AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: 750 ಮೀಟರ್ ಪ್ರಯಾಣಕ್ಕೆ 21 ನಿಮಿಷ ತೆಗೆದುಕೊಂಡೆ; ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಿಚ್ಚಿಟ್ಟ ಮಹಿಳೆ

ಚೆನ್ನೈ, ಮುಂಬೈ, ಬೆಂಗಳೂರಿನಂತಹ ದೊಡ್ಡ ದೊಡ್ಡ ನಗರಗಳಲ್ಲಿ ಟ್ರಾಫಿಕ್ ಸಮಸ್ಯೆ ಸರ್ವೇ ಸಾಮಾನ್ಯವಾಗಿರುತ್ತದೆ. ಹೀಗಾಗಿ ಕೆಲವರು ಟ್ರಾಫಿಕ್ ನಲ್ಲಿ ಸಿಲುಕಿ ತಮಗಾದ ಕಹಿ ಅನುಭವವನ್ನು ಹಂಚಿಕೊಳ್ಳುತ್ತಾರೆ. ಇಲ್ಲೊಬ್ಬ ಮಹಿಳೆಗೂ ಹಾಗೆಯೇ ಆಗಿದೆ. ಹೌದು, ಟ್ರಾಫಿಕ್ ನಲ್ಲಿ ಸಿಲುಕಿಕೊಂಡಿರುವ ಬೆಂಗಳೂರಿನ ಮಹಿಳೆಯೊಬ್ಬರು ಸ್ವಲ್ಪ ದೂರವನ್ನು ಕ್ರಮಿಸಲು ಹೆಚ್ಚು ಸಮಯ ತೆಗೆದುಕೊಂಡ ಬಗ್ಗೆ ಹೇಳಿಕೊಂಡಿದ್ದಾರೆ. ಈ ಕುರಿತಾದ ವಿಡಿಯೋ ಸದ್ಯ ವೈರಲ್ ಆಗಿದೆ.

Video: 750 ಮೀಟರ್ ಪ್ರಯಾಣಕ್ಕೆ 21 ನಿಮಿಷ ತೆಗೆದುಕೊಂಡೆ; ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಿಚ್ಚಿಟ್ಟ ಮಹಿಳೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Jan 04, 2026 | 12:33 PM

Share

ಬೆಂಗಳೂರು, ಜನವರಿ 04: ಟ್ರಾಫಿಕ್ ಎಂದರೆ ಕಣ್ಣ ಮುಂದೆ ಬರುವುದೇ ಮಾಯಾನಗರಿ ಬೆಂಗಳೂರು (Bengaluru).ಇಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ಸಿಗುವಂತೆ ಕಾಣುತ್ತಿಲ್ಲ. ಪೀಕ್‌ ಟೈಮ್‌ಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚಿರುತ್ತದೆ. ಬೆಂಗಳೂರಿನ ಟ್ರಾಫಿಕ್ ಸಿಲುಕಿದ ಮಹಿಳೆಯೂ 750 ಮೀಟರ್ ಪ್ರಯಾಣಕ್ಕೆ 21 ನಿಮಿಷ ತೆಗೆದುಕೊಂಡೆ ಎಂದು ಟ್ರಾಫಿಕ್ ಸಮಸ್ಯೆಯ ಬಗ್ಗೆ ಮಾತನಾಡಿದ್ದಾರೆ. ಈ ಕುರಿತಾದ ವಿಡಿಯೋ ಸದ್ಯ ವೈರಲ್ ಆಗಿದ್ದು, ನಗರದಲ್ಲಿನ ದೈನಂದಿನ ಸಂಚಾರ ತೊಂದರೆಗಳನ್ನು ಎತ್ತಿ ತೋರಿಸಿದೆ.

ಅಂಜಲಿ (anjaleeee_suresh) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋವನ್ನು ಕಾರಿನ ಒಳಗಿನಿಂದ ರೆಕಾರ್ಡ್ ಮಾಡಲಾಗಿದ್ದು, ವಾಹನದ ನ್ಯಾವಿಗೇಷನ್ ಪರದೆಯ ಮೇಲೆ ಕೇಂದ್ರೀಕರಿಸಿರುವುದನ್ನು ನೋಡಬಹುದು. ಕೇವಲ 750 ಮೀಟರ್ ಕ್ರಮಿಸಲು ಅಂದಾಜು 21 ನಿಮಿಷ ತೆಗೆದುಕೊಂಡಿರುವುದನ್ನು ಇಲ್ಲಿ ತೋರಿಸಲಾಗಿದೆ. ರಾಜಧಾನಿಯಲ್ಲಿ ಅನೇಕ ಪ್ರಯಾಣಿಕರು ದೈನಂದಿನ ಹೋರಾಟ ಎಂದು ವಿವರಿಸಲಾಗಿದೆ.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ:ಜೀವನದ ಕಠಿಣ ಕ್ಷಣ: ಚರ್ಚ್ ಸ್ಟ್ರೀಟ್​​ನಲ್ಲಿ ಕಂಡ ಅದ್ಭುತ ದೃಶ್ಯ, ಕಲಿಕೆಗಾಗಿ ಈ ಹುಡುಗಿಯ ಹೋರಾಟ ನೋಡಿ

ಈ ವಿಡಿಯೋ ಒಂದೂವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ ನಡೆದುಕೊಂಡು ಹೋಗುವುದು ಉತ್ತಮ ಎಂದು ಹೇಳಿದ್ದಾರೆ. ಮತ್ತೊಬ್ಬರು, ನನಗೂ ಇಂತಹ ಅನುಭವ ಆಗಿದೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ನಗರದ ವಿವಿಧ ಭಾಗಗಳಲ್ಲಿ ಈ ಸಮಸ್ಯೆ ವ್ಯಾಪಕವಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ