AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ‘ಸಂಜೆ 250 ಕೊಡು, ಇಲ್ಲಾಂದ್ರೆ ಶೆಡ್ಡಿಗ್ ಬಾ’, ಆಟೋ ಚಾಲಕರ ಸಮಸ್ಯೆಯನ್ನು ಎಳೆಎಳೆಯಾಗಿ ವಿವರಿಸಿದ ಕರ್ನಾಟಕ ಹೈಕೋರ್ಟ್​

ರೇಣುಕಾಸ್ವಾಮಿ ಹತ್ಯೆ ನಡೆದ ಪಟ್ಟಣಗೆರೆ ಶೆಡ್‌ ತಿಂಗಳುಗಳ ಹಿಂದೆ ಸಿಕ್ಕಾಪಟ್ಟೆ ಟ್ರೆಂಡಿಂಗ್‌ನಲ್ಲಿತ್ತು. ಟಿವಿ ನಿರೂಪಕರ ಬಾಯಲ್ಲೂ ಈ ಶೆಡ್‌ ಬಗೆಗಿನ ಮಾತು ವೈರಲ್‌ ಆಗಿತ್ತು. ಇದೀಗ ಕರ್ನಾಟಕ ಹೈಕೋರ್ಟ್‌ ನ್ಯಾಯಾಧೀಶರು ಕೋರ್ಟ್‌ ವಿಚಾರಣೆಯ ವೇಳೆ ಬಾಡಿಗೆ ಆಟೋ ಓಡಿಸುವವರ ಸಮಸ್ಯೆಯ ಬಗ್ಗೆ ವಿವರಣೆ ಕೊಡುವ ಸಂದರ್ಭದಲ್ಲಿ ʼಶೆಡ್ಡಿಗ್‌ ಬಾʼ ಎಂಬ ಪದವನ್ನು ಬಳಸಿದ್ದು, ಈ ಕುರಿತ ಹಾಸ್ಯಮಯ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ. ‌

Viral: 'ಸಂಜೆ 250 ಕೊಡು, ಇಲ್ಲಾಂದ್ರೆ ಶೆಡ್ಡಿಗ್ ಬಾ', ಆಟೋ ಚಾಲಕರ ಸಮಸ್ಯೆಯನ್ನು ಎಳೆಎಳೆಯಾಗಿ ವಿವರಿಸಿದ ಕರ್ನಾಟಕ ಹೈಕೋರ್ಟ್​
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Sep 20, 2024 | 12:08 PM

Share

ತಿಂಗಳುಗಳ ಹಿಂದೆ ಈ ಪಟ್ಟಣಗೆರೆ ಶೆಡ್‌ ಸಿಕ್ಕಾಪಟ್ಟೆ ಟ್ರೆಂಡಿಂಗ್‌ನಲ್ಲಿತ್ತು. ಅದರಲ್ಲೂ ಈ “ಶೆಡ್ಡಿಗ್‌ ಬಾ” ಎಂಬ ಪದ ಸಿಕ್ಕಾಪಟ್ಟೆ ವೈರಲ್‌ ಆಗಿತ್ತು. ಇದರ ಬಗ್ಗೆ ಹೆಚ್ಚಿನವರು ರೀಲ್ಸ್‌ ವಿಡಿಯೋ ಮಾಡಿ ಕೂಡಾ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಡುತ್ತಿದ್ದರು. ಇದೀಗ ಕರ್ನಾಟಕ ಹೈಕೋರ್ಟ್‌ ನ್ಯಾಯಾಧೀಶರು ಬಡ್ಡಿ ದಂದೆಗೆ ಸಂಬಂಧಿಸಿದ ಕೋರ್ಟ್‌ ವಿಚಾರಣೆಯ ವೇಳೆ ಬಾಡಿಗೆ ಆಟೋ ಓಡಿಸುವವರ ಸಮಸ್ಯೆಯ ಬಗ್ಗೆ ವಿವರಣೆ ಕೊಡುವ ಸಂದರ್ಭದಲ್ಲಿ ʼಶೆಡ್ಡಿಗ್‌ ಬಾʼ ಎಂಬ ಪದವನ್ನು ಬಳಸಿದ್ದು, ಈ ಕುರಿತ ಹಾಸ್ಯಮಯ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ. ‌

ಕಲಾಸಿಪಾಳ್ಯದ ಸುತ್ತಮುತ್ತ ನಡೆಯುವ ಬಡ್ಡಿ ದಂಧೆಯ ಬಗ್ಗೆ ನ್ಯಾಯಾಧೀಶರು ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಸುತ್ತಿರುವಾಗ ಬಾಡಿಗೆ ಆಟೋ ಓಡಿಸುವವರ ಸಮಸ್ಯೆಯ ಬಗ್ಗೆ ಹೇಳುವ ಸಂದರ್ಭದಲ್ಲಿ ಶೆಡ್ಡಿಗ್‌ ಬಾ ಎಂಬ ಪದವನ್ನು ಬಳಸಿದ್ದಾರೆ. ಜಡ್ಜ್‌ ಸಾಹೇಬ್ರ ಬಾಯಲ್ಲಿ ಈ ಡೈಲಾಗ್‌ ಕೇಳಿ ಅಲ್ಲಿದ್ದವರೆಲ್ಲರೂ ಹೊಟ್ಟೆ ಹುಣ್ಣಾಗುವಂತೆ ನಕ್ಕಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಬಾಡಿಗೆ ಆಟೋ ಓಡಿಸುವವರು ಟ್ರಾಫಿಕ್‌ ಇತ್ಯಾದಿ ಸಮಸ್ಯೆಗಳಿಂದ ಕಡಿಮೆ ಸಂಪಾದನೆ ಮಾಡಿದ್ರೂ ಕೂಡಾ ಸಂಜೆಯ ಹೊತ್ತಿಗೆ ಆಟೋ ಬಾಡಿಗೆ ಇಂತಿಷ್ಟು ಅಂತ ಕೊಡಲೇ ಬೇಕು. ಇದ್ರ ಬಗ್ಗೆ ಮಾತನಾಡುತ್ತಾ ಬೆಳಗ್ಗೆ ಬಂದು ಆಟೋ ರಿಕ್ಷಾಗಳನ್ನು ತೆಗೆದುಕೊಂಡು ಹೋಗ್ಬೇಕು, ಸಾಯಂಕಾಲಕ್ಕೆ 250 ಬಾಡಿಗೆ ತಂದು ಕೊಡ್ಬೇಕು. ನೀನು ಎಷ್ಟಾದ್ರೂ ಸಂಪಾದನೆ ಮಾಡು, ಎಷ್ಟಾದ್ರೂ ಫೈನ್‌ ಕಟ್ಟು ನನಗೆ ಸಾಯಂಕಾಲಕ್ಕೆ 250 ಸಿಗ್ಬೇಕು ಇಲ್ಲಾಂದ್ರೆ ಶೆಡ್ಡಿಗ್‌ ಬಾ ಎಂದು ಬಾಡಿಗೆ ಆಟೋ ಚಾಲಕರು ಆಟೋ ಬಾಡಿಗೆ ಕೊಡುವ ಸಂದರ್ಭದಲ್ಲಿ ಅನುಭವಿಸುತ್ತಿರುವ ಕಷ್ಟಗಳ ಬಗ್ಗೆ ನ್ಯಾಯಾಧೀಶರು ಹಾಸ್ಯರೂಪದ ವಿವರಣೆಯನ್ನು ನೀಡಿದ್ದಾರೆ.

ಇದನ್ನೂ ಓದಿ: ರಜೆಯಲ್ಲಿ ಮಗ ಅರ್ಧ ದಿನ ತಂದೆ ಜತೆ, ಇನ್ನರ್ಧ ದಿನ ತಾಯಿ ಜತೆ, ಡಿವೋರ್ಸ್​ಗೆ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್​

ಈ ಕುರಿತ ವಿಡಿಯೋವೊಂದನ್ನು Yasir Arfath Shorts ಯೂಟ್ಯೂಬ್‌ ಚಾನೆಲ್‌ ಒಂದರಲ್ಲಿ ಹಂಚಿಕೊಳ್ಳಲಾಗಿದ್ದು, ವಿಡಿಯೋದಲ್ಲಿ ಕರ್ನಾಟಕ ಹೈಕೋರ್ಟ್‌ ನ್ಯಾಯಾಧೀಶರು ಬಾಡಿಗೆ ಆಟೋ ಓಡಿಸುವವರ ಕಷ್ಟಗಳನ್ನು ವಿವರಿಸುತ್ತಾ 250 ಕೊಡಿ ಇಲ್ಲಾಂದ್ರೆ ಶೆಡ್ಡಿಗ್‌ ಬಾ ಎಂದು ಹೇಳುವ ಹಾಸ್ಯಮಯ ದೃಶ್ಯವನ್ನು ಕಾಣಬಹುದು. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ವೈರಲ್​​​​ ಸ್ಟೋರಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ