AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕುದುರೆಯಲ್ಲ ಬಿಳಿ ಸ್ಕೂಟಿ ಏರಿ  ಮದುವೆ ಮನೆಗೆ ಬಂದ ಮದುಮಗ; ದಿಬ್ಬಣ ನೋಡಿ ಖುಷಿಪಟ್ಟ ಜನ

ಸಾಮಾನ್ಯವಾಗಿ ಉತ್ತರ ಭಾರತದ ಕಡೆ ವರನು ಕುದುರೆಯೇರಿ ಮದುವೆ ಮಂಟಪಕ್ಕೆ ಬರುವಂತಹ ಸಂಪ್ರದಾಯವಿದೆ. ಈ ಸಂಪ್ರದಾಯವನ್ನು ಹೆಚ್ಚಿನವರು ಇಂದಿಗೂ ಪಾಲಿಸುತ್ತಾರೆ. ಆದ್ರೆ ಇಲ್ಲೊಬ್ರು ವ್ಯಕ್ತಿ ಮದುವೆ ಮಂಟಪಕ್ಕೆ ರಾಜ ಕುಮಾರನಂತೆ ಎಂಟ್ರಿ ಕೊಡಲು ನನ್ ಬಳಿ ಬಿಳಿ ಕುದುರೆ ಇಲ್ಲವಲ್ಲ ಎಂದು ಬಿಳಿ ಬಣ್ಣದ ಸ್ಕೂಟರ್ ಏರಿ ಮದುವೆ ಛತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಕುರಿತ ಪೋಸ್ಟ್ ಇದೀಗ ಸಖತ್ ವೈರಲ್ ಆಗುತ್ತಿದೆ. 

Viral Video: ಕುದುರೆಯಲ್ಲ ಬಿಳಿ ಸ್ಕೂಟಿ ಏರಿ  ಮದುವೆ ಮನೆಗೆ ಬಂದ ಮದುಮಗ; ದಿಬ್ಬಣ ನೋಡಿ ಖುಷಿಪಟ್ಟ ಜನ
ಮಾಲಾಶ್ರೀ ಅಂಚನ್​
| Edited By: |

Updated on:May 15, 2024 | 11:43 AM

Share

ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಮದುವೆ ಸಮಾರಂಭವನ್ನು ಸ್ಪೆಷಲ್ ಆಗಿ ಆಚರಿಸಲು ಏನೇನೋ ಟ್ರೆಂಡ್ ಫಾಲೋ ಮಾಡುತ್ತಿರುತ್ತಾರೆ. ಅದರಲ್ಲಿ ದಿಬ್ಬಣದಲ್ಲಿ ವಿಭಿನ್ನವಾಗಿ ಎಂಟ್ರಿ ಕೊಡುವುದು ಕೂಡಾ ಒಂದು. ಹಿಂದೆಲ್ಲಾ ಕುದುರೆಯೇರಿ ವರ ಮದುವೆ ಮಂಟಪಕ್ಕೆ ಬರುವತಹ ಸಂಪ್ರದಾಯವಿತ್ತು. ಆದ್ರೆ ಇಂದಿನ ದಿನಗಳಲ್ಲಿ ವಧು ವರರು ಎತ್ತಿನ ಗಾಡಿ, ಜೆಸಿಬಿ ಏರಿ ದಿಬ್ಬಣ ಬರುವಂತಹ ಟ್ರೆಂಡ್ ಸೃಷ್ಟಿಯಾಗಿವೆ. ಇಂತಹ ಸಾಕಷ್ಟು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಇದೀಗ ಅದೇ ರೀತಿಯ ಪೋಸ್ಟ್ ಒಂದು ವೈರಲ್ ಆಗಿದ್ದು, ರಾಜಕುಮಾರನಂತೆ ಮದುವೆ ಮಂಟಪಕ್ಕೆ ಎಂಟ್ರಿ ಕೊಡಲು ನನ್ ಬಳಿ ಬಿಳಿ ಕುದುರೆ ಇಲ್ವೇ ಎಂದು ಮದುಮಗ ಕುದುರೆಯ ಬದಲಿಗೆ ಬಿಳಿ ಬಣ್ಣದ ಎಲೆಕ್ಟ್ರಿಕ್ ಸ್ಕೂಟರ್ ಏರಿ ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ನಮ್ಮ ಬೆಂಗಳೂರಿನ ನಿವಾಸಿಯಾಗಿರುವಂತಹ ದರ್ಶನ್ ಪಟೇಲ್ ಎಂಬವರು ತಮ್ಮ ಮದುವೆಯ ದಿನ ಎಲೆಕ್ಟ್ರಿಕ್ ಸ್ಕೂಟರ್ ಏರಿ ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಎಲೆಕ್ಟ್ರಿಕ್ ಸ್ಕೂಟರ್ ಇತ್ತೀಚಿಗೆ ಪರಿಚಯಿಸಲಾದ ಅಥೆರ್ ರಿಜ್ಟಾ ಎಂಬ ಹೆಸರಿನ ಸ್ಕೂಟರ್ ಆಗಿದೆ. ವರದಿಗಳ ಪ್ರಕಾರ ಅಥೆರ್ ಎನರ್ಜಿ ಕಂಪೆನಿಯಲ್ಲಿ ಇಂಡಸ್ಟ್ರಿಯಲ್ ಡಿಸೈನರ್ ಆಗಿರುವ ದರ್ಶನ್ ಪಟೇಲ್ ತಮ್ಮ ಮದುವೆಯ ದಿನ ತಮ್ಮದೇ ಕಂಪೆನಿಯ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಏರಿ ಮದುವೆ ಮಂಟಪಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಈ ಕುರಿತ ವಿಡಿಯೋವನ್ನು ಅಥೆರ್ ಎನರ್ಜಿಯ ಸಹ ಸಂಸ್ಥಾಪಕ ಮತ್ತು ಸಿಇಒ ತರುಣ್ ಮೆಹ್ತಾ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ವರ ದರ್ಶನ್ ಪಟೇಲ್ ಅವರು ಬಿಳಿ ಬಣ್ಣದ ಕುದುರೆಯ ಬದಲಿಗೆ ತಮ್ಮದೇ ಕಂಪೆನಿಯ ಬಿಳಿ ಬಣ್ಣದ ಎಲೆಕ್ಟ್ರಿಕ್ ಸ್ಕೂಟರ್ ಏರಿ ದಿಬ್ಬಣ ಬಂದಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಬಸ್ಸಿನಲ್ಲೇ ಪ್ರೇಮಿಗಳ ರೊಮ್ಯಾನ್ಸ್; ಲವ್ ಬರ್ಡ್ಸ್ ಹುಚ್ಚಾಟಕ್ಕೆ ಛಿ ಛೀ ಎಂದ ನೆಟ್ಟಿಗರು

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 29 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ವರನ ದಿಬ್ಬಣವಂತೂ ತುಂಬಾನೇ ಸ್ಪೆಷಲ್ ಆಗಿದೆ ಎನ್ನುತ್ತಾ  ಜನರು ವರನ ಎಂಟ್ರಿಗೆ ಫುಲ್ ಫಿದಾ ಆಗಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:39 am, Wed, 15 May 24

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!