AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ನವವಿವಾಹಿತ ಜೋಡಿಯನ್ನು ಕಂಡೊಡನೆ ಶುಭಾಶಯ ಕೋರಿದ ಶಾಲಾ ಬಸ್ಸಿನಲ್ಲಿದ್ದ ಪುಟಾಣಿಗಳು

ಮದುವೆ ಎನ್ನುವುದು ಪ್ರತಿಯೊಬ್ಬರ ಜೀವನದ ಪ್ರಮುಖಘಟ್ಟಗಳಲ್ಲಿ ಒಂದು. ಈ ಸಮಯದಲ್ಲಿ ಅನಿರೀಕ್ಷಿತ ಘಟನೆಗಳು ಈ ಕ್ಷಣವನ್ನು ಇನ್ನಷ್ಟು ಸುಂದರವಾಗಿಸುತ್ತದೆ. ಹೌದು, ಬೆಂಗಳುರಿನ ನವವಿವಾಹಿತ ಜೋಡಿಗೆ ಶಾಲಾ ಮಕ್ಕಳು ಶುಭಾಶಯ ಕೋರಿದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ನವವಿವಾಹಿತ ಜೋಡಿಯನ್ನು ಕಂಡೊಡನೆ ಶುಭಾಶಯ ಕೋರಿದ ಶಾಲಾ ಬಸ್ಸಿನಲ್ಲಿದ್ದ ಪುಟಾಣಿಗಳು
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Feb 18, 2026 | 12:50 PM

Share

ಬೆಂಗಳೂರು, ಫೆಬ್ರವರಿ 18: ಮದುವೆಯಾಗುವ ಪ್ರತಿಯೊಬ್ಬ ಹೆಣ್ಣು ಗಂಡಿಗೂ ಒಂದಷ್ಟು ಆಸೆ ಆಕಾಂಕ್ಷೆಯಿರುವುದು ಸಹಜ. ಮದುವೆಯ (marriage) ಬಗ್ಗೆ ಸಾಕಷ್ಟು ಕನಸು ಕಾಣುತ್ತಾರೆ. ಆದರೆ ಕೆಲವು ಘಟನೆಗಳು ಹೊಸ ಜೀವನಕ್ಕೆ ಕಾಲಿಟ್ಟ ಕ್ಷಣವನ್ನು ನೆನಪಿನಲ್ಲಿ ಬುತ್ತಿಯಲ್ಲಿ ಶಾಶ್ವತವಾಗಿರುವಂತೆ ಮಾಡುತ್ತದೆ. ಬೆಂಗಳೂರಿನಲ್ಲಿ ನವವಿವಾಹಿತ ದಂಪತಿಗೆ ಶಾಲಾ ಬಸ್ಸಿನಲ್ಲಿದ್ದ ಮಕ್ಕಳು (children) ಶುಭಾಶಯಗಳನ್ನು ಕೋರಿದ್ದಾರೆ. ಮಕ್ಕಳ ಅನಿರೀಕ್ಷಿತ ಶುಭಾಶಯಗಳು ದಂಪತಿಗಳ ಮೊಗದಲ್ಲಿ ನಗು ಮೂಡಿಸಿದೆ. ಈ ಹೃದಯಸ್ಪರ್ಶಿ ಕ್ಷಣದ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನೆಟ್ಟಿಗರು ಈ ವಿಡಿಯೋ ನೋಡಿ ಖುಷಿ ಪಟ್ಟಿದ್ದಾರೆ.

ಹಿಮಾ ಜಿ (Hima G) ಎಂಬ ಮಹಿಳೆ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದು, ಈ ವೀಡಿಯೋದ ಶೀರ್ಷಿಕೆಯಲ್ಲಿ ಯಾದೃಚ್ಛಿಕವಾಗಿ ಶಾಲಾ ಬಸ್ ಆಶೀರ್ವಾದವಾಗಿ ಬದಲಾದಾಗ. ಮದುವೆ ಮಂಟಪಕ್ಕೆ ಹೋಗುವ ದಾರಿಯಲ್ಲಿ, ಒಂದು ಶಾಲಾ ಬಸ್ ಹಾದುಹೋಯಿತು. ಇದ್ದಕ್ಕಿದ್ದಂತೆ ಇಡೀ ಬಸ್ ನಲ್ಲಿದ್ದ ಮಕ್ಕಳು ‘ಹ್ಯಾಪಿ ಮ್ಯಾರೇಜ್ಡ್ ಲೈಫ್!’ ಎಂದು ಕೂಗಲು ಪ್ರಾರಂಭಿಸಿದರು. ಜೋರಾದ ಧ್ವನಿಯಲ್ಲಿ ತುಂಬಾನೇ ಶುದ್ಧವಾಗಿತ್ತು. ಹಾಗೂ ಅನಿರೀಕ್ಷಿತವಾಗಿತ್ತು. ನಾನು ಅದನ್ನು ರೆಕಾರ್ಡ್ ಮಾಡಲು ಸಹ ಸಾಧ್ಯವಾಗಲಿಲ್ಲ. ಆದರೆ ಆ ಕ್ಷಣ ನಮ್ಮ ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತದೆ. ಶುದ್ಧ ಆಶೀರ್ವಾದಗಳು ನಿಜವಾಗಿಯೂ ಪುಟ್ಟ ಹೃದಯಗಳಿಂದ ಬರುತ್ತವೆ. ನೀವಿಬ್ಬರೂ ನಿಜವಾಗಿಯೂ ಧನ್ಯರು … ಪ್ರತಿಯೊಬ್ಬರೂ ತಮ್ಮ ಪ್ರಮುಖ ದಿನದಂದು ಅಂತಹ ಶುದ್ಧ, ಮುಗ್ಧ ಆಶೀರ್ವಾದಗಳನ್ನು ಪಡೆಯುವುದಿಲ್ಲ ಎಂದು ಬರೆಯಲಾಗಿದೆ.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by Hima G (@himaoncam)

ಈ ವಿಡಿಯೋದಲ್ಲಿ ನವ ಜೋಡಿಯೂ ತಮ್ಮ ಮದುವೆ ಮಂಟಪದ ಕಡೆಗೆ ನಡೆದುಕೊಂಡು ಹೋಗುತ್ತಿರುವುದನ್ನು ತೋರಿಸಲಾಗಿದೆ. ಆ ಸಮಯದಲ್ಲಿ ಅದೇ ಮಾರ್ಗದಲ್ಲಿ ಹಾದುಹೋಗುತ್ತಿದ್ದ ಶಾಲಾ ಬಸ್‌ನಲ್ಲಿದ್ದ ಮಕ್ಕಳು ಈ ನವಜೋಡಿಗೆ ಶುಭಾಶಯ ಕೋರಿದ್ದಾರೆ. ಬಸ್ಸಿನೊಳಗಿದ್ದ ಮಕ್ಕಳು “ಹ್ಯಾಪಿ ಮ್ಯಾರೇಜ್ ಲೈಫ್!” ಎಂದು ಒಂದೇ ಸಮನೇ ಕೂಗಲು ಪ್ರಾರಂಭಿಸಿದ್ದಾರೆ. ಮುಗ್ಧ ಮನಸ್ಸಿನ ಮಕ್ಕಳು ಮನಸಾರೆ ಶುಭಾಶಯ ಕೋರಿದ್ದನ್ನು ನೋಡಿ ಮದುಮಗನು ಖುಷಿಯಲ್ಲಿ ನಗುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಕಡಲ್ ಥೆರಪಿ ಟ್ರೆಂಡ್: ಇಲ್ಲಿ ಅಪ್ಪಿಕೊಳ್ಳುತ್ತಾರೆ, ಕೈ ಹಿಡಿಯುತ್ತಾರೆ, ಗಂಟೆಗೆ 5,000 ರೂ.

ಈ ವಿಡಿಯೋ ಮೂರು ಮಿಲಿಯನ್ ಅಧಿಕ ವೀಕ್ಷಣೆಗಳನ್ನು ಕಂಡಿವೆ. ಒಬ್ಬ ಬಳಕೆದಾರ, ಇದು ಹಣದಿಂದ ಖರೀದಿಸಲು ಸಾಧ್ಯವಾಗದ ಆಶೀರ್ವಾದ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಮಕ್ಕಳು ಶುದ್ಧ ಮನಸ್ಸಿನಿಂದ ಆಶೀರ್ವಾದ ಮಾಡಿದ್ದಾರೆ, ನಿಮಗೆ ಒಳ್ಳೆಯದು ಆಗಲಿ ಎಂದು ಹೇಳಿದ್ದಾರೆ. ಇನ್ನೊಬ್ಬರು, ನೀವು ಶಾಶ್ವತವಾಗಿ ನೆನಪಿಸಿಕೊಳ್ಳುವ ಕ್ಷಣಗಳು” ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ