Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸ್ಪೈಡರ್ ಮ್ಯಾನ್ ಬಟ್ಟೆ ತೊಟ್ಟು ಬೈಕ್​ ರೈಡ್; ವಿಡಿಯೋ ವೈರಲ್

ವಿಡಿಯೋದಲ್ಲಿ ಸ್ಪೈಡರ್ ಮ್ಯಾನ್ ಹೆಲ್ಮೆಟ್​​ ಧರಿಸಿದ್ದನ್ನು ಕಂಡು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ವಿಡಿಯೋ ಹಂಚಿಕೊಂಡ ಎರಡೇ ದಿನದಲ್ಲಿ 13 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ಬೆಂಗಳೂರು: ಸ್ಪೈಡರ್ ಮ್ಯಾನ್ ಬಟ್ಟೆ ತೊಟ್ಟು ಬೈಕ್​ ರೈಡ್; ವಿಡಿಯೋ ವೈರಲ್
Follow us
ಅಕ್ಷತಾ ವರ್ಕಾಡಿ
|

Updated on:May 24, 2024 | 12:31 PM

ಬೆಂಗಳೂರಿನ ಜೆಪಿ ನಗರದ ಬೀದಿಗಳಲ್ಲಿ ಸ್ಪೈಡರ್ ಮ್ಯಾನ್ ವೇಷ ತೊಟ್ಟ ವ್ಯಕ್ತಿಯೊಬ್ಬರು ಮೋಟಾರ್ ಬೈಕ್‌ನ ಹಿಂದಿನ ಸೀಟಿನಲ್ಲಿ ಸವಾರಿ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ವಿಡಿಯೋದಲ್ಲಿ ಸ್ಪೈಡರ್ ಮ್ಯಾನ್ ಹೆಲ್ಮೆಟ್​​ ಧರಿಸಿದ್ದನ್ನು ಕಂಡು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗಷ್ಟೇ ದೆಹಲಿಯ ಯೂಟ್ಯೂಬರ್‌ ಜೋಡಿಯೊಂದು ಸ್ಪೈಡರ್ ಮ್ಯಾನ್ ವೇಷ ಹಾಕಿಕೊಂಡು ಬೈಕ್‌ ಮೇಲೆ ಜಾಲಿ ರೈಡ್ ಹೊರಟ ವಿಡಿಯೊ ವೈರಲ್​​ ಆಗುತ್ತಿದ್ದಂತೆ ಸಂಚಾರಿ ನಿಯಮದ ಉಲ್ಲಂಘನೆಯ ಅಡಿಯಲ್ಲಿ ಈ ಜೋಡಿಯನ್ನು ಪೊಲೀಸರು ಬಂಧಿಸಿದ್ದರು.

ಇದೀಗ ಬೆಂಗಳೂರು ಸ್ಪೈಡರ್ ಮ್ಯಾನ್ ವಿಡಿಯೋವನ್ನು @vishalanandtwts ಎಂಬ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಮೇ 21ರಂದು ವಿಡಿಯೋ ಹಂಚಿಕೊಳ್ಳಲಾಗಿದ್ದು, ಜೆಪಿ ನಗರದಲ್ಲಿ ಸ್ಪೈಡರ್ ಮ್ಯಾನ್ ಎಂಬ ಕ್ಯಾಪ್ಷನ್​ ಕೂಡ ಬರೆಯಲಾಗಿದೆ. ಸದ್ಯ ವಿಡಿಯೋ ಹಂಚಿಕೊಂಡ ಎರಡೇ ದಿನದಲ್ಲಿ 13 ಸಾವಿರಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಮದುವೆ ದಿನ ತೂಕ ಇಳಿಸಿಕೊಂಡು ಸುಂದರವಾಗಿ ಕಾಣಲು ‘ಗ್ಯಾಸ್ಟ್ರಿಕ್ ಬಲೂನ್’ ಸರ್ಜರಿ ಮಾಡಿಸಿದ ಯುವತಿ ಸಾವು; ಏನಿದು ಸರ್ಜರಿ?

ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಒಬ್ಬರು ಬಳಕೆದಾರರು ” ತಲೆಗೆ ಹೆಲ್ಮೆಟ್​​, ಕಾಲಿಗೆ ಚಪ್ಪಲಿ ಧರಿಸಿದ ಸ್ಪೈಡರ್ ಮ್ಯಾನ್ ನ ಎಂದಾದರೂ ನೋಡಿದ್ದೀರಾ” ಎಂದು ಕಾಮೆಂಟ್​ ಮಾಡಿದರೆ ಮತ್ತೊಬ್ಬರು ” ಬೀದಿಗಳಲ್ಲಿ ಸೂಪರ್ ಹೀರೋಗಳು ಇತ್ತೀಚೆಗೆ ಟ್ರೆಂಡ್ ಆಗುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:30 pm, Fri, 24 May 24

ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಎಲ್ಲರೂ ಬಂದ್ ಮಾಡ್ತಾ ಹೋದ್ರೆ ಸಾರ್ವಜನಿಕರ ಪಾಡೇನು? ಬಸ್ ಚಾಲಕ
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್
ಪೊಲೀಸರ ಗೂಂಡಾಗಿರಿಯನ್ನು ಸಹಿಸಲ್ಲ ಎಂದ ವಾಟಾಳ್ ನಾಗರಾಜ್