AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಿಸಿ ಬಿಸಿ ಇಡ್ಲಿ-ದೋಸೆ, ಜತೆ ಕಾಫಿ ಸವಿದ ಗಾಯಕ ದಿಲ್ಜಿತ್ ದೋಸಾಂಜ್‌

ತನ್ನ ಹಿಟ್‌ ಹಾಡುಗಳು ಹಾಗೂ ಆಕರ್ಷಕ ಸಂಗೀತ ಕಛೇರಿಗೆ ಹೆಸರುವಾಸಿಯಾಗಿರುವ ಪಂಜಾಬಿ ಪಾಪ್‌ ಗಾಯಕ ದಿಲ್ಜಿತ್‌ ದೋಸಾಂಜ್‌ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ದಕ್ಷಿಣ ಭಾರತದ ಸಾಂಪ್ರದಾಯಿಕ ತಿನಿಸುಗಳಾದ ಬಿಸಿ ಬಿಸಿ ಇಡ್ಲಿ ದೋಸೆಯ ಜೊತೆಗೆ ಫಿಲ್ಟರ್‌ ಕಾಫಿಯನ್ನು ಸವಿದಿದ್ದಾರೆ. ದಿಲ್‌-ಲುಮಿನಾಟ್‌ ಕನ್ಸರ್ಟ್‌ ನಿಮಿತ್ತ ನಮ್ಮ ಬೆಂಗಳೂರಿಗೆ ಆಗಮಿಸಿದ ದಿಲ್ಜಿತ್‌ ಮೊದಲಿಗೆ ಐಕಾನಿಕ್ ರಾಮೇಶ್ವರಂ ಕೆಫೆಗೆ ಭೇಟಿ ಕೊಟ್ಟು ಇಡ್ಲಿ, ದೋಸೆ ಸವಿದಿದ್ದಾರೆ. ಈ ವಿಡಿಯೋ ಇದೀಗ ವೈರಲ್‌ ಆಗಿದೆ.

ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Dec 06, 2024 | 5:16 PM

Share

ಬೆಂಗಳೂರಿನ ಇಂದಿರಾ ನಗರದಲ್ಲಿರುವ ʼದಿ ರಾಮೇಶ್ವರಂ ಕೆಫೆʼಯ ತಿಂಡಿ ತಿನಿಸುಗಳೆಂದರೆ ಹೆಚ್ಚಿನವರಿಗೆ ಬಹಳನೇ ಇಷ್ಟ. ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಗಳ ವರೆಗೆ ಇಲ್ಲಿ ಸಿಗುವ ಬಾಯಲ್ಲಿ ನೀರೂರಿಸುವಂತಹ ಘೀ ಪುಡಿ ಇಡ್ಲಿ, ಘೀ ಪುಡಿ ಮಸಾಲೆ ದೋಸೆ, ಪೊಂಗಲ್‌ ಇತ್ಯಾದಿ ದಕ್ಷಿಣ ಭಾರತದ ಸ್ಪೆಷಲ್‌ ಖಾದ್ಯಗಳ ಜೊತೆಗೆ ಇಲ್ಲಿ ಸಿಗುವ ಫಿಲ್ಟರ್‌ ಕಾಫಿಯನ್ನು ಸವಿಯಲು ಬರ್ತಿರ್ತಾರೆ. ಇದೀಗ ಪಂಜಾಬ್‌ ಪಾಪ್‌ ಗಾಯಕ ದಿಲ್ಜಿತ್‌ ದೋಸಾಂಜ್‌ ಕೂಡಾ ರಾಮೇಶ್ವರಂ ಕೆಫೆಗೆ ಭೇಟಿ ನೀಡಿ ಬಿಸಿ ಬಿಸಿ ಇಡ್ಲಿ ದೋಸೆಯ ಜೊತೆಗೆ ಫಿಲ್ಟರ್‌ ಕಾಫಿಯನ್ನು ಸವಿದಿದ್ದಾರೆ. ದಿಲ್‌-ಲುಮಿನಾಟ್‌ ಕನ್ಸರ್ಟ್‌ ನಿಮಿತ್ತ ನಮ್ಮ ಬೆಂಗಳೂರಿಗೆ ಆಗಮಿಸಿದ ದಿಲ್ಜಿತ್‌ ಮೊದಲಿಗೆ ಐಕಾನಿಕ್ ರಾಮೇಶ್ವರಂ ಕೆಫೆಗೆ ಭೇಟಿ ಕೊಟ್ಟು ಇಡ್ಲಿ, ದೋಸೆ ಸವಿದಿದ್ದಾರೆ. ಈ ವಿಡಿಯೋ ಇದೀಗ ವೈರಲ್‌ ಆಗಿದೆ.

ತನ್ನ ಹಿಟ್‌ ಹಾಡುಗಳು ಹಾಗೂ ಆಕರ್ಷಕ ಸಂಗೀತ ಕಛೇರಿಗೆ ಹೆಸರುವಾಸಿಯಾಗಿರುವ ಪಂಜಾಬಿ ಪಾಪ್‌ ಗಾಯಕ ದಿಲ್ಜಿತ್‌ ದೋಸಾಂಜ್‌ ಇದೀಗ ತಮ್ಮ ದಿಲ್‌-ಲುಮಿನಾಟ್‌ ಕನ್ಸರ್ಟ್‌ ಪ್ರವಾಸದಲ್ಲಿದ್ದಾರೆ. ಹೈದರಾಬಾದ್‌, ಲಕ್ನೋ, ಪುಣೆ, ಕೋಲ್ಕತ್ತಾ ಹೀಗೆ ದೇಶದ ಹಲವು ಕಡೆಗಳಲ್ಲಿ ಪ್ರದರ್ಶನವನ್ನು ನೀಡಿದ ಇವರು ಇಂದು ಬೆಂಗಳೂರಿನಲ್ಲಿ ಪ್ರದರ್ಶನವನ್ನು ನೀಡಲಿದ್ದಾರೆ. ಇದರ ನಿಮಿತ್ತ ಬೆಂಗಳೂರಿಗೆ ಆಗಮಿಸಿದ ದಿಲ್ಜಿತ್‌ ಸೀದಾ ರಾಮೇಶ್ವರಂ ಕೆಫೆಗೆ ಹೋಗಿ ಅಲ್ಲಿ ಬಿಸಿ ಬಿಸಿ ಇಡ್ಲಿ ದೋಸೆಯೊಂದಿಗೆ ಒಂದು ಕಪ್ ಫಿಲ್ಟರ್‌ ಕಾಫಿಯನ್ನು ಸವಿದಿದ್ದಾರೆ.

ಇದನ್ನೂ ಓದಿ:  ಏನ್‌ ಸ್ಟೆಪ್ಸ್‌ ಗುರು; ಈ ಮದುಮಗನ ಬಿಂದಾಸ್‌ ಡ್ಯಾನ್ಸ್‌ಗೆ ಫಿದಾ ಆಗದವರೇ ಇಲ್ಲ…

ದಿಲ್ಜಿತ್‌ ದೋಸಾಂಜ್‌ (diljithdosanjh) ಬೆಂಗಳೂರಿನ ಪ್ರವಾಸದ ಈ ವಿಶೇಷ ವಿಡಿಯೋವನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಬೆಂಗಳೂರು ಪ್ರವಾಸದಲ್ಲಿರುವ ದಿಲ್ಜಿತ್‌ ಕಾರಲ್ಲಿ ಕುಳಿತು ರಾಮೇಶ್ವರಂ ಕೆಫೆಯ ಬಿಸಿ ಬಿಸಿ ಇಡ್ಲಿ ದೋಸೆ ಮತ್ತು ಒಂದು ಕಪ್ ಫಿಲ್ಟರ್‌ ಕಾಫಿಯನ್ನು ಸವಿಯುತ್ತಿರುವ ದೃಶ್ಯವನ್ನು ಕಾಣಬಹುದು. ಈ ವಿಡಿಯೋ ಇದೀಗ ಎಲ್ಲರ ಗಮನ ಸೆಳೆದಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!