AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ದ್ವೇಷ ಬಿಟ್ಟು, ಭಾಷೆ ಕಲಿಯಿರಿ : ಎರಡು ವರ್ಷದಿಂದ ಬೆಂಗಳೂರಿನಲ್ಲಿ ವಾಸ, ಸಲೀಸಾಗಿ ಕನ್ನಡ ಮಾತನಾಡುತ್ತಿರುವ ಓಡಿಶಾದ ಪ್ಲಂಬರ್

ಬೇರೆ ರಾಜ್ಯ ಹಾಗೂ ಊರುಗಳಿಂದ ಬೆಂಗಳೂರಿಗೆ ಬರುವವರ ಸಂಖ್ಯೆಯೂ ಹೆಚ್ಚು. ಹೀಗೆ ಬಂದ ಜನರಲ್ಲಿ ಬಹುತೇಕರು ಕನ್ನಡ ಭಾಷೆಯನ್ನು ಕಲಿಯಲು ಹಿಂದೇಟು ಹಾಕುತ್ತಾರೆ. ಕಳೆದ ಕೆಲವು ದಿನಗಳಿಂದ ಭಾಷಾ ವಿಚಾರವಾಗಿ ಭಾರೀ ಗದ್ದಲಗಳು ಉಂಟಾಗಿತ್ತು. ಈ ಬಗ್ಗೆ ಕೆಲವೊಂದು ವಿಡಿಯೋ ಕೂಡ ವೈರಲ್ ಆಗಿತ್ತು, ಈ ಕಾರಣಕ್ಕೆ ಪರಭಾಷಿಕರು ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗುತ್ತಿದ್ದಾರೆ. ಇದೆಲ್ಲದರ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಬೆಂಗಳೂರಿನ ವ್ಯಕ್ತಿಯೊಬ್ಬರು ಮಾಡಿರುವ ಸಕರಾತ್ಮಕ ಪೋಸ್ಟ್ ವೈರಲ್ ಆಗಿದೆ. ಓಡಿಶಾದಿಂದ ಮಾಯಾನಗರಿಗೆ ಕೆಲಸಕ್ಕೆಂದು ಬಂದ ಪ್ಲಂಬರ್‌ರೊಬ್ಬರು ಅದ್ಭುತವಾಗಿ ಕನ್ನಡ ಮಾತನಾಡುವ ಮೂಲಕ ಎಲ್ಲರ ಮನಸ್ಸು ಗೆದ್ದುಕೊಂಡಿದ್ದಾರೆ.

Viral : ದ್ವೇಷ ಬಿಟ್ಟು, ಭಾಷೆ ಕಲಿಯಿರಿ : ಎರಡು ವರ್ಷದಿಂದ ಬೆಂಗಳೂರಿನಲ್ಲಿ ವಾಸ, ಸಲೀಸಾಗಿ ಕನ್ನಡ ಮಾತನಾಡುತ್ತಿರುವ ಓಡಿಶಾದ ಪ್ಲಂಬರ್
ಸಲೀಸಾಗಿ ಕನ್ನಡ ಮಾತನಾಡುವ ಓಡಿಶಾದ ವ್ಯಕ್ತಿ Image Credit source: Twitter/Elena Kalfa/Moment/Getty Images
ಸಾಯಿನಂದಾ
|

Updated on:Jun 24, 2025 | 10:58 AM

Share

ಬೆಂಗಳೂರಿನಲ್ಲಿ (Bengaluru) ಬೇರೆ ಊರು ಹಾಗೂ ರಾಜ್ಯಗಳಿಂದ ಉದ್ಯೋಗ ಅರಸಿ ಬಂದ ಜನರೇ ಹೆಚ್ಚು. ಕನಸುಗಳನ್ನು ಕಟ್ಟಿಕೊಂಡು ಬೇರೆ ಬೇರೆ ರಾಜ್ಯ ಹಾಗೂ ಜಿಲ್ಲೆಗಳಿಂದ ಬೆಂಗಳೂರಿಗೆ ಬಂದ ಜನರು ಕನ್ನಡ ಭಾಷೆಯನ್ನು ಕಲಿಯಲು ಮನಸ್ಸು ಮಾಡುವುದು ತೀರಾ ಕಡಿಮೆಯೇ. ಭಾಷೆ ಗೊತ್ತಿದ್ದರೂ ಮಾತನಾಡುವುದಿಲ್ಲ. ಹೀಗಾಗಿ ಕನ್ನಡ ಭಾಷೆ ಬೆಳೆಸಿ ಹಾಗೂ ಉಳಿಸಿ ಎನ್ನುವ ಕೂಗು ಕೇಳಿಬರುತ್ತಿರುತ್ತದೆ. ಭಾಷೆಯನ್ನು ಅವರೇ ಕಲಿಯಬೇಕು ಹೊರತು ಯಾರದೋ ಒತ್ತಾಯಕ್ಕೆ ಕಲಿಯಬಾರದು. ಬೇರೆ ರಾಜ್ಯದಿಂದ ಬಂದು ಕನ್ನಡ ಕಲಿತವರು ಅದೆಷ್ಟೋ ಜನ. ಇವರ ಪೈಕಿ ಒಡಿಶಾದಿಂದ (Odisha) ಬೆಂಗಳೂರಿಗೆ ಬಂದು ನೆಲೆಸಿರುವ ಪ್ಲಂಬರ್ ಕೂಡ ಒಬ್ಬರು. ಇದೀಗ ಇವರು ಪರಭಾಷಿಕರಿಗೆ ಮಾದರಿಯಾಗಿದ್ದಾರೆ. ಬೆಂಗಳೂರಿನ ವ್ಯಕ್ತಿಯೊಬ್ಬರು ಹಂಚಿಕೊಂಡ ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ (social media) ವೈರಲ್ ಆಗಿದ್ದು, ಪರರಾಜ್ಯದಿಂದ ಇಲ್ಲಿಗೆ ಬಂದು ನೆಲೆಸಿದ್ದರೂ ಓಡಿಶಾದ ವ್ಯಕ್ತಿಯ ಕನ್ನಡ ಕಲಿಯುವ ಪ್ರಯತ್ನಕ್ಕೆ ನೆಟ್ಟಿಗರಿಂದ ಮೆಚ್ಚುಗೆ ವ್ಯಕ್ತವಾಗಿದೆ.

@sridattaa ಹೆಸರಿನ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಳ್ಳಲಾದ ಪೋಸ್ಟ್‌ನಲ್ಲಿ ಬೆಂಗಳೂರಿನ ವ್ಯಕ್ತಿಯೊಬ್ಬರು , ಓಡಿಶಾದಿಂದ ಬೆಂಗಳೂರಿಗೆ ಬಂದ ಪ್ಲಂಬರ್‌ರೊಬ್ಬರ  ಜೊತೆಗಿನ ಸಂಭಾಷಣೆಯ ಕುರಿತು ಉಲ್ಲೇಖಿಸಿದ್ದಾರೆ. ಈ ಪ್ಲಂಬರ್ ಅರ್ಬನ್ ಕಂಪೆನಿ ಮೂಲಕ ಬೆಂಗಳೂರಿಗೆ ಬಂದಿದ್ದು, ಕಳೆದ ಎರಡು ವರ್ಷಗಳಿಂದ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ನಿಧಾನವಾಗಿ ಕನ್ನಡ ಭಾಷೆಯನ್ನು ಕಲಿಯುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಸರಿಯಾದ ಸಮಯಕ್ಕೆ ಬಂದು ವೃತ್ತಿಪರರಾಗಿ ಕೆಲಸ ಮಾಡುವುದನ್ನು ನಾನು ಗಮನಿಸಿದ್ದೇನೆ ಎಂದು ಬರೆದುಕೊಂಡಿರುವುದನ್ನು ಕಾಣಬಹುದು.

ಇದನ್ನೂ ಓದಿ
Image
ವಿಮಾನಯಾನದ ಇತಿಹಾಸದಲ್ಲಿ ಇದೇ ಮೊದಲು, ಬರುತ್ತಿದೆ ವಿದ್ಯುತ್ ವಿಮಾನ
Image
ಈ ಬುಡಕಟ್ಟು ಜನಾಂಗದಲ್ಲಿ ಮಹಿಳೆಯರ ಸ್ನಾನಕ್ಕಿದೆ ನಿಷೇಧ
Image
ಅಪ್ಪ-ಅಮ್ಮನ ಕನಸಿನ ಹಾರಾಟ, ಮಗಳಿಗೆ ಹೆಮ್ಮೆಯ ಕ್ಷಣ ಹೇಗಿತ್ತು ನೋಡಿ?
Image
ಬೆಂಗಳೂರು ತೊರೆದ ಯುವ ಉದ್ಯಮಿ ದಂಪತಿ, ಕಾರಣ ತಿಳಿದ್ರೆ ಶಾಕ್ ಆಗ್ತೀರಾ

ಇದನ್ನೂ ಓದಿ : Video : ಬೆಂಗಳೂರು ತೊರೆದ ಯುವ ಉದ್ಯಮಿ ದಂಪತಿ, ಕಾರಣ ತಿಳಿದ್ರೆ ಶಾಕ್ ಆಗ್ತೀರಾ

ವೈರಲ್ ಪೋಸ್ಟ್ ಇಲ್ಲಿದೆ ನೋಡಿ

ಈ ಪೋಸ್ಟ್ ಎಂಟು ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ. ಬಳಕೆದಾರರೊಬ್ಬರು, ನಿಮ್ಮ ಮಾತನ್ನು ಒಪ್ಪುತ್ತೇನೆ. ನಾವು ಒಂದು ರೆಸಾರ್ಟ್‌ಗೆ ಹೋಗಿದ್ದಾಗ ಅಲ್ಲಿದ್ದ ಓಡಿಶಾದ ಹುಡುಗರು ನಮ್ಮೊಂದಿಗೆ ಕನ್ನಡದಲ್ಲಿ ಮಾತನಾಡಿದ್ದರು. ಆ ಹುಡುಗರು ಎರಡು ವರ್ಷಗಳಿಂದ ಇಲ್ಲಿ ವಾಸವಿದ್ದಾರಂತೆ ಎಂದಿದ್ದಾರೆ. ಇನ್ನೊಬ್ಬರು, ಇದು ಕೇವಲ ಹಿಂದಿ ಭಾಷಿಗರ ಸಮಸ್ಯೆ, ಇತರ ರಾಜ್ಯಗಳದ್ದು ಅಲ್ಲವೇ ಅಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಇದು ನನ್ನ ವೈಯುಕ್ತಿಕ ಅನುಭವ, ಓಡಿಶಾದ ಜನರು ನಿಜಕ್ಕೂ ಸಭ್ಯರು, ವೃತ್ತಿಪರರು, ಬುದ್ದಿವಂತರು, ಅವರು ಅನಗತ್ಯ ಸಂಘರ್ಷಗಳಲ್ಲಿ ಆಸಕ್ತಿ ಹೊಂದಿಲ್ಲ ಎಂದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:57 am, Tue, 24 June 25

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ