AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬೆಂಗಳೂರಿನಲ್ಲಿ ತಮ್ಮ ತಿಂಗಳ ಖರ್ಚು ಎಷ್ಟೆಂದು ರಿವೀಲ್ ಮಾಡಿದ ದಂಪತಿ

ಬೆಂಗಳೂರಿನಲ್ಲಿ ಬದುಕೋದು ತುಂಬಾನೇ ಕಷ್ಟ. ಎಷ್ಟೇ ದುಡಿದ್ರೂ ತಿಂಗಳ ಕೊನೆಯಲ್ಲಿ ಕೈಯಲ್ಲಿ ಹಣವೇ ಉಳಿಯಲ್ಲ. ಬೆಂಗಳೂರಿನ ದಂಪತಿಯದ್ದು ಇದೇ ಪರಿಸ್ಥಿತಿ. ಇವರು ಇಲ್ಲಿ ಬದುಕುವವರ ವಾಸ್ತವ ಸ್ಥಿತಿಯನ್ನು ಬಿಚ್ಚಿಟ್ಟಿದ್ದಾರೆ. ಲಕ್ಷಾನುಗಟ್ಟಲೆ ರೂಪಾಯಿ ಇದ್ರೂ ಸಾಲಲ್ಲ ಎಂದು ವಿವರಿಸಿದ್ದಾರೆ. ಈ ಕುರಿತಾದ ವಿಡಿಯೋ ವೈರಲ್ ಆಗುತ್ತಿದೆ.

Video: ಬೆಂಗಳೂರಿನಲ್ಲಿ ತಮ್ಮ ತಿಂಗಳ ಖರ್ಚು ಎಷ್ಟೆಂದು ರಿವೀಲ್ ಮಾಡಿದ ದಂಪತಿ
ವೈರಲ್ ವಿಡಿಯೋImage Credit source: Instagram
ಸಾಯಿನಂದಾ
|

Updated on:Sep 05, 2025 | 12:10 PM

Share

ಬಹುತೇಕರಿಗೆ ಬೆಂಗಳೂರು (Bengaluru) ಅಂದ್ರೆ ದುಬಾರಿ, ಇಲ್ಲಿ ಜೀವನ ನಡೆಸೋದು ಕಷ್ಟ ಎನ್ನುತ್ತಾರೆ. ಹೀಗಾಗಿ ಕೆಲಸಕ್ಕೆಂದು ಇಲ್ಲಿಗೆ ಬರುವವರು ದುಡಿದ ಸಂಪಾದನೆಯಲ್ಲಿ ಅಷ್ಟೋ ಇಷ್ಟೋ ಖರ್ಚು ಮಾಡಿ ತಮ್ಮ ಇತಿಮಿತಿಯಲ್ಲಿ ಇರುತ್ತಾರೆ. ಆದರೆ ದಂಪತಿಗಳಿಗೆ ಇಲ್ಲಿ ಜೀವನ ನಡೆಸೋದು ಅಷ್ಟು ಸುಲಭವಲ್ಲ. ಬಾಡಿಗೆ, ವಿದ್ಯುತ್ ಬಿಲ್, ಸಾರಿಗೆ ಹಾಗೂ ದಿನಸಿ ಸಾಮಾನು ಎಂದು ಕೈಯಲ್ಲಿದ್ದ ದುಡ್ಡು ನೀರಿನಂತೆ ಹರಿದು ಹೋಗುತ್ತದೆ. ಬೆಂಗಳೂರಿನಲ್ಲಿ ನೆಲೆಸಿರುವ ದಂಪತಿ ತಮ್ಮ ಖರ್ಚು ವೆಚ್ಚಗಳನ್ನು ಲೆಕ್ಕ ಹಾಕಿದ್ದು ಆಗಸ್ಟ್ ತಿಂಗಳ (August Month) ಒಟ್ಟು ಖರ್ಚು ಎಷ್ಟಾಯಿತು ಎಂದು ಬಹಿರಂಗ ಪಡಿಸಿದ್ದಾರೆ. ಈ ಕುರಿತಾದ ಪೋಸ್ಟ್ ಸಖತ್ ವೈರಲ್ ಆಗಿದ್ದು, ನೆಟ್ಟಿಗರು ಇದನ್ನು ನೋಡಿ ಶಾಕ್ ಆಗಿದ್ದಾರೆ.

ಆಗಸ್ಟ್ ತಿಂಗಳ ಒಟ್ಟು ಖರ್ಚು ಎಷ್ಟೆಂದು ರಿವೀಲ್ ಮಾಡಿದ ದಂಪತಿ

ಇದನ್ನೂ ಓದಿ
Image
ಅತುಲ್‌ ಪತ್ನಿ ನಾಪತ್ತೆ; ಬೆಂಗಳೂರಿನಲ್ಲಿ ಗಮನ ಸೆಳೆಯುತ್ತಿದೆ ಈ ಜಾಹೀರಾತು
Image
ಈಜುಕೊಳದಂತಾದ ಬೆಂಗಳೂರು ಡಬಲ್ ಡೆಕ್ಕರ್ ಫ್ಲೈಓವರ್: ವಿಡಿಯೋ ವೈರಲ್
Image
ಬೆಂಗಳೂರಿನಲ್ಲಿ 2BHK ಮನೆಯ ತಿಂಗಳ ಬಾಡಿಗೆ ಕೇಳಿದ್ರೆ ಶಾಕ್ ಆಗ್ತೀರಾ
Image
ಬೆಂಗಳೂರಿನ ಸ್ಕೂಲ್‌ನಲ್ಲಿ ಒಂದನೇ ತರಗತಿ ಫೀಸ್ ಬರೋಬ್ಬರಿ 7.35 ಲಕ್ಷ ರೂ

eacapetolandscapes ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಲಾದ ಈ ವಿಡಿಯೋದಲ್ಲಿ ಬೆಂಗಳೂರಿನಲ್ಲಿ ನೆಲೆಸಿರುವ ದಂಪತಿ ತಮ್ಮ ತಿಂಗಳ ಒಟ್ಟು ಖರ್ಚು ಎಷ್ಟಾಗುತ್ತದೆ ಎಂದು ಹೇಳಿದ್ದಾರೆ. ಮನೆ ಬಾಡಿಗೆ 42,000 ರೂ, ಫಿಟ್ನೆಸ್ 40,000 ರೂ (ಪರ್ಸನಲ್ ಟ್ರೇನರ್ ಹಾಗೂ ಪಿಲೇಟ್ಸ್ ಸೆಷನ್), ದಿನಸಿಗೆ ರೂ 20,000, ದಿನನಿತ್ಯದ ಅಗತ್ಯಗಳು 10,000 ರೂ (ಮನೆಕೆಲಸದಾಕೆಯ ವೆಚ್ಚ, ಒಟಿಟಿ, ಅಗತ್ಯ ವೆಚ್ಚಗಳು) ಆಹಾರ 13,000 ರೂ (ಆನ್ಲೈನ್ ಆರ್ಡರ್ + ಔಟ್‌ಸೈಡ್ ತಿನ್ನೋದು), ಟ್ರಾವೆಲ್ 3,50,000 ರೂ (2 ಅಂತರಾಷ್ಟ್ರೀಯ + 2 ದೇಶೀಯ ಪ್ರವಾಸ ಸೇರಿ), ಹೂಡಿಕೆ 1,00,000 ರೂ ಹಾಗೂ ಇತರ ವೆಚ್ಚಗಳು 13,000 ರೂ (ಕ್ಯಾಬ್, ಇನ್ಶುರೆನ್ಸ್) ಎಂದು ಹೇಳಿದ್ದಾರೆ. ಕೊನೆಗೆ ಒಟ್ಟು ವೆಚ್ಚ 5,90,000 ರೂ ಎಂದು ಹೇಳುವುದನ್ನು ನೀವು ನೋಡಬಹುದು.

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋದಲ್ಲಿ ದಂಪತಿಯೂ ನಾವು ಪ್ರತಿ ತಿಂಗಳು ಖರ್ಚು-ಗಳಿಕೆಗಳ ಬಗ್ಗೆ ಚರ್ಚೆ ಮಾಡುತ್ತೇವೆ, ಹೂಡಿಕೆಗೆ ಹಣ ಮೀಸಲಿಡುತ್ತೇವೆ. ಹಣದ ಬಗ್ಗೆ ಪ್ರಾಮಾಣಿಕ ಮಾತುಕತೆ ಯಾವುದೇ ದಂಪತಿಗೆ ಅಗತ್ಯ ಎಂದಿದ್ದಾರೆ. ಈ ವಿಡಿಯೋ ಇದುವರೆಗೆ 4.5 ಮಿಲಿಯನ್‌ಗೂ ಅಧಿಕ ವೀಕ್ಷಣೆ ಕಂಡಿದ್ದು ಇವರ ತಿಂಗಳ ಖರ್ಚು ವೆಚ್ಚವನ್ನು ಕಂಡು ಬಳಕೆದಾರರು ಬಾಯಿಯ ಮೇಲೆ ಬೆರಳಿಟ್ಟುಕೊಂಡಿದ್ದಾರೆ.

ಇದನ್ನೂ ಓದಿ:Viral: ಅತುಲ್‌ ಪತ್ನಿ ನಾಪತ್ತೆ; ಬೆಂಗಳೂರಿನಲ್ಲಿ ಗಮನ ಸೆಳೆಯುತ್ತಿದೆ ವಿಚಿತ್ರ ಜಾಹೀರಾತು

ಈ ವಿಡಿಯೋಗೆ ಬಳಕೆದಾರರೊಬ್ಬರು, ನಿಮ್ಮ ತಿಂಗಳ ಆದಾಯ ಎಷ್ಟು ಎಂದು ಪ್ರಶ್ನೆ ಮಾಡಿದ್ದಾರೆ. ಮತ್ತೊಬ್ಬರು, ಇಷ್ಟೊಂದು ಐಷಾರಾಮಿ ಜೀವನ ನಡೆಸಿದ್ರೆ ಎಷ್ಟು ದುಡಿದ್ರೂ ಸಾಕಾಗಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಈ ದಂಪತಿಯ ತಿಂಗಳ ಖರ್ಚು, ನನ್ನದು ಒಂದು ವರ್ಷದ ಖರ್ಚು ಆಗಿದೆ ಎಂದು ವಾಸ್ತವ ಸ್ಥಿತಿಯನ್ನು ಇನ್ನೊಬ್ಬರು ಕಾಮೆಂಟ್ ಮಾಡಿ ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:09 pm, Fri, 5 September 25

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ