AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಭಾಷೆ ನಮ್ಮಿಬ್ಬರ ಬಾಂಧವ್ಯವನ್ನು ಉತ್ತಮಗೊಳಿಸಿತು; ಬೆಂಗಳೂರಿನ ಗಂಡ-ಹೆಂಡ್ತಿ ಸಂಬಂಧ ಬಲಗೊಳಿಸಿದ ಭಾಷಾ ಕಥೆ

ತೆಲುಗು ಮೂಲದ ಮಹಿಳೆಯೊಬ್ಬರು ಸೋಷಿಯಲ್‌ ಮೀಡಿಯಾದಲ್ಲಿ ವಿಶೇಷ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದು, ಹಿಂದಿ ಭಾಷೆ ನಮ್ಮಿಬ್ಬರ ಬಾಂಧವ್ಯವನ್ನು ಉತ್ತಮಗೊಳಿಸಲು ಸಹಾಯ ಮಾಡಿತು ಎಂದು ಹೇಳಿದ್ದಾರೆ. ಹೌದು ತೆಲುಗು ಮೂಲದ ಆ ಮಹಿಳೆ ತಮಿಳು ಮೂಲದ ತಮ್ಮ ಗಂಡನ ಜೊತೆ ಹಿಂದಿ ಭಾಷೆಯಲ್ಲಿ ಮಾತನಾಡುತ್ತಾರಂತೆ. ಮಾತೃ ಭಾಷೆಯನ್ನು ಹೊರತುಪಡಿಸಿ ಇತರೆ ಭಾರತೀಯ ಭಾಷೆಯನ್ನು ಕಲಿಯಲು ನಾನು ಪ್ರತಿಯೊಬ್ಬರನ್ನು ಪ್ರೋತ್ಸಾಹಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಈ ಪೋಸ್ಟ್‌ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಆ ಭಾಷೆ ನಮ್ಮಿಬ್ಬರ ಬಾಂಧವ್ಯವನ್ನು ಉತ್ತಮಗೊಳಿಸಿತು; ಬೆಂಗಳೂರಿನ ಗಂಡ-ಹೆಂಡ್ತಿ ಸಂಬಂಧ ಬಲಗೊಳಿಸಿದ ಭಾಷಾ ಕಥೆ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Jan 13, 2025 | 5:40 PM

Share

ಜನ ತಮಗಾದ ಖುಷಿಯ ವಿಚಾರಗಳ ಬಗ್ಗೆ, ನೋವಿನ ಸಂಗತಿಗಳ ಬಗ್ಗೆ, ಸಮಾಜದಲ್ಲಿ ನಡೆಯುವ ಸರಿ-ತಪ್ಪುಗಳ ವಿಷಯಗಳ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ಗಳನ್ನು ಶೇರ್‌ ಮಾಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ರು ತೆಲುಗು ಮೂಲದ ಮಹಿಳೆ ಅವರು ಹಾಗೂ ಅವರ ಗಂಡನ ನಡುವಿನ ಬಾಂಧವ್ಯವನ್ನು ಉತ್ತಮಗೊಳಿಸಲು ಹಿಂದಿ ಭಾಷೆ ಹೇಗೆ ಸಹಾಯ ಮಾಡಿತು ಎಂಬ ಬಗ್ಗೆ ವಿಶೇಷ ಪೋಸ್ಟ್‌ ಒಂದನ್ನು ಶೇರ್‌ ಮಾಡಿಕೊಂಡಿದ್ದಾರೆ. ನಾನು ತೆಲುಗಿನವಳಾಗಿದ್ದರೆ, ನನ್ನ ಪತಿ ತಮಿಳು ಮೂಲದವರು. ನಾವಿಬ್ಬರೂ ಹಿಂದಿಯಲ್ಲಿಯೇ ಮಾತನಾಡುತ್ತೇವೆ. ಮಾತೃ ಭಾಷೆಯನ್ನು ಹೊರತುಪಡಿಸಿ ಇತರ ಭಾರತೀಯ ಭಾಷೆಗಳನ್ನು ಸಹ ಕಲಿಯಲು ನಾನು ಪ್ರತಿಯೊಬ್ಬರನ್ನು ಪ್ರೋತ್ಸಾಹಿಸುತ್ತೇನೆ ಎಂದು ಹೇಳಿದ್ದಾರೆ. ಈ ಪೋಸ್ಟ್‌ ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಬೆಂಗಳೂರಿನಲ್ಲಿ ನೆಲೆಸಿರುವ ತೆಲುಗು ಮೂಲದ ಸಾಯಿ ಸ್ವರೂಪ ಐಯ್ಯರ್‌ ಎಂಬ ಮಹಿಳೆ ಗಂಡ-ಹೆಂಡ್ತಿ ಸಂಬಂಧವನ್ನು ಬಲಗೊಳಿಸಲು ಹಿಂದಿ ಹೇಗೆ ಸಹಾಯ ಮಾಡಿತು ಎಂಬುದನ್ನು ಹೇಳಿಕೊಂಡಿದ್ದಾರೆ. ಸಾಯಿ ಸ್ವರೂಪ ತೆಲುಗು ಮೂಲದವರಾಗಿದ್ದರೆ, ಅವರ ಪತಿ ತಮಿಳಿಗ. ಇಂತಹ ಸಂದರ್ಭದಲ್ಲಿ ಭಾಷಾ ಅಡೆತಡೆಗಳು ಬರುವುದು ಸಾಮಾನ್ಯ. ಹೀಗಿರುವಾಗ ಈ ಇಬ್ಬರೂ ಇಂಗ್ಲೀಷ್‌ ಭಾಷೆಯಲ್ಲಿ ಪರಸ್ಪರ ಮಾತನಾಡದೇ ಭಾರತೀಯ ಭಾಷೆಗಳಲ್ಲಿ ಒಂದಾದ ಹಿಂದಿ ಭಾಷೆಯಲ್ಲಿ ಪರಸ್ಪರ ಮಾತನಾಡುವ ಮೂಲಕ ತಮ್ಮ ಬಾಂಧವ್ಯವನ್ನು ಗಟ್ಟಿಗೊಳಿಸಿದ್ದಾರಂತೆ.

ವೈರಲ್​​ ಪೋಸ್ಟ್ ಇಲ್ಲಿದೆ ನೋಡಿ:

“ನಾನು ತೆಲುಗು, ನನ್ನ ಪತಿ ತಮಿಳಿಗ. ನಮ್ಮಿಬ್ಬರಿಗೂ ಒಬ್ಬರೊಬ್ಬರ ಭಾಷೆಯನ್ನು ಅರ್ಥ ಮಾಡಿಕೊಳ್ಳುತ್ತಿದ್ದೆವು ಆದರೆ ಮಾತನಾಡಲು ಸಾಧ್ಯವಾಗಿಲ್ಲ. ನಮ್ಮಿಬ್ಬರಿಗೂ ಹಿಂದಿ ಭಾಷೆ ಚೆನ್ನಾಗಿಯೇ ಗೊತ್ತಿತ್ತು. ಹೀಗೆ ಈ ಹಿಂದೆ ನಮ್ಮ ಬಾಂಧವ್ಯವನ್ನು ಉತ್ತಮಗೊಳಿಸಲು ಸಹಾಯ ಮಾಡಿತು. ಮನೆಯೊಳಗಡೆ ಇಂಗ್ಲಿಷ್ ಮಾತನಾಡುವುದು ವಿಚಿತ್ರವೆನಿಸುತ್ತಿತ್ತು. ಆದ ಕಾರಣ ನಾವು ಹಿಂದಿಯಲ್ಲಿಯೇ ಮಾತನಾಡುತ್ತೇವೆ. ಮಾತೃಭಾಷೆಯನ್ನು ಹೊರತು ಪಡಿಸಿ ಇತರ ಭಾರತೀಯ ಭಾಷೆಯನ್ನು ಕಲಿಯಲು ನಾನು ಪ್ರತಿಯೊಬ್ಬರನ್ನೂ ಪ್ರೋತ್ಸಾಹಿಸುತ್ತೇನೆ.

ಅದೇ ಸಮಯದಲ್ಲಿ ಬೆಂಗಳೂರಿನಲ್ಲಿರುವ ಸ್ಥಳೀಯರು ನಮ್ಮೊಂದಿಗೆ ಹಿಂದಿಯೇ ಮಾತನಾಡಬೇಕೆಂದು ಬೇರೆ ಊರುಗಳಿಂದ ಇಲ್ಲಿಗೆ ಬಂದ ಜನ ಬಯಸುತ್ತಿದ್ದಾರೆ ಅಲ್ವಾ ಅದು ಬೇಸರ ತಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪೊಂಗಲ್‌ ಆಚರಣೆಗೆ ಪಂಚೆಯುಟ್ಟು ಸಖತ್‌ ಸ್ಟೆಪ್ಸ್‌ ಹಾಕಿದ ಚೆಸ್‌ ಚಾಂಪಿಯನ್ಸ್;‌ ಮುದ್ದಾದ ವಿಡಿಯೋ ವೈರಲ್‌

Sai_swaroopa ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ಪೋಸ್ಟ್‌ 8.3 ಲಕ್ಷ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼನೀವು ತಮಿಳು ಭಾಷೆಯನ್ನೇ ಕಲಿಯಬಹುದಿತ್ತಲ್ವಾʼ ಎಂದು ಕೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಅದು ಹೇಗೆ ನೀವು ಇಂಗ್ಲಿಷ್‌ ವಿಚಿತ್ರ ಅಂತ ಭಾವಿಸುತ್ತೀರಿ. ಹೆಚ್ಚಿನ ಮನೆಗಳಲ್ಲಿ ಇಂಗ್ಲಿಷ್‌ ಭಾಷೆಯನ್ನೇ ಮಾತನಾಡುತ್ತಾರೆʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಹೌದು ನಾವು ಮಾತೃ ಭಾಷೆಯ ಜೊತೆಗೆ ಇತರೆ ಸ್ಥಳೀಯ ಭಾಷೆಗಳನ್ನು ಕೂಡಾ ಕಲಿಯಬೇಕುʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ