್ಟಿಗರಿಂದ ಭಾರೀ ಆಕ್ರೋಶ

ಇತ್ತೀಚಿಗಷ್ಟೇ ನಮ್ಮ ಬೆಂಗಳೂರಿನಲ್ಲಿ ನಾಚಿಕೆಗೇಡಿನ ಘಟನೆಯೊಂದು ನಡೆದಿದ್ದು, ಎಲ್ಲೆಂದರಲ್ಲಿ ಉಗುಳಬಾರದೂ ಎಂಬ ನಿಯಮ ಜಾರಿಯಲ್ಲಿದ್ದರೂ ಆಟೋ ಚಾಲಕನೊಬ್ಬ ಗುಟ್ಕಾ ತಿಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯ ಮೇಲೆ ಉಗುಳಿದ್ದಾನೆ. ಈ ಕಹಿ ಅನುಭವದ ಬಗ್ಗೆ ಯುವತಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಆತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ಪೊಲೀಸ್ ಭರವಸೆ ನೀಡಿದ್ದಾರೆ.

Viral Post: ಬೆಂಗಳೂರಿನಲ್ಲಿ ಗುಟ್ಕಾ ತಿಂದು ಯುವತಿಯ ಮೇಲೆ ಉಗಿದ ಆಟೋ ಚಾಲಕ; ನೆಟ್ಟಿಗರಿಂದ ಭಾರೀ ಆಕ್ರೋಶ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Jun 05, 2024 | 2:16 PM

Share

ಎಷ್ಟೇ ಜಾಗೃತಿ ಮೂಡಿಸಿದರೂ ಕೂಡಾ ಕೆಲವೊಬ್ಬರು ಪಾನ್ ಮಸಾಲ, ಗುಟ್ಕಾ ಇತ್ಯಾದಿ ಹೊಗೆ ರಹಿತ ತಂಬಾಕು ಪದಾರ್ಥಗಳನ್ನು ತಿಂದು ಎಲ್ಲೆಂದರಲ್ಲಿ ಉಗಿದು ನಿಯಮ ಉಲ್ಲಂಘಿಸುತ್ತಿರುತ್ತಾರೆ. ಇನ್ನೂ ಸಾರ್ವಜನಿಕ ಸ್ಥಳಗಳಲ್ಲಂತೂ ಉಗುಳುವವರ ಸಂಖ್ಯೆ ಕಡಿಮೆ ಆಗಿಲ್ಲ. ಹೌದು ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಿದರೂ ಗುಟ್ಕಾ  ತಿನ್ನುವವರು ಎಲ್ಲೆಂದರಲ್ಲಿ ಉಗುಳುವ ತಮ್ಮ ಚಾಳಿಯನ್ನು ಬಿಟ್ಟಿಲ್ಲ. ಅದೇ ರೀತಿಯ ನಾಚಿಕೆಗೇಡಿನ ಘಟನೆಯೊಂದು ನಮ್ಮ ಬೆಂಗಳೂರಿನಲ್ಲಿ ನಡೆದಿದ್ದು, ಆಟೋ ಚಾಲಕನೊಬ್ಬ ಗುಟ್ಕಾ ತಿಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯ ಮೇಲೆ ಉಗುಳಿದ್ದಾನೆ. ತನಗಾದ ಕಹಿ ಅನುಭವದ  ಬಗ್ಗೆ ಯುವತಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಆಟೋ ಚಾಲಕನ ವಿರುದ್ಧ ನೆಟ್ಟಿಗರು ಫುಲ್ ಗರಂ ಆಗಿದ್ದಾರೆ.

ವೃತ್ತಿಯಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿರುವಂತ ಪರಿಶಿ ಎಂಬ ಯುವತಿ ತನಗಾದ ಕಹಿ ಅನುಭವದ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, ಇಂದಿರಾ ನಗರದಲ್ಲಿ ತಾನು ನಡೆದುಕೊಂಡು ಹೋಗುತ್ತಿರುವ ವೇಳೆ ಆಟೋ ಚಾಲಕನೊಬ್ಬ ತನ್ನ ಮೇಲೆ ಉಗುಳಿದ್ದಾನೆ ಎಂದು ಹೇಳಿದ್ದಾರೆ. ಜೊತೆಗೆ ಈ ಕುರಿತ ಫೋಟೋಗಳನ್ನು ಕೂಡಾ ಶೇರ್ ಮಾಡಿದ್ದಾರೆ. ಈ ಪೋಸ್ಟ್ಗೆ ಉತ್ತರಿಸಿರುವ ಬೆಂಗಳೂರು ಪೊಲೀಸ್ ದಯವಿಟ್ಟು ಆ ಸ್ಥಳದ ವಿವರವನ್ನು ನೀಡಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಚಹಾ ಮಾರಿ ಕೇವಲ ಎರಡೂವರೆ ವರ್ಷದಲ್ಲಿ ತನ್ನ 8 ಲಕ್ಷ ರೂ ಸಾಲ ತೀರಿಸಿದ ಮಂಗಳೂರಿನ ವ್ಯಕ್ತಿ

ವೈರಲ್​​ ಫೋಟೋ ಇಲ್ಲಿದೆ:

ಜೂನ್ 03 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ 6 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ವರ್ತಿಸುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ನೆಟ್ಟಿಗರು ಆಟೋ ಚಾಲಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ