AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru scam: ಮಾಜಿ ಪ್ರಿಯಕರನನ್ನು ವಶೀಕರಣ ಮಾಡಲು ಹೋಗಿ 8 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ಯುವತಿ

ಜಾಲಹಳ್ಳಿಯ ಯುವತಿಯೊಬ್ಬಳು 'ಬ್ಲಾಕ್ ಮ್ಯಾಜಿಕ್'ನಿಂದ ಮೋಸ ಹೋಗಿ ಲಕ್ಷ ಲಕ್ಷ ದುಡ್ಡು ಕಳೆದುಕೊಂಡಿರುವುದು ವರದಿಯಾಗಿದೆ. ಬ್ರೇಕಪ್​​ನಿಂದ ನೊಂದಿದ್ದ ಯುವತಿ ತನ್ನ ಗೆಳೆಯನೊಬ್ಬನ ಸಹಾಯದಿಂದ ಆನ್ಲೈನ್​​ ಮೂಲಕ ವಶೀಕರಣ ಮಾಡಿಸುವ ಜ್ಯೋತಿಷಿಯನ್ನು ಸಂಪರ್ಕಿಸಿದ್ದಳು.

Bengaluru scam: ಮಾಜಿ ಪ್ರಿಯಕರನನ್ನು ವಶೀಕರಣ ಮಾಡಲು ಹೋಗಿ 8 ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ಯುವತಿ
Black magicImage Credit source: Pinterest
ಅಕ್ಷತಾ ವರ್ಕಾಡಿ
|

Updated on:Jan 23, 2024 | 5:16 PM

Share

ಬೆಂಗಳೂರು: ಜಾಲಹಳ್ಳಿಯ ಯುವತಿಯೊಬ್ಬಳು ‘ಬ್ಲಾಕ್ ಮ್ಯಾಜಿಕ್'(Black Magic) ನಿಂದ ಮೋಸ ಹೋಗಿ ಲಕ್ಷ ಲಕ್ಷ ದುಡ್ಡು ಕಳೆದುಕೊಂಡಿರುವುದು ವರದಿಯಾಗಿದೆ. ‘ನಿನ್ನ ಮಾಜಿ ಪ್ರಿಯಕರ ಆದಷ್ಟು ಬೇಗ ನಿನ್ನನ್ನು ಬಂದು ತಲುಪುತ್ತಾನೆ, ಮತ್ತೆ ನಿಮ್ಮ ಪ್ರೀತಿ ಚಿಗುರೊಡೆಯುತ್ತದೆ’ ಎಂದು ಭರವಸೆ ನೀಡಿದ್ದ ಜ್ಯೋತಿಷಿಯಿಂದ ಮೋಸ ಹೋಗಿ 8.2 ಲಕ್ಷ ರೂಪಾಯಿಯನ್ನು ಯುವತಿ ಕಳೆದುಕೊಂಡಿದ್ದಳು. ಬ್ರೇಕಪ್​​ನಿಂದ ನೊಂದಿದ್ದ ಯುವತಿ ತನ್ನ ಗೆಳೆಯನೊಬ್ಬನ ಸಹಾಯದಿಂದ ಆನ್ಲೈನ್​​ ಮೂಲಕ ವಶೀಕರಣ ಮಾಡಿಸುವ ಜ್ಯೋತಿಷಿಯನ್ನು ಸಂಪರ್ಕಿಸಿದ್ದಳು.

ಡಿಸೆಂಬರ್ 22 ರಂದು ವಶೀಕರಣದ ಮೊದಲ ಹಂತವಾಗಿ ಮಾಜಿ ಪ್ರಿಯಕರ ಹಾಗೂ ಆತನ ಪೋಷಕರ ಮೇಲೆ ಮಾಟಮಂತ್ರದ ಆಚರಣೆಗಳನ್ನು ಮಾಡಲು 2.4 ಲಕ್ಷಗಳನ್ನು ಆನ್ಲೈನ್​​ ಮೂಲಕ ಪಾವತಿಸಿದ್ದಳು. ಆದಾಗ್ಯೂ, ಹಣಕಾಸಿನ ಬೇಡಿಕೆಗಳು ನಿಲ್ಲಲಿಲ್ಲ, ಕೆಲವು ದಿನಗಳ ನಂತರ, ಹೆಚ್ಚುವರಿ ರೂ. 1.7 ಲಕ್ಷ ನೀಡಲು ಬೇಡಿಕೆ ಇಟ್ಟಿದ್ದ ಜ್ಯೋತಿಷಿ, ಇದಲ್ಲದೇ ಹಣ ನೀಡದಿದ್ದರೆ ಮಾಜಿ ಪ್ರಿಯಕರನಿಗೆ ಈ ವಿಷಯ ತಿಳಿಸುವುದಾಗಿ ಬೆದರಿಕೆ ಹಾಕಿದ್ದ, ಯುವತಿ ಹೆದರಿ ಒತ್ತಡಕ್ಕೆ ಮಣಿದು ಜನವರಿ 10ರಂದು 4.1 ಲಕ್ಷ ರೂ. ಪಾವತಿಸಿದ್ದಳು.

ಇದನ್ನೂ ಓದಿ: AI Girlfriend: ಸಿಂಗಲ್​​​ ಬಾಯ್ಸ್​​​ ​​​​ ನಿಮ್ಮ ಒಂಟಿತನವನ್ನು ಹೋಗಲಾಡಿಸಲು ಬಂದಿದ್ದಾಳೆ AI ಗೆಳತಿ

ಕೊನೆಗೆ ಆರ್ಥಿಕ ನಷ್ಟದಿಂದಾಗಿ ಆಕೆಯ ಪೋಷಕರ ವರೆಗೆ ಈ ವಿಷಯ ತಿಳಿದು ಜಾಲಹಳ್ಳಿ ಪೊಲೀಸ್​​​ ಠಾಣೆಯಲ್ಲಿ ಜ್ಯೋತಿಷಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:15 pm, Tue, 23 January 24

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್