AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಟ್ರಾಫಿಕ್​​ನಲ್ಲಿ 3 ಗಂಟೆ ಪರದಾಟ: ನಡೆದೇ ಮನೆಗೆ ಹೋಗಬಹುದಿತ್ತು ಎಂದ ವ್ಯಕ್ತಿ; ಪೋಸ್ಟ್​​ ವೈರಲ್​​

ಬೆಂಗಳೂರಿನಲ್ಲಿ ಮಳೆಗೆ ಉಂಟಾದ ಟ್ರಾಫಿಕ್​​ ಕಾರಣ 3 ಗಂಟೆ ಟ್ರಾಫಿಕ್​​ನಲ್ಲಿ ಸಿಲುಕಿ ಅನುಭವಿಸಿದ ಕೆಟ್ಟ ಅನುಭವವನ್ನು ವ್ಯಕ್ತಿಯೋರ್ವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.ಕೇವಲ ಕಲ್ಯಾಣನಗರದಿಂದ ಮಾನ್ಯತಾ ಟೆಕ್ ಪಾರ್ಕ್‌ ತಲುಪಲು 1.5 ಗಂಟೆ ತಲುಪಿದ್ದು, ಪರಿಸ್ಥಿತಿ ಹೀಗಿದ್ದರೂ ಮಾರ್ಗಮಧ್ಯೆ ಯಾವೊಬ್ಬ ಸಂಚಾರ ಪೊಲೀಸ್​​ ಸಿಬ್ಬಂದಿಯನ್ನೂ ತಾನು ಕಂಡಿಲ್ಲ ಎಂದವರು ದೂರಿದ್ದಾರೆ. ಅವರ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸಝತ್​​ ವೈರಲ್ ಆಗಿದೆ.

ಬೆಂಗಳೂರು ಟ್ರಾಫಿಕ್​​ನಲ್ಲಿ 3 ಗಂಟೆ ಪರದಾಟ: ನಡೆದೇ ಮನೆಗೆ ಹೋಗಬಹುದಿತ್ತು ಎಂದ ವ್ಯಕ್ತಿ; ಪೋಸ್ಟ್​​ ವೈರಲ್​​
ಸಾಂದರ್ಭಿಕ ಚಿತ್ರ
ಪ್ರಸನ್ನ ಹೆಗಡೆ
|

Updated on:May 20, 2026 | 12:18 PM

Share

ಬೆಂಗಳೂರು, ಮೇ 20: ಮಳೆ ಬಂತೆಂದರೆ ಸಾಕು ಬೆಂಗಳೂರಿನ (Bengaluru) ರಸ್ತೆಗಳು ಹೊಳೆಯಂತಾಗೋದು ನಗರ ನಿವಾಸಿಗಳಿಗೆ ಹೊಸದೇನೂ ಅಲ್ಲ. ಈ ವೇಳೆ ಉಂಟಾಗುವ ಟ್ರಾಫಿಕ್​​ ಸಮಸ್ಯೆಯ ಕುರಿತಂತೂ ಮತ್ತೆ ಹೇಳಬೇಕಿಲ್ಲ. ಯಾವಾಗ ಮನೆ, ಕಚೇರಿ ಅಥವಾ ಗಮ್ಯ ಸ್ಥಾನ ತಲುಪುತ್ತೇವೆ ಎಂದು ವಾಹನ ಸವಾರರು ಹೇಳಲು ಸಾಧ್ಯವೇ ಇಲ್ಲ. ಈ ನಡುವೆ ಮೊನ್ನೆ ಬೆಂಗಳೂರಲ್ಲಿ ಸುರಿದ ಮಳೆಯ ವೇಳೆ ಕಲ್ಯಾಣನಗರದಿಂದ ಮಾನ್ಯತಾ ಟೆಕ್ ಪಾರ್ಕ್‌ವರೆಗೆ ಸುಮಾರು 4 ಕಿ.ಮೀ. ಕ್ರಮಿಸಲು ವ್ಯಕ್ತಿಯೋರ್ವರು ಒಂದೂವರೆ ಗಂಟೆ ಸಮಯ ತೆಗೆದುಕೊಂಡ ಪೋಸ್ಟ್​​ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​​ ಆಗಿದೆ.

ಎಕ್ಸ್​​ ಪೋಸ್ಟ್​​ನಲ್ಲಿ ಏನಿದೆ?

ಮೇ 18ರ ಸೋಮವಾರ ಸಂಜೆ ಸುರಿದ ಭಾರೀ ಮಳೆಯು ನಗರದ ಟ್ರಾಫಿಕ್ ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿತು. ಇದರಿಂದ ಬೇಸತ್ತ ವರುಣ್​​ ರಂಗರಾಜನ್​​ ಎಂಬವರು ತಮ್ಮ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಪೋಸ್ಟ್ ಪ್ರಕಾರ, ಅವರು ಸಂಜೆ 5:17ಕ್ಕೆ ಬೆಳ್ಳಂದೂರಿನಿಂದ ಹೊರಟಿದ್ದು, ಔಟರ್ ರಿಂಗ್ ರೋಡ್‌ನಲ್ಲಿ ಭಾರೀ ಟ್ರಾಫಿಕ್‌ಗೆ ಸಿಲುಕಿದ್ದಾರೆ. ಹೀಗಾಗಿ ಬರೋಬ್ಬರಿ 3 ಗಂಟೆಗಳ ಕಾಲ ತಾನು ಟ್ರಾಫಿಕ್​​ನಲ್ಲಿ ಸಿಲುಕಿದ್ದೆ. ಕೇವಲ ಕಲ್ಯಾಣನಗರದಿಂದ ಮಾನ್ಯತಾ ಟೆಕ್ ಪಾರ್ಕ್‌ವರೆಗೆ ಬರಲು ಸುಮಾರು ಒಂದೂವರೆ ಗಂಟೆ ಸಮಯ ತಗುಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಬಸ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ವಿಡಿಯೋ ವೈರಲ್ ಬೆನ್ನಲ್ಲೇ ಹುಳಿಮಾವು ಪೊಲೀಸರಿಂದ ಆರೋಪಿಯ ಬಂಧನ 

ಪರಿಸ್ಥಿತಿ ಹೀಗಿದ್ದರೂ ಮಾರ್ಗಮಧ್ಯೆ ಒಬ್ಬ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೂ ಕಾಣಿಸಲಿಲ್ಲ. ಗೂಗಲ್ ಮ್ಯಾಪ್ ಪ್ರಕಾರ ಮನೆಗೆ ನಡೆದು ಹೋದರೂ ಇದೇ ಸಮಯ ತೆಗೆದುಕೊಳ್ಳುತ್ತಿತ್ತು ಎಂದು ಎಕ್ಸ್​​ ಪೋಸ್ಟ್​​ನಲ್ಲಿ ವರುಣ್​​ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ಈ ಪೋಸ್ಟ್​​ಗೆ ಅನೇಕರು ಪ್ರತಿಕ್ರಿಯಿಸಿದ್ದು, ಹಲವರು ಇದು ನಮ್ಮ ದೈನಂದಿನ ಕಥೆ ಎಂದು ಹೇಳಿಕೊಂಡಿದ್ದಾರೆ. ಮಳೆ ಬಂತೆಂದರೆ ಬೆಂಗಳೂರಿನ ಅನೇಕ ರಸ್ತೆಗಳು ಜಲಾವೃತಗೊಂಡು, ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಳ್ಳೂವುದು ಹೊಸತೇನಲ್ಲ ಎಂದು ಇನ್ನು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:04 pm, Wed, 20 May 26

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More