AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸ್ಪೈಡರ್ ಮ್ಯಾನ್ ಬಟ್ಟೆ ತೊಟ್ಟು ಬೈಕ್​ ರೈಡ್; ವಿಡಿಯೋ ವೈರಲ್

ವಿಡಿಯೋದಲ್ಲಿ ಸ್ಪೈಡರ್ ಮ್ಯಾನ್ ಹೆಲ್ಮೆಟ್​​ ಧರಿಸಿದ್ದನ್ನು ಕಂಡು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ವಿಡಿಯೋ ಹಂಚಿಕೊಂಡ ಎರಡೇ ದಿನದಲ್ಲಿ 13 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಬೆಂಗಳೂರು: ಸ್ಪೈಡರ್ ಮ್ಯಾನ್ ಬಟ್ಟೆ ತೊಟ್ಟು ಬೈಕ್​ ರೈಡ್; ವಿಡಿಯೋ ವೈರಲ್
ಅಕ್ಷತಾ ವರ್ಕಾಡಿ
|

Updated on:May 24, 2024 | 12:31 PM

Share

ಬೆಂಗಳೂರಿನ ಜೆಪಿ ನಗರದ ಬೀದಿಗಳಲ್ಲಿ ಸ್ಪೈಡರ್ ಮ್ಯಾನ್ ವೇಷ ತೊಟ್ಟ ವ್ಯಕ್ತಿಯೊಬ್ಬರು ಮೋಟಾರ್ ಬೈಕ್‌ನ ಹಿಂದಿನ ಸೀಟಿನಲ್ಲಿ ಸವಾರಿ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋದಲ್ಲಿ ಸ್ಪೈಡರ್ ಮ್ಯಾನ್ ಹೆಲ್ಮೆಟ್​​ ಧರಿಸಿದ್ದನ್ನು ಕಂಡು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗಷ್ಟೇ ದೆಹಲಿಯ ಯೂಟ್ಯೂಬರ್‌ ಜೋಡಿಯೊಂದು ಸ್ಪೈಡರ್ ಮ್ಯಾನ್ ವೇಷ ಹಾಕಿಕೊಂಡು ಬೈಕ್‌ ಮೇಲೆ ಜಾಲಿ ರೈಡ್ ಹೊರಟ ವಿಡಿಯೊ ವೈರಲ್​​ ಆಗುತ್ತಿದ್ದಂತೆ ಸಂಚಾರಿ ನಿಯಮದ ಉಲ್ಲಂಘನೆಯ ಅಡಿಯಲ್ಲಿ ಈ ಜೋಡಿಯನ್ನು ಪೊಲೀಸರು ಬಂಧಿಸಿದ್ದರು.

ಇದೀಗ ಬೆಂಗಳೂರು ಸ್ಪೈಡರ್ ಮ್ಯಾನ್ ವಿಡಿಯೋವನ್ನು @vishalanandtwts ಎಂಬ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಮೇ 21ರಂದು ವಿಡಿಯೋ ಹಂಚಿಕೊಳ್ಳಲಾಗಿದ್ದು, ಜೆಪಿ ನಗರದಲ್ಲಿ ಸ್ಪೈಡರ್ ಮ್ಯಾನ್ ಎಂಬ ಕ್ಯಾಪ್ಷನ್​ ಕೂಡ ಬರೆಯಲಾಗಿದೆ. ಸದ್ಯ ವಿಡಿಯೋ ಹಂಚಿಕೊಂಡ ಎರಡೇ ದಿನದಲ್ಲಿ 13 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆ ದಿನ ತೂಕ ಇಳಿಸಿಕೊಂಡು ಸುಂದರವಾಗಿ ಕಾಣಲು ‘ಗ್ಯಾಸ್ಟ್ರಿಕ್ ಬಲೂನ್’ ಸರ್ಜರಿ ಮಾಡಿಸಿದ ಯುವತಿ ಸಾವು; ಏನಿದು ಸರ್ಜರಿ?

ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಒಬ್ಬರು ಬಳಕೆದಾರರು ” ತಲೆಗೆ ಹೆಲ್ಮೆಟ್​​, ಕಾಲಿಗೆ ಚಪ್ಪಲಿ ಧರಿಸಿದ ಸ್ಪೈಡರ್ ಮ್ಯಾನ್ ನ ಎಂದಾದರೂ ನೋಡಿದ್ದೀರಾ” ಎಂದು ಕಾಮೆಂಟ್​ ಮಾಡಿದರೆ ಮತ್ತೊಬ್ಬರು ” ಬೀದಿಗಳಲ್ಲಿ ಸೂಪರ್ ಹೀರೋಗಳು ಇತ್ತೀಚೆಗೆ ಟ್ರೆಂಡ್ ಆಗುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:30 pm, Fri, 24 May 24

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ