AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬೆಂಗಳೂರಿನ ಈ ಭಾಗದಲ್ಲೇ ಟ್ರಾಫಿಕ್​​ ಹೆಚ್ಚು, ವೈರಲ್ ಆಯ್ತು ಪೋಸ್ಟ್

ಬೆಂಗಳೂರು ಎಂದರೆ ಮೊದಲು ನೆನಪಾಗುವುದೇ ಟ್ರಾಫಿಕ್, ಆದರೆ ಇದೀಗ ಪೂರ್ವ ಹಾಗೂ ಪಶ್ಚಿಮ ಬೆಂಗಳೂರಿನ ಸಂಚಾರ ದಟ್ಟಣೆಯಲ್ಲಿನ ವ್ಯತ್ಯಾಸವು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ. ಬೆಂಗಳೂರಿನ ಈ ಎರಡು ಭಾಗಗಳಲ್ಲಿ ಸಂಚಾರ ದಟ್ಟಣೆ ಹೇಗಿದೆ ಎನ್ನುವ ಸ್ಕ್ರೀನ್ ಶಾಟ್ ಒಳಗೊಂಡ ಪೋಸ್ಟ್ ಸದ್ಯ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಬೆಂಗಳೂರಿನ ಈ ಭಾಗದಲ್ಲೇ ಟ್ರಾಫಿಕ್​​ ಹೆಚ್ಚು, ವೈರಲ್ ಆಯ್ತು ಪೋಸ್ಟ್
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on:Sep 24, 2025 | 10:29 AM

Share

ಬೆಂಗಳೂರು, ಸೆಪ್ಟೆಂಬರ್ 24: ಟ್ರಾಫಿಕ್ ಟ್ರಾಫಿಕ್ ಟ್ರಾಫಿಕ್ ಹೀಗೆನ್ನುತ್ತಿದ್ದಂತೆ ಕಣ್ಣ ಮುಂದೆ ಬರುವುದೇ ಬೆಂಗಳೂರು (Bengaluru) . ಮಾಯಾನಗರಿ ಬೆಂಗಳೂರಿನಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೌದು, ಬೆಳಗ್ಗೆ ಕೆಲಸ ಹೋಗುವ ಮತ್ತು ಸಂಜೆ ಕೆಲಸದಿಂದ ವಾಪಸ್‌ ಆಗುವಂತಹ ಪೀಕ್‌ ಟೈಮ್‌ಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಿರುತ್ತದೆ. ಹೀಗಾಗಿ ವಾಹನ ಸವಾರರಂತೂ ಈ ಟ್ರಾಫಿಕ್‌ನಲ್ಲಿ ಸಿಲುಕಿ ಸುಸ್ತಾಗಿ ಹೋಗ್ತಾರೆ. ಇದೀಗ ವೈರಲ್ ಆಗಿರುವ ಪೋಸ್ಟ್ ಬೆಂಗಳೂರಿನ ಸುಧಾರಿತ ಸಾರ್ವಜನಿಕ ಸಾರಿಗೆ ಅಗತ್ಯತೆಯನ್ನು ಎತ್ತಿ ತೋರಿಸುತ್ತಿದೆ. ಪೂರ್ವ ಹಾಗೂ ಪಶ್ಚಿಮ ಬೆಂಗಳೂರಿನ ಸಂಚಾರ ದಟ್ಟಣೆಯಲ್ಲಿನ ವ್ಯತ್ಯಾಸವು ಹೊಸ ಚರ್ಚೆಗೆ ನಾಂದಿ ಹಾಡಿದೆ. ಎರಡು ಭಾಗವು ಬೆಂಗಳೂರಿಗೆ ಸೇರಿದ್ರು ಟ್ರಾಫಿಕ್ ಜಾಮ್ ಹೇಗಿರುತ್ತದೆ ಎನ್ನುವುದನ್ನು ಗೂಗಲ್ ಮ್ಯಾಪ್‌ನ ಸ್ಕ್ರೀನ್ ಶಾಟ್ (Screen shot of Google map) ಎತ್ತಿ ತೋರಿಸುತ್ತಿದೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಬಳಕೆದಾರರು ಪಶ್ಚಿಮ ಬೆಂಗಳೂರಿನಲ್ಲಿ ನೆಲೆಸಿರುವವರು ನಿಜಕ್ಕೂ ಸೇಫ್ ಎನ್ನುತ್ತಿದ್ದಾರೆ.

ಪ್ಲಸ್ ಆಫ್ ಬೆಂಗಳೂರು (PluseOfBengaluru) ಹೆಸರಿನ ಎಕ್ಸ್ ಖಾತೆಯಲ್ಲಿ ಶೇರ್ ಮಾಡದಲಾದ ಪೋಸ್ಟ್ ನಲ್ಲಿ ಗೂಗಲ್ ಮ್ಯಾಪ್ ಸ್ಕ್ರೀನ್ ಶಾಟ್‌ನಲ್ಲಿ ಪೂರ್ವ ಹಾಗೂ ಪಶ್ಚಿಮ ಬೆಂಗಳೂರಿನ ಸಂಚಾರ ದಟ್ಟಣೆ ಹೇಗಿದೆ ಎಂದು ನೋಡಬಹುದು. ಪೂರ್ವ ಬೆಂಗಳೂರು ಸಂಚಾರ ದಟ್ಟಣೆಯಿಂದ ಗಾಢ ಕೆಂಪು ಬಣ್ಣದಲ್ಲಿ ಗುರುತಿಸಲ್ಪಟ್ಟಿದ್ದರೆ, ಪಶ್ಚಿಮ ಬೆಂಗಳೂರು ಸಂಪೂರ್ಣವಾಗಿ ಹಸಿರು ಬಣ್ಣದಲ್ಲಿ ಕಾಣಿಸಿಕೊಂಡಿದ್ದು, ಮುಕ್ತ ಸಂಚಾರವನ್ನು ಹೊಂದಿದೆ. ಪಶ್ಚಿಮ ಬೆಂಗಳೂರಿನ ರಾಜಾಜಿನಗರ, ವಿಜಯನಗರ ಮತ್ತು ಕೆಂಗೇರಿಯಂತಹ ಭಾಗಗಳಲ್ಲಿ ಸಂಚಾರ ದಟ್ಟಣೆ ಅಷ್ಟಿಲ್ಲದಿದ್ದರೂ ವೈಟ್‌ಫೀಲ್ಡ್, ಕೆಆರ್ ಪುರಂ ಮತ್ತು ಮಾರತಹಳ್ಳಿಯಂತಹ ಪ್ರದೇಶಗಳಲ್ಲಿ ದೈನಂದಿನ ದಟ್ಟಣೆಯೂ ಹೆಚ್ಚಿದೆ.

ಇದನ್ನೂ ಓದಿ
Image
ಇದು ವಾಹನಕ್ಕಲ್ಲ, ಕೋಣ ಓಡಿಸಲು ಸೂಕ್ತವಾದ ರಸ್ತೆ
Image
ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ನದಿಯಂತಾದ ಬೆಂಗಳೂರಿನ ಫ್ಲೈಓವರ್​!
Image
ವಾಸಯೋಗ್ಯಕ್ಕೆ ಗುರುಗಾಂವ್‌ಗಿಂತ ಬೆಂಗಳೂರು ಬೆಸ್ಟ್
Image
ಇದು ಬೆಂಗಳೂರಿನ ರಸ್ತೆಗುಂಡಿಗಳ ದುಸ್ಥಿತಿ ಎಂದ ವಿದ್ಯಾರ್ಥಿನಿಯರು

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

ಇದನ್ನೂ ಓದಿ:Video: ಇದು ವಾಹನಕ್ಕಲ್ಲ, ಕೋಣ ಓಡಿಸಲು ಸೂಕ್ತವಾದ ರಸ್ತೆ

ಸೆಪ್ಟೆಂಬರ್ 19 ರಂದು ಶೇರ್ ಮಾಡಲಾದ ಈ ಪೋಸ್ಟ್ ನಲವತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದು ಕೊಂಡಿವೆ. ಒಬ್ಬ ಬಳಕೆದಾರ ಪಶ್ಚಿಮದಲ್ಲಿರುವ ಆ ಪ್ರದೇಶಗಳು ಶುದ್ಧವಸತಿ ಪ್ರದೇಶಗಳಾಗಿವೆ. ಅವುಗಳಿಗೆ ಹೋಲಿಸುವುದು ಸರಿಯಲ್ಲ ಎಂದು ನಾನು ಭಾವಿಸುತ್ತೇನೆ. (ಕೈಗಾರಿಕೆಗಳು ಯಶವಂತಪುರದ ಸುತ್ತಮುತ್ತ ಹೆಚ್ಚಿವೆ) ಅಲ್ಲಿ ಯಾವಾಗಲೂ ಜನದಟ್ಟಣೆ ಇರುತ್ತದೆ ಎಂದಿದ್ದಾರೆ. ಇನ್ನೊಬ್ಬರು ಹೆಚ್ಚಿನ ಜನರು ಪಶ್ಚಿಮ ಬೆಂಗಳೂರಿನಿಂದ ಪೂರ್ವ ಬೆಂಗಳೂರಿನತ್ತ ಪ್ರಯಾಣಿಸುತ್ತಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಪಶ್ಚಿಮ ಬೆಂಗಳೂರ ವ್ಯರ್ಥ ಬೆಂಗಳೂರು, ದಯವಿಟ್ಟು ಪರಿಗಣಿಸಬೇಡಿ, ಅದನ್ನು ಹೋಲಿಸಬೇಡಿ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:29 am, Wed, 24 September 25

Follow Us
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ