AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕುದುರೆಯಲ್ಲ ಬಿಳಿ ಸ್ಕೂಟಿ ಏರಿ  ಮದುವೆ ಮನೆಗೆ ಬಂದ ಮದುಮಗ; ದಿಬ್ಬಣ ನೋಡಿ ಖುಷಿಪಟ್ಟ ಜನ

ಸಾಮಾನ್ಯವಾಗಿ ಉತ್ತರ ಭಾರತದ ಕಡೆ ವರನು ಕುದುರೆಯೇರಿ ಮದುವೆ ಮಂಟಪಕ್ಕೆ ಬರುವಂತಹ ಸಂಪ್ರದಾಯವಿದೆ. ಈ ಸಂಪ್ರದಾಯವನ್ನು ಹೆಚ್ಚಿನವರು ಇಂದಿಗೂ ಪಾಲಿಸುತ್ತಾರೆ. ಆದ್ರೆ ಇಲ್ಲೊಬ್ರು ವ್ಯಕ್ತಿ ಮದುವೆ ಮಂಟಪಕ್ಕೆ ರಾಜ ಕುಮಾರನಂತೆ ಎಂಟ್ರಿ ಕೊಡಲು ನನ್ ಬಳಿ ಬಿಳಿ ಕುದುರೆ ಇಲ್ಲವಲ್ಲ ಎಂದು ಬಿಳಿ ಬಣ್ಣದ ಸ್ಕೂಟರ್ ಏರಿ ಮದುವೆ ಛತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಕುರಿತ ಪೋಸ್ಟ್ ಇದೀಗ ಸಖತ್ ವೈರಲ್ ಆಗುತ್ತಿದೆ. 

Viral Video: ಕುದುರೆಯಲ್ಲ ಬಿಳಿ ಸ್ಕೂಟಿ ಏರಿ  ಮದುವೆ ಮನೆಗೆ ಬಂದ ಮದುಮಗ; ದಿಬ್ಬಣ ನೋಡಿ ಖುಷಿಪಟ್ಟ ಜನ
ಮಾಲಾಶ್ರೀ ಅಂಚನ್​
| Edited By: |

Updated on:May 15, 2024 | 11:43 AM

Share

ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಮದುವೆ ಸಮಾರಂಭವನ್ನು ಸ್ಪೆಷಲ್ ಆಗಿ ಆಚರಿಸಲು ಏನೇನೋ ಟ್ರೆಂಡ್ ಫಾಲೋ ಮಾಡುತ್ತಿರುತ್ತಾರೆ. ಅದರಲ್ಲಿ ದಿಬ್ಬಣದಲ್ಲಿ ವಿಭಿನ್ನವಾಗಿ ಎಂಟ್ರಿ ಕೊಡುವುದು ಕೂಡಾ ಒಂದು. ಹಿಂದೆಲ್ಲಾ ಕುದುರೆಯೇರಿ ವರ ಮದುವೆ ಮಂಟಪಕ್ಕೆ ಬರುವತಹ ಸಂಪ್ರದಾಯವಿತ್ತು. ಆದ್ರೆ ಇಂದಿನ ದಿನಗಳಲ್ಲಿ ವಧು ವರರು ಎತ್ತಿನ ಗಾಡಿ, ಜೆಸಿಬಿ ಏರಿ ದಿಬ್ಬಣ ಬರುವಂತಹ ಟ್ರೆಂಡ್ ಸೃಷ್ಟಿಯಾಗಿವೆ. ಇಂತಹ ಸಾಕಷ್ಟು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಇದೀಗ ಅದೇ ರೀತಿಯ ಪೋಸ್ಟ್ ಒಂದು ವೈರಲ್ ಆಗಿದ್ದು, ರಾಜಕುಮಾರನಂತೆ ಮದುವೆ ಮಂಟಪಕ್ಕೆ ಎಂಟ್ರಿ ಕೊಡಲು ನನ್ ಬಳಿ ಬಿಳಿ ಕುದುರೆ ಇಲ್ವೇ ಎಂದು ಮದುಮಗ ಕುದುರೆಯ ಬದಲಿಗೆ ಬಿಳಿ ಬಣ್ಣದ ಎಲೆಕ್ಟ್ರಿಕ್ ಸ್ಕೂಟರ್ ಏರಿ ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ನಮ್ಮ ಬೆಂಗಳೂರಿನ ನಿವಾಸಿಯಾಗಿರುವಂತಹ ದರ್ಶನ್ ಪಟೇಲ್ ಎಂಬವರು ತಮ್ಮ ಮದುವೆಯ ದಿನ ಎಲೆಕ್ಟ್ರಿಕ್ ಸ್ಕೂಟರ್ ಏರಿ ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಎಲೆಕ್ಟ್ರಿಕ್ ಸ್ಕೂಟರ್ ಇತ್ತೀಚಿಗೆ ಪರಿಚಯಿಸಲಾದ ಅಥೆರ್ ರಿಜ್ಟಾ ಎಂಬ ಹೆಸರಿನ ಸ್ಕೂಟರ್ ಆಗಿದೆ. ವರದಿಗಳ ಪ್ರಕಾರ ಅಥೆರ್ ಎನರ್ಜಿ ಕಂಪೆನಿಯಲ್ಲಿ ಇಂಡಸ್ಟ್ರಿಯಲ್ ಡಿಸೈನರ್ ಆಗಿರುವ ದರ್ಶನ್ ಪಟೇಲ್ ತಮ್ಮ ಮದುವೆಯ ದಿನ ತಮ್ಮದೇ ಕಂಪೆನಿಯ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಏರಿ ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಈ ಕುರಿತ ವಿಡಿಯೋವನ್ನು ಅಥೆರ್ ಎನರ್ಜಿಯ ಸಹ ಸಂಸ್ಥಾಪಕ ಮತ್ತು ಸಿಇಒ ತರುಣ್ ಮೆಹ್ತಾ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ವರ ದರ್ಶನ್ ಪಟೇಲ್ ಅವರು ಬಿಳಿ ಬಣ್ಣದ ಕುದುರೆಯ ಬದಲಿಗೆ ತಮ್ಮದೇ ಕಂಪೆನಿಯ ಬಿಳಿ ಬಣ್ಣದ ಎಲೆಕ್ಟ್ರಿಕ್ ಸ್ಕೂಟರ್ ಏರಿ ದಿಬ್ಬಣ ಬಂದಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಬಸ್ಸಿನಲ್ಲೇ ಪ್ರೇಮಿಗಳ ರೊಮ್ಯಾನ್ಸ್; ಲವ್ ಬರ್ಡ್ಸ್ ಹುಚ್ಚಾಟಕ್ಕೆ ಛಿ ಛೀ ಎಂದ ನೆಟ್ಟಿಗರು

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 29 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ವರನ ದಿಬ್ಬಣವಂತೂ ತುಂಬಾನೇ ಸ್ಪೆಷಲ್ ಆಗಿದೆ ಎನ್ನುತ್ತಾ  ಜನರು ವರನ ಎಂಟ್ರಿಗೆ ಫುಲ್ ಫಿದಾ ಆಗಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:39 am, Wed, 15 May 24

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ