AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟ್ರಾಫಿಕ್​​ನಲ್ಲಿ 3 ಗಂಟೆ ಪರದಾಟ: ನಡೆದೇ ಮನೆಗೆ ಹೋಗಬಹುದಿತ್ತು ಎಂದ ವ್ಯಕ್ತಿ; ಪೋಸ್ಟ್​​ ವೈರಲ್​​

ಬೆಂಗಳೂರಿನಲ್ಲಿ ಮಳೆಗೆ ಉಂಟಾದ ಟ್ರಾಫಿಕ್​​ ಕಾರಣ 3 ಗಂಟೆ ಟ್ರಾಫಿಕ್​​ನಲ್ಲಿ ಸಿಲುಕಿ ಅನುಭವಿಸಿದ ಕೆಟ್ಟ ಅನುಭವವನ್ನು ವ್ಯಕ್ತಿಯೋರ್ವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ಕಲ್ಯಾಣನಗರದಿಂದ ಮಾನ್ಯತಾ ಟೆಕ್ ಪಾರ್ಕ್‌ ತಲುಪಲು 1.5 ಗಂಟೆ ತಲುಪಿದ್ದು, ಪರಿಸ್ಥಿತಿ ಹೀಗಿದ್ದರೂ ಮಾರ್ಗಮಧ್ಯೆ ಯಾವೊಬ್ಬ ಸಂಚಾರ ಪೊಲೀಸ್​​ ಸಿಬ್ಬಂದಿಯನ್ನೂ ತಾನು ಕಂಡಿಲ್ಲ ಎಂದವರು ದೂರಿದ್ದಾರೆ. ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸಝತ್​​ ವೈರಲ್ ಆಗಿದೆ.

ಬೆಂಗಳೂರು ಟ್ರಾಫಿಕ್​​ನಲ್ಲಿ 3 ಗಂಟೆ ಪರದಾಟ: ನಡೆದೇ ಮನೆಗೆ ಹೋಗಬಹುದಿತ್ತು ಎಂದ ವ್ಯಕ್ತಿ; ಪೋಸ್ಟ್​​ ವೈರಲ್​​
ಸಾಂದರ್ಭಿಕ ಚಿತ್ರ
ಪ್ರಸನ್ನ ಹೆಗಡೆ
|

Updated on:May 20, 2026 | 12:18 PM

Share

ಬೆಂಗಳೂರು, ಮೇ 20: ಮಳೆ ಬಂತೆಂದರೆ ಸಾಕು ಬೆಂಗಳೂರಿನ (Bengaluru) ರಸ್ತೆಗಳು ಹೊಳೆಯಂತಾಗೋದು ನಗರ ನಿವಾಸಿಗಳಿಗೆ ಹೊಸದೇನೂ ಅಲ್ಲ. ಈ ವೇಳೆ ಉಂಟಾಗುವ ಟ್ರಾಫಿಕ್​​ ಸಮಸ್ಯೆಯ ಕುರಿತಂತೂ ಮತ್ತೆ ಹೇಳಬೇಕಿಲ್ಲ. ಯಾವಾಗ ಮನೆ, ಕಚೇರಿ ಅಥವಾ ಗಮ್ಯ ಸ್ಥಾನ ತಲುಪುತ್ತೇವೆ ಎಂದು ವಾಹನ ಸವಾರರು ಹೇಳಲು ಸಾಧ್ಯವೇ ಇಲ್ಲ. ಈ ನಡುವೆ ಮೊನ್ನೆ ಬೆಂಗಳೂರಲ್ಲಿ ಸುರಿದ ಮಳೆಯ ವೇಳೆ ಕಲ್ಯಾಣನಗರದಿಂದ ಮಾನ್ಯತಾ ಟೆಕ್ ಪಾರ್ಕ್‌ವರೆಗೆ ಸುಮಾರು 4 ಕಿ.ಮೀ. ಕ್ರಮಿಸಲು ವ್ಯಕ್ತಿಯೋರ್ವರು ಒಂದೂವರೆ ಗಂಟೆ ಸಮಯ ತೆಗೆದುಕೊಂಡ ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​​ ಆಗಿದೆ.

ಎಕ್ಸ್​​ ಪೋಸ್ಟ್​​ನಲ್ಲಿ ಏನಿದೆ?

ಮೇ 18ರ ಸೋಮವಾರ ಸಂಜೆ ಸುರಿದ ಭಾರೀ ಮಳೆಯು ನಗರದ ಟ್ರಾಫಿಕ್ ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿತು. ಇದರಿಂದ ಬೇಸತ್ತ ವರುಣ್​​ ರಂಗರಾಜನ್​​ ಎಂಬವರು ತಮ್ಮ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪೋಸ್ಟ್ ಪ್ರಕಾರ, ಅವರು ಸಂಜೆ 5:17ಕ್ಕೆ ಬೆಳ್ಳಂದೂರಿನಿಂದ ಹೊರಟಿದ್ದು, ಔಟರ್ ರಿಂಗ್ ರೋಡ್‌ನಲ್ಲಿ ಭಾರೀ ಟ್ರಾಫಿಕ್‌ಗೆ ಸಿಲುಕಿದ್ದಾರೆ. ಹೀಗಾಗಿ ಬರೋಬ್ಬರಿ 3 ಗಂಟೆಗಳ ಕಾಲ ತಾನು ಟ್ರಾಫಿಕ್​​ನಲ್ಲಿ ಸಿಲುಕಿದ್ದೆ. ಕೇವಲ ಕಲ್ಯಾಣನಗರದಿಂದ ಮಾನ್ಯತಾ ಟೆಕ್ ಪಾರ್ಕ್‌ವರೆಗೆ ಬರಲು ಸುಮಾರು ಒಂದೂವರೆ ಗಂಟೆ ಸಮಯ ತಗುಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಬಸ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ವಿಡಿಯೋ ವೈರಲ್ ಬೆನ್ನಲ್ಲೇ ಹುಳಿಮಾವು ಪೊಲೀಸರಿಂದ ಆರೋಪಿಯ ಬಂಧನ 

ಪರಿಸ್ಥಿತಿ ಹೀಗಿದ್ದರೂ ಮಾರ್ಗಮಧ್ಯೆ ಒಬ್ಬ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೂ ಕಾಣಿಸಲಿಲ್ಲ. ಗೂಗಲ್ ಮ್ಯಾಪ್ ಪ್ರಕಾರ ಮನೆಗೆ ನಡೆದು ಹೋದರೂ ಇದೇ ಸಮಯ ತೆಗೆದುಕೊಳ್ಳುತ್ತಿತ್ತು ಎಂದು ಎಕ್ಸ್​​ ಪೋಸ್ಟ್​​ನಲ್ಲಿ ವರುಣ್​​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ಈ ಪೋಸ್ಟ್​​ಗೆ ಅನೇಕರು ಪ್ರತಿಕ್ರಿಯಿಸಿದ್ದು, ಹಲವರು ಇದು ನಮ್ಮ ದೈನಂದಿನ ಕಥೆ ಎಂದು ಹೇಳಿಕೊಂಡಿದ್ದಾರೆ. ಮಳೆ ಬಂತೆಂದರೆ ಬೆಂಗಳೂರಿನ ಅನೇಕ ರಸ್ತೆಗಳು ಜಲಾವೃತಗೊಂಡು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಳ್ಳೂವುದು ಹೊಸತೇನಲ್ಲ ಎಂದು ಇನ್ನು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:04 pm, Wed, 20 May 26

Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು