AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಕನ್ನಡ Vs ಹಿಂದಿ; ಬೆಂಗಳೂರಿನ ಆಟೋ ಚಾಲಕರು ಹೆಚ್ಚು ಪ್ರಾಮುಖ್ಯತೆ ಕೊಟ್ಟಿದ್ದು ಯಾರಿಗೆ ನೋಡಿ…

ಸೋಷಿಯಲ್‌ ಮೀಡಿಯಾದಲ್ಲಿ ಕೆಲವೊಂದು ಸೋಷಿಯಲ್‌ ಎಕ್ಸ್‌ಪರಿಮೆಂಟ್‌ಗಳಿಗೆ ಸಂಬಂಧಿಸಿದ ವಿಡಿಯೋಗಳು ಆಗಾಗ್ಗೆ ಕಾಣಸಿಗುತ್ತಿರುತ್ತವೆ. ಇದೀಗ ಇಲ್ಲೊಂದು ಅಂತಹದ್ದೇ ವಿಡಿಯೋ ಹರಿದಾಡುತ್ತಿದ್ದು, ಯುವತಿಯರಿಬ್ಬರು ಬೆಂಗಳೂರಿನ ಆಟೋ ಚಾಲಕರ ಬಳಿ ಕನ್ನಡ Vs ಹಿಂದಿ ಎಂಬ ಸೋಷಿಯಲ್‌ ಎಕ್ಸ್ಪರಿಮೆಂಟ್‌ ಒಂದನ್ನು ಮಾಡಿದ್ದಾರೆ. ಈ ಪ್ರಯೋಗದಲ್ಲಿ ಆಟೋ ಚಾಲಕರು ಕನ್ನಡಿಗರಿಗೆ ಹೆಚ್ಚಿನ ಇಂಪಾರ್ಟೆನ್ಸ್‌ ಕೊಟ್ಟಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

Viral: ಕನ್ನಡ Vs ಹಿಂದಿ; ಬೆಂಗಳೂರಿನ ಆಟೋ ಚಾಲಕರು ಹೆಚ್ಚು ಪ್ರಾಮುಖ್ಯತೆ ಕೊಟ್ಟಿದ್ದು ಯಾರಿಗೆ ನೋಡಿ…
ವೈರಲ್​​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Dec 03, 2024 | 2:03 PM

ಉದ್ಯೋಗಕ್ಕಾಗಿ ಬೆಂಗಳೂರಿಗೆ ಬಂದು ನೆಲೆಸುವ ಪರ ಭಾಷಿಕರ ಸಂಖ್ಯೆ ಹೆಚ್ಚುತ್ತಿದೆ. ಆದರೆ ಇವರುಗಳಲ್ಲಿ ಹೆಚ್ಚಿನವರು ಕನ್ನಡ ಭಾಷೆಯನ್ನು ಕಲಿಯುವ ಪ್ರಯತ್ನವನ್ನು ಕೂಡಾ ಮಾಡುತ್ತಿಲ್ಲ. ಹೀಗೆ ಪರಭಾಷಿಕರು ಕರ್ನಾಟಕದಲ್ಲಿದ್ದರೂ ಕನ್ನಡ ಮಾತನಾಡುವುದಿಲ್ಲ ಎಂಬ ಕಾರಣಕ್ಕೆ ಇತ್ತೀಚಿಗೆ ಸಂಘರ್ಷಗಳು, ಹೋರಾಟಗಳು ಕೂಡಾ ನಡೆಯುತ್ತಿದೆ. ಇದಕ್ಕೆ ಪೂರಕವಾಗಿ ಇಬ್ಬರು ಯುವತಿಯರು ಬೆಂಗಳೂರಿನ ಆಟೋ ಚಾಲಕರ ಬಳಿ ಕನ್ನಡ Vs ಹಿಂದಿ ಎಂಬ ಸೋಷಿಯಲ್‌ ಎಕ್ಸ್ಪರಿಮೆಂಟ್‌ ಒಂದನ್ನು ಮಾಡಿದ್ದಾರೆ. ಈ ಪ್ರಯೋಗದಲ್ಲಿ ಆಟೋ ಚಾಲಕರು ಕನ್ನಡಿಗರಿಗೆ ಹೆಚ್ಚಿನ ಪ್ರಾಮುಖ್ಯತೆ ಕೊಟ್ಟಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದ್ದು, ಕನ್ನಡಿಗರು ಆಟೋ ಚಾಲಕರ ನಡೆಯನ್ನು ಶ್ಲಾಘಿಸಿದರೆ, ಇನ್ನೂ ಕೆಲವರು ಈ ರೀತಿ ಪಕ್ಷಪಾತ ಮಾಡಬಾರದಿತ್ತು ಎಂದು ಹೇಳಿದ್ದಾರೆ.

ಯುವತಿಯರಿಬ್ಬರು ಬೆಂಗಳೂರಿನ ಆಟೋ ಚಾಲಕರ ಬಳಿ ಕನ್ನಡ Vs ಹಿಂದಿ ಎಂಬ ಸೋಷಿಯಲ್‌ ಎಕ್ಸ್ಪರಿಮೆಂಟ್‌ ಒಂದನ್ನು ಮಾಡಿದ್ದು, ಹಿಂದಿ ಭಾಷೆ ಮಾತನಾಡುವ ಹುಡುಗಿ ಹೆಚ್.ಎಸ್.‌ಆರ್‌ ಲೇಔಟ್‌ಗೆ ಬರ್ತಿರಾ ಅಂತಾ ಕೇಳಿದ್ದಕ್ಕೆ ಬರಲ್ಲಾ ಎಂದ ಆಟೋ ಚಾಲಕರೊಬ್ಬರು ಕನ್ನಡದ ಹುಡುಗಿ ಕೇಳಿದ್ದಕ್ಕೆ ಬರ್ತೀನಿ ಮೇಡಂ ಎಂದು ಹೇಳಿದ್ದಾರೆ. ಮತ್ತೊಬ್ಬ ಆಟೋ ಚಾಲಕರ ಬಳಿ ಹೋಗಿ ಹಿಂದೆ ಹುಡುಗಿ ಇಂದಿರಾ ನಗರಕ್ಕೆ ಬರ್ತಿರಾ ಎಂದಾಗ 300 ರೂ. ಆಗುತ್ತೆ ಎಂದು ಹೇಳಿದ್ದಾರೆ. ಅದೇ ಆಟೋ ಚಾಲಕ ಕನ್ನಡದ ಹುಡುಗಿ ಕೇಳಿದಾಗ ಇಂದಿರಾ ನಗರಕ್ಕೆ 200 ರೂ. ಚಾರ್ಜ್‌ ಆಗುತ್ತೆ ಎಂದು ಹೇಳಿದ್ದಾರೆ. ಇನ್ನೊಬ್ಬ ಆಟೋ ಚಾಲಕ ಕೋರಮಂಗಲಕ್ಕೆ ಹೋಗಲು ಇಬ್ಬರೂ ಯುವತಿಯರಿಗೂ 200 ರೂ. ಚಾರ್ಜ್‌ ಮಾಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by JINAL MODI (@jinalmodiii)

ಈ ಸೋಷಿಯಲ್‌ ಎಕ್ಸ್ಪರಿಮೆಂಟ್‌ ವಿಡಿಯೋವನ್ನು ಜಿನಲ್‌ ಮೋದಿ (jinalmodii) ಎಂಬ ಯುವತಿ ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಇವರ ಪ್ರಯೋಗಕ್ಕೆ ಒಳಗಾದ ಬಹುತೇಕ ಆಟೋ ಚಾಲಕರು ಪರಭಾಷಿಕರಿಗಿಂತ ಕನ್ನಡದವರಿಗೆ ಸ್ವಲ್ಪ ಜಾಸ್ತಿನೇ ಇಂಪಾರ್ಟೆನ್ಸ್‌ ಕೊಟ್ಟಿರುವುದನ್ನು ಕಾಣಬಹುದು. ಇದೀಗ ಈ ವಿಡಿಯೋ ಸಖತ್‌ ವೈರಲ್‌ ಆಗುತ್ತಿದ್ದು, ಕನ್ನಡಿಗರು ಆಟೋ ಚಾಲಕರ ನಡೆಯನ್ನು ಶ್ಲಾಘಿಸಿದರೆ, ಇನ್ನೂ ಕೆಲವರು ಈ ರೀತಿ ಪಕ್ಷಪಾತ ಮಾಡಬಾರದಿತ್ತು ಎಂದು ಹೇಳಿದ್ದಾರೆ.

ಇದನ್ನೂ ಓದಿ:  ಕಡಲ ತೀರದಲ್ಲಿ ಕುಳಿತು ಯೋಗ ಮಾಡುತ್ತಿದ್ದ ವೇಳೆ ಅಪ್ಪಳಿಸಿದ ಅಲೆ; ನೀರಲ್ಲಿ ಕೊಚ್ಚಿ ಹೋದ ನಟಿ

ಆರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 5.3 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಕರ್ನಾಟಕದಲ್ಲಿ ಕನ್ನಡ ಭಾಷೆಗೆಯೇ ಹೆಚ್ಚಿನ ಮಹತ್ವʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಭಾಷೆಯ ವಿಚಾರಕ್ಕೆ ಇಷ್ಟೆಲ್ಲಾ ತಾರತಮ್ಯ ಮಾಡುವ ಅವಶ್ಯಕತೆ ಇದೆಯೇʼ ಎಂದು ಟೀಕಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಮಕ್ಕಳಿದ್ರೂ 17ರ ಯುವತಿ ಜತೆ ಲವ್, ಮದ್ವೆಗೆ ಒಪ್ಪದಿದ್ದಕ್ಕೆ ಮಾಡಿದ್ದೇನು?
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ವಿಜಯೇಂದ್ರ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಕಾಂಗ್ರೆಸ್ ಶಾಸಕ ಲಕ್ಷ್ಮಣ್‌ ಸವದಿ ಕಾರು ಅಪಘಾತ, ವಿಡಿಯೋ ನೋಡಿ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?