AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಒಂಟಿತನ ಕಾಡುತ್ತಿದೆ; ಮರುಮದುವೆಗೆ ಸಿದ್ಧವಾದ 83ರ ವೃದ್ಧ

50 ವರ್ಷ ಮೇಲ್ಪಟ್ಟವರಿಗಾಗಿ ಬೆಂಗಳೂರಿನಲ್ಲಿ ಆಯೋಜಿಸಲಾದ ಈ ಮ್ಯಾಚ್ ಮೇಕಿಂಗ್ ಕಾರ್ಯಕ್ರಮದಲ್ಲಿ 83 ವರ್ಷದ ವೃದ್ಧರೊಬ್ಬರು ಭಾಗವಹಿಸಿದ್ದು, ತನಗೆ ಒಂಟಿತನ ಕಾಡುತ್ತಿರುವ ಕಾರಣ ತಾನೂ ಸಹ ಸಂಗಾತಿಯನ್ನು ಹುಡುಕುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ ಈ ಕಾರ್ಯಕ್ರಮದಲ್ಲಿ ವೃದ್ಧನಿಗೆ ಸ್ವಲ್ಪ ನಿರಾಸೆಯಾಗಿದೆ.

Bengaluru: ಒಂಟಿತನ ಕಾಡುತ್ತಿದೆ; ಮರುಮದುವೆಗೆ ಸಿದ್ಧವಾದ 83ರ ವೃದ್ಧ
ಸಾಂದರ್ಭಿಕ ಚಿತ್ರImage Credit source: Pinterest
ಅಕ್ಷತಾ ವರ್ಕಾಡಿ
|

Updated on: Feb 02, 2024 | 4:08 PM

Share

ಬೆಂಗಳೂರು: ಡೆಕ್ಕನ್ ಹೆರಾಲ್ಡ್ ವರದಿ ಪ್ರಕಾರ, ಬೆಂಗಳೂರಿನಲ್ಲಿ ಆಯೋಜಿಸಲಾದ ಈ ಮ್ಯಾಚ್ ಮೇಕಿಂಗ್ ಕಾರ್ಯಕ್ರಮದಲ್ಲಿ ಕರ್ನಾಟಕ ಮತ್ತು ನೆರೆಯ ರಾಜ್ಯಗಳ ಜನರು ಭಾಗವಹಿಸಿದ್ದರು. ಮ್ಯಾಚ್‌ಮೇಕಿಂಗ್ ಈವೆಂಟ್‌ನ ಸಂಘಟಕರ ಪಟ್ಟಿಯಲ್ಲಿ 83 ವರ್ಷದ ವೃದ್ಧ ಭಾಗವಹಿಸಿದ್ದು, ತನಗೆ ಒಂಟಿತನ ಕಾಡುತ್ತಿರುವ ಕಾರಣ ತಾನೂ ಸಹ ಸಂಗಾತಿಯನ್ನು ಹುಡುಕುತ್ತಿರುವುದಾಗಿ ಹೇಳಿದ್ದಾರೆ. 50 ವರ್ಷ ಮೇಲ್ಪಟ್ಟವರಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಪುರುಷರು ಮತ್ತು ಮಹಿಳೆಯರು ಸೇರಿದಂತೆ ಒಟ್ಟು 37 ಜನರು ಭಾಗವಹಿಸಿದ್ದರು. ಮರುಮದುವೆ ಮತ್ತು ಲಿವ್-ಇನ್ ರಿಲೇಷನ್​​​ಶಿಪ್​​​​ಗಾಗಿ ಉತ್ತಮ ಸಂಗಾತಿಯನ್ನು ಹುಡುಕುತ್ತಿರುವವರಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ವೃದ್ಧ, ‘ನನ್ನ ಹೆಂಡತಿ 18 ವರ್ಷಗಳ ಹಿಂದೆ ತೀರಿಕೊಂಡಳು. ಮಕ್ಕಳು ವಿದೇಶದಲ್ಲಿ ವಾಸಿಸುತ್ತಿದ್ದಾರೆ. ನಾನು ಒಂಟಿತನ ಅನುಭವಿಸುತ್ತಿದ್ದೇನೆ. ಈ ಕಾರ್ಯಕ್ರಮಕ್ಕೆ ಬರುವಂತೆ ನನ್ನ ಮಗಳು ಪ್ರೋತ್ಸಾಹ ನೀಡಿದ್ದಳು ಎಂದು ಹೇಳಿಕೊಂಡಿದ್ದಾಳೆ. ಆದರೆ ಈ ಕಾರ್ಯಕ್ರಮದಲ್ಲಿ ವೃದ್ಧನಿಗೆ ಸ್ವಲ್ಪ ನಿರಾಸೆಯಾಗಿದೆ. ಏಕೆಂದರೆ, ಈವೆಂಟ್‌ನಲ್ಲಿ ಕೇವಲ ಏಳು ಮಹಿಳೆಯರು ಮಾತ್ರ ಭಾಗವಹಿಸಿದ್ದರು.

ಇದನ್ನೂ ಓದಿ: ಬೆಂಗಳೂರಿನ ಡೆಂಟಲ್‌ ಕ್ಲಿನಿಕ್‌ ವಿರುದ್ಧ ಕೋರ್ಟ್‌ನಲ್ಲಿ ಮೊಕದ್ದಮೆ ದಾಖಲು; 2 ಲಕ್ಷ ರೂ. ಪರಿಹಾರ ಧನ

ಕಾರ್ಯಕ್ರಮ ಆಯೋಜಿಸಿದ್ದ ಎನ್ ಜಿಒ ಸಂಸ್ಥಾಪಕಿ ಎನ್.ಎಂ.ರಾಜೇಶ್ವರಿ ಮಾತನಾಡಿ, ‘ಮಹಿಳೆಯರು ಕಡಿಮೆ ಇದ್ದಾರೆ ಎಂದು ದೂರಬೇಡಿ. ಏಕೆಂದರೆ, ಈ ಮಹಿಳೆಯರು ಇಲ್ಲಿಗೆ ಬರಲು ಸಾಕಷ್ಟು ಧೈರ್ಯ ತೋರಿದ್ದಾರೆ. ಸಂಗಾತಿಯನ್ನು ಹುಡುಕಲು ವಯಸ್ಸು ಅಡ್ಡಿಯಾಗುವುದಿಲ್ಲ. ದೇಶದಲ್ಲಿ ಲಿವ್ ಇನ್ ಕಾನೂನುಬಾಹಿರವಲ್ಲ. ನಿಮ್ಮ ಸ್ವಂತ ನಿರ್ಧಾರಗಳನ್ನು ನೀವು ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ.

ಹೈದರಾಬಾದ್ ಮೂಲದ ಈ ಎನ್‌ಜಿಒ 2010 ರಿಂದ 50 ವರ್ಷಕ್ಕಿಂತ ಮೇಲ್ಪಟ್ಟ ವಿಧವೆಯರು ಅಥವಾ ವಿಚ್ಛೇದಿತರಿಗೆ 500 ಕ್ಕೂ ಹೆಚ್ಚು ವಿವಾಹಗಳು ಮತ್ತು ಲಿವ್-ಇನ್ ರಿಲೇಷನ್​​ಶಿಪ್​​​ ಮಾಡಿಸಿಕೊಟ್ಟಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ