AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: 750 ಮೀಟರ್ ಪ್ರಯಾಣಕ್ಕೆ 21 ನಿಮಿಷ ತೆಗೆದುಕೊಂಡೆ; ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಿಚ್ಚಿಟ್ಟ ಮಹಿಳೆ

ಚೆನ್ನೈ, ಮುಂಬೈ, ಬೆಂಗಳೂರಿನಂತಹ ದೊಡ್ಡ ದೊಡ್ಡ ನಗರಗಳಲ್ಲಿ ಟ್ರಾಫಿಕ್ ಸಮಸ್ಯೆ ಸರ್ವೇ ಸಾಮಾನ್ಯವಾಗಿರುತ್ತದೆ. ಹೀಗಾಗಿ ಕೆಲವರು ಟ್ರಾಫಿಕ್ ನಲ್ಲಿ ಸಿಲುಕಿ ತಮಗಾದ ಕಹಿ ಅನುಭವವನ್ನು ಹಂಚಿಕೊಳ್ಳುತ್ತಾರೆ. ಇಲ್ಲೊಬ್ಬ ಮಹಿಳೆಗೂ ಹಾಗೆಯೇ ಆಗಿದೆ. ಹೌದು, ಟ್ರಾಫಿಕ್ ನಲ್ಲಿ ಸಿಲುಕಿಕೊಂಡಿರುವ ಬೆಂಗಳೂರಿನ ಮಹಿಳೆಯೊಬ್ಬರು ಸ್ವಲ್ಪ ದೂರವನ್ನು ಕ್ರಮಿಸಲು ಹೆಚ್ಚು ಸಮಯ ತೆಗೆದುಕೊಂಡ ಬಗ್ಗೆ ಹೇಳಿಕೊಂಡಿದ್ದಾರೆ. ಈ ಕುರಿತಾದ ವಿಡಿಯೋ ಸದ್ಯ ವೈರಲ್ ಆಗಿದೆ.

Video: 750 ಮೀಟರ್ ಪ್ರಯಾಣಕ್ಕೆ 21 ನಿಮಿಷ ತೆಗೆದುಕೊಂಡೆ; ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಿಚ್ಚಿಟ್ಟ ಮಹಿಳೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Jan 04, 2026 | 12:33 PM

Share

ಬೆಂಗಳೂರು, ಜನವರಿ 04: ಟ್ರಾಫಿಕ್ ಎಂದರೆ ಕಣ್ಣ ಮುಂದೆ ಬರುವುದೇ ಮಾಯಾನಗರಿ ಬೆಂಗಳೂರು (Bengaluru).ಇಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಸಿಗುವಂತೆ ಕಾಣುತ್ತಿಲ್ಲ. ಪೀಕ್‌ ಟೈಮ್‌ಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಿರುತ್ತದೆ. ಬೆಂಗಳೂರಿನ ಟ್ರಾಫಿಕ್ ಸಿಲುಕಿದ ಮಹಿಳೆಯೂ 750 ಮೀಟರ್ ಪ್ರಯಾಣಕ್ಕೆ 21 ನಿಮಿಷ ತೆಗೆದುಕೊಂಡೆ ಎಂದು ಟ್ರಾಫಿಕ್ ಸಮಸ್ಯೆಯ ಬಗ್ಗೆ ಮಾತನಾಡಿದ್ದಾರೆ. ಈ ಕುರಿತಾದ ವಿಡಿಯೋ ಸದ್ಯ ವೈರಲ್ ಆಗಿದ್ದು, ನಗರದಲ್ಲಿನ ದೈನಂದಿನ ಸಂಚಾರ ತೊಂದರೆಗಳನ್ನು ಎತ್ತಿ ತೋರಿಸಿದೆ.

ಅಂಜಲಿ (anjaleeee_suresh) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋವನ್ನು ಕಾರಿನ ಒಳಗಿನಿಂದ ರೆಕಾರ್ಡ್ ಮಾಡಲಾಗಿದ್ದು, ವಾಹನದ ನ್ಯಾವಿಗೇಷನ್ ಪರದೆಯ ಮೇಲೆ ಕೇಂದ್ರೀಕರಿಸಿರುವುದನ್ನು ನೋಡಬಹುದು. ಕೇವಲ 750 ಮೀಟರ್ ಕ್ರಮಿಸಲು ಅಂದಾಜು 21 ನಿಮಿಷ ತೆಗೆದುಕೊಂಡಿರುವುದನ್ನು ಇಲ್ಲಿ ತೋರಿಸಲಾಗಿದೆ. ರಾಜಧಾನಿಯಲ್ಲಿ ಅನೇಕ ಪ್ರಯಾಣಿಕರು ದೈನಂದಿನ ಹೋರಾಟ ಎಂದು ವಿವರಿಸಲಾಗಿದೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ:ಜೀವನದ ಕಠಿಣ ಕ್ಷಣ: ಚರ್ಚ್ ಸ್ಟ್ರೀಟ್​​ನಲ್ಲಿ ಕಂಡ ಅದ್ಭುತ ದೃಶ್ಯ, ಕಲಿಕೆಗಾಗಿ ಈ ಹುಡುಗಿಯ ಹೋರಾಟ ನೋಡಿ

ಈ ವಿಡಿಯೋ ಒಂದೂವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ನಡೆದುಕೊಂಡು ಹೋಗುವುದು ಉತ್ತಮ ಎಂದು ಹೇಳಿದ್ದಾರೆ. ಮತ್ತೊಬ್ಬರು, ನನಗೂ ಇಂತಹ ಅನುಭವ ಆಗಿದೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ನಗರದ ವಿವಿಧ ಭಾಗಗಳಲ್ಲಿ ಈ ಸಮಸ್ಯೆ ವ್ಯಾಪಕವಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ