AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಟ್‌ ಮಾರಿದ 19 ವರ್ಷಗಳ ಬಳಿಕ ಪರಿಹಾರ ಬೇಕೆಂದು ಖರೀದಿದಾರರ ಬಳಿ ಪಟ್ಟು ಹಿಡಿದ ಬೆಂಗಳೂರಿನ ಮಹಿಳೆ

ಸೋಷಿಯಲ್‌ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ಒಂದಾದ ರೆಡ್ಡಿಡ್‌ನಲ್ಲಿ ಬಳಕೆದಾರರು ತಮ್ಮ ಸುಖ-ದುಃಖಗಳಿಗೆ ಸಂಬಂಧಪಟ್ಟ ಇಂಟರೆಸ್ಟಿಂಗ್‌ ಸ್ಟೋರಿಗಳನ್ನು ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ಇದೀಗ ಇಲ್ಲೊಬ್ಬ ಬಳಕೆದಾರರು ತಮಗಾದ ಕಹಿ ಅನುಭವದ ಬಗ್ಗೆ ಹೇಳಿಕೊಂಡಿದ್ದು, ನನ್ನ ತಂದೆ 2006 ರಲ್ಲಿ ಬೆಂಗಳೂರಿನಲ್ಲಿ ಒಂದು ಜಮೀನು ಖರೀದಿಸಿದ್ದರು, ಇದೀಗ ಮಾರಾಟಗಾರನ ಮಗಳು ತನಗೆ ನ್ಯಾಯಯುತ ಪರಿಹಾರ ನೀಡಬೇಕೆಂದು ನೋಟಿಸ್‌ ಕಳುಹಿಸಿದ್ದಾರೆ ಎಂದು ಹೇಳಿದ್ದಾರೆ.

ಸೈಟ್‌ ಮಾರಿದ 19 ವರ್ಷಗಳ ಬಳಿಕ ಪರಿಹಾರ ಬೇಕೆಂದು ಖರೀದಿದಾರರ ಬಳಿ ಪಟ್ಟು ಹಿಡಿದ ಬೆಂಗಳೂರಿನ ಮಹಿಳೆ
ವೈರಲ್‌ ಪೋಸ್ಟ್Image Credit source: Getty Images
ಮಾಲಾಶ್ರೀ ಅಂಚನ್​
|

Updated on: Jun 21, 2025 | 3:47 PM

Share

ಜಮೀನು, ಆಸ್ತಿಗಳಿಗೆ (Property) ಸಂಬಂಧಪಟ್ಟ ವ್ಯಾಜ್ಯಗಳು ನಡೆಯುತ್ತಲೇ ಇರುತ್ತವೆ. ಜಮೀನುಗಳ ವಿಚಾರವಾಗಿ ಕೋರ್ಟ್‌ ಮೆಟ್ಟಿಲೇರಿದ ಹಲವಾರು ಪ್ರಕರಣಗಳನ್ನು ನೀವು ಕೂಡಾ ನೋಡಿರುತ್ತೀರಿ ಅಲ್ವಾ. ಇಲ್ಲೊಂದು ಅಂತಹದ್ದೇ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, 2006 ರಲ್ಲಿ ವ್ಯಕ್ತಿಯೊಬ್ಬರು ಮಗಳ ಮದುವೆಯ ಸಲುವಾಗಿ ಬೆಂಗಳೂರಿನಲ್ಲಿದ್ದ (Bengaluru) ಸೈಟ್‌ ಒಂದನ್ನು ಮಾರಾಟ ಮಾಡಿದ್ದರು. ಇದೀಗ ಅದೇ ಮಗಳು ನನ್ನ ಒಪ್ಪಿಗೆ ಇಲ್ಲದೆ ಆಸ್ತಿಯನ್ನು ಮಾರಾಟ ಮಾಡಲಾಗಿದೆ, ನನಗೆ ಪರಿಹಾರ ಬೇಕೆಂದು ಖರೀದಿದಾರರ ಬೆನ್ನು ಬಿದ್ದಿದ್ದಾರೆ. ಈ ವಿಚಿತ್ರ ಪ್ರಕರಣದ ಕಥೆಯನ್ನು ಸೈಟ್‌ ಖರೀದಿದಾರರ ಮಗ ರೆಡ್ಡಿಟ್‌ನಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

ಪರಿಹಾರ ಬೇಕೆಂದು ಖರೀದಿದಾರರ ಬೆನ್ನುಬಿದ್ದ ಅದೇ ಮಹಿಳೆ:

ನನ್ನ ತಂದೆ 2006 ರಲ್ಲಿ ಬೆಂಗಳೂರಿನಲ್ಲಿ ಒಂದು ಖರೀದಿಸಿದ್ದರು. ಈಗ ಮಾರಾಟಗಾರನ ಮಗಳು ನಮಗೆ ಲೀಗಲ್‌ ನೋಟಿಸ್‌ ಕಳುಹಿಸಿದ್ದಾರೆ. ಆ ಮಹಿಳೆಯ ಮದುವೆಯ ಸಲುವಾಗಿ 2006 ರಲ್ಲಿ ಆಕೆಯ ತಂದೆ ಸೈಟ್‌ ಮಾರಿದರು. ಅದನ್ನು ನನ್ನ ತಂದೆ ಖರೀದಿ ಮಾಡಿದ್ರು. ಆದ್ರೆ ಈಗ ಆ ಮಹಿಳೆ, ನನ್ನ ಒಪ್ಪಿಗೆಯಿಲ್ಲದೆ ಜಮೀನು ಮಾರಾಟ ಮಾಡಿದ್ದಾರೆ. ಹಾಗಾಗಿ ನನಗೆ ನ್ಯಾಯಯುತ ಪರಿಹಾರ ಬೇಕೆಂದು ಲೀಗಲ್‌ ನೋಟಿಸ್‌ ಕಳುಹಿಸಿದ್ದಾರೆ ಎಂದು ಖರೀದಿದಾರರ ಮಗ ತಮ್ಮ ಅನುಭವವನ್ನು ರೆಡ್ಡಿಟ್‌ನಲ್ಲಿ (HelpfulManagement929) ಹಂಚಿಕೊಂಡಿದ್ದಾರೆ.

ವೈರಲ್‌ ಪೋಸ್ಟ್ ಇಲ್ಲಿದೆ ನೋಡಿ:

ಇದನ್ನೂ ಓದಿ
Image
ಬೆಂಗಳೂರಿನಲ್ಲಿ ಬಾಡಿಗೆ ಮನೆ ಇಷ್ಟೊಂದು ದುಬಾರಿನಾ?
Image
ಕೆಲಸಕ್ಕಿಂತ, ವರನ ಡಿಜಿಟಲ್ ಹಿನ್ನಲೆ ತಿಳಿದುಕೊಳ್ಳಿ ಎಂದ ಯುವತಿ
Image
ಆ್ಯಪ್​​ನಲ್ಲಿ ಆಟೋ ಬುಕ್​​ ಮಾಡಿದ್ರೆ ಟಿಪ್ಸ್​​​ ನೀಡಲೇಬೇಕು
Image
ಅಪರಿಚಿತ ವ್ಯಕ್ತಿಗೆ ಊಟ ಹಾಕಿ ಸತ್ಕರಿಸಿದ ಬೆಂಗಳೂರಿನ ಕುಟುಂಬ

Purchased a plot of land in Bangalore in 2006. Now the seller’s daughter is demanding compensation. byu/HelpfulManagement929 inLegalAdviceIndia

ಈ ಆಸ್ತಿ ಬಿಬಿಎಂಪಿ ಮಿತಿಯಲ್ಲಿದ್ದು, ಮಾರಾಟಗಾರರೇ ಆ ಆಸ್ತಿಯನ್ನು ನೇರವಾಗಿ ನಮಗೆ ಮಾರಾಟ ಮಾಡಿದ್ದಾರೆ. ಮತ್ತು ಇದು ಯಾವುದೇ ಪವರ್‌ ಆಫ್‌ ಅಟಾರ್ನಿ ಒಳಗೊಂಡಿರಲಿಲ್ಲ. ಸೈಟ್‌ ಖರೀದಿ ಮಾಡಿದ ಬಳಿಕ ನಾವು ನಿಯಮಿತವಾಗಿ ತೆರಿಗೆ ಪಾವತಿ ಮಾಡುತ್ತಾ ಬಂದಿದ್ದೇವೆ ಎಂದು ಅವರು ಹೇಳಿದ್ಧಾರೆ.

ʼಕಳೆದ ಕೆಲವು ದಿನಗಳಿಂದ ಮಾರಾಟಗಾರನ ಮಗ ತನ್ನ ಸಹೋದರಿಯೊಂದಿಗೆ ಸ್ವಲ್ಪ ಮೊತ್ತವನ್ನು ಕೇಳುವ ಮೂಲಕ ಪ್ರಕರಣವನ್ನು ಇತ್ಯರ್ಥ ಮಾಡಿಕೊಳ್ಳುವಂತೆ ಕೇಳುತ್ತಿದ್ದಾರೆ. ಆದರೆ ನಾನು ನನ್ನ ವಕೀಲರೊಂದಿಗೆ ಮಾತನಾಡಿದ್ದು, ಅವರು ಈ ಬಗ್ಗೆ ಕಾನೂನುಬದ್ಧವಾಗಿ ಮುಂದುವರಿಯುವುದೇ ಸೂಕ್ತ ಎಂದು ಹೇಳಿದ್ದಾರೆ ಅಂತ ಖರೀದಿದಾರರ ಮಗ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಾಡಿಗೆ ಮನೆ ಇಷ್ಟೊಂದು ದುಬಾರಿನಾ, ಈತ ಕಟ್ಟುವ ಬಾಡಿಗೆ ಕೇಳಿದ್ರೆ ನೀವು ಶಾಕ್ ಆಗ್ತೀರಾ!

ಜೂನ್‌ 19 ರಂದು ಶೇರ್‌ ಮಾಡಲಾದ ಈ ಪೋಸ್ಟ್‌ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರರು ʼಯಾವುದೇ ಕಾರಣಕ್ಕೂ ನೀವು ನೀವೇ ಇತ್ಯರ್ಥ ಮಾಡಬೇಡಿ, ಕಾನೂನು ರೀತಿಯಲ್ಲೇ ನೀವು ಹೋರಾಡಿʼ ಎಂದು ಸಲಹೆ ನೀಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಬೆಂಗಳೂರಿನಲ್ಲಿ ಈಗ ಇದೊಂದು ಹಗರಣವಾಗಿದೆ, ಆನೇಕಲ್‌ನಲ್ಲಿರುವ ನನ್ನ ಸ್ನೇಹಿತ ಕೂಡ ಇದೇ ಸಮಸ್ಯೆಯನ್ನು ಎದುರಿಸುತ್ತಿದ್ದಾನೆʼ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ