AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: 4 ಕಿ.ಮೀ ಕ್ರಮಿಸಲು 45 ನಿಮಿಷಗಳು ತೆಗೆದುಕೊಂಡೆ; ಟ್ರಾಫಿಕ್‌ ಸಮಸ್ಯೆ ಬಗ್ಗೆ ಅಸಮಾಧಾನ ಹೊರಹಾಕಿದ ಗೂಗಲ್ ಟೆಕ್ಕಿ

ದೊಡ್ಡ ದೊಡ್ಡ ನಗರಗಳಲ್ಲಿ ಟ್ರಾಫಿಕ್ ಸಮಸ್ಯೆ ಸರ್ವೇ ಸಾಮಾನ್ಯ. ಬೆಂಗಳೂರಿನಲ್ಲಿ ನೆಲೆಸಿರುವವರು ಈ ಟ್ರಾಫಿಕ್‌ಗೆ ಹೊಂದಿಕೊಳ್ಳೋದು ಅನಿವಾರ್ಯ. ಹೀಗಿರುವಾಗ ಟ್ರಾಫಿಕ್ ನಲ್ಲಿ ಸಿಲುಕಿಕೊಂಡ ಗೂಗಲ್ ತಂತ್ರಜ್ಞರೊಬ್ಬರು 4 ಕಿ.ಮೀ ದೂರದಲ್ಲಿರುವ ಆಫೀಸಿಗೆ ತಲುಪಲು 45 ನಿಮಿಷಗಳು ತೆಗೆದುಕೊಂಡಿದ್ದಾರಂತೆ. ನಗರದ ಸಂಚಾರ ದಟ್ಟಣೆ ಸಮಸ್ಯೆಯ ಬಗ್ಗೆ ಅಸಮಾಧಾನ ಹೊರಹಾಕಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ.

Video: 4 ಕಿ.ಮೀ ಕ್ರಮಿಸಲು 45 ನಿಮಿಷಗಳು ತೆಗೆದುಕೊಂಡೆ; ಟ್ರಾಫಿಕ್‌ ಸಮಸ್ಯೆ ಬಗ್ಗೆ ಅಸಮಾಧಾನ ಹೊರಹಾಕಿದ ಗೂಗಲ್ ಟೆಕ್ಕಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: May 22, 2026 | 6:15 PM

Share

ಬೆಂಗಳೂರು, ಮೇ 22: ಚೆನ್ನೈ, ಮುಂಬೈ ಹೀಗೆ ದೊಡ್ಡ ದೊಡ್ಡ ನಗರಗಳಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿ ಇರುತ್ತದೆ. ಈ ಬೆಂಗಳೂರಿನಲ್ಲಂತೂ (Bengaluru) ಕೇಳುವುದೇ ಬೇಡ, ಬೆಳಗ್ಗೆ ಸಂಜೆಯಾದರಂತೂ ಟ್ರಾಫಿಕ್‌ನಿಂದ ರಸ್ತೆಗಳು ಬ್ಲಾಕ್ ಆಗುತ್ತದೆ. ಪೀಕ್‌ ಟೈಮ್‌ಗಳಲ್ಲಿ ಟ್ರಾಫಿಕ್ ಜಾಮ್ ಹೆಚ್ಚೇ ಇರುತ್ತದೆ. ಇದೀಗ ಬೆಂಗಳೂರಿನ ಗೂಗಲ್‌ನಲ್ಲಿ ಕೆಲಸ ಮಾಡುತ್ತಿರುವ ಟೆಕ್ಕಿಯೊಬ್ಬರು 4 ಕಿಲೋಮೀಟರ್ ದೂರದಲ್ಲಿರುವ ತನ್ನ ಆಫೀಸಿಗೆ ತಲುಪಲು 45 ನಿಮಿಷಗಳು ಬೇಕಾಯಿತು ಎಂದು ಹೇಳಿದ್ದಾರೆ. ಈ ಮೂಲಕ ನಗರದ ಸಂಚಾರ ಪರಿಸ್ಥಿತಿಯ ಬಗ್ಗೆ ತಮ್ಮ ಹತಾಶೆಯನ್ನು ಹೊರಹಾಕಿದ್ದಾರೆ.

ವೆಂಕಟೇಶ್ ಡಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋಗೆ ಪ್ರೀಮಿಯಂ ಕ್ರಾಲಿಂಗ್ ವೇಗವನ್ನು ಅನುಭವಿಸಲು ಪ್ರೀಮಿಯಂ ತೆರಿಗೆಗಳನ್ನು ಪಾವತಿಸುವುದು ಶೀರ್ಷಿಕೆ ನೀಡಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by Venkatesh D (@flick_23)

ಈ ವಿಡಿಯೋದಲ್ಲಿ, ತಾನು ಆಫೀಸಿಗೆ ಪ್ರಯಾಣಿಸಲು 9 ರಿಂದ 10 ನಿಮಿಷಗಳು ತೆಗೆದುಕೊಳ್ಳುತ್ತೇನೆ. ಆದರೆ ಭಾರೀ ದಟ್ಟಣೆಯಿಂದಾಗಿ ಅದೇ ಮಾರ್ಗದಲ್ಲಿ ಪ್ರಯಾಣಿಸಲು ಹೆಚ್ಚು ಸಮಯ ತೆಗೆದುಕೊಂಡೆ. ನಾನು ಆಫೀಸಿನಿಂದ 4 ಕಿಲೋಮೀಟರ್ ದೂರದಲ್ಲಿ ವಾಸಿಸುತ್ತಿದ್ದೇನೆ. ಇಂದು ಕಚೇರಿಗೆ ತಲುಪಲು ನನಗೆ 45 ನಿಮಿಷಗಳು ಬೇಕಾಯಿತು. ಕಚೇರಿಗೆ ತಲುಪಲು 9 ರಿಂದ 10 ನಿಮಿಷಗಳು ಬೇಕು. ಆದರೆ ಟ್ರಾಫಿಕ್ ನಿಂದ 45 ನಿಮಿಷಗಳು ಬೇಕಾಯಿತು.

ಬೆಳಿಗ್ಗೆ 10:00 ಗಂಟೆಗೆ ನಾನು ನನ್ನ ಮನೆಯಿಂದ ಹೊರಟು ಆಫೀಸಿಗೆ ತಲುಪಿದೆ. ಆದರೆ ಈಗ 10:45 ನಿಮಿಷ. ನಾನು ನನ್ನ ಸಂಬಳಕ್ಕಿಂತ ಹೆಚ್ಚಿನ ತೆರಿಗೆಗಳನ್ನು ಪಾವತಿಸಿದ ತಿಂಗಳುಗಳಿವೆ. ನಾನು ಮಾತ್ರವಲ್ಲ, ಸಾವಿರಾರು, ಲಕ್ಷಾಂತರ ಜನರು ಇದನ್ನು ಮಾಡುತ್ತಾರೆ ಎಂದು ನನಗೆ ತಿಳಿದಿದೆ. ಆದರೆ ಇದು ತುಂಬಾ ನಿರಾಶಾದಾಯಕವಾಗಿದೆ. ಇದೇನು ನಡೆಯುತ್ತಿದೆ ಎಂದು ಎನಿಸಿಕೊಂಡರೆ ನನಗೆ ತುಂಬಾ ಕೋಪ ಬರುತ್ತದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಹೈದರಾಬಾದ್​​ನಲ್ಲಿ ಇರುವಂತೆ ಬೆಂಗಳೂರು ರಸ್ತೆಗಳು ಯಾಕಿಲ್ಲ? ಕೆನಡಾ ವ್ಯಕ್ತಿಯ ವಿಡಿಯೋ ವೈರಲ್

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ, ಇದು ಬೆಂಗಳೂರಿನ ಸಂಚಾರದ ದೈನಂದಿನ ವಾಸ್ತವ ಎಂದಿದ್ದಾರೆ. ಮತ್ತೊಬ್ಬರು, 45 ನಿಮಿಷಗಳಲ್ಲಿ ನಾಲ್ಕು ಕಿಲೋಮೀಟರ್ ಕ್ರಮಿಸುವುದು ಪ್ರಯಾಣವಲ್ಲ, ಅದುವೇ ಶಿಕ್ಷೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಇದಕ್ಕಾಗಿಯೇ ಜನರು ಮತ್ತೆ ವರ್ಕ್ ಫ್ರಮ್ ಹೋಮ್ ಎಂದು ಕೆಲಸ ಕೇಳುತ್ತಿದ್ದಾರೆ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗ್ತಾರಾ?ಅಭಿಪ್ರಾಯ ಸಂಗ್ರಹದಲ್ಲಿ ಏನೆಲ್ಲಾ ಆಯ್ತು
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಆಗಸ್ಟ್‌ 31 ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ಅಸಾಧ್ಯ?
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ಲ್ಯಾಪ್ ಟಾಪ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ NWKRTC ಡ್ರೈವರ್
ದೆಹಲಿಗೆ ಹಾರಿದ ಸಚಿವಾಕಾಂಕ್ಷಿಗಳು: ಯಾರೆಲ್ಲ ಪ್ರಯಾಣ?
ದೆಹಲಿಗೆ ಹಾರಿದ ಸಚಿವಾಕಾಂಕ್ಷಿಗಳು: ಯಾರೆಲ್ಲ ಪ್ರಯಾಣ?
ಅದ್ಭುತ, ಅತ್ಯದ್ಭುತ; ಶುಭ್​​ಮನ್ ಡೈವ್ ಕ್ಯಾಚ್​​​ಗೆ CSK ಸೈಲೆಂಟ್
ಅದ್ಭುತ, ಅತ್ಯದ್ಭುತ; ಶುಭ್​​ಮನ್ ಡೈವ್ ಕ್ಯಾಚ್​​​ಗೆ CSK ಸೈಲೆಂಟ್