AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಅವ್ರ ಮಕ್ಕಳ ಸಂಬಳಕ್ಕಿಂತ ಜಾಸ್ತಿ ನಾನು ಟ್ಯಾಕ್ಸ್‌ ಕಟ್ತಿದ್ದೇನೆ; ಒಂದು ಕಾಲದಲ್ಲಿ ವ್ಯಂಗ್ಯವಾಡಿದ್ದ ಸಂಬಂಧಿಗೆ ಮುಟ್ಟಿ ನೋಡುವಂತೆ ಉತ್ತರ ಕೊಟ್ಟ ವೈದ್ಯ

ವಿಶೇಷವಾಗಿ ಸಂಬಂಧಿಕರಿಗೆ ಓದು ಮತ್ತು ಸಂಬಳದ ಬಗ್ಗೆ ಪ್ರಶ್ನೆ ಕೇಳಿ ಒಬ್ರಿಗೆ ಅಪಹಾಸ್ಯ ಮಾಡುವ ಹುಚ್ಚು ಜಾಸ್ತಿ ಅಲ್ವಾ. ಅದೇ ರೀತಿ ಬೆಂಗಳೂರಿನ ವೈದ್ಯರೊಬ್ಬರಿಗೆ ಒಂದು ಕಾಲದಲ್ಲಿ ಅವರ ಸಂಬಂಧಿಕರೊಬ್ಬರು ಓದಿನ ವಿಷಯದಲ್ಲಿ ಹಾಗೂ ಹಣಕಾಸಿದ ಸ್ಥಿತಿಯ ಬಗ್ಗೆ ವ್ಯಂಗ್ಯವಾಡಿದ್ದು, ಇದೀಗ ಅವರು ಅಪಹಾಸ್ಯ ಮಾಡಿದವರಿಗೆ ತಮ್ಮ ಸಾಧನೆಯ ಮೂಲಕವೇ ಮುಟ್ಟಿ ನೋಡುವಂತೆ ಉತ್ತರ ಕೊಟ್ಟಿದ್ದಾರೆ. ವೈದ್ಯರ ಈ ರಿವೇಂಜ್‌ ಕಥೆ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗ್ತಿದೆ.

Viral: ಅವ್ರ ಮಕ್ಕಳ ಸಂಬಳಕ್ಕಿಂತ ಜಾಸ್ತಿ ನಾನು ಟ್ಯಾಕ್ಸ್‌ ಕಟ್ತಿದ್ದೇನೆ; ಒಂದು ಕಾಲದಲ್ಲಿ  ವ್ಯಂಗ್ಯವಾಡಿದ್ದ ಸಂಬಂಧಿಗೆ ಮುಟ್ಟಿ ನೋಡುವಂತೆ ಉತ್ತರ ಕೊಟ್ಟ ವೈದ್ಯ
My Taxes Alone Beat Their Salaries Bengaluru Doctor's Message For His Relatives Who Used To Mock Him
ಮಾಲಾಶ್ರೀ ಅಂಚನ್​
| Edited By: |

Updated on:Mar 19, 2025 | 2:55 PM

Share

ಬಡತನ, ನಾವು ಓದೋ ಓದಿನ ಬಗ್ಗೆ, ಕೆಲಸದ ಬಗ್ಗೆ ಅಪಹಾಸ್ಯ (Sarkiness) ಮಾಡುವವರೇ ಹೆಚ್ಚು. ಅದರಲ್ಲೂ ಕೆಲ ಸಂಬಂಧಿಕರು ಪ್ರೋತ್ಸಾಹ ನೀಡುವ ಬದಲು ಇವ್ನು ಬರೀ ವೇಸ್ಟ್, ಇವ್ನಿಂದ ಏನು ಸಾಧ್ಯವಿಲ್ಲ ಎಂದು ವ್ಯಂಗ್ಯದ ಹಾಗೂ ಚುಚ್ಚು ಮಾತುಗಳನ್ನಾಡುತ್ತಾರೆ. ಹೀಗೆ ಅಪಹಾಸ್ಯ ಮಾಡಿದವರ ಮುಂದೆ ಸಾಧನೆಯ ಶಿಖರವನ್ನೇರಿದ ಹಲವರಿದ್ದಾರೆ. ಅದೇ ರೀತಿ ಇಲ್ಲೊಬ್ರು ವೈದ್ಯ (Doctor), ತನ್ನ ಸಾಧನೆಯ ಮೂಲಕವೇ ವ್ಯಂಗ್ಯ ವಾಡ್ತಿದ್ದ ಸಂಬಂಧಿಗೆ ಮುಟ್ಟಿ ನೋಡುವಂತೆ ಉತ್ತರ ಕೊಟ್ಟಿದ್ದಾರೆ. ನನ್ನ ಬಗ್ಗೆ ವ್ಯಂಗ್ಯವಾಡ್ತಿದ್ರು, ಈಗ ಅವರ ಇಬ್ಬರು ಪುತ್ರರ ಸಂಬಳಕ್ಕಿಂತ ಜಾಸ್ತಿ ನಾನು ಟ್ಯಾಕ್ಸ್‌ ಕಟ್ತಿದ್ದೇನೆ ಎಂದು ಹೇಳಿದ್ದು, ಇವರ ಈ ರಿವೇಂಜ್‌ ಕಥೆ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗ್ತಿದೆ.

ಸೋಷಿಯಲ್‌ ಮೀಡಿಯಾ ಪ್ಲಾಟ್‌ಫಾರ್ಮ್‌ ಎಕ್ಸ್‌ನಲ್ಲಿ ಈ ಅಂಕಲ್‌, ಆಂಟಿಗಳು ನಿಮ್ಮ ಸಂಬಳದ ಬಗ್ಗೆ ಕೇಳುವುದನ್ನು ಹೇಗೆ ತಪ್ಪಿಸುತ್ತೀರಿ ಎಂಬ ಪೋಸ್ಟ್‌ಗೆ ಉತ್ತರಿಸಿದ ಬೆಂಗಳೂರಿನ ವೈದ್ಯರೊಬ್ಬರು ತನ್ನ ಓದು ಹಾಗೂ ನಾನು ತಂದೆಯ ಮೇಲೆ ಅವಲಂಬಿತನಾಗಿದ್ದೇನೆ ಎಂದು ವ್ಯಂಗ್ಯವಾಡಿದ್ದ ಸಂಬಂಧಿಗೆ ಹೇಗೆ ಮುಟ್ಟಿ ನೋಡುವಂತೆ ಉತ್ತರ ಕೊಟ್ಟೆ ಎಂಬ ಸ್ಟೋರಿಯನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ
Image
ವಯಸ್ಸು 108 ಆದ್ರೂ ಕುಂದದ ಜೀವನೋತ್ಸಾಹ
Image
ಸೂಪ್‌ಗೆ ಮೂತ್ರ ವಿಸರ್ಜನೆ ಮಾಡಿ ಹುಚ್ಚಾಟ ಮೆರೆದ ಯುವಕರು
Image
ತಮ್ಮ ಮಗುವಿನ ಸಲುವಾಗಿ ಸಹ ಪ್ರಯಾಣಿಕರಿಗೆ ಕ್ಯೂಟ್‌ ಪತ್ರದೊಂದಿಗೆ ಗಿಫ್ಟ್‌
Image
ಪ್ಲಾಸ್ಟಿಕ್‌ ಬಾಟಲಿಯಿಂದ ತಯಾರಾದ ಸನ್‌ಲೈಟ್‌ ಪವರ್ಡ್‌ ಬಲ್ಬ್‌ ಇದು

ಕಾವೇರಿ ಆಸ್ಪತ್ರೆಯ ಹೃದ್ರೋಗ ವಿಭಾಗದ ನಿರ್ದೇಶಕ ಡಾ. ದೀಪಕ್‌ ಕೃಷ್ಣಮೂರ್ತಿ (Dr Deepak Krishnamurthy) ತಮ್ಮ ಹಣಕಾಸಿನ ಸ್ಥಿತಿಯ ಬಗ್ಗೆ ವ್ಯಂಗ್ಯವಾಡುತ್ತಿದ್ದ ಸಂಬಂಧಿಯ ಬಾಯಿ ಮುಚ್ಚಿದ ಸ್ವೀಟ್‌ ರಿವೇಂಜ್‌ ಕಥೆಯನ್ನು ಹಂಚಿಕೊಂಡಿದ್ದಾರೆ.

“ಇತರರು ಕೆಲಸಕ್ಕೆ ಹೋಗಿ ಹಣ ಸಂಪಾದಿಸುತ್ತಿದ್ದಾಗ, ನಾನು ನನ್ನ ತಂದೆಯ ಮೇಲೆಯೇ ಅವಲಂಬಿತನಾಗಿದ್ದೇನೆ ಎಂದು ವ್ಯಂಗವಾಡುತ್ತಿದ್ದ ನಾನು ವೈದ್ಯಕೀಯ ವಿಭಾಗಕ್ಕೆ ಸೇರುತ್ತೇನೆ ಎಂದು ಹೇಳಿದಾಗ ಅಪಹಾಸ್ಯ ಮಾಡಿದ್ದ ಸಂಬಂಧಿಯೊಬ್ಬರು, ನಾನು ಚೆನ್ನಾಗಿ ನೆಲೆಸಿದ ಬಳಿಕ ಒಮ್ಮೆ ನನ್ನ ಸಂಬಳ ಎಷ್ಟು ಎಂದು ಕೇಳಿದ್ರು. ನಾನು ಪಾವತಿಸುವ ವಾರ್ಷಿಕ ತೆರಿಗೆ ಆ ವ್ಯಕ್ತಿ ಇಬ್ಬರು ಪುತ್ರರ ಆದಾಯಕ್ಕಿಂತ ಹೆಚ್ಚಿವೆ. ಇದರಲ್ಲೇನೋ ತೃಪ್ತಿಯಿದೆ” ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ಓದಿ: Viral: ದೆಹಲಿ ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರ ಜಡೆ ಜಗಳ; ವೈರಲ್‌ ಆಯ್ತು ವಿಡಿಯೋ

ಮಾರ್ಚ್‌ 18 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼನಾನು ಕೂಡಾ ನನ್ನ ಸಂಬಂಧಿಕರಿಗೆ ಹೀಗೆ ಉತ್ತರ ಕೊಡುವ ದಿನಕ್ಕಾಗಿ ಕಾಯುತ್ತಿದ್ದೇನೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಅವರ ಅಪಹಾಸ್ಯಗಳನ್ನು ನಿರ್ಲಕ್ಷಿಸಿ ನಿಮ್ಮ ಜೀವನವನ್ನು ಆನಂದಿಸಿʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:54 pm, Wed, 19 March 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ