AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಒಂಟಿತನ ಕಾಡುತ್ತಿದೆ; ಮರುಮದುವೆಗೆ ಸಿದ್ಧವಾದ 83ರ ವೃದ್ಧ

50 ವರ್ಷ ಮೇಲ್ಪಟ್ಟವರಿಗಾಗಿ ಬೆಂಗಳೂರಿನಲ್ಲಿ ಆಯೋಜಿಸಲಾದ ಈ ಮ್ಯಾಚ್ ಮೇಕಿಂಗ್ ಕಾರ್ಯಕ್ರಮದಲ್ಲಿ 83 ವರ್ಷದ ವೃದ್ಧರೊಬ್ಬರು ಭಾಗವಹಿಸಿದ್ದು, ತನಗೆ ಒಂಟಿತನ ಕಾಡುತ್ತಿರುವ ಕಾರಣ ತಾನೂ ಸಹ ಸಂಗಾತಿಯನ್ನು ಹುಡುಕುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಈ ಕಾರ್ಯಕ್ರಮದಲ್ಲಿ ವೃದ್ಧನಿಗೆ ಸ್ವಲ್ಪ ನಿರಾಸೆಯಾಗಿದೆ.

Bengaluru: ಒಂಟಿತನ ಕಾಡುತ್ತಿದೆ; ಮರುಮದುವೆಗೆ ಸಿದ್ಧವಾದ 83ರ ವೃದ್ಧ
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
|

Updated on: Feb 02, 2024 | 4:08 PM

Share

ಬೆಂಗಳೂರು: ಡೆಕ್ಕನ್ ಹೆರಾಲ್ಡ್ ವರದಿ ಪ್ರಕಾರ, ಬೆಂಗಳೂರಿನಲ್ಲಿ ಆಯೋಜಿಸಲಾದ ಈ ಮ್ಯಾಚ್ ಮೇಕಿಂಗ್ ಕಾರ್ಯಕ್ರಮದಲ್ಲಿ ಕರ್ನಾಟಕ ಮತ್ತು ನೆರೆಯ ರಾಜ್ಯಗಳ ಜನರು ಭಾಗವಹಿಸಿದ್ದರು. ಮ್ಯಾಚ್‌ಮೇಕಿಂಗ್ ಈವೆಂಟ್‌ನ ಸಂಘಟಕರ ಪಟ್ಟಿಯಲ್ಲಿ 83 ವರ್ಷದ ವೃದ್ಧ ಭಾಗವಹಿಸಿದ್ದು, ತನಗೆ ಒಂಟಿತನ ಕಾಡುತ್ತಿರುವ ಕಾರಣ ತಾನೂ ಸಹ ಸಂಗಾತಿಯನ್ನು ಹುಡುಕುತ್ತಿರುವುದಾಗಿ ಹೇಳಿದ್ದಾರೆ. 50 ವರ್ಷ ಮೇಲ್ಪಟ್ಟವರಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಪುರುಷರು ಮತ್ತು ಮಹಿಳೆಯರು ಸೇರಿದಂತೆ ಒಟ್ಟು 37 ಜನರು ಭಾಗವಹಿಸಿದ್ದರು. ಮರುಮದುವೆ ಮತ್ತು ಲಿವ್-ಇನ್ ರಿಲೇಷನ್​​​ಶಿಪ್​​​​ಗಾಗಿ ಉತ್ತಮ ಸಂಗಾತಿಯನ್ನು ಹುಡುಕುತ್ತಿರುವವರಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ವೃದ್ಧ, ‘ನನ್ನ ಹೆಂಡತಿ 18 ವರ್ಷಗಳ ಹಿಂದೆ ತೀರಿಕೊಂಡಳು. ಮಕ್ಕಳು ವಿದೇಶದಲ್ಲಿ ವಾಸಿಸುತ್ತಿದ್ದಾರೆ. ನಾನು ಒಂಟಿತನ ಅನುಭವಿಸುತ್ತಿದ್ದೇನೆ. ಈ ಕಾರ್ಯಕ್ರಮಕ್ಕೆ ಬರುವಂತೆ ನನ್ನ ಮಗಳು ಪ್ರೋತ್ಸಾಹ ನೀಡಿದ್ದಳು ಎಂದು ಹೇಳಿಕೊಂಡಿದ್ದಾಳೆ. ಆದರೆ ಈ ಕಾರ್ಯಕ್ರಮದಲ್ಲಿ ವೃದ್ಧನಿಗೆ ಸ್ವಲ್ಪ ನಿರಾಸೆಯಾಗಿದೆ. ಏಕೆಂದರೆ, ಈವೆಂಟ್‌ನಲ್ಲಿ ಕೇವಲ ಏಳು ಮಹಿಳೆಯರು ಮಾತ್ರ ಭಾಗವಹಿಸಿದ್ದರು.

ಇದನ್ನೂ ಓದಿ: ಬೆಂಗಳೂರಿನ ಡೆಂಟಲ್‌ ಕ್ಲಿನಿಕ್‌ ವಿರುದ್ಧ ಕೋರ್ಟ್‌ನಲ್ಲಿ ಮೊಕದ್ದಮೆ ದಾಖಲು; 2 ಲಕ್ಷ ರೂ. ಪರಿಹಾರ ಧನ

ಕಾರ್ಯಕ್ರಮ ಆಯೋಜಿಸಿದ್ದ ಎನ್ ಜಿಒ ಸಂಸ್ಥಾಪಕಿ ಎನ್.ಎಂ.ರಾಜೇಶ್ವರಿ ಮಾತನಾಡಿ, ‘ಮಹಿಳೆಯರು ಕಡಿಮೆ ಇದ್ದಾರೆ ಎಂದು ದೂರಬೇಡಿ. ಏಕೆಂದರೆ, ಈ ಮಹಿಳೆಯರು ಇಲ್ಲಿಗೆ ಬರಲು ಸಾಕಷ್ಟು ಧೈರ್ಯ ತೋರಿದ್ದಾರೆ. ಸಂಗಾತಿಯನ್ನು ಹುಡುಕಲು ವಯಸ್ಸು ಅಡ್ಡಿಯಾಗುವುದಿಲ್ಲ. ದೇಶದಲ್ಲಿ ಲಿವ್ ಇನ್ ಕಾನೂನುಬಾಹಿರವಲ್ಲ. ನಿಮ್ಮ ಸ್ವಂತ ನಿರ್ಧಾರಗಳನ್ನು ನೀವು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಹೈದರಾಬಾದ್ ಮೂಲದ ಈ ಎನ್‌ಜಿಒ 2010 ರಿಂದ 50 ವರ್ಷಕ್ಕಿಂತ ಮೇಲ್ಪಟ್ಟ ವಿಧವೆಯರು ಅಥವಾ ವಿಚ್ಛೇದಿತರಿಗೆ 500 ಕ್ಕೂ ಹೆಚ್ಚು ವಿವಾಹಗಳು ಮತ್ತು ಲಿವ್-ಇನ್ ರಿಲೇಷನ್​​ಶಿಪ್​​​ ಮಾಡಿಸಿಕೊಟ್ಟಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ