AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

“ಇದು ಕಾರು, ವಿಮಾನವಲ್ಲ”: ನೀವು ಬರುತ್ತಿದ್ದೀರಾ? ಎಂದು ಕೇಳಿದ್ದಕ್ಕೆ ಪ್ರಯಾಣಿಕನ ಮೇಲೆ ಸಿಟ್ಟಾದ ಚಾಲಕ

ಬೆಂಗಳೂರಿನಲ್ಲಿ ಕ್ಯಾಬ್ ಡ್ರೈವರ್‌ಗಳ ವಿಚಿತ್ರ ವರ್ತನೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಪ್ರಯಾಣಿಕರೊಬ್ಬರು ಗೂಗಲ್ ಲಿಂಕ್ ಹಂಚಿಕೊಂಡಾಗ, ಡ್ರೈವರ್ “ಇದು ವಿಮಾನವಲ್ಲ, ಕಾರು!” ಎಂದು ಹೇಳಿ ಬುಕ್ಕಿಂಗ್ ರದ್ದುಗೊಳಿಸಿದ್ದಾರೆ. ಇದೀಗ ಈ ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ನೆಟ್ಟಿಗರು ತಮ್ಮದೇ ಅನುಭವಗಳನ್ನು ಕೂಡ ಇಲ್ಲಿ ಹಂಚಿಕೊಂಡಿದ್ದಾರೆ.

ಇದು ಕಾರು, ವಿಮಾನವಲ್ಲ: ನೀವು ಬರುತ್ತಿದ್ದೀರಾ? ಎಂದು ಕೇಳಿದ್ದಕ್ಕೆ ಪ್ರಯಾಣಿಕನ ಮೇಲೆ ಸಿಟ್ಟಾದ ಚಾಲಕ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Dec 09, 2025 | 9:57 AM

Share

ಬೆಂಗಳೂರು, ಡಿ.9: ಬೆಂಗಳೂರಿನಲ್ಲಿ (Bengaluru) ಕೆಲವೊಂದು ಕ್ಯಾಬ್​​​ ಡ್ರೈವರ್​​​ಗಳು ತಾಳ್ಮೆ ಕಳೆದುಕೊಂಡು ಪ್ರಯಾಣಿಕರಲ್ಲಿ ವಿಚಿತ್ರವಾಗಿ ವರ್ತಿಸುತ್ತಾರೆ.  ಪ್ರಯಾಣಿಕರು ಈ ಬಗ್ಗೆ ಅಷ್ಟೊಂದು ತಲೆಕೆಡಿಸಿಕೊಳ್ಳುದಿಲ್ಲ. ಆದರೆ ಈ ಕ್ಯಾಬ್​​​ ಡ್ರೈವರ್​​​ಗಳು ಯಾಕೆ ಹೀಗೆ ವರ್ತಿಸುತ್ತಾರೆ ಎಂಬ ಪ್ರಶ್ನೆ ಮೂಡುವುದು ಖಂಡಿತ. ಇಲ್ಲೊಂದು ಅಂತಹದೇ ಘಟನೆಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಯಾಣಿಕರೊಬ್ಬರು ಹಂಚಿಕೊಂಡಿದ್ದಾರೆ. ಬೆಂಗಳೂರಿನ ಪ್ರಯಾಣಿಕರೊಬ್ಬರು ಕ್ಯಾಬ್ ಚಾಲಕನೊಂದಿಗೆ ನಡೆದ ಹಾಸ್ಯಮಯ ಸಂಭಾಷಣೆ ಬಗ್ಗೆ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಇದೀಗ ಅದು ಭಾರೀ ವೈರಲ್​​ ಆಗಿದೆ. ಈ ಬಗ್ಗೆ ರೆಡ್ಡಿಟ್‌ನಲ್ಲಿ ಪೋಸ್ಟ್​​ವೊಂದನ್ನು ಹಂಚಿಕೊಂಡಿದ್ದಾರೆ. ಪ್ರಯಾಣಿಕರು ಕ್ಯಾಬ್​​​​ವೊಂದನ್ನು ಬುಕ್​​ ಮಾಡಿ ತಾನಿರುವ ವಿಳಾಸದ ಗೂಗಲ್​​​ ಲಿಂಕ್​​ನ್ನು ಹಂಚಿಕೊಂಡಿದ್ದಾರೆ. ಇದು ಚಾಲಕ ನಿಜವಾಗಿ ಎಲ್ಲಿದ್ದಾರೆ ಎಂಬುದನ್ನು ತಿಳಿಸುತ್ತದೆ. ಇದನ್ನು ಸಾಮಾನ್ಯವಾಗಿ ಎಲ್ಲ ಪ್ರಯಾಣಿಕರು ಮಾಡುತ್ತಾರೆ.

ಇದನ್ನು ಹಂಚಿಕೊಂಡ ನಂತರ ಎಲ್ಲಿದ್ದೀರಾ? ಎಂದು ಕೇಳಿದ್ದಕ್ಕೆ, ಚಾಲಕ ಸರಿಯಾಗಿ ಮಂಗಳಾರತಿ ಮಾಡಿದ್ದಾರೆ. ಇದು ವಿಮಾನವಲ್ಲ, ಕಾರು ಎಂದು ಬುಕಿಂಗ್​​​ ಅನ್ನು ಕ್ಯಾನ್ಸಲ್​​ ಮಾಡಿದ್ದಾರೆ. ಚಾಲಕನ ಈ ವರ್ತನೆಗೆ ಪ್ರಯಾಣಿಕ ಗೊಂದಲಕ್ಕೆ ಒಳಗಾಗಿದ್ದು,  ಈ ಬಗ್ಗೆ ಪ್ರಯಾಣಿಕ ರೆಡ್ಡಿಟ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. “ನಾನು ಕಾರು ಬುಕ್​​ ಮಾಡಿ, ನೀವು ಬರುತ್ತಿದ್ದೀರಾ ಎಂದು ಕೇಳಿದಕ್ಕೆ, ಅಷ್ಟೊಂದು ಅರ್ಜೆಂಟ್​​ ಇದ್ದರೆ ಇನ್ನೊಂದು ಬುಕ್ ಮಾಡಿ. ಇದು ವಿಮಾನವಲ್ಲ, ಎಂದು ಬುಕಿಂಗ್​​​ ರದ್ದು ಮಾಡಿದ್ದಾರೆ. ಚಾಲಕ ಮಾಡಿದ್ದು ಸರಿಯೇ ಎಂದು ನೀವೇ ಕಮೆಂಟ್​​ ಮಾಡಿ” ಎಂದು ಪೋಸ್ಟ್​​​ನ್ನು ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಷನ್ ಶೋನಲ್ಲಿ ಜಿನ್ನಾ ಮರಿಮೊಮ್ಮಗಳು: ಹಾಟ್ ಆಗಿ ಕಾಣಿಸಿಕೊಂಡ ಎಲ್ಲಾ ವಾಡಿಯಾ

ಇಲ್ಲಿದೆ ನೋಡಿ ವೈರಲ್​​ ಪೋಸ್ಟ್:

My Uber driver is not in a good mood byu/hariprasadrangan inBengaluru

ಈ ಬಗ್ಗೆ ರೆಡ್ಡಿಟ್​​ನ್ಲಲಿ ನೆಟ್ಟಿಗರು ಕೂಡ ತಮಗೆ ಆಗಿರುವ ಅನುಭವಗಳನ್ನು ಹಂಚಿಕೊಂಡಿದ್ದಾರೆ. ನಾನು ಒಮ್ಮೆ ಅದೇ ಪರಿಸ್ಥಿತಿಯಲ್ಲಿದ್ದೆ ಉಬರ್ ಚಾಲಕನಿಗೆ ಕರೆ ಮಾಡಿ ಪದೇ ಪದೇ ವಿಚಾರಿಸುತ್ತಿದ್ದೆ, ಕೆಲವೊಂದು ಬಾರಿ ಆಪ್ಲಿಕೇಶನ್​​ ಸರಿಯಾದ ಮಾಹಿತಿಯನ್ನು ನೀಡುವುದಿಲ್ಲ. ಚಾಲಕನಿಗೆ ಕರೆ ಮಾಡಿದಾಗ ಅವರು ಸಿಟ್ಟಿನಿಂದ ನಾನು ಬರುತ್ತಿದ್ದೇನೆ, ಇದು ಹೆಲಿಕಾಪ್ಟರ್ ಅಲ್ಲ ಎಂದು ಹೇಳಿದ್ದಾರೆ. ಅದಕ್ಕೆ ನಾನು ಕೂಡ ಖಡಕ್​​ ಆಗಿ ಉತ್ತರಿಸಿದೆ, ಓ ದೇವರೇ, ನಾನು ಹೆಲಿಕಾಪ್ಟರ್ ಬುಕ್ ಮಾಡಿದೆ ಎಂದು ಭಾವಿಸಿದೆ ಎಂದು ಒಬ್ಬರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ. ಇದು ನನಗೆ ನಗು ತರಿಸಿತು ಎಂದು ಮತ್ತೊಬ್ಬರು ಕಮೆಂಟ್​ ಮಾಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ