AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಹದಗೆಟ್ಟ ಮೂಲಸೌಕರ್ಯವನ್ನು ಸರಿಪಡಿಸಲು ಇರುವುದೊಂದೇ ಮಾರ್ಗ; ಐಟಿ ಪಾರ್ಕ್‌ಗಳನ್ನು ಮುಚ್ಚುವಂತೆ ಸಲಹೆ ನೀಡಿದ ಬೆಂಗಳೂರಿಗ

ಬೆಂಗಳೂರು ಎಂದ ಕೂಡಲೇ ಟ್ರಾಫಿಕ್ ಸಮಸ್ಯೆಯೊಂದಿಗೆ ಹದಗೆಟ್ಟ ರಸ್ತೆಗಳು, ಒಳಚರಂಡಿಗಳು ಕಣ್ಣ ಮುಂದೆ ಬರುತ್ತದೆ. ಆದರೆ ಬೆಂಗಳೂರಿನ ಶಿಥಿಲಗೊಂಡಿರುವ ಮೂಲಸೌಕರ್ಯವನ್ನು ಸರಿಪಡಿಸಲು ಪ್ರಮುಖ ಐಟಿ ಪಾರ್ಕ್‌ಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಬೆಂಗಳೂರಿನ ತಂತ್ರಜ್ಞರೊಬ್ಬರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

Viral: ಹದಗೆಟ್ಟ ಮೂಲಸೌಕರ್ಯವನ್ನು ಸರಿಪಡಿಸಲು ಇರುವುದೊಂದೇ ಮಾರ್ಗ; ಐಟಿ ಪಾರ್ಕ್‌ಗಳನ್ನು ಮುಚ್ಚುವಂತೆ ಸಲಹೆ ನೀಡಿದ ಬೆಂಗಳೂರಿಗ
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on: Oct 14, 2025 | 12:50 PM

Share

ಬೆಂಗಳೂರು, ಅಕ್ಟೋಬರ್ 14: ಸದಾ ವಾಹನಗಳ ಟ್ರಾಫಿಕ್​ನಿಂದ ಗಿಜಿಗುಡುವ ಬೆಂಗಳೂರಿನ (Bengaluru) ರಸ್ತೆಗಳು ಯಮಸ್ವರೂಪಿ ರಸ್ತೆಗಳಾಗಿ ಮಾರ್ಪಟ್ಟಿದೆ. ಎಲ್ಲೆಂದರಲ್ಲಿ ರಸ್ತೆ ಗುಂಡಿಗಳು, ಹೊಂಡಗಳಿಂದ ತುಂಬಿದ್ದು, ಒಳಚರಂಡಿ ವ್ಯವಸ್ಥೆ ಸರಿಯಾಗಿಲ್ಲ. ಸರಿಯಾದ ಮೂಲಸೌಕರ್ಯದ ಕೊರತೆ ಇಲ್ಲಿ ಎದ್ದು ಕಾಣುತ್ತಿದೆ. ಬ್ರ್ಯಾಂಡ್ ಬೆಂಗಳೂರು ಎನ್ನುವ ಥೀಮ್ ಗೆ ಇದು ತದ್ವಿರುದ್ಧವಾಗಿದೆ. ಆದರೆ ಇದೀಗ ಅಮರನಾಥ್ ಶಿವಶಂಕರ್ (Amarnath Shivashankar) ಎಂಬ ಬಳಕೆದಾರ ಕರ್ನಾಟಕ ಸರ್ಕಾರವನ್ನು ವ್ಯವಹಾರ ಮುಂದುವರಿಕೆ ಯೋಜನೆಗಳನ್ನು ಜಾರಿಗೊಳಿಸುವಂತೆ ಮತ್ತು ಬೆಂಗಳೂರಿನ ರಸ್ತೆಗಳು ಮತ್ತು ಒಳಚರಂಡಿ ವ್ಯವಸ್ಥೆಗಳ ದುರಸ್ತಿ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಒತ್ತಾಯಿಸಿದ್ದಾರೆ. ಇನ್ನು ಐಟಿ ಪಾರ್ಕ್‌ಗಳನ್ನು ತಾತ್ಕಾಲಿಕವಾಗಿ ಮುಚ್ಚುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ

ಅಮರನಾಥ್ ಶಿವಶಂಕರ್  ಹೆಸರಿನ ಎಕ್ಸ್ ಖಾತೆಯಲ್ಲಿ ಶೇರ್ ಮಾಡಲಾದ ಪೋಸ್ಟ್ ನಲ್ಲಿ ಕೋವಿಡ್ ಸಮಯದಲ್ಲಿ ಔಟರ್ ರಿಂಗ್ ರಸ್ತೆ, ಐಟಿಪಿಎಲ್, ಎಲೆಕ್ಟ್ರಾನಿಕ್ ಸಿಟಿ, ಮಾನ್ಯತಾ ಟೆಕ್ ಪಾರ್ಕ್, ಬಾಗ್ಮನೆ ಟೆಕ್ ಪಾರ್ಕ್ ಇತ್ಯಾದಿಗಳ ಐಟಿ ಕಂಪನಿಗಳು ಒಂದು ವರ್ಷಕ್ಕೂ ಹೆಚ್ಚು ಕಾಲ ಸಂಪೂರ್ಣವಾಗಿ ದೂರವಿದ್ದವು, ಸರ್ಕಾರವು ಹಾಗೆ ಮಾಡಲು ಆದೇಶಿಸಿದರೆ ಅವರು ಮತ್ತೆ ದೂರ ಉಳಿಯಬಹುದು. ನೌಕರರು ತಮ್ಮ ಪ್ರಯಾಣದ ಸಮಯದಲ್ಲಿ ಉತ್ಪಾದಕ ಸಮಯವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರಿನ ಈ ಭಾಗದಲ್ಲೇ ಟ್ರಾಫಿಕ್​​ ಹೆಚ್ಚು
Image
ಇದು ವಾಹನಕ್ಕಲ್ಲ, ಕೋಣ ಓಡಿಸಲು ಸೂಕ್ತವಾದ ರಸ್ತೆ
Image
ರಾತ್ರಿಯಿಡೀ ಸುರಿದ ಧಾರಾಕಾರ ಮಳೆಗೆ ನದಿಯಂತಾದ ಬೆಂಗಳೂರಿನ ಫ್ಲೈಓವರ್​!
Image
ಇದು ಬೆಂಗಳೂರಿನ ರಸ್ತೆಗುಂಡಿಗಳ ದುಸ್ಥಿತಿ ಎಂದ ವಿದ್ಯಾರ್ಥಿನಿಯರು

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

ಬಿಸಿಪಿಯನ್ನು ಕೇಳಿ, ಕೆಲವು ತಿಂಗಳು ಐಟಿ ಪಾರ್ಕ್‌ಗಳನ್ನು ಮುಚ್ಚಿ, ರಸ್ತೆಗಳು ಮತ್ತು ಮಳೆ ನೀರಿನ ಚರಂಡಿಗಳನ್ನು ಸರಿಪಡಿಸಿ, ಮುರಿದ ಮೂಲಸೌಕರ್ಯವನ್ನು ಸರಿಪಡಿಸಿ. ಫ್ಲೈಓವರ್ ನಿರ್ಮಾಣಗಳನ್ನು ಪೂರ್ಣಗೊಳಿಸಿ, ಹೆಚ್ಚಿನ ಬಿಎಂಟಿಸಿ ಬಸ್‌ಗಳನ್ನು ಖರೀದಿಸಿ, ಮೆಟ್ರೋ ನಿರ್ಮಾಣವನ್ನು ವೇಗವಾಗಿ ಟ್ರ್ಯಾಕ್ ಮಾಡಿ. ಇಚ್ಛಾಶಕ್ತಿ ಇರುವಲ್ಲಿ, ಒಂದು ಮಾರ್ಗವಿದೆ. ಬೆಂಗಳೂರನ್ನು ಒಮ್ಮೆ ಮತ್ತು ಶಾಶ್ವತವಾಗಿ ಸರಿಪಡಿಸಿ” ಎಂದು ಅವರು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಮುಖ್ಯಮಂತ್ರಿ ಕಚೇರಿಯನ್ನು ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ:Video: ಇದು ವಾಹನಕ್ಕಲ್ಲ, ಕೋಣ ಓಡಿಸಲು ಸೂಕ್ತವಾದ ರಸ್ತೆ

ಅಕ್ಟೋಬರ್ 12 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ ಒಂದೂವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ಇದು ನೋವಿನ ಸಂಗತಿ ಎಂದು ನನಗೆ ತಿಳಿದಿದೆ, ಆದರೆ ಐಟಿ ಪಾರ್ಕ್‌ಗಳನ್ನು ಮುಚ್ಚಲು ಕೇಳುವುದು ತುಂಬಾ ಕಷ್ಟ ಎಂದಿದ್ದಾರೆ. ಇನ್ನೊಬ್ಬರು, ಮನೆ ದುರಸ್ತಿ ಮಾಡುವವರೆಗೂ ಮನೆಯಿಂದಲೇ ಕೆಲಸ ಮಾಡಿ. ಇದು ಬಹುಶಃ ನಗರದ ಅತ್ಯುತ್ತಮ ಮೂಲಸೌಕರ್ಯ ಯೋಜನೆಯಾಗಿರಬಹುದು ಎಂದು ಹೇಳಿದ್ದಾರೆ. ಮತ್ತೊಬ್ಬರು ದುರಸ್ಥಿ ಕಾರ್ಯಗಳು ಮೇಲಿಂದ ಮೇಲೆ ನಡೆಯುತ್ತವೆ. ಆದರೆ ಈ ಬಗ್ಗೆ ಸರಿಯಾಗಿ ಗಮನ ಹರಿಸಿದರೆ ಮಾತ್ರ ಮೂಲ ಸೌಕರ್ಯಗಳು ಉತ್ತಮವಾಗಿರಲು ಸಾಧ್ಯ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್