AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಏರ್‌ಪೋರ್ಟ್ ಟರ್ಮಿನಲ್-2‌ರ ಸೌಂದರ್ಯವನ್ನು ಕಂಡು ಶಾಕ್‌ ಆದ ಜಪಾನ್‌ ಮಹಿಳೆ; ವಿಡಿಯೋ ವೈರಲ್‌

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2 ವಿಶ್ವದ ಅತ್ಯಂತ ಸುಂದರ ವಿಮಾನ ನಿಲ್ದಾಣಗಳಲ್ಲಿ ಒಂದೆಂದು ಗುರುತಿಸಲ್ಪಟ್ಟಿದೆ. ಇದೀಗ ಈ ಸುಂದರ ಏರ್‌ಪೋರ್ಟ್‌ಗೆ ಸಂಬಂಧಿಸಿದ ವಿಡಿಯೋವೊಂದು ವೈರಲ್‌ ಆಗುತ್ತಿದೆ. ಮೊದಲ ಬಾರಿಗೆ ಬೆಂಗಳೂರು ಏರ್‌ಪೋರ್ಟ್‌ನ ಟರ್ಮಿನಲ್‌ 2 ರಲ್ಲಿ ಬಂದಿಳಿದ ಜಪಾನ್‌ ಮಹಿಳೆಯೊಬ್ಬರು ಅಲ್ಲಿನ ಸೊಬಗನ್ನು ಕಂಡು ಫುಲ್‌ ಶಾಕ್‌ ಆಗಿದ್ದು, ಅರೇ ನಾನು ಭಾರತದಲ್ಲಿನ ಏರ್‌ಪೋರ್ಟ್‌ನಲ್ಲಿ ಇದ್ದೇನೆಂದು ನಂಬಲಾಗುತ್ತಿಲ್ಲ ಎಂದು ಹೇಳಿದ್ದಾರೆ.

ಮಾಲಾಶ್ರೀ ಅಂಚನ್​
| Edited By: |

Updated on: Nov 14, 2024 | 12:05 PM

Share

ಗ್ರೀನ್‌ ಏರ್‌ಪೋರ್ಟ್‌ ಪರಿಕಲ್ಪನೆಯಲ್ಲಿ ನಿರ್ಮಾಣವಾದ ನಮ್ಮ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌-2 ವಿಶ್ವದ ಅತ್ಯಂತ ಸುಂದರ ವಿಮಾನ ನಿಲ್ದಾಣ ಅಂತಾನೇ ಹೇಳಬಹುದು. ಹಚ್ಚ ಹಸಿರಿನಿಂದ ಕೂಡಿದ ಈ ಪರಿಸರ ಸ್ನೇಹಿ ಏರ್‌ಪೋರ್ಟ್‌ ಸೌಂದರ್ಯಕ್ಕೆ ಮನಸೋಲದವರೇ ಇಲ್ಲ. ಇದೀಗ ಮೊದಲ ಬಾರಿಗೆ ಈ ವಿಮಾನ ನಿಲ್ದಾಣಕ್ಕೆ ಭೇಟಿ ಕೊಟ್ಟಂತಹ ಜಪಾನ್‌ ಮಹಿಳೆಯೊಬ್ಬರೂ ಕೂಡಾ ಇಲ್ಲಿನ ಸೌಂದರ್ಕ್ಕೆ ಮಾರು ಹೋಗಿದ್ದು, ಅರೇ ಭಾರತದ ವಿಮಾನ ನಿಲ್ದಾಣದಲ್ಲಿ ಇದ್ದೇನೆಂದು ನಂಬಲಾಗುತ್ತಿಲ್ಲ ಎನ್ನುತ್ತಾ ಫುಲ್‌ ಶಾಕ್‌ ಆಗಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಜಪಾನಿನ ಟ್ರಾವೆಲ್‌ ವ್ಲಾಗರ್‌ ಕಿಕಿ ಚೆನ್‌ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2 ರಲ್ಲಿ ಬಂದಿಳಿದಾಗ ಇಲ್ಲಿನ ಅದ್ಭುತ ಸೌಂದರ್ಯವನ್ನು ಕಂಡು ದಿಗ್ಭ್ರಮೆಗೊಂಡಿದ್ದಾರೆ. ಈ ಕುರಿತ ವಿಡಿಯೋವನ್ನು ಆಶೇಂದ್ರ ಪಾಟೇಲ್‌ (IamAshendra) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಜಪಾನ್‌ ಟ್ರಾವೆಲ್‌ ವ್ಲೋಗರ್‌ ಬೆಂಗಳೂರು ಏರ್‌ಪೋರ್ಟ್‌ನ ಟರ್ಮಿನಲ್‌ 2 ರ ಸೊಬಗನ್ನು ಕಂಡು ಮನಸೋತಂತಹ ದೃಶ್ಯವನ್ನು ಕಾಣಬಹುದು. ಆಕೆ ಏರ್‌ಪೋರ್ಟ್‌ನಲ್ಲಿರುವ ಈವೆಂಟ್‌ ಸ್ಪೇಸ್‌, ನಿಕೋಬಾರ್‌ ಲೌಂಜ್‌, ಎಂಟರ್ಟೈನ್ಮೆಂಟ್‌ ಏರಿಯಾಗಳನ್ನೆಲ್ಲಾ ತಿರುಗಾಡುತ್ತಾ ನಾನು ಭಾರತದಲ್ಲಿನ ವಿಮಾನ ನಿಲ್ದಾಣದಲ್ಲಿ ಇದ್ದೇನೆಂದು ನನಗೆ ನಂಬಲಾಗುತ್ತಿಲ್ಲ ಎನ್ನುತ್ತಾ ಏರ್‌ಪೋರ್ಟ್‌ ಸೌಂದರ್ಯವನ್ನು ಕಂಡು ಮನಸೋತಿದ್ದಾರೆ.

ಇದನ್ನೂ ಓದಿ:  ಹಲ್ಲುಜ್ಜುವಾಗ ಆಕಸ್ಮಿಕವಾಗಿ ಬ್ರಶ್ ನುಂಗಿದ ಮಹಿಳೆ

ನವೆಂಬರ್‌ 13 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼವಾವ್ಹ್‌ ನಿಜಕ್ಕೂ ಈ ಏರ್‌ಪೋರ್ಟ್‌ ಅದ್ಭುತವಾಗಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಆಹಾ ಸುಂದರ ದೃಶ್ಯʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಈ ವಿಡಿಯೋವನ್ನು ನಮ್ಮೊಂದಿಗೆ ಹಂಚಿಕೊಂಡಿದ್ದಕ್ಕಾಗಿ ಧನ್ಯವಾದಗಳುʼ ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್